Homeಅಂತರಾಷ್ಟ್ರೀಯಅನೌಪಚಾರಿಕ ಶೃಂಗಸಭೆ - ಉಭಯ ನಾಯಕರ ವ್ಯರ್ಥ ಕಸರತ್ತು : ಜಾಲಿ ರೈಡ್ ನಡೆಸಿದ ಮೋದಿ-ಕ್ಸಿ

ಅನೌಪಚಾರಿಕ ಶೃಂಗಸಭೆ – ಉಭಯ ನಾಯಕರ ವ್ಯರ್ಥ ಕಸರತ್ತು : ಜಾಲಿ ರೈಡ್ ನಡೆಸಿದ ಮೋದಿ-ಕ್ಸಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಅವರ ನಡುವಿನ ಮಾತುಕತೆ ವ್ಯರ್ಥ ಕಸರತ್ತಿನಂತೆ ಕಾಣುತ್ತದೆ. ಇದು ಅನೌಪಚಾರಿಕ ಶೃಂಗಸಭೆಯಾದ್ದರಿಂದ ನಿರ್ಧಿಷ್ಟಪಡಿಸಿದ ವಿಷಯಗಳೇ ಪ್ರಸ್ತಾಪವಾಗಬೇಕು ಎಂದೇನೂ ಇರಲಿಲ್ಲ. ಹಾಗಾಗಿ ಆರ್ಥಿಕ ವಿಷಯಗಳಲ್ಲದೆ ಗಡಿ ವಿಷಯಗಳು ಚರ್ಚೆಗೆ ಬರಬೇಕಿತ್ತು. ಪ್ರಧಾನಿ ಮೋದಿ ಆರ್ಥಿಕತೆ ಮತ್ತು ವ್ಯಾಪಾರ ಕುರಿತು ಮಾತನಾಡಿದರೆ ಕ್ಸಿ ಸರಕು ಮತ್ತು ಹೂಡಿಕೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಉಭಯ ನಾಯಕರು ಪ್ರಜ್ಞಾಪೂರ್ವಕವಾಗಿಯೇ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸುವ ಗೋಜಿಗೆ ಹೋಗಿಲ್ಲ. ಹೀಗಾಗಿ ಮೋದಿ-ಕ್ಸಿ ಜೋಡಿ ಹಳೆಯ ವಿಷಯಗಳಿಗೆ ಕಟ್ಟುಬಿದ್ದಿರುವುದರಿಂದ ಶೃಂಗಸಭೆಯ ಉದ್ದೇಶ ಈಡೇರಿದಂತೆ ಆಗಿಲ್ಲ ಎನ್ನಬಹುದು.

ಜಮ್ಮು ಮತ್ತು ಕಾಶ್ಮೀರದ 370ನೇ ವಿಧಿ ರದ್ದುಪಡಿಸುವ ಮೊದಲು ಹಾಗೂ ನಂತರವೂ ಚೀನಾ ದೇಶ ಪಾಕಿಸ್ತಾನದ ಪರ ಧ್ವನಿ ಎತ್ತುತ್ತಲೇ ಬರುತ್ತಿದೆ. ಪ್ರತಿಯೊಂದು ಹಂತದಲ್ಲೂ ಚೀನಾ ಪಾಕಿಸ್ತಾನವನ್ನು ಬಿಟ್ಟುಕೊಟ್ಟಿಲ್ಲ. ವಿಶೇಷ ಸ್ಥಾನಮಾನ ತೆಗೆದ ಬಳಿಕ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಎರಡು ಬಾರಿ ಪಾಕ್ ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನು ಭೇಟಿಯಾಗಿ ಬಂದು ತಾನು ಭಾರತದ ಪರ ಇಲ್ಲ ಎಂಬುದನ್ನು ಪ್ರದರ್ಶಿಸಿದೆ. ಚೀನಾ ದೇಶವು ಪಾಕಿಸ್ತಾನ ನೆಲದಲ್ಲಿ ಅಂದರೆ ಭಾರತದ ಗಡಿಗೆ ಹೊಂದಿಕೊಂಡಂತೆ ಆರ್ಥಿಕ ಕಾರಿಡಾರ್ ಹೊಂದಿರುವ ಕಾರಣ ಆ ದೇಶಕ್ಕೆ ಪಾಕ್‍ನ್ನು ಬೆಂಬಲಿಸುವುದು ಅನಿವಾರ್ಯವು ಆಗಬಹುದು. ಹಾಗಾಗಿಯೇ ಚೀನಾಕ್ಕೆ ಪಾಕ್ ಮೇಲಿನ ಪ್ರೇಮ ಹೆಚ್ಚು. ಇದೇ ಕಾರಣಕ್ಕಾಗಿಯೇ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್, 56 ಇಂಚಿನ ಎದೆಯನ್ನು ಈಗ ಪ್ರಧಾನಿ ಚೀನಾ ಅಧ್ಯಕ್ಷರ ಮುಂದೆ ಪ್ರದರ್ಶಿಸಬೇಕು. ಪಾಕ್ ಆಕ್ರಮಿತ ಕಾಶ್ಮೀರದಿಂದ ಹಿಂದೆ ಸರಿಯಲು ಕ್ಸಿಗೆ ಪ್ರಧಾನಿ ನೇರವಾಗಿ ಹೇಳಬೇಕು ಎಂದು ವ್ಯಂಗ್ಯವಾಗಿ ತಿವಿದರು.

