Homeಕರ್ನಾಟಕಮೋದಿ, ಯಡಿಯೂರಪ್ಪ ಶಾಶ್ವತವಲ್ಲ - ಹಂಪನಾ ಪೊಲೀಸ್ ವಿಚಾರಣೆಗೆ ಕೆ.ಎನ್.ರಾಜಣ್ಣ ಆಕ್ರೋಶ

ಮೋದಿ, ಯಡಿಯೂರಪ್ಪ ಶಾಶ್ವತವಲ್ಲ – ಹಂಪನಾ ಪೊಲೀಸ್ ವಿಚಾರಣೆಗೆ ಕೆ.ಎನ್.ರಾಜಣ್ಣ ಆಕ್ರೋಶ

ಯಾರನ್ನೋ ಖುಷಿಪಡಿಸಲು ಈ ರೀತಿ ಕ್ರಮ ತೆಗೆದುಕೊಳ್ಳುವ ಪ್ರವೃತ್ತಿ ಒಳ್ಳೆಯದಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಜನರು ಆಡಳಿತದ ಮೇಲಿನ ವಿಶ್ವಾಸ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ

- Advertisement -
- Advertisement -

ಎಲ್ಲರಿಗೂ ವಾಕ್ ಸ್ವಾತಂತ್ರ್ಯವಿದೆ. ವ್ಯವಸ್ಥೆಯನ್ನು, ವ್ಯಕ್ತಿಯನ್ನು ಟೀಕಿಸಿದ ಮಾತ್ರಕ್ಕೆ ಪೊಲೀಸರು ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ವಿಚಾರಣೆ ನಡೆಸಿರುವುದು ಖಂಡನೀಯ. ಯಾರೋ ಹೇಳಿದ ಮಾತ್ರಕ್ಕೆ ಹೀಗೆ ವಿಚಾರಣೆ ನಡೆಸುವುದಾದರೆ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಇಲ್ಲೇ ಗೂಟ ಹೊಡ್ಕಂಡ್ ಇರ್ತಾರಾ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಯೊಬ್ಬರಿಗೂ ಅಭಿವ್ಯಕ್ತಿ, ವಾಕ್ ‌ಸ್ವಾತಂತ್ರ್ಯಇದೆ. ರಾಜಕೀಯ ವ್ಯವಸ್ಥೆಯ ಕುರಿತು ರಾಜಕೀಯ ವ್ಯಕ್ತಿಗಳ ಬಗ್ಗೆ ಟೀಕೆ ಮತ್ತು ಪ್ರಶಂಸೆ ಮಾಡಲು ಹಕ್ಕು ಇದೆ. ವ್ಯವಸ್ಥೆ ಕೆಟ್ಟುಹೋಗಿರುವ ಬಗ್ಗೆ ಹಲವರಿಗೆ ನೋವಿದೆ. ಈ ಕುರಿತು ಅದು ವೇದಿಕೆಗಳಲ್ಲಿ ವ್ಯಕ್ತವಾಗುತ್ತಿದೆ. ಹಾಗೆಯೇ ಹಂಪಾ ನಾಗರಾಜಯ್ಯ ಕೂಡ ಟೀಕಿಸಿದ್ದಾರೆ. ಹಾಗೆಂದ ಮಾತ್ರಕ್ಕೆ ಅವರನ್ನು ಕರೆದು ವಿಚಾರಣೆ ನಡೆಸಿರುವುದು ಸಾಹಿತಿಗಳಿಗೆ ಮಾಡಿರುವ ಅವಮಾನ. ಇದನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಂಪನಾ ವಿರುದ್ಧ ರಾಜ್ಯ ಸರಕಾರದ ಕ್ರಮ, ಕೀಚಕ ನಡೆಯ ಪ್ರತೀಕ – ಡಿ.ಕೆ. ಶಿವಕುಮಾರ್ ಟೀಕೆ

ಮಧುಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಕೆ.ಎನ್.ರಾಜಣ್ಣ, ಹಂಪ.ನಾಗರಾಜಯ್ಯ ಅವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅಪಾರ ಸಾಹಿತ್ಯ ಸೃಷ್ಟಿಸಿದ್ದಾರೆ. ಅಂಥ ವ್ಯಕ್ತಿತ್ವವುಳ್ಳ ಅವರು ಈಗಿನ ವ್ಯವಸ್ಥೆ ಬಗ್ಗೆ ಬೇಸರದ, ನೋವಿನ ನುಡಿಗಳನ್ನಾಡಿದ್ದಾರೆ. ವ್ಯವಸ್ಥೆ ಬಗ್ಗೆ ಟೀಕಿಸಿದ್ದಾರೆ. ಈ ಬಗ್ಗೆ ಯಾರೋ ಒಬ್ಬ ವ್ಯಕ್ತಿ ಹೇಳಿದ ಎಂಬ ನೆಪವೊಡ್ಡಿ ಠಾಣೆಗೆ ಕರೆಸಿ ಅವಮಾನ ಮಾಡುವುದು ಅಕ್ಷಮ್ಯ ಎಂದು ಟೀಕಿಸಿದ್ದಾರೆ.

