Homeಅಂತರಾಷ್ಟ್ರೀಯಅನೌಪಚಾರಿಕ ಶೃಂಗಸಭೆ - ಉಭಯ ನಾಯಕರ ವ್ಯರ್ಥ ಕಸರತ್ತು : ಜಾಲಿ ರೈಡ್ ನಡೆಸಿದ ಮೋದಿ-ಕ್ಸಿ

ಅನೌಪಚಾರಿಕ ಶೃಂಗಸಭೆ – ಉಭಯ ನಾಯಕರ ವ್ಯರ್ಥ ಕಸರತ್ತು : ಜಾಲಿ ರೈಡ್ ನಡೆಸಿದ ಮೋದಿ-ಕ್ಸಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಅವರ ನಡುವಿನ ಮಾತುಕತೆ ವ್ಯರ್ಥ ಕಸರತ್ತಿನಂತೆ ಕಾಣುತ್ತದೆ. ಇದು ಅನೌಪಚಾರಿಕ ಶೃಂಗಸಭೆಯಾದ್ದರಿಂದ ನಿರ್ಧಿಷ್ಟಪಡಿಸಿದ ವಿಷಯಗಳೇ ಪ್ರಸ್ತಾಪವಾಗಬೇಕು ಎಂದೇನೂ ಇರಲಿಲ್ಲ. ಹಾಗಾಗಿ ಆರ್ಥಿಕ ವಿಷಯಗಳಲ್ಲದೆ ಗಡಿ ವಿಷಯಗಳು ಚರ್ಚೆಗೆ ಬರಬೇಕಿತ್ತು. ಪ್ರಧಾನಿ ಮೋದಿ ಆರ್ಥಿಕತೆ ಮತ್ತು ವ್ಯಾಪಾರ ಕುರಿತು ಮಾತನಾಡಿದರೆ ಕ್ಸಿ ಸರಕು ಮತ್ತು ಹೂಡಿಕೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಉಭಯ ನಾಯಕರು ಪ್ರಜ್ಞಾಪೂರ್ವಕವಾಗಿಯೇ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸುವ ಗೋಜಿಗೆ ಹೋಗಿಲ್ಲ. ಹೀಗಾಗಿ ಮೋದಿ-ಕ್ಸಿ ಜೋಡಿ ಹಳೆಯ ವಿಷಯಗಳಿಗೆ ಕಟ್ಟುಬಿದ್ದಿರುವುದರಿಂದ ಶೃಂಗಸಭೆಯ ಉದ್ದೇಶ ಈಡೇರಿದಂತೆ ಆಗಿಲ್ಲ ಎನ್ನಬಹುದು.

ಜಮ್ಮು ಮತ್ತು ಕಾಶ್ಮೀರದ 370ನೇ ವಿಧಿ ರದ್ದುಪಡಿಸುವ ಮೊದಲು ಹಾಗೂ ನಂತರವೂ ಚೀನಾ ದೇಶ ಪಾಕಿಸ್ತಾನದ ಪರ ಧ್ವನಿ ಎತ್ತುತ್ತಲೇ ಬರುತ್ತಿದೆ. ಪ್ರತಿಯೊಂದು ಹಂತದಲ್ಲೂ ಚೀನಾ ಪಾಕಿಸ್ತಾನವನ್ನು ಬಿಟ್ಟುಕೊಟ್ಟಿಲ್ಲ. ವಿಶೇಷ ಸ್ಥಾನಮಾನ ತೆಗೆದ ಬಳಿಕ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಎರಡು ಬಾರಿ ಪಾಕ್ ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನು ಭೇಟಿಯಾಗಿ ಬಂದು ತಾನು ಭಾರತದ ಪರ ಇಲ್ಲ ಎಂಬುದನ್ನು ಪ್ರದರ್ಶಿಸಿದೆ. ಚೀನಾ ದೇಶವು ಪಾಕಿಸ್ತಾನ ನೆಲದಲ್ಲಿ ಅಂದರೆ ಭಾರತದ ಗಡಿಗೆ ಹೊಂದಿಕೊಂಡಂತೆ ಆರ್ಥಿಕ ಕಾರಿಡಾರ್ ಹೊಂದಿರುವ ಕಾರಣ ಆ ದೇಶಕ್ಕೆ ಪಾಕ್‍ನ್ನು ಬೆಂಬಲಿಸುವುದು ಅನಿವಾರ್ಯವು ಆಗಬಹುದು. ಹಾಗಾಗಿಯೇ ಚೀನಾಕ್ಕೆ ಪಾಕ್ ಮೇಲಿನ ಪ್ರೇಮ ಹೆಚ್ಚು. ಇದೇ ಕಾರಣಕ್ಕಾಗಿಯೇ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್, 56 ಇಂಚಿನ ಎದೆಯನ್ನು ಈಗ ಪ್ರಧಾನಿ ಚೀನಾ ಅಧ್ಯಕ್ಷರ ಮುಂದೆ ಪ್ರದರ್ಶಿಸಬೇಕು. ಪಾಕ್ ಆಕ್ರಮಿತ ಕಾಶ್ಮೀರದಿಂದ ಹಿಂದೆ ಸರಿಯಲು ಕ್ಸಿಗೆ ಪ್ರಧಾನಿ ನೇರವಾಗಿ ಹೇಳಬೇಕು ಎಂದು ವ್ಯಂಗ್ಯವಾಗಿ ತಿವಿದರು.