ಚೀನಾ ಮತ್ತು ಭಾರತದ ನಡುವೆ ಗಡಿ ವಿವಾದ ಹಿಂದಿನಿಂದಲೂ ಇದೆ. ಅದನ್ನು ಬಗೆಹರಿಸುವ ಸಣ್ಣ ಪ್ರಯತ್ನಗಳು ನಡೆದಿವೆಯಾದರೂ ಗಡಿ ವಿವಾದಗಳು ಬಗೆಹರಿದಿಲ್ಲ. ಭಾರತ ಮತ್ತು ಚೀನಾ ಗಡಿಯನ್ನು ಹಂಚಿಕೊಂಡಿವೆ. ಅದೇ ಕಾರಣಕ್ಕೆ ವಿವಾದ ಹಾಗೆಯೇ ಉಳಿದಿದೆ. ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ನಿರ್ಮಾಣವಾಗುವ ಸಂದರ್ಭದಲ್ಲಿ ಭಾರತ ತಕರಾರು ಎತ್ತಿತ್ತು. ನಮ್ಮ ಗಡಿಯಲ್ಲಿ ಆರ್ಥಿಕ ಕಾರಿಡಾರು ಮಾಡಬಾರದು ಎಂದು ಪ್ರಧಾನಿ ಮೋದಿ ಹೇಳಿದರು. ಇದೇ ನೆಪವನ್ನು ಇಟ್ಟುಕೊಂಡು ಚೀನಾ ಮತ್ತೆ ಕ್ಯಾತೆ ತೆಗೆಯಿತು. 2017ರಲ್ಲಿ ತನ್ನ ಗಡಿಭಾಗದಲ್ಲಿ ಹೆಚ್ಚುವರಿ ಸೈನಿಕರ ಜಮಾವಣೆ ಮಾಡಿತು. ಇದಕ್ಕೆ ಉತ್ತರವಾಗಿ ಭಾರತವೂ ಗಡಿಯಲ್ಲಿ ಸೈನಿಕರ ನಿಯೋಜನೆ ಮಾಡಿತು. ಇದರಿಂದಾಗಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಂತಾರಾಷ್ಟ್ರೀಯ ಒತ್ತಡ ಹೆಚ್ಚಿದಂತೆ ಉಭಯ ರಾಷ್ಟ್ರಗಳು ಸೈನಿಕರನ್ನು ವಾಪಸ್ ಕರೆಸಿಕೊಂಡರು.

ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ಕೆಲವು ಭಾಗಗಳು ತನಗೆ ಸೇರಬೇಕು ಎಂದು ಚೀನಾ ವಾದಿಸಿತು. ಹೀಗಾಗಿ ಸಿಕ್ಕಿಂ ಪ್ರದೇಶದ ಕೋಳಿ ಕತ್ತು ಅಥವಾ ಟ್ರೈ ಜಂಕ್ಷನ್ ಪ್ರದೇಶದಲ್ಲಿ ದ್ವೇಷಮಯ ವಾತಾವರಣ ನಿರ್ಮಾಣವಾಗಿತ್ತು. ಆ ವಿಷಯ ಇನ್ನೂ ಹಸಿರಾಗಿಯೇ ಇದೆ. ಪರಿಸ್ಥಿತಿ ಹೀಗಿರುವಾಗ ಗಂಭೀರವಾದ ವಿಷಯಗಳು ಅನೌಪಚಾರಿಕ ಶೃಂಗಸಭೆಯಲ್ಲಿ ಚರ್ಚೆಗೆ ಬಂದಿದ್ದರೆ ಒಳ್ಳೆಯದಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಮ್ಮು-ಕಾಶ್ಮೀರ ವಿಷಯವನ್ನು ತೆಗೆದುಕೊಂಡು ಹೋಗಿದ್ದರೂ ಅದು ಉಭಯ ದೇಶಗಳ ನಡುವೆ ಮಾತುಕತೆಯ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಇದು ಭಾರತದ ಪ್ರತಿಪಾದನೆಯೂ ಕೂಡ. ಆದರೆ ಭಾರತ ಅಮೇರಿಕಾವನ್ನು ನಂಬಿ ಕೂತಂತೆ ಕಾಣುತ್ತಿದೆ. ಪ್ರಧಾನಿ ಮೋದಿ ಅವರು ಪದೇಪದೇ ಅಮೆರಿಕಾ ಅಧ್ಯಕ್ಷರನ್ನು ಭೇಟಿ ಮಾಡುತ್ತಿರುವುದು ಇದಕ್ಕೆ ಉದಾಹರಣೆಯಾಗಿದೆ. ಅಮೆರಿಕಾ ತನ್ನ ನಿಲುವು ಸ್ಪಷ್ಟಪಡಿಸದೆ ಒಮ್ಮೆ ಭಾರತದ ಪರವಾಗಿ ಮತ್ತೊಮ್ಮೆ ಪಾಕಿಸ್ತಾನದ ಪರವಾಗಿ ಮಾತನಾಡುತ್ತ ತನ್ನ ಶಸ್ತ್ರಾಸ್ತ್ರಗಳ ಮಾರಾಟದಲ್ಲಿ ತೊಡಗಿದೆ.