ಹಂಪನಾ ಯಾವುದೇ ಅಪರಾಧ ಮಾಡಿಲ್ಲ. ಸಾಹಿತಿಗಳು ಸಮಾಜವನ್ನು ಸೂಕ್ಷ್ಮದೃಷ್ಟಿಯಿಂದ ನೋಡುವ ಮನಸ್ಸುಳ್ಳವರು. ಅವರನ್ನು ಹೀಗೆ ಠಾಣೆಗೆ ಕರೆಸುವಂತಹ ತಪ್ಪು ಮಾಡಿದ್ದು ಕೂಡಲೇ ಸರ್ಕಾರ ಇದಕ್ಕೆ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನವರಿ 20ರಂದು ಬೆಂಗಳೂರಿನ ಕಾಂಗ್ರೆಸ್ ರೈತರ ಬೃಹತ್ ಮೆರವಣಿಗೆ ನಡೆಸಿತ್ತು. ಆ ಸಂದರ್ಭದಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ನೂಕಾಟ, ತಳ್ಳಾಟ ನಡೆಯಿತು. ಇದು ಸಹಜ ಕೂಡ. ಬಿಜೆಪಿ ಪ್ರತಿಭಟನೆಗಳಲ್ಲಿ ಇಂತಹ ಘಟನೆಗಳು ನಡೆದಿಲ್ಲವೇ? ಎಂದು ಪ್ರಶ್ನಿಸಿರುವ ರಾಜಣ್ಣ, ಸೌಮ್ಯರೆಡ್ಡಿ ಅವರ ಮೇಲೆ ಪ್ರಕರಣ ದಾಖಲಿಸಿರುವುದಕ್ಕೆ ಸಿಡಿಮಿಡಿ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿರಿಯ ಸಾಹಿತಿ, ನಾಡೋಜ ಹಂಪನಾರನ್ನು ಠಾಣೆಗೆ ಕರೆಸಿ ಪೊಲೀಸ್ ವಿಚಾರಣೆ: ವ್ಯಾಪಕ ಖಂಡನೆ

ಪ್ರತಿಭಟನೆಯ ವೇಳೆ ಕರ್ತವ್ಯದಲ್ಲಿದ್ದ ಹೋಂಗಾರ್ಡ್ ಒಬ್ಬರಿಂದ ದೂರು ಪಡೆದು ಸೌಮ್ಯರೆಡ್ಡಿ ಮೇಲೆ ಕೇಸು ಹಾಕಿದ್ದಾರೆ. ಸೆಕ್ಸನ್- 323 ನೂಕಾಟ, ಸೆಕ್ಷನ್ 353 ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲಿಸಲಾಗಿದೆ. ಮೇಲಿನವರ ಮಾತು ಕೇಳಿಕೊಂಡು ಪೊಲೀಸರು ಹೀಗೆ ಕೇಸು ಹಾಕುವುದಾದರೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪ್ರಧಾನಿ ನರೇಂದ್ರ ಮೋದಿ ಇಲ್ಲೇ ಗೂಟ ಹೊಡ್ಕಂಡ್ ಕೂತಿರ್ತಾರಾ ಎಂದು ಲೇವಡಿ ಮಾಡಿದರು.

ಹೋಂಗಾರ್ಡ್ ಯಾವ ಸರ್ಕಾರಿ ಅಧಿಕಾರಿ. ಇದು ಅರ್ಥವಾಗಬೇಕಲ್ಲವೇ ಪೊಲೀಸರಿಗೆ? ಇವರಿಗೇ ಮಾನ ಮರ್ಯಾದೆ ಇಲ್ಲ. ಸೌಮ್ಯರೆಡ್ಡಿ ಮೇಲೆ ಹಾಕಿರುವ ಕೇಸನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ರಾಜ್ಯ ಸರ್ಕಾರ ಮತ್ತು ವ್ಯವಸ್ಥೆಯೇ ಕಾರಣ ಆಗುತ್ತದೆ ಎಂದು ಎಚ್ಚರಿಸಿದರು.

ಕಮಲ್ ಪಂಥ್ ಇರಬಹುದು, ಮತ್ತೊಬ್ಬರು ಇರಬಹುದು. ಇವರೆಲ್ಲಾ ಏನು ತಿಳಿದುಕೊಂಡಿದ್ದಾರೆ. ಐಪಿಎಸ್ ಅಂದರೆ ಸಂವಿಧಾನ, ಕಾನೂನು ಪ್ರಕಾರ ಕೆಲಸ ಮಾಡಬೇಕು. ಯಾರೋ ಒಬ್ಬ ಕೂತ್ಕೊಂಡು ಅವನ ತೀಟೆ ತೀರಿಸಿಕೊಳ್ಳೋಕೆ ಹೇಳಿದ ಅಂತಾ ಕೆಲಸ ಮಾಡೋದಾದ್ರೆ ಅಂಥವರು ನಾಲಾಯಕ್. ಯಡಿಯೂರಪ್ಪ ಆಗಲಿ, ಮೋದಿ ಆಗಲಿ ಇಲ್ಲೇ ಇರಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಬದಲಾವಣೆ ಬಯಸಿದರೆ ಅದು ಆಗ್ತದೆ. ವ್ಯವಸ್ಥೆಯಲ್ಲಿ ಜನರ ಸ್ವಾಸ್ಥ್ಯ, ಸಾಮಾಜಿಕ ಸಾಮರಸ್ಯ ಕಾಪಾಡಿಕೊಳ್ಳುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಇದನ್ನು ಮರೆಯಬಾರದು. ಯಾರನ್ನೋ ಖುಷಿಪಡಿಸಲು ಈ ರೀತಿ ಕ್ರಮ ತೆಗೆದುಕೊಳ್ಳುವ ಪ್ರವೃತ್ತಿ ಒಳ್ಳೆಯದಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಜನರು ಆಡಳಿತದ ಮೇಲಿನ ವಿಶ್ವಾಸ ಕಳೆದುಕೊಳ್ಳುತ್ತಾರೆ ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: ಡೈನಾಮೈಟ್‌ ಸ್ಫೋಟ: ಮೃತರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ, ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...