Homeಅಂತರಾಷ್ಟ್ರೀಯಅನೌಪಚಾರಿಕ ಶೃಂಗಸಭೆ - ಉಭಯ ನಾಯಕರ ವ್ಯರ್ಥ ಕಸರತ್ತು : ಜಾಲಿ ರೈಡ್ ನಡೆಸಿದ ಮೋದಿ-ಕ್ಸಿ

ಅನೌಪಚಾರಿಕ ಶೃಂಗಸಭೆ – ಉಭಯ ನಾಯಕರ ವ್ಯರ್ಥ ಕಸರತ್ತು : ಜಾಲಿ ರೈಡ್ ನಡೆಸಿದ ಮೋದಿ-ಕ್ಸಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಅವರ ನಡುವಿನ ಮಾತುಕತೆ ವ್ಯರ್ಥ ಕಸರತ್ತಿನಂತೆ ಕಾಣುತ್ತದೆ. ಇದು ಅನೌಪಚಾರಿಕ ಶೃಂಗಸಭೆಯಾದ್ದರಿಂದ ನಿರ್ಧಿಷ್ಟಪಡಿಸಿದ ವಿಷಯಗಳೇ ಪ್ರಸ್ತಾಪವಾಗಬೇಕು ಎಂದೇನೂ ಇರಲಿಲ್ಲ. ಹಾಗಾಗಿ ಆರ್ಥಿಕ ವಿಷಯಗಳಲ್ಲದೆ ಗಡಿ ವಿಷಯಗಳು ಚರ್ಚೆಗೆ ಬರಬೇಕಿತ್ತು. ಪ್ರಧಾನಿ ಮೋದಿ ಆರ್ಥಿಕತೆ ಮತ್ತು ವ್ಯಾಪಾರ ಕುರಿತು ಮಾತನಾಡಿದರೆ ಕ್ಸಿ ಸರಕು ಮತ್ತು ಹೂಡಿಕೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಉಭಯ ನಾಯಕರು ಪ್ರಜ್ಞಾಪೂರ್ವಕವಾಗಿಯೇ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸುವ ಗೋಜಿಗೆ ಹೋಗಿಲ್ಲ. ಹೀಗಾಗಿ ಮೋದಿ-ಕ್ಸಿ ಜೋಡಿ ಹಳೆಯ ವಿಷಯಗಳಿಗೆ ಕಟ್ಟುಬಿದ್ದಿರುವುದರಿಂದ ಶೃಂಗಸಭೆಯ ಉದ್ದೇಶ ಈಡೇರಿದಂತೆ ಆಗಿಲ್ಲ ಎನ್ನಬಹುದು.

ಜಮ್ಮು ಮತ್ತು ಕಾಶ್ಮೀರದ 370ನೇ ವಿಧಿ ರದ್ದುಪಡಿಸುವ ಮೊದಲು ಹಾಗೂ ನಂತರವೂ ಚೀನಾ ದೇಶ ಪಾಕಿಸ್ತಾನದ ಪರ ಧ್ವನಿ ಎತ್ತುತ್ತಲೇ ಬರುತ್ತಿದೆ. ಪ್ರತಿಯೊಂದು ಹಂತದಲ್ಲೂ ಚೀನಾ ಪಾಕಿಸ್ತಾನವನ್ನು ಬಿಟ್ಟುಕೊಟ್ಟಿಲ್ಲ. ವಿಶೇಷ ಸ್ಥಾನಮಾನ ತೆಗೆದ ಬಳಿಕ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಎರಡು ಬಾರಿ ಪಾಕ್ ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನು ಭೇಟಿಯಾಗಿ ಬಂದು ತಾನು ಭಾರತದ ಪರ ಇಲ್ಲ ಎಂಬುದನ್ನು ಪ್ರದರ್ಶಿಸಿದೆ. ಚೀನಾ ದೇಶವು ಪಾಕಿಸ್ತಾನ ನೆಲದಲ್ಲಿ ಅಂದರೆ ಭಾರತದ ಗಡಿಗೆ ಹೊಂದಿಕೊಂಡಂತೆ ಆರ್ಥಿಕ ಕಾರಿಡಾರ್ ಹೊಂದಿರುವ ಕಾರಣ ಆ ದೇಶಕ್ಕೆ ಪಾಕ್‍ನ್ನು ಬೆಂಬಲಿಸುವುದು ಅನಿವಾರ್ಯವು ಆಗಬಹುದು. ಹಾಗಾಗಿಯೇ ಚೀನಾಕ್ಕೆ ಪಾಕ್ ಮೇಲಿನ ಪ್ರೇಮ ಹೆಚ್ಚು. ಇದೇ ಕಾರಣಕ್ಕಾಗಿಯೇ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್, 56 ಇಂಚಿನ ಎದೆಯನ್ನು ಈಗ ಪ್ರಧಾನಿ ಚೀನಾ ಅಧ್ಯಕ್ಷರ ಮುಂದೆ ಪ್ರದರ್ಶಿಸಬೇಕು. ಪಾಕ್ ಆಕ್ರಮಿತ ಕಾಶ್ಮೀರದಿಂದ ಹಿಂದೆ ಸರಿಯಲು ಕ್ಸಿಗೆ ಪ್ರಧಾನಿ ನೇರವಾಗಿ ಹೇಳಬೇಕು ಎಂದು ವ್ಯಂಗ್ಯವಾಗಿ ತಿವಿದರು.

