Homeಅಂತರಾಷ್ಟ್ರೀಯಅನೌಪಚಾರಿಕ ಶೃಂಗಸಭೆ - ಉಭಯ ನಾಯಕರ ವ್ಯರ್ಥ ಕಸರತ್ತು : ಜಾಲಿ ರೈಡ್ ನಡೆಸಿದ ಮೋದಿ-ಕ್ಸಿ

ಅನೌಪಚಾರಿಕ ಶೃಂಗಸಭೆ – ಉಭಯ ನಾಯಕರ ವ್ಯರ್ಥ ಕಸರತ್ತು : ಜಾಲಿ ರೈಡ್ ನಡೆಸಿದ ಮೋದಿ-ಕ್ಸಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಅವರ ನಡುವಿನ ಮಾತುಕತೆ ವ್ಯರ್ಥ ಕಸರತ್ತಿನಂತೆ ಕಾಣುತ್ತದೆ. ಇದು ಅನೌಪಚಾರಿಕ ಶೃಂಗಸಭೆಯಾದ್ದರಿಂದ ನಿರ್ಧಿಷ್ಟಪಡಿಸಿದ ವಿಷಯಗಳೇ ಪ್ರಸ್ತಾಪವಾಗಬೇಕು ಎಂದೇನೂ ಇರಲಿಲ್ಲ. ಹಾಗಾಗಿ ಆರ್ಥಿಕ ವಿಷಯಗಳಲ್ಲದೆ ಗಡಿ ವಿಷಯಗಳು ಚರ್ಚೆಗೆ ಬರಬೇಕಿತ್ತು. ಪ್ರಧಾನಿ ಮೋದಿ ಆರ್ಥಿಕತೆ ಮತ್ತು ವ್ಯಾಪಾರ ಕುರಿತು ಮಾತನಾಡಿದರೆ ಕ್ಸಿ ಸರಕು ಮತ್ತು ಹೂಡಿಕೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಉಭಯ ನಾಯಕರು ಪ್ರಜ್ಞಾಪೂರ್ವಕವಾಗಿಯೇ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸುವ ಗೋಜಿಗೆ ಹೋಗಿಲ್ಲ. ಹೀಗಾಗಿ ಮೋದಿ-ಕ್ಸಿ ಜೋಡಿ ಹಳೆಯ ವಿಷಯಗಳಿಗೆ ಕಟ್ಟುಬಿದ್ದಿರುವುದರಿಂದ ಶೃಂಗಸಭೆಯ ಉದ್ದೇಶ ಈಡೇರಿದಂತೆ ಆಗಿಲ್ಲ ಎನ್ನಬಹುದು.

ಜಮ್ಮು ಮತ್ತು ಕಾಶ್ಮೀರದ 370ನೇ ವಿಧಿ ರದ್ದುಪಡಿಸುವ ಮೊದಲು ಹಾಗೂ ನಂತರವೂ ಚೀನಾ ದೇಶ ಪಾಕಿಸ್ತಾನದ ಪರ ಧ್ವನಿ ಎತ್ತುತ್ತಲೇ ಬರುತ್ತಿದೆ. ಪ್ರತಿಯೊಂದು ಹಂತದಲ್ಲೂ ಚೀನಾ ಪಾಕಿಸ್ತಾನವನ್ನು ಬಿಟ್ಟುಕೊಟ್ಟಿಲ್ಲ. ವಿಶೇಷ ಸ್ಥಾನಮಾನ ತೆಗೆದ ಬಳಿಕ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಎರಡು ಬಾರಿ ಪಾಕ್ ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನು ಭೇಟಿಯಾಗಿ ಬಂದು ತಾನು ಭಾರತದ ಪರ ಇಲ್ಲ ಎಂಬುದನ್ನು ಪ್ರದರ್ಶಿಸಿದೆ. ಚೀನಾ ದೇಶವು ಪಾಕಿಸ್ತಾನ ನೆಲದಲ್ಲಿ ಅಂದರೆ ಭಾರತದ ಗಡಿಗೆ ಹೊಂದಿಕೊಂಡಂತೆ ಆರ್ಥಿಕ ಕಾರಿಡಾರ್ ಹೊಂದಿರುವ ಕಾರಣ ಆ ದೇಶಕ್ಕೆ ಪಾಕ್‍ನ್ನು ಬೆಂಬಲಿಸುವುದು ಅನಿವಾರ್ಯವು ಆಗಬಹುದು. ಹಾಗಾಗಿಯೇ ಚೀನಾಕ್ಕೆ ಪಾಕ್ ಮೇಲಿನ ಪ್ರೇಮ ಹೆಚ್ಚು. ಇದೇ ಕಾರಣಕ್ಕಾಗಿಯೇ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್, 56 ಇಂಚಿನ ಎದೆಯನ್ನು ಈಗ ಪ್ರಧಾನಿ ಚೀನಾ ಅಧ್ಯಕ್ಷರ ಮುಂದೆ ಪ್ರದರ್ಶಿಸಬೇಕು. ಪಾಕ್ ಆಕ್ರಮಿತ ಕಾಶ್ಮೀರದಿಂದ ಹಿಂದೆ ಸರಿಯಲು ಕ್ಸಿಗೆ ಪ್ರಧಾನಿ ನೇರವಾಗಿ ಹೇಳಬೇಕು ಎಂದು ವ್ಯಂಗ್ಯವಾಗಿ ತಿವಿದರು.

