Homeಕರ್ನಾಟಕಮೋದಿ, ಯಡಿಯೂರಪ್ಪ ಶಾಶ್ವತವಲ್ಲ - ಹಂಪನಾ ಪೊಲೀಸ್ ವಿಚಾರಣೆಗೆ ಕೆ.ಎನ್.ರಾಜಣ್ಣ ಆಕ್ರೋಶ

ಮೋದಿ, ಯಡಿಯೂರಪ್ಪ ಶಾಶ್ವತವಲ್ಲ – ಹಂಪನಾ ಪೊಲೀಸ್ ವಿಚಾರಣೆಗೆ ಕೆ.ಎನ್.ರಾಜಣ್ಣ ಆಕ್ರೋಶ

ಯಾರನ್ನೋ ಖುಷಿಪಡಿಸಲು ಈ ರೀತಿ ಕ್ರಮ ತೆಗೆದುಕೊಳ್ಳುವ ಪ್ರವೃತ್ತಿ ಒಳ್ಳೆಯದಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಜನರು ಆಡಳಿತದ ಮೇಲಿನ ವಿಶ್ವಾಸ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ

- Advertisement -
- Advertisement -

ಎಲ್ಲರಿಗೂ ವಾಕ್ ಸ್ವಾತಂತ್ರ್ಯವಿದೆ. ವ್ಯವಸ್ಥೆಯನ್ನು, ವ್ಯಕ್ತಿಯನ್ನು ಟೀಕಿಸಿದ ಮಾತ್ರಕ್ಕೆ ಪೊಲೀಸರು ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ವಿಚಾರಣೆ ನಡೆಸಿರುವುದು ಖಂಡನೀಯ. ಯಾರೋ ಹೇಳಿದ ಮಾತ್ರಕ್ಕೆ ಹೀಗೆ ವಿಚಾರಣೆ ನಡೆಸುವುದಾದರೆ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಇಲ್ಲೇ ಗೂಟ ಹೊಡ್ಕಂಡ್ ಇರ್ತಾರಾ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಯೊಬ್ಬರಿಗೂ ಅಭಿವ್ಯಕ್ತಿ, ವಾಕ್ ‌ಸ್ವಾತಂತ್ರ್ಯಇದೆ. ರಾಜಕೀಯ ವ್ಯವಸ್ಥೆಯ ಕುರಿತು ರಾಜಕೀಯ ವ್ಯಕ್ತಿಗಳ ಬಗ್ಗೆ ಟೀಕೆ ಮತ್ತು ಪ್ರಶಂಸೆ ಮಾಡಲು ಹಕ್ಕು ಇದೆ. ವ್ಯವಸ್ಥೆ ಕೆಟ್ಟುಹೋಗಿರುವ ಬಗ್ಗೆ ಹಲವರಿಗೆ ನೋವಿದೆ. ಈ ಕುರಿತು ಅದು ವೇದಿಕೆಗಳಲ್ಲಿ ವ್ಯಕ್ತವಾಗುತ್ತಿದೆ. ಹಾಗೆಯೇ ಹಂಪಾ ನಾಗರಾಜಯ್ಯ ಕೂಡ ಟೀಕಿಸಿದ್ದಾರೆ. ಹಾಗೆಂದ ಮಾತ್ರಕ್ಕೆ ಅವರನ್ನು ಕರೆದು ವಿಚಾರಣೆ ನಡೆಸಿರುವುದು ಸಾಹಿತಿಗಳಿಗೆ ಮಾಡಿರುವ ಅವಮಾನ. ಇದನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಂಪನಾ ವಿರುದ್ಧ ರಾಜ್ಯ ಸರಕಾರದ ಕ್ರಮ, ಕೀಚಕ ನಡೆಯ ಪ್ರತೀಕ – ಡಿ.ಕೆ. ಶಿವಕುಮಾರ್ ಟೀಕೆ

ಮಧುಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಕೆ.ಎನ್.ರಾಜಣ್ಣ, ಹಂಪ.ನಾಗರಾಜಯ್ಯ ಅವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅಪಾರ ಸಾಹಿತ್ಯ ಸೃಷ್ಟಿಸಿದ್ದಾರೆ. ಅಂಥ ವ್ಯಕ್ತಿತ್ವವುಳ್ಳ ಅವರು ಈಗಿನ ವ್ಯವಸ್ಥೆ ಬಗ್ಗೆ ಬೇಸರದ, ನೋವಿನ ನುಡಿಗಳನ್ನಾಡಿದ್ದಾರೆ. ವ್ಯವಸ್ಥೆ ಬಗ್ಗೆ ಟೀಕಿಸಿದ್ದಾರೆ. ಈ ಬಗ್ಗೆ ಯಾರೋ ಒಬ್ಬ ವ್ಯಕ್ತಿ ಹೇಳಿದ ಎಂಬ ನೆಪವೊಡ್ಡಿ ಠಾಣೆಗೆ ಕರೆಸಿ ಅವಮಾನ ಮಾಡುವುದು ಅಕ್ಷಮ್ಯ ಎಂದು ಟೀಕಿಸಿದ್ದಾರೆ.