ಭಾರತದ ಪ್ರಧಾನಿ ಭೇಟಿಯಾದರೆ ಉಭಯ ದೇಶಗಳು ಗಡಿ ವಿವಾದವನ್ನು ಬಗೆಹರಿಸಿಕೊಳ್ಳಲಿ ಅನ್ನುವುದು. ಪಾಕ್ ಪ್ರಧಾನಿ ಭೇಟಿ ಮಾಡಿದರೆ ತಾನು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ದ ಎನ್ನುವುದು. ಹೀಗೆ ಎರಡು ನಾಲಗೆಯ ಮಾತುಗಳು ಅಮೆರಿಕಾದಿಂದ ಹೊರಬರುತ್ತಿವೆ. ಇದು ಭಾರತಕ್ಕೆ ತಿಳಿಯುತ್ತಿಲ್ಲವೇ? ಅಮೆರಿಕಾ ಮತ್ತು ಚೀನಾ ಪಾಕಿಸ್ತಾನದ ಪರವಾಗಿಯೇ ಇದ್ದರೂ ಭಾರತ ಯಾರ ಓಲೈಕೆಯಲ್ಲಿ ತೊಡಗಿದೆ ಎಂಬ ಪ್ರಶ್ನೆ ಎದುರಾಗುತ್ತದೆ. ಇದು ವ್ಯರ್ಥ ಕಸರತ್ತೂ ಕೂಡ. ಭಾರತ ರಾಜತಾಂತ್ರಿಕ ಪ್ರಬುದ್ಧತೆ ಪ್ರದರ್ಶಿಸುತ್ತಿಲ್ಲ. ಚರ್ಚಿತವಾಗಬೇಕಾದ ವಿಷಯಗಳೇ ಪ್ರಮುಖವಾಗುತ್ತಿಲ್ಲ.

ಚೀನಾ ಅಧ್ಯಕ್ಷರು ‘ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ’ ಬಗ್ಗೆ ಮಾತನಾಡಿದ್ದಾರೆ. ಅದು ಬೆಲ್ಟ್ ಅಂಡ್ ರೋಡ್ ಇನಿಶಿಯೇಟಿವ್ ಇಲ್ಲವೇ ಬೆಲ್ ಅಂಡ್ ರೋಡ್ ಫೋರಂ ಮತ್ತು ಆರ್ಥಿಕ ಕಾರಿಡಾರ್‌ನ ಮುಂದುವರೆದ ಭಾಗ. ಈಗಾಗಲೇ ಪಾಕಿಸ್ತಾನದಲ್ಲಿ ತನ್ನ ನೆಲೆಯನ್ನು ಕಂಡುಕೊಂಡಿರುವ ಚೀನಾ. ಭಾರತದ ಮೇಲೂ ಹೊಸ ಆರ್ಥಿಕ ಪಾಲುದಾರಿಕೆ ಮೂಲಕ ಸವಾರಿ ಮಾಡಲು ಹೊರಟಂತೆ ಕಾಣುತ್ತಿದೆ. ಚೀನಾ ಉತ್ಪನ್ನಗಳನ್ನು ತಿರಸ್ಕರಿಸಬೇಕು ಎನ್ನುವ ಬಿಜೆಪಿಯು ತನ್ನದೇ ಕೇಂದ್ರ ಸರ್ಕಾರ ಚೀನಾದಿಂದ ಹೂಡಿಕೆಗೆ ಅವಕಾಶ ನೀಡುತ್ತಿರುವುದನ್ನು ಮಗುಮ್ಮಾಗಿಯೇ ಸ್ವೀಕರಿಸುವ ಮೂಲಕ ತನ್ನ ಆಷಾಡಭೂತಿತನವನ್ನು ಪ್ರದರ್ಶಿಸಿದೆ. ಕಳೆದ ಐದು ವರ್ಷದಿಂದ ಇಚೀಗೆ ಯಾವುದೇ ದೇಶ ಇಂಡಿಯಾದಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿಲ್ಲ. ಹಾಗಾದರೆ ವಿದೇಶ ಸುತ್ತುವ ಮೋದಿ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಎದುರಾಗುತ್ತದೆ. ಆದ್ದರಿಂದ ಮಾಮಲ್ಲಪುರಂನಲ್ಲಿ ಚೀನಾ ಅಧ್ಯಕ್ಷರಿಗೆ ಕೆಂಪು ನೆಲಹಾಸ ಹಾಕಿ ಸ್ವಾಗತಿಸಿದರೂ ಉಭಯ ನಾಯಕರ ನಡುವೆ ನಡೆದ ಚರ್ಚೆ ವ್ಯರ್ಥ ಕಸರತ್ತು ಎನ್ನದೆ ಬೇರೆ ಮಾರ್ಗವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....