Homeಮುಖಪುಟಮೋದಿ ಅದಾನಿಗಾಗಿ ಹಗಲು-ರಾತ್ರಿ ಕೆಲಸ ಮಾಡುತ್ತಾರೆ: ರಾಹುಲ್‌ ಗಾಂಧಿ

ಮೋದಿ ಅದಾನಿಗಾಗಿ ಹಗಲು-ರಾತ್ರಿ ಕೆಲಸ ಮಾಡುತ್ತಾರೆ: ರಾಹುಲ್‌ ಗಾಂಧಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಉದ್ಯಮಿ ಗೌತಮ್‌ ಅದಾನಿಗಾಗಿ ಹಗಲು-ರಾತ್ರಿ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದು, ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ರಾಜಸ್ಥಾನ ವಿಧಾನಸಭೆ ಚುನಾವಣೆ ಹಿನ್ನೆಲೆ ಬುಂಡಿ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ಪ್ರಧಾನಿ ಮೋದಿ ಭಾರತ್ ಮಾತಾ ಕಿ ಜೈ ಬದಲಿಗೆ ಅದಾನಿ ಜೀ ಕಿ ಜೈ ಎಂದು ಹೇಳಬೇಕು ಏಕೆಂದರೆ ಅವರು ಅದಾನಿಗಾಗಿ ಹಗಲು-ರಾತ್ರಿ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

ಬಡವರು, ರೈತರು, ಕೂಲಿಕಾರ್ಮಿಕರು ಭಾರತ ಮಾತೆ ಎಂದ ಅವರು, ದೇಶದಲ್ಲಿ ಈ ವರ್ಗದವರ ಪಾಲ್ಗೊಳ್ಳುವಿಕೆ ಖಾತ್ರಿಯಾದಾಗ ಭಾರತ ಮಾತೆಯ ಜೈ ಎಂದಾಗುತ್ತದೆ. ಪ್ರಧಾನಿಯವರು 2 ಹಿಂದೂಸ್ಥಾನಗಳನ್ನು ಮಾಡಲು ಬಯಸುತ್ತಿದ್ದಾರೆ. ಒಂದನ್ನು ಅದಾನಿಗಾಗಿ ಮತ್ತು ಇನ್ನೊಂದು ಬಡವರಿಗಾಗಿ ಎಂದು ಹೇಳಿದ ರಾಹುಲ್‌ ಗಾಂಧಿ, ಏನೇ ಆದರೂ ಮೋದಿ ಜಾತಿ ಗಣತಿ ನಡೆಸುವುದಿಲ್ಲ. ಕಾಂಗ್ರೆಸ್ ಪಕ್ಷ ಜಾತಿ ಗಣತಿ ಮಾಡುತ್ತದೆ ಎಂದು ಹೇಳಿದ್ದಾರೆ.

ನಾವು ರಾಜಸ್ಥಾನದಲ್ಲಿ ಜಾತಿ ಗಣತಿಗೆ ಆದೇಶ ನೀಡಿದ್ದೇವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ, ನಮ್ಮ ಮೊದಲ ಕೆಲಸವು ಜಾತಿ ಗಣತಿಗೆ ಆದೇಶಿಸುವುದಾಗಿದೆ. ನಿಮ್ಮ ನಿಜವಾದ ಪಾಳ್ಗೊಳ್ಳುವಿಕೆ ಆಗ ಪ್ರಾರಂಭವಾಗುತ್ತದೆ. ಭಾರತಮಾತೆ ವಿಜಯಶಾಲಿಯಾಗುತ್ತಾಳೆ ಎಂದು ಹೇಳಿದ್ದಾರೆ.

ದೇಶದ ಯಾವುದೇ ದೊಡ್ಡ ಕೈಗಾರಿಕೋದ್ಯಮಿ ಒಬಿಸಿ, ದಲಿತ ಅಥವಾ ಬುಡಕಟ್ಟು ಜನಾಂಗದವರಿದ್ದಾರ? ಇದ್ದರೆ ಭಾಷಣ ಮಾಡುವುದನ್ನು ನಿಲ್ಲಿಸುತ್ತೇನೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಗೆಹ್ಲೋಟ್ ಸರ್ಕಾರ ಪ್ರಾರಂಭಿಸಿದ ಎಲ್ಲಾ ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಬಿಜೆಪಿಗರು ಸ್ಥಗಿತಗೊಳಿಸುತ್ತಾರೆ ಎಂದು ಹೇಳಿದ್ದಾರೆ.

ಮೋದಿ ಅವರು ತಮ್ಮ ಸಾರ್ವಜನಿಕ ಭಾಷಣಗಳಲ್ಲಿ ತಾನು ಒಬಿಸಿ ಎಂದು ಹೇಳುತ್ತಿದ್ದರು ಆದರೆ ಸಂಸತ್ತಿನಲ್ಲಿ ಜಾತಿ ಗಣತಿಗೆ ಒತ್ತಾಯಿಸಿದ ತಕ್ಷಣ, ಪ್ರಧಾನಿ ಬೇರೆಯೇ ಹೇಳಲು ಪ್ರಾರಂಭಿಸಿದರು. ಮೋದಿ ಜೀ, ಒಂದು ಕೆಲಸ ಮಾಡಿ, ದೇಶದಲ್ಲಿ ಎಷ್ಟು ಒಬಿಸಿ ಇದ್ದಾರೆ ಎಂದು ಜಗತ್ತಿಗೆ ತಿಳಿಸಿ ಎಂದು ನಾನು ಕೇಳಿದೆ. ಅವರು ಹೊಸ ಭಾಷಣವನ್ನು ಪ್ರಾರಂಭಿಸಿ ದೇಶದಲ್ಲಿ ಬಡವರು ಮಾತ್ರ ಇದ್ದಾರೆ ಎಂದು ಹೇಳಿದರು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ಯಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಭಾರತೀಯ ನರ್ಸ್‌ನ್ನು ರಕ್ಷಿಸಲು ತಾಯಿಯ ಪರದಾಟ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...