Homeಕರ್ನಾಟಕಮೋದಿ, ಯಡಿಯೂರಪ್ಪ ಶಾಶ್ವತವಲ್ಲ - ಹಂಪನಾ ಪೊಲೀಸ್ ವಿಚಾರಣೆಗೆ ಕೆ.ಎನ್.ರಾಜಣ್ಣ ಆಕ್ರೋಶ

ಮೋದಿ, ಯಡಿಯೂರಪ್ಪ ಶಾಶ್ವತವಲ್ಲ – ಹಂಪನಾ ಪೊಲೀಸ್ ವಿಚಾರಣೆಗೆ ಕೆ.ಎನ್.ರಾಜಣ್ಣ ಆಕ್ರೋಶ

ಯಾರನ್ನೋ ಖುಷಿಪಡಿಸಲು ಈ ರೀತಿ ಕ್ರಮ ತೆಗೆದುಕೊಳ್ಳುವ ಪ್ರವೃತ್ತಿ ಒಳ್ಳೆಯದಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಜನರು ಆಡಳಿತದ ಮೇಲಿನ ವಿಶ್ವಾಸ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ

- Advertisement -
- Advertisement -

ಎಲ್ಲರಿಗೂ ವಾಕ್ ಸ್ವಾತಂತ್ರ್ಯವಿದೆ. ವ್ಯವಸ್ಥೆಯನ್ನು, ವ್ಯಕ್ತಿಯನ್ನು ಟೀಕಿಸಿದ ಮಾತ್ರಕ್ಕೆ ಪೊಲೀಸರು ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ವಿಚಾರಣೆ ನಡೆಸಿರುವುದು ಖಂಡನೀಯ. ಯಾರೋ ಹೇಳಿದ ಮಾತ್ರಕ್ಕೆ ಹೀಗೆ ವಿಚಾರಣೆ ನಡೆಸುವುದಾದರೆ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಇಲ್ಲೇ ಗೂಟ ಹೊಡ್ಕಂಡ್ ಇರ್ತಾರಾ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಯೊಬ್ಬರಿಗೂ ಅಭಿವ್ಯಕ್ತಿ, ವಾಕ್ ‌ಸ್ವಾತಂತ್ರ್ಯಇದೆ. ರಾಜಕೀಯ ವ್ಯವಸ್ಥೆಯ ಕುರಿತು ರಾಜಕೀಯ ವ್ಯಕ್ತಿಗಳ ಬಗ್ಗೆ ಟೀಕೆ ಮತ್ತು ಪ್ರಶಂಸೆ ಮಾಡಲು ಹಕ್ಕು ಇದೆ. ವ್ಯವಸ್ಥೆ ಕೆಟ್ಟುಹೋಗಿರುವ ಬಗ್ಗೆ ಹಲವರಿಗೆ ನೋವಿದೆ. ಈ ಕುರಿತು ಅದು ವೇದಿಕೆಗಳಲ್ಲಿ ವ್ಯಕ್ತವಾಗುತ್ತಿದೆ. ಹಾಗೆಯೇ ಹಂಪಾ ನಾಗರಾಜಯ್ಯ ಕೂಡ ಟೀಕಿಸಿದ್ದಾರೆ. ಹಾಗೆಂದ ಮಾತ್ರಕ್ಕೆ ಅವರನ್ನು ಕರೆದು ವಿಚಾರಣೆ ನಡೆಸಿರುವುದು ಸಾಹಿತಿಗಳಿಗೆ ಮಾಡಿರುವ ಅವಮಾನ. ಇದನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಂಪನಾ ವಿರುದ್ಧ ರಾಜ್ಯ ಸರಕಾರದ ಕ್ರಮ, ಕೀಚಕ ನಡೆಯ ಪ್ರತೀಕ – ಡಿ.ಕೆ. ಶಿವಕುಮಾರ್ ಟೀಕೆ

ಮಧುಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಕೆ.ಎನ್.ರಾಜಣ್ಣ, ಹಂಪ.ನಾಗರಾಜಯ್ಯ ಅವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅಪಾರ ಸಾಹಿತ್ಯ ಸೃಷ್ಟಿಸಿದ್ದಾರೆ. ಅಂಥ ವ್ಯಕ್ತಿತ್ವವುಳ್ಳ ಅವರು ಈಗಿನ ವ್ಯವಸ್ಥೆ ಬಗ್ಗೆ ಬೇಸರದ, ನೋವಿನ ನುಡಿಗಳನ್ನಾಡಿದ್ದಾರೆ. ವ್ಯವಸ್ಥೆ ಬಗ್ಗೆ ಟೀಕಿಸಿದ್ದಾರೆ. ಈ ಬಗ್ಗೆ ಯಾರೋ ಒಬ್ಬ ವ್ಯಕ್ತಿ ಹೇಳಿದ ಎಂಬ ನೆಪವೊಡ್ಡಿ ಠಾಣೆಗೆ ಕರೆಸಿ ಅವಮಾನ ಮಾಡುವುದು ಅಕ್ಷಮ್ಯ ಎಂದು ಟೀಕಿಸಿದ್ದಾರೆ.