ಚೀನಾ ಮತ್ತು ಭಾರತದ ನಡುವೆ ಗಡಿ ವಿವಾದ ಹಿಂದಿನಿಂದಲೂ ಇದೆ. ಅದನ್ನು ಬಗೆಹರಿಸುವ ಸಣ್ಣ ಪ್ರಯತ್ನಗಳು ನಡೆದಿವೆಯಾದರೂ ಗಡಿ ವಿವಾದಗಳು ಬಗೆಹರಿದಿಲ್ಲ. ಭಾರತ ಮತ್ತು ಚೀನಾ ಗಡಿಯನ್ನು ಹಂಚಿಕೊಂಡಿವೆ. ಅದೇ ಕಾರಣಕ್ಕೆ ವಿವಾದ ಹಾಗೆಯೇ ಉಳಿದಿದೆ. ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ನಿರ್ಮಾಣವಾಗುವ ಸಂದರ್ಭದಲ್ಲಿ ಭಾರತ ತಕರಾರು ಎತ್ತಿತ್ತು. ನಮ್ಮ ಗಡಿಯಲ್ಲಿ ಆರ್ಥಿಕ ಕಾರಿಡಾರು ಮಾಡಬಾರದು ಎಂದು ಪ್ರಧಾನಿ ಮೋದಿ ಹೇಳಿದರು. ಇದೇ ನೆಪವನ್ನು ಇಟ್ಟುಕೊಂಡು ಚೀನಾ ಮತ್ತೆ ಕ್ಯಾತೆ ತೆಗೆಯಿತು. 2017ರಲ್ಲಿ ತನ್ನ ಗಡಿಭಾಗದಲ್ಲಿ ಹೆಚ್ಚುವರಿ ಸೈನಿಕರ ಜಮಾವಣೆ ಮಾಡಿತು. ಇದಕ್ಕೆ ಉತ್ತರವಾಗಿ ಭಾರತವೂ ಗಡಿಯಲ್ಲಿ ಸೈನಿಕರ ನಿಯೋಜನೆ ಮಾಡಿತು. ಇದರಿಂದಾಗಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಂತಾರಾಷ್ಟ್ರೀಯ ಒತ್ತಡ ಹೆಚ್ಚಿದಂತೆ ಉಭಯ ರಾಷ್ಟ್ರಗಳು ಸೈನಿಕರನ್ನು ವಾಪಸ್ ಕರೆಸಿಕೊಂಡರು.

ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ಕೆಲವು ಭಾಗಗಳು ತನಗೆ ಸೇರಬೇಕು ಎಂದು ಚೀನಾ ವಾದಿಸಿತು. ಹೀಗಾಗಿ ಸಿಕ್ಕಿಂ ಪ್ರದೇಶದ ಕೋಳಿ ಕತ್ತು ಅಥವಾ ಟ್ರೈ ಜಂಕ್ಷನ್ ಪ್ರದೇಶದಲ್ಲಿ ದ್ವೇಷಮಯ ವಾತಾವರಣ ನಿರ್ಮಾಣವಾಗಿತ್ತು. ಆ ವಿಷಯ ಇನ್ನೂ ಹಸಿರಾಗಿಯೇ ಇದೆ. ಪರಿಸ್ಥಿತಿ ಹೀಗಿರುವಾಗ ಗಂಭೀರವಾದ ವಿಷಯಗಳು ಅನೌಪಚಾರಿಕ ಶೃಂಗಸಭೆಯಲ್ಲಿ ಚರ್ಚೆಗೆ ಬಂದಿದ್ದರೆ ಒಳ್ಳೆಯದಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಮ್ಮು-ಕಾಶ್ಮೀರ ವಿಷಯವನ್ನು ತೆಗೆದುಕೊಂಡು ಹೋಗಿದ್ದರೂ ಅದು ಉಭಯ ದೇಶಗಳ ನಡುವೆ ಮಾತುಕತೆಯ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಇದು ಭಾರತದ ಪ್ರತಿಪಾದನೆಯೂ ಕೂಡ. ಆದರೆ ಭಾರತ ಅಮೇರಿಕಾವನ್ನು ನಂಬಿ ಕೂತಂತೆ ಕಾಣುತ್ತಿದೆ. ಪ್ರಧಾನಿ ಮೋದಿ ಅವರು ಪದೇಪದೇ ಅಮೆರಿಕಾ ಅಧ್ಯಕ್ಷರನ್ನು ಭೇಟಿ ಮಾಡುತ್ತಿರುವುದು ಇದಕ್ಕೆ ಉದಾಹರಣೆಯಾಗಿದೆ. ಅಮೆರಿಕಾ ತನ್ನ ನಿಲುವು ಸ್ಪಷ್ಟಪಡಿಸದೆ ಒಮ್ಮೆ ಭಾರತದ ಪರವಾಗಿ ಮತ್ತೊಮ್ಮೆ ಪಾಕಿಸ್ತಾನದ ಪರವಾಗಿ ಮಾತನಾಡುತ್ತ ತನ್ನ ಶಸ್ತ್ರಾಸ್ತ್ರಗಳ ಮಾರಾಟದಲ್ಲಿ ತೊಡಗಿದೆ.