ಚೀನಾ ಮತ್ತು ಭಾರತದ ನಡುವೆ ಗಡಿ ವಿವಾದ ಹಿಂದಿನಿಂದಲೂ ಇದೆ. ಅದನ್ನು ಬಗೆಹರಿಸುವ ಸಣ್ಣ ಪ್ರಯತ್ನಗಳು ನಡೆದಿವೆಯಾದರೂ ಗಡಿ ವಿವಾದಗಳು ಬಗೆಹರಿದಿಲ್ಲ. ಭಾರತ ಮತ್ತು ಚೀನಾ ಗಡಿಯನ್ನು ಹಂಚಿಕೊಂಡಿವೆ. ಅದೇ ಕಾರಣಕ್ಕೆ ವಿವಾದ ಹಾಗೆಯೇ ಉಳಿದಿದೆ. ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ನಿರ್ಮಾಣವಾಗುವ ಸಂದರ್ಭದಲ್ಲಿ ಭಾರತ ತಕರಾರು ಎತ್ತಿತ್ತು. ನಮ್ಮ ಗಡಿಯಲ್ಲಿ ಆರ್ಥಿಕ ಕಾರಿಡಾರು ಮಾಡಬಾರದು ಎಂದು ಪ್ರಧಾನಿ ಮೋದಿ ಹೇಳಿದರು. ಇದೇ ನೆಪವನ್ನು ಇಟ್ಟುಕೊಂಡು ಚೀನಾ ಮತ್ತೆ ಕ್ಯಾತೆ ತೆಗೆಯಿತು. 2017ರಲ್ಲಿ ತನ್ನ ಗಡಿಭಾಗದಲ್ಲಿ ಹೆಚ್ಚುವರಿ ಸೈನಿಕರ ಜಮಾವಣೆ ಮಾಡಿತು. ಇದಕ್ಕೆ ಉತ್ತರವಾಗಿ ಭಾರತವೂ ಗಡಿಯಲ್ಲಿ ಸೈನಿಕರ ನಿಯೋಜನೆ ಮಾಡಿತು. ಇದರಿಂದಾಗಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಂತಾರಾಷ್ಟ್ರೀಯ ಒತ್ತಡ ಹೆಚ್ಚಿದಂತೆ ಉಭಯ ರಾಷ್ಟ್ರಗಳು ಸೈನಿಕರನ್ನು ವಾಪಸ್ ಕರೆಸಿಕೊಂಡರು.

ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ಕೆಲವು ಭಾಗಗಳು ತನಗೆ ಸೇರಬೇಕು ಎಂದು ಚೀನಾ ವಾದಿಸಿತು. ಹೀಗಾಗಿ ಸಿಕ್ಕಿಂ ಪ್ರದೇಶದ ಕೋಳಿ ಕತ್ತು ಅಥವಾ ಟ್ರೈ ಜಂಕ್ಷನ್ ಪ್ರದೇಶದಲ್ಲಿ ದ್ವೇಷಮಯ ವಾತಾವರಣ ನಿರ್ಮಾಣವಾಗಿತ್ತು. ಆ ವಿಷಯ ಇನ್ನೂ ಹಸಿರಾಗಿಯೇ ಇದೆ. ಪರಿಸ್ಥಿತಿ ಹೀಗಿರುವಾಗ ಗಂಭೀರವಾದ ವಿಷಯಗಳು ಅನೌಪಚಾರಿಕ ಶೃಂಗಸಭೆಯಲ್ಲಿ ಚರ್ಚೆಗೆ ಬಂದಿದ್ದರೆ ಒಳ್ಳೆಯದಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಮ್ಮು-ಕಾಶ್ಮೀರ ವಿಷಯವನ್ನು ತೆಗೆದುಕೊಂಡು ಹೋಗಿದ್ದರೂ ಅದು ಉಭಯ ದೇಶಗಳ ನಡುವೆ ಮಾತುಕತೆಯ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಇದು ಭಾರತದ ಪ್ರತಿಪಾದನೆಯೂ ಕೂಡ. ಆದರೆ ಭಾರತ ಅಮೇರಿಕಾವನ್ನು ನಂಬಿ ಕೂತಂತೆ ಕಾಣುತ್ತಿದೆ. ಪ್ರಧಾನಿ ಮೋದಿ ಅವರು ಪದೇಪದೇ ಅಮೆರಿಕಾ ಅಧ್ಯಕ್ಷರನ್ನು ಭೇಟಿ ಮಾಡುತ್ತಿರುವುದು ಇದಕ್ಕೆ ಉದಾಹರಣೆಯಾಗಿದೆ. ಅಮೆರಿಕಾ ತನ್ನ ನಿಲುವು ಸ್ಪಷ್ಟಪಡಿಸದೆ ಒಮ್ಮೆ ಭಾರತದ ಪರವಾಗಿ ಮತ್ತೊಮ್ಮೆ ಪಾಕಿಸ್ತಾನದ ಪರವಾಗಿ ಮಾತನಾಡುತ್ತ ತನ್ನ ಶಸ್ತ್ರಾಸ್ತ್ರಗಳ ಮಾರಾಟದಲ್ಲಿ ತೊಡಗಿದೆ.

