Homeಕರ್ನಾಟಕಮೋದಿ, ಯಡಿಯೂರಪ್ಪ ಶಾಶ್ವತವಲ್ಲ - ಹಂಪನಾ ಪೊಲೀಸ್ ವಿಚಾರಣೆಗೆ ಕೆ.ಎನ್.ರಾಜಣ್ಣ ಆಕ್ರೋಶ

ಮೋದಿ, ಯಡಿಯೂರಪ್ಪ ಶಾಶ್ವತವಲ್ಲ – ಹಂಪನಾ ಪೊಲೀಸ್ ವಿಚಾರಣೆಗೆ ಕೆ.ಎನ್.ರಾಜಣ್ಣ ಆಕ್ರೋಶ

ಯಾರನ್ನೋ ಖುಷಿಪಡಿಸಲು ಈ ರೀತಿ ಕ್ರಮ ತೆಗೆದುಕೊಳ್ಳುವ ಪ್ರವೃತ್ತಿ ಒಳ್ಳೆಯದಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಜನರು ಆಡಳಿತದ ಮೇಲಿನ ವಿಶ್ವಾಸ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ

- Advertisement -
- Advertisement -

ಎಲ್ಲರಿಗೂ ವಾಕ್ ಸ್ವಾತಂತ್ರ್ಯವಿದೆ. ವ್ಯವಸ್ಥೆಯನ್ನು, ವ್ಯಕ್ತಿಯನ್ನು ಟೀಕಿಸಿದ ಮಾತ್ರಕ್ಕೆ ಪೊಲೀಸರು ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ವಿಚಾರಣೆ ನಡೆಸಿರುವುದು ಖಂಡನೀಯ. ಯಾರೋ ಹೇಳಿದ ಮಾತ್ರಕ್ಕೆ ಹೀಗೆ ವಿಚಾರಣೆ ನಡೆಸುವುದಾದರೆ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಇಲ್ಲೇ ಗೂಟ ಹೊಡ್ಕಂಡ್ ಇರ್ತಾರಾ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಯೊಬ್ಬರಿಗೂ ಅಭಿವ್ಯಕ್ತಿ, ವಾಕ್ ‌ಸ್ವಾತಂತ್ರ್ಯಇದೆ. ರಾಜಕೀಯ ವ್ಯವಸ್ಥೆಯ ಕುರಿತು ರಾಜಕೀಯ ವ್ಯಕ್ತಿಗಳ ಬಗ್ಗೆ ಟೀಕೆ ಮತ್ತು ಪ್ರಶಂಸೆ ಮಾಡಲು ಹಕ್ಕು ಇದೆ. ವ್ಯವಸ್ಥೆ ಕೆಟ್ಟುಹೋಗಿರುವ ಬಗ್ಗೆ ಹಲವರಿಗೆ ನೋವಿದೆ. ಈ ಕುರಿತು ಅದು ವೇದಿಕೆಗಳಲ್ಲಿ ವ್ಯಕ್ತವಾಗುತ್ತಿದೆ. ಹಾಗೆಯೇ ಹಂಪಾ ನಾಗರಾಜಯ್ಯ ಕೂಡ ಟೀಕಿಸಿದ್ದಾರೆ. ಹಾಗೆಂದ ಮಾತ್ರಕ್ಕೆ ಅವರನ್ನು ಕರೆದು ವಿಚಾರಣೆ ನಡೆಸಿರುವುದು ಸಾಹಿತಿಗಳಿಗೆ ಮಾಡಿರುವ ಅವಮಾನ. ಇದನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಂಪನಾ ವಿರುದ್ಧ ರಾಜ್ಯ ಸರಕಾರದ ಕ್ರಮ, ಕೀಚಕ ನಡೆಯ ಪ್ರತೀಕ – ಡಿ.ಕೆ. ಶಿವಕುಮಾರ್ ಟೀಕೆ

ಮಧುಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಕೆ.ಎನ್.ರಾಜಣ್ಣ, ಹಂಪ.ನಾಗರಾಜಯ್ಯ ಅವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅಪಾರ ಸಾಹಿತ್ಯ ಸೃಷ್ಟಿಸಿದ್ದಾರೆ. ಅಂಥ ವ್ಯಕ್ತಿತ್ವವುಳ್ಳ ಅವರು ಈಗಿನ ವ್ಯವಸ್ಥೆ ಬಗ್ಗೆ ಬೇಸರದ, ನೋವಿನ ನುಡಿಗಳನ್ನಾಡಿದ್ದಾರೆ. ವ್ಯವಸ್ಥೆ ಬಗ್ಗೆ ಟೀಕಿಸಿದ್ದಾರೆ. ಈ ಬಗ್ಗೆ ಯಾರೋ ಒಬ್ಬ ವ್ಯಕ್ತಿ ಹೇಳಿದ ಎಂಬ ನೆಪವೊಡ್ಡಿ ಠಾಣೆಗೆ ಕರೆಸಿ ಅವಮಾನ ಮಾಡುವುದು ಅಕ್ಷಮ್ಯ ಎಂದು ಟೀಕಿಸಿದ್ದಾರೆ.

