Homeಅಂತರಾಷ್ಟ್ರೀಯಅನೌಪಚಾರಿಕ ಶೃಂಗಸಭೆ - ಉಭಯ ನಾಯಕರ ವ್ಯರ್ಥ ಕಸರತ್ತು : ಜಾಲಿ ರೈಡ್ ನಡೆಸಿದ ಮೋದಿ-ಕ್ಸಿ

ಅನೌಪಚಾರಿಕ ಶೃಂಗಸಭೆ – ಉಭಯ ನಾಯಕರ ವ್ಯರ್ಥ ಕಸರತ್ತು : ಜಾಲಿ ರೈಡ್ ನಡೆಸಿದ ಮೋದಿ-ಕ್ಸಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಅವರ ನಡುವಿನ ಮಾತುಕತೆ ವ್ಯರ್ಥ ಕಸರತ್ತಿನಂತೆ ಕಾಣುತ್ತದೆ. ಇದು ಅನೌಪಚಾರಿಕ ಶೃಂಗಸಭೆಯಾದ್ದರಿಂದ ನಿರ್ಧಿಷ್ಟಪಡಿಸಿದ ವಿಷಯಗಳೇ ಪ್ರಸ್ತಾಪವಾಗಬೇಕು ಎಂದೇನೂ ಇರಲಿಲ್ಲ. ಹಾಗಾಗಿ ಆರ್ಥಿಕ ವಿಷಯಗಳಲ್ಲದೆ ಗಡಿ ವಿಷಯಗಳು ಚರ್ಚೆಗೆ ಬರಬೇಕಿತ್ತು. ಪ್ರಧಾನಿ ಮೋದಿ ಆರ್ಥಿಕತೆ ಮತ್ತು ವ್ಯಾಪಾರ ಕುರಿತು ಮಾತನಾಡಿದರೆ ಕ್ಸಿ ಸರಕು ಮತ್ತು ಹೂಡಿಕೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಉಭಯ ನಾಯಕರು ಪ್ರಜ್ಞಾಪೂರ್ವಕವಾಗಿಯೇ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸುವ ಗೋಜಿಗೆ ಹೋಗಿಲ್ಲ. ಹೀಗಾಗಿ ಮೋದಿ-ಕ್ಸಿ ಜೋಡಿ ಹಳೆಯ ವಿಷಯಗಳಿಗೆ ಕಟ್ಟುಬಿದ್ದಿರುವುದರಿಂದ ಶೃಂಗಸಭೆಯ ಉದ್ದೇಶ ಈಡೇರಿದಂತೆ ಆಗಿಲ್ಲ ಎನ್ನಬಹುದು.

ಜಮ್ಮು ಮತ್ತು ಕಾಶ್ಮೀರದ 370ನೇ ವಿಧಿ ರದ್ದುಪಡಿಸುವ ಮೊದಲು ಹಾಗೂ ನಂತರವೂ ಚೀನಾ ದೇಶ ಪಾಕಿಸ್ತಾನದ ಪರ ಧ್ವನಿ ಎತ್ತುತ್ತಲೇ ಬರುತ್ತಿದೆ. ಪ್ರತಿಯೊಂದು ಹಂತದಲ್ಲೂ ಚೀನಾ ಪಾಕಿಸ್ತಾನವನ್ನು ಬಿಟ್ಟುಕೊಟ್ಟಿಲ್ಲ. ವಿಶೇಷ ಸ್ಥಾನಮಾನ ತೆಗೆದ ಬಳಿಕ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಎರಡು ಬಾರಿ ಪಾಕ್ ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನು ಭೇಟಿಯಾಗಿ ಬಂದು ತಾನು ಭಾರತದ ಪರ ಇಲ್ಲ ಎಂಬುದನ್ನು ಪ್ರದರ್ಶಿಸಿದೆ. ಚೀನಾ ದೇಶವು ಪಾಕಿಸ್ತಾನ ನೆಲದಲ್ಲಿ ಅಂದರೆ ಭಾರತದ ಗಡಿಗೆ ಹೊಂದಿಕೊಂಡಂತೆ ಆರ್ಥಿಕ ಕಾರಿಡಾರ್ ಹೊಂದಿರುವ ಕಾರಣ ಆ ದೇಶಕ್ಕೆ ಪಾಕ್‍ನ್ನು ಬೆಂಬಲಿಸುವುದು ಅನಿವಾರ್ಯವು ಆಗಬಹುದು. ಹಾಗಾಗಿಯೇ ಚೀನಾಕ್ಕೆ ಪಾಕ್ ಮೇಲಿನ ಪ್ರೇಮ ಹೆಚ್ಚು. ಇದೇ ಕಾರಣಕ್ಕಾಗಿಯೇ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್, 56 ಇಂಚಿನ ಎದೆಯನ್ನು ಈಗ ಪ್ರಧಾನಿ ಚೀನಾ ಅಧ್ಯಕ್ಷರ ಮುಂದೆ ಪ್ರದರ್ಶಿಸಬೇಕು. ಪಾಕ್ ಆಕ್ರಮಿತ ಕಾಶ್ಮೀರದಿಂದ ಹಿಂದೆ ಸರಿಯಲು ಕ್ಸಿಗೆ ಪ್ರಧಾನಿ ನೇರವಾಗಿ ಹೇಳಬೇಕು ಎಂದು ವ್ಯಂಗ್ಯವಾಗಿ ತಿವಿದರು.