ಭಾರತದ ಪ್ರಧಾನಿ ಭೇಟಿಯಾದರೆ ಉಭಯ ದೇಶಗಳು ಗಡಿ ವಿವಾದವನ್ನು ಬಗೆಹರಿಸಿಕೊಳ್ಳಲಿ ಅನ್ನುವುದು. ಪಾಕ್ ಪ್ರಧಾನಿ ಭೇಟಿ ಮಾಡಿದರೆ ತಾನು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ದ ಎನ್ನುವುದು. ಹೀಗೆ ಎರಡು ನಾಲಗೆಯ ಮಾತುಗಳು ಅಮೆರಿಕಾದಿಂದ ಹೊರಬರುತ್ತಿವೆ. ಇದು ಭಾರತಕ್ಕೆ ತಿಳಿಯುತ್ತಿಲ್ಲವೇ? ಅಮೆರಿಕಾ ಮತ್ತು ಚೀನಾ ಪಾಕಿಸ್ತಾನದ ಪರವಾಗಿಯೇ ಇದ್ದರೂ ಭಾರತ ಯಾರ ಓಲೈಕೆಯಲ್ಲಿ ತೊಡಗಿದೆ ಎಂಬ ಪ್ರಶ್ನೆ ಎದುರಾಗುತ್ತದೆ. ಇದು ವ್ಯರ್ಥ ಕಸರತ್ತೂ ಕೂಡ. ಭಾರತ ರಾಜತಾಂತ್ರಿಕ ಪ್ರಬುದ್ಧತೆ ಪ್ರದರ್ಶಿಸುತ್ತಿಲ್ಲ. ಚರ್ಚಿತವಾಗಬೇಕಾದ ವಿಷಯಗಳೇ ಪ್ರಮುಖವಾಗುತ್ತಿಲ್ಲ.

ಚೀನಾ ಅಧ್ಯಕ್ಷರು ‘ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ’ ಬಗ್ಗೆ ಮಾತನಾಡಿದ್ದಾರೆ. ಅದು ಬೆಲ್ಟ್ ಅಂಡ್ ರೋಡ್ ಇನಿಶಿಯೇಟಿವ್ ಇಲ್ಲವೇ ಬೆಲ್ ಅಂಡ್ ರೋಡ್ ಫೋರಂ ಮತ್ತು ಆರ್ಥಿಕ ಕಾರಿಡಾರ್‌ನ ಮುಂದುವರೆದ ಭಾಗ. ಈಗಾಗಲೇ ಪಾಕಿಸ್ತಾನದಲ್ಲಿ ತನ್ನ ನೆಲೆಯನ್ನು ಕಂಡುಕೊಂಡಿರುವ ಚೀನಾ. ಭಾರತದ ಮೇಲೂ ಹೊಸ ಆರ್ಥಿಕ ಪಾಲುದಾರಿಕೆ ಮೂಲಕ ಸವಾರಿ ಮಾಡಲು ಹೊರಟಂತೆ ಕಾಣುತ್ತಿದೆ. ಚೀನಾ ಉತ್ಪನ್ನಗಳನ್ನು ತಿರಸ್ಕರಿಸಬೇಕು ಎನ್ನುವ ಬಿಜೆಪಿಯು ತನ್ನದೇ ಕೇಂದ್ರ ಸರ್ಕಾರ ಚೀನಾದಿಂದ ಹೂಡಿಕೆಗೆ ಅವಕಾಶ ನೀಡುತ್ತಿರುವುದನ್ನು ಮಗುಮ್ಮಾಗಿಯೇ ಸ್ವೀಕರಿಸುವ ಮೂಲಕ ತನ್ನ ಆಷಾಡಭೂತಿತನವನ್ನು ಪ್ರದರ್ಶಿಸಿದೆ. ಕಳೆದ ಐದು ವರ್ಷದಿಂದ ಇಚೀಗೆ ಯಾವುದೇ ದೇಶ ಇಂಡಿಯಾದಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿಲ್ಲ. ಹಾಗಾದರೆ ವಿದೇಶ ಸುತ್ತುವ ಮೋದಿ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಎದುರಾಗುತ್ತದೆ. ಆದ್ದರಿಂದ ಮಾಮಲ್ಲಪುರಂನಲ್ಲಿ ಚೀನಾ ಅಧ್ಯಕ್ಷರಿಗೆ ಕೆಂಪು ನೆಲಹಾಸ ಹಾಕಿ ಸ್ವಾಗತಿಸಿದರೂ ಉಭಯ ನಾಯಕರ ನಡುವೆ ನಡೆದ ಚರ್ಚೆ ವ್ಯರ್ಥ ಕಸರತ್ತು ಎನ್ನದೆ ಬೇರೆ ಮಾರ್ಗವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...