ಹಂಪನಾ ಯಾವುದೇ ಅಪರಾಧ ಮಾಡಿಲ್ಲ. ಸಾಹಿತಿಗಳು ಸಮಾಜವನ್ನು ಸೂಕ್ಷ್ಮದೃಷ್ಟಿಯಿಂದ ನೋಡುವ ಮನಸ್ಸುಳ್ಳವರು. ಅವರನ್ನು ಹೀಗೆ ಠಾಣೆಗೆ ಕರೆಸುವಂತಹ ತಪ್ಪು ಮಾಡಿದ್ದು ಕೂಡಲೇ ಸರ್ಕಾರ ಇದಕ್ಕೆ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನವರಿ 20ರಂದು ಬೆಂಗಳೂರಿನ ಕಾಂಗ್ರೆಸ್ ರೈತರ ಬೃಹತ್ ಮೆರವಣಿಗೆ ನಡೆಸಿತ್ತು. ಆ ಸಂದರ್ಭದಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ನೂಕಾಟ, ತಳ್ಳಾಟ ನಡೆಯಿತು. ಇದು ಸಹಜ ಕೂಡ. ಬಿಜೆಪಿ ಪ್ರತಿಭಟನೆಗಳಲ್ಲಿ ಇಂತಹ ಘಟನೆಗಳು ನಡೆದಿಲ್ಲವೇ? ಎಂದು ಪ್ರಶ್ನಿಸಿರುವ ರಾಜಣ್ಣ, ಸೌಮ್ಯರೆಡ್ಡಿ ಅವರ ಮೇಲೆ ಪ್ರಕರಣ ದಾಖಲಿಸಿರುವುದಕ್ಕೆ ಸಿಡಿಮಿಡಿ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿರಿಯ ಸಾಹಿತಿ, ನಾಡೋಜ ಹಂಪನಾರನ್ನು ಠಾಣೆಗೆ ಕರೆಸಿ ಪೊಲೀಸ್ ವಿಚಾರಣೆ: ವ್ಯಾಪಕ ಖಂಡನೆ

ಪ್ರತಿಭಟನೆಯ ವೇಳೆ ಕರ್ತವ್ಯದಲ್ಲಿದ್ದ ಹೋಂಗಾರ್ಡ್ ಒಬ್ಬರಿಂದ ದೂರು ಪಡೆದು ಸೌಮ್ಯರೆಡ್ಡಿ ಮೇಲೆ ಕೇಸು ಹಾಕಿದ್ದಾರೆ. ಸೆಕ್ಸನ್- 323 ನೂಕಾಟ, ಸೆಕ್ಷನ್ 353 ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲಿಸಲಾಗಿದೆ. ಮೇಲಿನವರ ಮಾತು ಕೇಳಿಕೊಂಡು ಪೊಲೀಸರು ಹೀಗೆ ಕೇಸು ಹಾಕುವುದಾದರೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪ್ರಧಾನಿ ನರೇಂದ್ರ ಮೋದಿ ಇಲ್ಲೇ ಗೂಟ ಹೊಡ್ಕಂಡ್ ಕೂತಿರ್ತಾರಾ ಎಂದು ಲೇವಡಿ ಮಾಡಿದರು.

ಹೋಂಗಾರ್ಡ್ ಯಾವ ಸರ್ಕಾರಿ ಅಧಿಕಾರಿ. ಇದು ಅರ್ಥವಾಗಬೇಕಲ್ಲವೇ ಪೊಲೀಸರಿಗೆ? ಇವರಿಗೇ ಮಾನ ಮರ್ಯಾದೆ ಇಲ್ಲ. ಸೌಮ್ಯರೆಡ್ಡಿ ಮೇಲೆ ಹಾಕಿರುವ ಕೇಸನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ರಾಜ್ಯ ಸರ್ಕಾರ ಮತ್ತು ವ್ಯವಸ್ಥೆಯೇ ಕಾರಣ ಆಗುತ್ತದೆ ಎಂದು ಎಚ್ಚರಿಸಿದರು.

ಕಮಲ್ ಪಂಥ್ ಇರಬಹುದು, ಮತ್ತೊಬ್ಬರು ಇರಬಹುದು. ಇವರೆಲ್ಲಾ ಏನು ತಿಳಿದುಕೊಂಡಿದ್ದಾರೆ. ಐಪಿಎಸ್ ಅಂದರೆ ಸಂವಿಧಾನ, ಕಾನೂನು ಪ್ರಕಾರ ಕೆಲಸ ಮಾಡಬೇಕು. ಯಾರೋ ಒಬ್ಬ ಕೂತ್ಕೊಂಡು ಅವನ ತೀಟೆ ತೀರಿಸಿಕೊಳ್ಳೋಕೆ ಹೇಳಿದ ಅಂತಾ ಕೆಲಸ ಮಾಡೋದಾದ್ರೆ ಅಂಥವರು ನಾಲಾಯಕ್. ಯಡಿಯೂರಪ್ಪ ಆಗಲಿ, ಮೋದಿ ಆಗಲಿ ಇಲ್ಲೇ ಇರಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಬದಲಾವಣೆ ಬಯಸಿದರೆ ಅದು ಆಗ್ತದೆ. ವ್ಯವಸ್ಥೆಯಲ್ಲಿ ಜನರ ಸ್ವಾಸ್ಥ್ಯ, ಸಾಮಾಜಿಕ ಸಾಮರಸ್ಯ ಕಾಪಾಡಿಕೊಳ್ಳುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಇದನ್ನು ಮರೆಯಬಾರದು. ಯಾರನ್ನೋ ಖುಷಿಪಡಿಸಲು ಈ ರೀತಿ ಕ್ರಮ ತೆಗೆದುಕೊಳ್ಳುವ ಪ್ರವೃತ್ತಿ ಒಳ್ಳೆಯದಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಜನರು ಆಡಳಿತದ ಮೇಲಿನ ವಿಶ್ವಾಸ ಕಳೆದುಕೊಳ್ಳುತ್ತಾರೆ ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: ಡೈನಾಮೈಟ್‌ ಸ್ಫೋಟ: ಮೃತರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ, ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...