ಹಂಪನಾ ಯಾವುದೇ ಅಪರಾಧ ಮಾಡಿಲ್ಲ. ಸಾಹಿತಿಗಳು ಸಮಾಜವನ್ನು ಸೂಕ್ಷ್ಮದೃಷ್ಟಿಯಿಂದ ನೋಡುವ ಮನಸ್ಸುಳ್ಳವರು. ಅವರನ್ನು ಹೀಗೆ ಠಾಣೆಗೆ ಕರೆಸುವಂತಹ ತಪ್ಪು ಮಾಡಿದ್ದು ಕೂಡಲೇ ಸರ್ಕಾರ ಇದಕ್ಕೆ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನವರಿ 20ರಂದು ಬೆಂಗಳೂರಿನ ಕಾಂಗ್ರೆಸ್ ರೈತರ ಬೃಹತ್ ಮೆರವಣಿಗೆ ನಡೆಸಿತ್ತು. ಆ ಸಂದರ್ಭದಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ನೂಕಾಟ, ತಳ್ಳಾಟ ನಡೆಯಿತು. ಇದು ಸಹಜ ಕೂಡ. ಬಿಜೆಪಿ ಪ್ರತಿಭಟನೆಗಳಲ್ಲಿ ಇಂತಹ ಘಟನೆಗಳು ನಡೆದಿಲ್ಲವೇ? ಎಂದು ಪ್ರಶ್ನಿಸಿರುವ ರಾಜಣ್ಣ, ಸೌಮ್ಯರೆಡ್ಡಿ ಅವರ ಮೇಲೆ ಪ್ರಕರಣ ದಾಖಲಿಸಿರುವುದಕ್ಕೆ ಸಿಡಿಮಿಡಿ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿರಿಯ ಸಾಹಿತಿ, ನಾಡೋಜ ಹಂಪನಾರನ್ನು ಠಾಣೆಗೆ ಕರೆಸಿ ಪೊಲೀಸ್ ವಿಚಾರಣೆ: ವ್ಯಾಪಕ ಖಂಡನೆ

ಪ್ರತಿಭಟನೆಯ ವೇಳೆ ಕರ್ತವ್ಯದಲ್ಲಿದ್ದ ಹೋಂಗಾರ್ಡ್ ಒಬ್ಬರಿಂದ ದೂರು ಪಡೆದು ಸೌಮ್ಯರೆಡ್ಡಿ ಮೇಲೆ ಕೇಸು ಹಾಕಿದ್ದಾರೆ. ಸೆಕ್ಸನ್- 323 ನೂಕಾಟ, ಸೆಕ್ಷನ್ 353 ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲಿಸಲಾಗಿದೆ. ಮೇಲಿನವರ ಮಾತು ಕೇಳಿಕೊಂಡು ಪೊಲೀಸರು ಹೀಗೆ ಕೇಸು ಹಾಕುವುದಾದರೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪ್ರಧಾನಿ ನರೇಂದ್ರ ಮೋದಿ ಇಲ್ಲೇ ಗೂಟ ಹೊಡ್ಕಂಡ್ ಕೂತಿರ್ತಾರಾ ಎಂದು ಲೇವಡಿ ಮಾಡಿದರು.

ಹೋಂಗಾರ್ಡ್ ಯಾವ ಸರ್ಕಾರಿ ಅಧಿಕಾರಿ. ಇದು ಅರ್ಥವಾಗಬೇಕಲ್ಲವೇ ಪೊಲೀಸರಿಗೆ? ಇವರಿಗೇ ಮಾನ ಮರ್ಯಾದೆ ಇಲ್ಲ. ಸೌಮ್ಯರೆಡ್ಡಿ ಮೇಲೆ ಹಾಕಿರುವ ಕೇಸನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ರಾಜ್ಯ ಸರ್ಕಾರ ಮತ್ತು ವ್ಯವಸ್ಥೆಯೇ ಕಾರಣ ಆಗುತ್ತದೆ ಎಂದು ಎಚ್ಚರಿಸಿದರು.

ಕಮಲ್ ಪಂಥ್ ಇರಬಹುದು, ಮತ್ತೊಬ್ಬರು ಇರಬಹುದು. ಇವರೆಲ್ಲಾ ಏನು ತಿಳಿದುಕೊಂಡಿದ್ದಾರೆ. ಐಪಿಎಸ್ ಅಂದರೆ ಸಂವಿಧಾನ, ಕಾನೂನು ಪ್ರಕಾರ ಕೆಲಸ ಮಾಡಬೇಕು. ಯಾರೋ ಒಬ್ಬ ಕೂತ್ಕೊಂಡು ಅವನ ತೀಟೆ ತೀರಿಸಿಕೊಳ್ಳೋಕೆ ಹೇಳಿದ ಅಂತಾ ಕೆಲಸ ಮಾಡೋದಾದ್ರೆ ಅಂಥವರು ನಾಲಾಯಕ್. ಯಡಿಯೂರಪ್ಪ ಆಗಲಿ, ಮೋದಿ ಆಗಲಿ ಇಲ್ಲೇ ಇರಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಬದಲಾವಣೆ ಬಯಸಿದರೆ ಅದು ಆಗ್ತದೆ. ವ್ಯವಸ್ಥೆಯಲ್ಲಿ ಜನರ ಸ್ವಾಸ್ಥ್ಯ, ಸಾಮಾಜಿಕ ಸಾಮರಸ್ಯ ಕಾಪಾಡಿಕೊಳ್ಳುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಇದನ್ನು ಮರೆಯಬಾರದು. ಯಾರನ್ನೋ ಖುಷಿಪಡಿಸಲು ಈ ರೀತಿ ಕ್ರಮ ತೆಗೆದುಕೊಳ್ಳುವ ಪ್ರವೃತ್ತಿ ಒಳ್ಳೆಯದಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಜನರು ಆಡಳಿತದ ಮೇಲಿನ ವಿಶ್ವಾಸ ಕಳೆದುಕೊಳ್ಳುತ್ತಾರೆ ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: ಡೈನಾಮೈಟ್‌ ಸ್ಫೋಟ: ಮೃತರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ, ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...