Homeಕರ್ನಾಟಕಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

"ಉತ್ತರ ಪ್ರದೇಶದಲ್ಲಿ ಒಂದೂವರೆ ಕೋಟಿ ಜನ ಕುರುಬರು ಇದ್ದಾರೆ. ಕುರುಬ ಜನಾಂಗಕ್ಕೆ ಸೇರಿದ ಅಹಲ್ಯಾಬಾಯಿ. ಅವರನ್ನು ಮರೆತಿರುವುದು ಪ್ರಮಾದ"

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಚರಿತ್ರೆಯನ್ನು ಮುಚ್ಚಿ ಹಾಕಲು ಹೊರಟಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್‌ ಗುಡುಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಲೋಕಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು.

ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಪ್ರಧಾನಿ ಮೋದಿ ಅವರ ಕಾರ್ಯ ಸ್ವಾಗತ, ಅರ್ಹ. ಇಷ್ಟು ಬಹುದೊಡ್ಡ ಕಾರ್ಯಕ್ರಮದಲ್ಲಿ ಒಂದು ಲೋಪ ಆಗಿದೆ. ವಾರಣಾಸಿ ಜೀರ್ಣೋದ್ಧಾರ ಮಾಡಿದವರನ್ನು ಇಲ್ಲಿ ಮರೆಯಲಾಗಿದೆ ಎಂದು ತಿಳಿಸಿದ್ದಾರೆ.

ಸಾವಿರಾರು ವರ್ಷಗಳ ಹಿಂದೆ ರಾಜ ಮಹಾರಾಜರ ದಾಳಿಗೆ ಕಾಶಿ ತುತ್ತಾಗಿದ್ದು. ಅದನ್ನು  ಇಂದೂರಿನ ಮಹಾರಾಣಿ ಅಹಲ್ಯ ಬಾಯಿ ಔರ್ಕರ್ ರಕ್ಷಣೆ ಮಾಡಿದರು. ಯುದ್ದಕ್ಕೆ ಬದಲಾಗಿ ಬುದ್ದಿವಂತಿಕೆಯಿಂದ ಕಾಶಿ ವಿಶ್ವನಾಥ ದೇವಾಲಯ ಉಳಿಸಿದರು. ಮೊದಲ ಹಿಂದೂ ಧ್ವಜವನ್ನು ಹಾರಿಸಿದವರು ಅಹಲ್ಯ ಬಾಯಿ ಔರ್ಕರ್. ಅವರು ಯಾವಾಗಲೂ ಶಿವನ‌ ಹೆಸರಿನಲ್ಲೇ ಆಡಳಿತ ಮಾಡಿದವರು. ಅವರನ್ನು ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮರೆತಿದ್ದಾರೆ. ಇದು ಚರಿತ್ರೆಯನ್ನು ಮರೆತಂತಾಗಿದೆ ಎಂದು ವಿಶ್ವನಾಥ್‌ ವಿಷಾದಿಸಿದ್ದಾರೆ.

ನೀವು ಚರಿತ್ರೆ ಮುಚ್ಚಿ ಹಾಕಲು ಹೊರಟಿದ್ದೀರಾ. ತಕ್ಷಣದಲ್ಲಿ ಆ ಸ್ಥಳದಲ್ಲಿ ಅಹಲ್ಯ ಬಾಯಿ ಔರ್ಕರ್ ಪ್ರತಿಮೆ ಸ್ಥಾಪಿಸಿ. ವಾರಣಾಸಿ ಏರ್ಪೋರ್ಟ್‌‌ಗೆ ಅಹಲ್ಯ ಬಾಯಿ ಔರ್ಕರ್ ಹೆಸರಿಡಿ ಎಂದು  ಎಂದು ಪ್ರಧಾನಿಯವರಲ್ಲಿ ಮನವಿ ಮಾಡಿರುವ ಅವರು, ಕ್ರೈಸ್ತರಿಗೆ ವ್ಯಾಟಿಕನ್, ಮುಸ್ಲಿಮರಿಗೆ ಮೆಕ್ಕಾ ಇದ್ದಂತೆ ಹಿಂದೂಗಳಿಗೆ ಕಾಶಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಹಲ್ಯಾಬಾಯಿ ಕುರುಬ ಜನಾಂಗದವರು