ಭಾರತದ ಪ್ರಧಾನಿ ಭೇಟಿಯಾದರೆ ಉಭಯ ದೇಶಗಳು ಗಡಿ ವಿವಾದವನ್ನು ಬಗೆಹರಿಸಿಕೊಳ್ಳಲಿ ಅನ್ನುವುದು. ಪಾಕ್ ಪ್ರಧಾನಿ ಭೇಟಿ ಮಾಡಿದರೆ ತಾನು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ದ ಎನ್ನುವುದು. ಹೀಗೆ ಎರಡು ನಾಲಗೆಯ ಮಾತುಗಳು ಅಮೆರಿಕಾದಿಂದ ಹೊರಬರುತ್ತಿವೆ. ಇದು ಭಾರತಕ್ಕೆ ತಿಳಿಯುತ್ತಿಲ್ಲವೇ? ಅಮೆರಿಕಾ ಮತ್ತು ಚೀನಾ ಪಾಕಿಸ್ತಾನದ ಪರವಾಗಿಯೇ ಇದ್ದರೂ ಭಾರತ ಯಾರ ಓಲೈಕೆಯಲ್ಲಿ ತೊಡಗಿದೆ ಎಂಬ ಪ್ರಶ್ನೆ ಎದುರಾಗುತ್ತದೆ. ಇದು ವ್ಯರ್ಥ ಕಸರತ್ತೂ ಕೂಡ. ಭಾರತ ರಾಜತಾಂತ್ರಿಕ ಪ್ರಬುದ್ಧತೆ ಪ್ರದರ್ಶಿಸುತ್ತಿಲ್ಲ. ಚರ್ಚಿತವಾಗಬೇಕಾದ ವಿಷಯಗಳೇ ಪ್ರಮುಖವಾಗುತ್ತಿಲ್ಲ.

ಚೀನಾ ಅಧ್ಯಕ್ಷರು ‘ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ’ ಬಗ್ಗೆ ಮಾತನಾಡಿದ್ದಾರೆ. ಅದು ಬೆಲ್ಟ್ ಅಂಡ್ ರೋಡ್ ಇನಿಶಿಯೇಟಿವ್ ಇಲ್ಲವೇ ಬೆಲ್ ಅಂಡ್ ರೋಡ್ ಫೋರಂ ಮತ್ತು ಆರ್ಥಿಕ ಕಾರಿಡಾರ್‌ನ ಮುಂದುವರೆದ ಭಾಗ. ಈಗಾಗಲೇ ಪಾಕಿಸ್ತಾನದಲ್ಲಿ ತನ್ನ ನೆಲೆಯನ್ನು ಕಂಡುಕೊಂಡಿರುವ ಚೀನಾ. ಭಾರತದ ಮೇಲೂ ಹೊಸ ಆರ್ಥಿಕ ಪಾಲುದಾರಿಕೆ ಮೂಲಕ ಸವಾರಿ ಮಾಡಲು ಹೊರಟಂತೆ ಕಾಣುತ್ತಿದೆ. ಚೀನಾ ಉತ್ಪನ್ನಗಳನ್ನು ತಿರಸ್ಕರಿಸಬೇಕು ಎನ್ನುವ ಬಿಜೆಪಿಯು ತನ್ನದೇ ಕೇಂದ್ರ ಸರ್ಕಾರ ಚೀನಾದಿಂದ ಹೂಡಿಕೆಗೆ ಅವಕಾಶ ನೀಡುತ್ತಿರುವುದನ್ನು ಮಗುಮ್ಮಾಗಿಯೇ ಸ್ವೀಕರಿಸುವ ಮೂಲಕ ತನ್ನ ಆಷಾಡಭೂತಿತನವನ್ನು ಪ್ರದರ್ಶಿಸಿದೆ. ಕಳೆದ ಐದು ವರ್ಷದಿಂದ ಇಚೀಗೆ ಯಾವುದೇ ದೇಶ ಇಂಡಿಯಾದಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿಲ್ಲ. ಹಾಗಾದರೆ ವಿದೇಶ ಸುತ್ತುವ ಮೋದಿ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಎದುರಾಗುತ್ತದೆ. ಆದ್ದರಿಂದ ಮಾಮಲ್ಲಪುರಂನಲ್ಲಿ ಚೀನಾ ಅಧ್ಯಕ್ಷರಿಗೆ ಕೆಂಪು ನೆಲಹಾಸ ಹಾಕಿ ಸ್ವಾಗತಿಸಿದರೂ ಉಭಯ ನಾಯಕರ ನಡುವೆ ನಡೆದ ಚರ್ಚೆ ವ್ಯರ್ಥ ಕಸರತ್ತು ಎನ್ನದೆ ಬೇರೆ ಮಾರ್ಗವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...