ಚೀನಾ ಮತ್ತು ಭಾರತದ ನಡುವೆ ಗಡಿ ವಿವಾದ ಹಿಂದಿನಿಂದಲೂ ಇದೆ. ಅದನ್ನು ಬಗೆಹರಿಸುವ ಸಣ್ಣ ಪ್ರಯತ್ನಗಳು ನಡೆದಿವೆಯಾದರೂ ಗಡಿ ವಿವಾದಗಳು ಬಗೆಹರಿದಿಲ್ಲ. ಭಾರತ ಮತ್ತು ಚೀನಾ ಗಡಿಯನ್ನು ಹಂಚಿಕೊಂಡಿವೆ. ಅದೇ ಕಾರಣಕ್ಕೆ ವಿವಾದ ಹಾಗೆಯೇ ಉಳಿದಿದೆ. ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ನಿರ್ಮಾಣವಾಗುವ ಸಂದರ್ಭದಲ್ಲಿ ಭಾರತ ತಕರಾರು ಎತ್ತಿತ್ತು. ನಮ್ಮ ಗಡಿಯಲ್ಲಿ ಆರ್ಥಿಕ ಕಾರಿಡಾರು ಮಾಡಬಾರದು ಎಂದು ಪ್ರಧಾನಿ ಮೋದಿ ಹೇಳಿದರು. ಇದೇ ನೆಪವನ್ನು ಇಟ್ಟುಕೊಂಡು ಚೀನಾ ಮತ್ತೆ ಕ್ಯಾತೆ ತೆಗೆಯಿತು. 2017ರಲ್ಲಿ ತನ್ನ ಗಡಿಭಾಗದಲ್ಲಿ ಹೆಚ್ಚುವರಿ ಸೈನಿಕರ ಜಮಾವಣೆ ಮಾಡಿತು. ಇದಕ್ಕೆ ಉತ್ತರವಾಗಿ ಭಾರತವೂ ಗಡಿಯಲ್ಲಿ ಸೈನಿಕರ ನಿಯೋಜನೆ ಮಾಡಿತು. ಇದರಿಂದಾಗಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಂತಾರಾಷ್ಟ್ರೀಯ ಒತ್ತಡ ಹೆಚ್ಚಿದಂತೆ ಉಭಯ ರಾಷ್ಟ್ರಗಳು ಸೈನಿಕರನ್ನು ವಾಪಸ್ ಕರೆಸಿಕೊಂಡರು.

ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ಕೆಲವು ಭಾಗಗಳು ತನಗೆ ಸೇರಬೇಕು ಎಂದು ಚೀನಾ ವಾದಿಸಿತು. ಹೀಗಾಗಿ ಸಿಕ್ಕಿಂ ಪ್ರದೇಶದ ಕೋಳಿ ಕತ್ತು ಅಥವಾ ಟ್ರೈ ಜಂಕ್ಷನ್ ಪ್ರದೇಶದಲ್ಲಿ ದ್ವೇಷಮಯ ವಾತಾವರಣ ನಿರ್ಮಾಣವಾಗಿತ್ತು. ಆ ವಿಷಯ ಇನ್ನೂ ಹಸಿರಾಗಿಯೇ ಇದೆ. ಪರಿಸ್ಥಿತಿ ಹೀಗಿರುವಾಗ ಗಂಭೀರವಾದ ವಿಷಯಗಳು ಅನೌಪಚಾರಿಕ ಶೃಂಗಸಭೆಯಲ್ಲಿ ಚರ್ಚೆಗೆ ಬಂದಿದ್ದರೆ ಒಳ್ಳೆಯದಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಮ್ಮು-ಕಾಶ್ಮೀರ ವಿಷಯವನ್ನು ತೆಗೆದುಕೊಂಡು ಹೋಗಿದ್ದರೂ ಅದು ಉಭಯ ದೇಶಗಳ ನಡುವೆ ಮಾತುಕತೆಯ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಇದು ಭಾರತದ ಪ್ರತಿಪಾದನೆಯೂ ಕೂಡ. ಆದರೆ ಭಾರತ ಅಮೇರಿಕಾವನ್ನು ನಂಬಿ ಕೂತಂತೆ ಕಾಣುತ್ತಿದೆ. ಪ್ರಧಾನಿ ಮೋದಿ ಅವರು ಪದೇಪದೇ ಅಮೆರಿಕಾ ಅಧ್ಯಕ್ಷರನ್ನು ಭೇಟಿ ಮಾಡುತ್ತಿರುವುದು ಇದಕ್ಕೆ ಉದಾಹರಣೆಯಾಗಿದೆ. ಅಮೆರಿಕಾ ತನ್ನ ನಿಲುವು ಸ್ಪಷ್ಟಪಡಿಸದೆ ಒಮ್ಮೆ ಭಾರತದ ಪರವಾಗಿ ಮತ್ತೊಮ್ಮೆ ಪಾಕಿಸ್ತಾನದ ಪರವಾಗಿ ಮಾತನಾಡುತ್ತ ತನ್ನ ಶಸ್ತ್ರಾಸ್ತ್ರಗಳ ಮಾರಾಟದಲ್ಲಿ ತೊಡಗಿದೆ.