ಉತ್ತರ ಪ್ರದೇಶದಲ್ಲಿ ಒಂದೂವರೆ ಕೋಟಿ ಜನ ಕುರುಬರು ಇದ್ದಾರೆ. ಕುರುಬ ಜನಾಂಗಕ್ಕೆ ಸೇರಿದ ಅಹಲ್ಯಾಬಾಯಿ. ಅವರನ್ನು ಮರೆತಿರುವುದು ಪ್ರಮಾದ. ಕಾಗಿನೆಲೆ ಸ್ವಾಮಿಗಳ ಜಗದ್ಗುರುಗಳನ್ನು ಮರೆತಿದ್ದೀರಾ? ಕುರುಬರು ನಿಮಗೆ ಅಪಥ್ಯವಾಗುತ್ತಿದ್ದಾರಾ? ಯಾಕೆ ಕುರುಬರನ್ನು ನೀವು ಮರೆಯುತ್ತಿದ್ದೀರಾ. ನಿರಂಜನಾಪುರಿ ಪ್ರಸನ್ನ ಸ್ವಾಮಿಗಳನ್ನು ಕರೆದಿಲ್ಲ. ಬಸವರಾಜ ಬೊಮ್ಮಾಯಿ ಸಹಾ ಮರೆತುಬಿಟ್ಟರಾ? ನಮ್ಮದು ಸಹ ದೊಡ್ಡ ಮಠ ಎಂದು ನೆನಪಿಸಿದ್ದಾರೆ.

ಹಾವೇರಿ ಕಲಬುರಗಿ ರಾಯಚೂರು ಸೇರಿ ನಾಲ್ಕು ಕಡೆ ಇದೆ. ನಮ್ಮ ಕಾಗಿನೆಲೆ ಪಕ್ಕಾ ಹಿಂದೂಗಳ ಮಠ. ಮೊದಲ ಸ್ವಾಮಿಗಳು ಪಕ್ಕಾ ಆರ್‌‌ಎಸ್‌ಎಸ್‌‌ನವರು. ಹಿಂದೂ ಧರ್ಮದ ಪ್ರತಿಪಾದಕರಾಗಿದ್ದವರು. ಅಹಲ್ಯಬಾಯಿ ಸಮಾಜದ ಗುರುಗಳನ್ನು ಮರೆತಿದ್ದೀರಾ. ಕುರುಬರು ಬೇಡವಾ ನಿಮಗೆ? ಎಂದು ಪ್ರಶ್ನಿಸಿದ್ದಾರೆ.

ತಮಗೆ ವಿಶ್ವನಾಥ್‌ ಎಂದು ಹೆಸರಿಟ್ಟ ಹಿನ್ನೆಲೆಯನ್ನು ನೆನೆಸಿಕೊಂಡಿರುವ ಅವರು, ಮಗು ಸಾವನ್ನಪ್ಪಬಾರದು ಅಂತಾ ನಮ್ಮಪ್ಪ ಹರಕೆ ಹೊತ್ತಿದ್ದರು.  ಕಾಶಿಗೆ ಹೋಗಿ ಹರಕೆ‌ ಹೊತ್ತು ನನ್ನ ಹೆಸರು ಇಟ್ಟರು. ಕಾಶಿಯಲ್ಲಿ ಮೋಕ್ಷ ಪಡೆಯಲು ಎಲ್ಲರು ಹಂಬಲಿಸುತ್ತಾರೆ. ಮುಸ್ಲಿಂರಿಗೆ ಮೆಕ್ಕಾ ಇದ್ದಂತೆ ಕ್ರೈಸ್ತರಿಗೆ ರೋಮ್ ಇದ್ದಂತೆ. ಹಿಂದೂಗಳಿಗೆ ಕಾಶಿ ಪವಿತ್ರವಾದದ್ದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ರಂಗಾಯಣದ ಗೌರವ ಹಾಳುಮಾಡದಿರಿ: ಹಿರಿಯ ಸಾಹಿತಿಗಳು, ರಂಗಕರ್ಮಿಗಳು, ಚಿಂತಕರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...