ಚೀನಾ ಮತ್ತು ಭಾರತದ ನಡುವೆ ಗಡಿ ವಿವಾದ ಹಿಂದಿನಿಂದಲೂ ಇದೆ. ಅದನ್ನು ಬಗೆಹರಿಸುವ ಸಣ್ಣ ಪ್ರಯತ್ನಗಳು ನಡೆದಿವೆಯಾದರೂ ಗಡಿ ವಿವಾದಗಳು ಬಗೆಹರಿದಿಲ್ಲ. ಭಾರತ ಮತ್ತು ಚೀನಾ ಗಡಿಯನ್ನು ಹಂಚಿಕೊಂಡಿವೆ. ಅದೇ ಕಾರಣಕ್ಕೆ ವಿವಾದ ಹಾಗೆಯೇ ಉಳಿದಿದೆ. ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ನಿರ್ಮಾಣವಾಗುವ ಸಂದರ್ಭದಲ್ಲಿ ಭಾರತ ತಕರಾರು ಎತ್ತಿತ್ತು. ನಮ್ಮ ಗಡಿಯಲ್ಲಿ ಆರ್ಥಿಕ ಕಾರಿಡಾರು ಮಾಡಬಾರದು ಎಂದು ಪ್ರಧಾನಿ ಮೋದಿ ಹೇಳಿದರು. ಇದೇ ನೆಪವನ್ನು ಇಟ್ಟುಕೊಂಡು ಚೀನಾ ಮತ್ತೆ ಕ್ಯಾತೆ ತೆಗೆಯಿತು. 2017ರಲ್ಲಿ ತನ್ನ ಗಡಿಭಾಗದಲ್ಲಿ ಹೆಚ್ಚುವರಿ ಸೈನಿಕರ ಜಮಾವಣೆ ಮಾಡಿತು. ಇದಕ್ಕೆ ಉತ್ತರವಾಗಿ ಭಾರತವೂ ಗಡಿಯಲ್ಲಿ ಸೈನಿಕರ ನಿಯೋಜನೆ ಮಾಡಿತು. ಇದರಿಂದಾಗಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಂತಾರಾಷ್ಟ್ರೀಯ ಒತ್ತಡ ಹೆಚ್ಚಿದಂತೆ ಉಭಯ ರಾಷ್ಟ್ರಗಳು ಸೈನಿಕರನ್ನು ವಾಪಸ್ ಕರೆಸಿಕೊಂಡರು.

ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ಕೆಲವು ಭಾಗಗಳು ತನಗೆ ಸೇರಬೇಕು ಎಂದು ಚೀನಾ ವಾದಿಸಿತು. ಹೀಗಾಗಿ ಸಿಕ್ಕಿಂ ಪ್ರದೇಶದ ಕೋಳಿ ಕತ್ತು ಅಥವಾ ಟ್ರೈ ಜಂಕ್ಷನ್ ಪ್ರದೇಶದಲ್ಲಿ ದ್ವೇಷಮಯ ವಾತಾವರಣ ನಿರ್ಮಾಣವಾಗಿತ್ತು. ಆ ವಿಷಯ ಇನ್ನೂ ಹಸಿರಾಗಿಯೇ ಇದೆ. ಪರಿಸ್ಥಿತಿ ಹೀಗಿರುವಾಗ ಗಂಭೀರವಾದ ವಿಷಯಗಳು ಅನೌಪಚಾರಿಕ ಶೃಂಗಸಭೆಯಲ್ಲಿ ಚರ್ಚೆಗೆ ಬಂದಿದ್ದರೆ ಒಳ್ಳೆಯದಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಮ್ಮು-ಕಾಶ್ಮೀರ ವಿಷಯವನ್ನು ತೆಗೆದುಕೊಂಡು ಹೋಗಿದ್ದರೂ ಅದು ಉಭಯ ದೇಶಗಳ ನಡುವೆ ಮಾತುಕತೆಯ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಇದು ಭಾರತದ ಪ್ರತಿಪಾದನೆಯೂ ಕೂಡ. ಆದರೆ ಭಾರತ ಅಮೇರಿಕಾವನ್ನು ನಂಬಿ ಕೂತಂತೆ ಕಾಣುತ್ತಿದೆ. ಪ್ರಧಾನಿ ಮೋದಿ ಅವರು ಪದೇಪದೇ ಅಮೆರಿಕಾ ಅಧ್ಯಕ್ಷರನ್ನು ಭೇಟಿ ಮಾಡುತ್ತಿರುವುದು ಇದಕ್ಕೆ ಉದಾಹರಣೆಯಾಗಿದೆ. ಅಮೆರಿಕಾ ತನ್ನ ನಿಲುವು ಸ್ಪಷ್ಟಪಡಿಸದೆ ಒಮ್ಮೆ ಭಾರತದ ಪರವಾಗಿ ಮತ್ತೊಮ್ಮೆ ಪಾಕಿಸ್ತಾನದ ಪರವಾಗಿ ಮಾತನಾಡುತ್ತ ತನ್ನ ಶಸ್ತ್ರಾಸ್ತ್ರಗಳ ಮಾರಾಟದಲ್ಲಿ ತೊಡಗಿದೆ.