ಹಂಪನಾ ಯಾವುದೇ ಅಪರಾಧ ಮಾಡಿಲ್ಲ. ಸಾಹಿತಿಗಳು ಸಮಾಜವನ್ನು ಸೂಕ್ಷ್ಮದೃಷ್ಟಿಯಿಂದ ನೋಡುವ ಮನಸ್ಸುಳ್ಳವರು. ಅವರನ್ನು ಹೀಗೆ ಠಾಣೆಗೆ ಕರೆಸುವಂತಹ ತಪ್ಪು ಮಾಡಿದ್ದು ಕೂಡಲೇ ಸರ್ಕಾರ ಇದಕ್ಕೆ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನವರಿ 20ರಂದು ಬೆಂಗಳೂರಿನ ಕಾಂಗ್ರೆಸ್ ರೈತರ ಬೃಹತ್ ಮೆರವಣಿಗೆ ನಡೆಸಿತ್ತು. ಆ ಸಂದರ್ಭದಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ನೂಕಾಟ, ತಳ್ಳಾಟ ನಡೆಯಿತು. ಇದು ಸಹಜ ಕೂಡ. ಬಿಜೆಪಿ ಪ್ರತಿಭಟನೆಗಳಲ್ಲಿ ಇಂತಹ ಘಟನೆಗಳು ನಡೆದಿಲ್ಲವೇ? ಎಂದು ಪ್ರಶ್ನಿಸಿರುವ ರಾಜಣ್ಣ, ಸೌಮ್ಯರೆಡ್ಡಿ ಅವರ ಮೇಲೆ ಪ್ರಕರಣ ದಾಖಲಿಸಿರುವುದಕ್ಕೆ ಸಿಡಿಮಿಡಿ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿರಿಯ ಸಾಹಿತಿ, ನಾಡೋಜ ಹಂಪನಾರನ್ನು ಠಾಣೆಗೆ ಕರೆಸಿ ಪೊಲೀಸ್ ವಿಚಾರಣೆ: ವ್ಯಾಪಕ ಖಂಡನೆ

ಪ್ರತಿಭಟನೆಯ ವೇಳೆ ಕರ್ತವ್ಯದಲ್ಲಿದ್ದ ಹೋಂಗಾರ್ಡ್ ಒಬ್ಬರಿಂದ ದೂರು ಪಡೆದು ಸೌಮ್ಯರೆಡ್ಡಿ ಮೇಲೆ ಕೇಸು ಹಾಕಿದ್ದಾರೆ. ಸೆಕ್ಸನ್- 323 ನೂಕಾಟ, ಸೆಕ್ಷನ್ 353 ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲಿಸಲಾಗಿದೆ. ಮೇಲಿನವರ ಮಾತು ಕೇಳಿಕೊಂಡು ಪೊಲೀಸರು ಹೀಗೆ ಕೇಸು ಹಾಕುವುದಾದರೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪ್ರಧಾನಿ ನರೇಂದ್ರ ಮೋದಿ ಇಲ್ಲೇ ಗೂಟ ಹೊಡ್ಕಂಡ್ ಕೂತಿರ್ತಾರಾ ಎಂದು ಲೇವಡಿ ಮಾಡಿದರು.

ಹೋಂಗಾರ್ಡ್ ಯಾವ ಸರ್ಕಾರಿ ಅಧಿಕಾರಿ. ಇದು ಅರ್ಥವಾಗಬೇಕಲ್ಲವೇ ಪೊಲೀಸರಿಗೆ? ಇವರಿಗೇ ಮಾನ ಮರ್ಯಾದೆ ಇಲ್ಲ. ಸೌಮ್ಯರೆಡ್ಡಿ ಮೇಲೆ ಹಾಕಿರುವ ಕೇಸನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ರಾಜ್ಯ ಸರ್ಕಾರ ಮತ್ತು ವ್ಯವಸ್ಥೆಯೇ ಕಾರಣ ಆಗುತ್ತದೆ ಎಂದು ಎಚ್ಚರಿಸಿದರು.

ಕಮಲ್ ಪಂಥ್ ಇರಬಹುದು, ಮತ್ತೊಬ್ಬರು ಇರಬಹುದು. ಇವರೆಲ್ಲಾ ಏನು ತಿಳಿದುಕೊಂಡಿದ್ದಾರೆ. ಐಪಿಎಸ್ ಅಂದರೆ ಸಂವಿಧಾನ, ಕಾನೂನು ಪ್ರಕಾರ ಕೆಲಸ ಮಾಡಬೇಕು. ಯಾರೋ ಒಬ್ಬ ಕೂತ್ಕೊಂಡು ಅವನ ತೀಟೆ ತೀರಿಸಿಕೊಳ್ಳೋಕೆ ಹೇಳಿದ ಅಂತಾ ಕೆಲಸ ಮಾಡೋದಾದ್ರೆ ಅಂಥವರು ನಾಲಾಯಕ್. ಯಡಿಯೂರಪ್ಪ ಆಗಲಿ, ಮೋದಿ ಆಗಲಿ ಇಲ್ಲೇ ಇರಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಬದಲಾವಣೆ ಬಯಸಿದರೆ ಅದು ಆಗ್ತದೆ. ವ್ಯವಸ್ಥೆಯಲ್ಲಿ ಜನರ ಸ್ವಾಸ್ಥ್ಯ, ಸಾಮಾಜಿಕ ಸಾಮರಸ್ಯ ಕಾಪಾಡಿಕೊಳ್ಳುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಇದನ್ನು ಮರೆಯಬಾರದು. ಯಾರನ್ನೋ ಖುಷಿಪಡಿಸಲು ಈ ರೀತಿ ಕ್ರಮ ತೆಗೆದುಕೊಳ್ಳುವ ಪ್ರವೃತ್ತಿ ಒಳ್ಳೆಯದಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಜನರು ಆಡಳಿತದ ಮೇಲಿನ ವಿಶ್ವಾಸ ಕಳೆದುಕೊಳ್ಳುತ್ತಾರೆ ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: ಡೈನಾಮೈಟ್‌ ಸ್ಫೋಟ: ಮೃತರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ, ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...