ಭಾರತದ ಪ್ರಧಾನಿ ಭೇಟಿಯಾದರೆ ಉಭಯ ದೇಶಗಳು ಗಡಿ ವಿವಾದವನ್ನು ಬಗೆಹರಿಸಿಕೊಳ್ಳಲಿ ಅನ್ನುವುದು. ಪಾಕ್ ಪ್ರಧಾನಿ ಭೇಟಿ ಮಾಡಿದರೆ ತಾನು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ದ ಎನ್ನುವುದು. ಹೀಗೆ ಎರಡು ನಾಲಗೆಯ ಮಾತುಗಳು ಅಮೆರಿಕಾದಿಂದ ಹೊರಬರುತ್ತಿವೆ. ಇದು ಭಾರತಕ್ಕೆ ತಿಳಿಯುತ್ತಿಲ್ಲವೇ? ಅಮೆರಿಕಾ ಮತ್ತು ಚೀನಾ ಪಾಕಿಸ್ತಾನದ ಪರವಾಗಿಯೇ ಇದ್ದರೂ ಭಾರತ ಯಾರ ಓಲೈಕೆಯಲ್ಲಿ ತೊಡಗಿದೆ ಎಂಬ ಪ್ರಶ್ನೆ ಎದುರಾಗುತ್ತದೆ. ಇದು ವ್ಯರ್ಥ ಕಸರತ್ತೂ ಕೂಡ. ಭಾರತ ರಾಜತಾಂತ್ರಿಕ ಪ್ರಬುದ್ಧತೆ ಪ್ರದರ್ಶಿಸುತ್ತಿಲ್ಲ. ಚರ್ಚಿತವಾಗಬೇಕಾದ ವಿಷಯಗಳೇ ಪ್ರಮುಖವಾಗುತ್ತಿಲ್ಲ.

ಚೀನಾ ಅಧ್ಯಕ್ಷರು ‘ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ’ ಬಗ್ಗೆ ಮಾತನಾಡಿದ್ದಾರೆ. ಅದು ಬೆಲ್ಟ್ ಅಂಡ್ ರೋಡ್ ಇನಿಶಿಯೇಟಿವ್ ಇಲ್ಲವೇ ಬೆಲ್ ಅಂಡ್ ರೋಡ್ ಫೋರಂ ಮತ್ತು ಆರ್ಥಿಕ ಕಾರಿಡಾರ್‌ನ ಮುಂದುವರೆದ ಭಾಗ. ಈಗಾಗಲೇ ಪಾಕಿಸ್ತಾನದಲ್ಲಿ ತನ್ನ ನೆಲೆಯನ್ನು ಕಂಡುಕೊಂಡಿರುವ ಚೀನಾ. ಭಾರತದ ಮೇಲೂ ಹೊಸ ಆರ್ಥಿಕ ಪಾಲುದಾರಿಕೆ ಮೂಲಕ ಸವಾರಿ ಮಾಡಲು ಹೊರಟಂತೆ ಕಾಣುತ್ತಿದೆ. ಚೀನಾ ಉತ್ಪನ್ನಗಳನ್ನು ತಿರಸ್ಕರಿಸಬೇಕು ಎನ್ನುವ ಬಿಜೆಪಿಯು ತನ್ನದೇ ಕೇಂದ್ರ ಸರ್ಕಾರ ಚೀನಾದಿಂದ ಹೂಡಿಕೆಗೆ ಅವಕಾಶ ನೀಡುತ್ತಿರುವುದನ್ನು ಮಗುಮ್ಮಾಗಿಯೇ ಸ್ವೀಕರಿಸುವ ಮೂಲಕ ತನ್ನ ಆಷಾಡಭೂತಿತನವನ್ನು ಪ್ರದರ್ಶಿಸಿದೆ. ಕಳೆದ ಐದು ವರ್ಷದಿಂದ ಇಚೀಗೆ ಯಾವುದೇ ದೇಶ ಇಂಡಿಯಾದಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿಲ್ಲ. ಹಾಗಾದರೆ ವಿದೇಶ ಸುತ್ತುವ ಮೋದಿ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಎದುರಾಗುತ್ತದೆ. ಆದ್ದರಿಂದ ಮಾಮಲ್ಲಪುರಂನಲ್ಲಿ ಚೀನಾ ಅಧ್ಯಕ್ಷರಿಗೆ ಕೆಂಪು ನೆಲಹಾಸ ಹಾಕಿ ಸ್ವಾಗತಿಸಿದರೂ ಉಭಯ ನಾಯಕರ ನಡುವೆ ನಡೆದ ಚರ್ಚೆ ವ್ಯರ್ಥ ಕಸರತ್ತು ಎನ್ನದೆ ಬೇರೆ ಮಾರ್ಗವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...