ಭಾರತದ ಪ್ರಧಾನಿ ಭೇಟಿಯಾದರೆ ಉಭಯ ದೇಶಗಳು ಗಡಿ ವಿವಾದವನ್ನು ಬಗೆಹರಿಸಿಕೊಳ್ಳಲಿ ಅನ್ನುವುದು. ಪಾಕ್ ಪ್ರಧಾನಿ ಭೇಟಿ ಮಾಡಿದರೆ ತಾನು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ದ ಎನ್ನುವುದು. ಹೀಗೆ ಎರಡು ನಾಲಗೆಯ ಮಾತುಗಳು ಅಮೆರಿಕಾದಿಂದ ಹೊರಬರುತ್ತಿವೆ. ಇದು ಭಾರತಕ್ಕೆ ತಿಳಿಯುತ್ತಿಲ್ಲವೇ? ಅಮೆರಿಕಾ ಮತ್ತು ಚೀನಾ ಪಾಕಿಸ್ತಾನದ ಪರವಾಗಿಯೇ ಇದ್ದರೂ ಭಾರತ ಯಾರ ಓಲೈಕೆಯಲ್ಲಿ ತೊಡಗಿದೆ ಎಂಬ ಪ್ರಶ್ನೆ ಎದುರಾಗುತ್ತದೆ. ಇದು ವ್ಯರ್ಥ ಕಸರತ್ತೂ ಕೂಡ. ಭಾರತ ರಾಜತಾಂತ್ರಿಕ ಪ್ರಬುದ್ಧತೆ ಪ್ರದರ್ಶಿಸುತ್ತಿಲ್ಲ. ಚರ್ಚಿತವಾಗಬೇಕಾದ ವಿಷಯಗಳೇ ಪ್ರಮುಖವಾಗುತ್ತಿಲ್ಲ.

ಚೀನಾ ಅಧ್ಯಕ್ಷರು ‘ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ’ ಬಗ್ಗೆ ಮಾತನಾಡಿದ್ದಾರೆ. ಅದು ಬೆಲ್ಟ್ ಅಂಡ್ ರೋಡ್ ಇನಿಶಿಯೇಟಿವ್ ಇಲ್ಲವೇ ಬೆಲ್ ಅಂಡ್ ರೋಡ್ ಫೋರಂ ಮತ್ತು ಆರ್ಥಿಕ ಕಾರಿಡಾರ್‌ನ ಮುಂದುವರೆದ ಭಾಗ. ಈಗಾಗಲೇ ಪಾಕಿಸ್ತಾನದಲ್ಲಿ ತನ್ನ ನೆಲೆಯನ್ನು ಕಂಡುಕೊಂಡಿರುವ ಚೀನಾ. ಭಾರತದ ಮೇಲೂ ಹೊಸ ಆರ್ಥಿಕ ಪಾಲುದಾರಿಕೆ ಮೂಲಕ ಸವಾರಿ ಮಾಡಲು ಹೊರಟಂತೆ ಕಾಣುತ್ತಿದೆ. ಚೀನಾ ಉತ್ಪನ್ನಗಳನ್ನು ತಿರಸ್ಕರಿಸಬೇಕು ಎನ್ನುವ ಬಿಜೆಪಿಯು ತನ್ನದೇ ಕೇಂದ್ರ ಸರ್ಕಾರ ಚೀನಾದಿಂದ ಹೂಡಿಕೆಗೆ ಅವಕಾಶ ನೀಡುತ್ತಿರುವುದನ್ನು ಮಗುಮ್ಮಾಗಿಯೇ ಸ್ವೀಕರಿಸುವ ಮೂಲಕ ತನ್ನ ಆಷಾಡಭೂತಿತನವನ್ನು ಪ್ರದರ್ಶಿಸಿದೆ. ಕಳೆದ ಐದು ವರ್ಷದಿಂದ ಇಚೀಗೆ ಯಾವುದೇ ದೇಶ ಇಂಡಿಯಾದಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿಲ್ಲ. ಹಾಗಾದರೆ ವಿದೇಶ ಸುತ್ತುವ ಮೋದಿ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಎದುರಾಗುತ್ತದೆ. ಆದ್ದರಿಂದ ಮಾಮಲ್ಲಪುರಂನಲ್ಲಿ ಚೀನಾ ಅಧ್ಯಕ್ಷರಿಗೆ ಕೆಂಪು ನೆಲಹಾಸ ಹಾಕಿ ಸ್ವಾಗತಿಸಿದರೂ ಉಭಯ ನಾಯಕರ ನಡುವೆ ನಡೆದ ಚರ್ಚೆ ವ್ಯರ್ಥ ಕಸರತ್ತು ಎನ್ನದೆ ಬೇರೆ ಮಾರ್ಗವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...