Homeಕರ್ನಾಟಕಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

"ಉತ್ತರ ಪ್ರದೇಶದಲ್ಲಿ ಒಂದೂವರೆ ಕೋಟಿ ಜನ ಕುರುಬರು ಇದ್ದಾರೆ. ಕುರುಬ ಜನಾಂಗಕ್ಕೆ ಸೇರಿದ ಅಹಲ್ಯಾಬಾಯಿ. ಅವರನ್ನು ಮರೆತಿರುವುದು ಪ್ರಮಾದ"

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಚರಿತ್ರೆಯನ್ನು ಮುಚ್ಚಿ ಹಾಕಲು ಹೊರಟಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್‌ ಗುಡುಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಲೋಕಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು.

ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಪ್ರಧಾನಿ ಮೋದಿ ಅವರ ಕಾರ್ಯ ಸ್ವಾಗತ, ಅರ್ಹ. ಇಷ್ಟು ಬಹುದೊಡ್ಡ ಕಾರ್ಯಕ್ರಮದಲ್ಲಿ ಒಂದು ಲೋಪ ಆಗಿದೆ. ವಾರಣಾಸಿ ಜೀರ್ಣೋದ್ಧಾರ ಮಾಡಿದವರನ್ನು ಇಲ್ಲಿ ಮರೆಯಲಾಗಿದೆ ಎಂದು ತಿಳಿಸಿದ್ದಾರೆ.

ಸಾವಿರಾರು ವರ್ಷಗಳ ಹಿಂದೆ ರಾಜ ಮಹಾರಾಜರ ದಾಳಿಗೆ ಕಾಶಿ ತುತ್ತಾಗಿದ್ದು. ಅದನ್ನು  ಇಂದೂರಿನ ಮಹಾರಾಣಿ ಅಹಲ್ಯ ಬಾಯಿ ಔರ್ಕರ್ ರಕ್ಷಣೆ ಮಾಡಿದರು. ಯುದ್ದಕ್ಕೆ ಬದಲಾಗಿ ಬುದ್ದಿವಂತಿಕೆಯಿಂದ ಕಾಶಿ ವಿಶ್ವನಾಥ ದೇವಾಲಯ ಉಳಿಸಿದರು. ಮೊದಲ ಹಿಂದೂ ಧ್ವಜವನ್ನು ಹಾರಿಸಿದವರು ಅಹಲ್ಯ ಬಾಯಿ ಔರ್ಕರ್. ಅವರು ಯಾವಾಗಲೂ ಶಿವನ‌ ಹೆಸರಿನಲ್ಲೇ ಆಡಳಿತ ಮಾಡಿದವರು. ಅವರನ್ನು ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮರೆತಿದ್ದಾರೆ. ಇದು ಚರಿತ್ರೆಯನ್ನು ಮರೆತಂತಾಗಿದೆ ಎಂದು ವಿಶ್ವನಾಥ್‌ ವಿಷಾದಿಸಿದ್ದಾರೆ.

ನೀವು ಚರಿತ್ರೆ ಮುಚ್ಚಿ ಹಾಕಲು ಹೊರಟಿದ್ದೀರಾ. ತಕ್ಷಣದಲ್ಲಿ ಆ ಸ್ಥಳದಲ್ಲಿ ಅಹಲ್ಯ ಬಾಯಿ ಔರ್ಕರ್ ಪ್ರತಿಮೆ ಸ್ಥಾಪಿಸಿ. ವಾರಣಾಸಿ ಏರ್ಪೋರ್ಟ್‌‌ಗೆ ಅಹಲ್ಯ ಬಾಯಿ ಔರ್ಕರ್ ಹೆಸರಿಡಿ ಎಂದು  ಎಂದು ಪ್ರಧಾನಿಯವರಲ್ಲಿ ಮನವಿ ಮಾಡಿರುವ ಅವರು, ಕ್ರೈಸ್ತರಿಗೆ ವ್ಯಾಟಿಕನ್, ಮುಸ್ಲಿಮರಿಗೆ ಮೆಕ್ಕಾ ಇದ್ದಂತೆ ಹಿಂದೂಗಳಿಗೆ ಕಾಶಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಹಲ್ಯಾಬಾಯಿ ಕುರುಬ ಜನಾಂಗದವರು

ಉತ್ತರ ಪ್ರದೇಶದಲ್ಲಿ ಒಂದೂವರೆ ಕೋಟಿ ಜನ ಕುರುಬರು ಇದ್ದಾರೆ. ಕುರುಬ ಜನಾಂಗಕ್ಕೆ ಸೇರಿದ ಅಹಲ್ಯಾಬಾಯಿ. ಅವರನ್ನು ಮರೆತಿರುವುದು ಪ್ರಮಾದ. ಕಾಗಿನೆಲೆ ಸ್ವಾಮಿಗಳ ಜಗದ್ಗುರುಗಳನ್ನು ಮರೆತಿದ್ದೀರಾ? ಕುರುಬರು ನಿಮಗೆ ಅಪಥ್ಯವಾಗುತ್ತಿದ್ದಾರಾ? ಯಾಕೆ ಕುರುಬರನ್ನು ನೀವು ಮರೆಯುತ್ತಿದ್ದೀರಾ. ನಿರಂಜನಾಪುರಿ ಪ್ರಸನ್ನ ಸ್ವಾಮಿಗಳನ್ನು ಕರೆದಿಲ್ಲ. ಬಸವರಾಜ ಬೊಮ್ಮಾಯಿ ಸಹಾ ಮರೆತುಬಿಟ್ಟರಾ? ನಮ್ಮದು ಸಹ ದೊಡ್ಡ ಮಠ ಎಂದು ನೆನಪಿಸಿದ್ದಾರೆ.

ಹಾವೇರಿ ಕಲಬುರಗಿ ರಾಯಚೂರು ಸೇರಿ ನಾಲ್ಕು ಕಡೆ ಇದೆ. ನಮ್ಮ ಕಾಗಿನೆಲೆ ಪಕ್ಕಾ ಹಿಂದೂಗಳ ಮಠ. ಮೊದಲ ಸ್ವಾಮಿಗಳು ಪಕ್ಕಾ ಆರ್‌‌ಎಸ್‌ಎಸ್‌‌ನವರು. ಹಿಂದೂ ಧರ್ಮದ ಪ್ರತಿಪಾದಕರಾಗಿದ್ದವರು. ಅಹಲ್ಯಬಾಯಿ ಸಮಾಜದ ಗುರುಗಳನ್ನು ಮರೆತಿದ್ದೀರಾ. ಕುರುಬರು ಬೇಡವಾ ನಿಮಗೆ? ಎಂದು ಪ್ರಶ್ನಿಸಿದ್ದಾರೆ.

ತಮಗೆ ವಿಶ್ವನಾಥ್‌ ಎಂದು ಹೆಸರಿಟ್ಟ ಹಿನ್ನೆಲೆಯನ್ನು ನೆನೆಸಿಕೊಂಡಿರುವ ಅವರು, ಮಗು ಸಾವನ್ನಪ್ಪಬಾರದು ಅಂತಾ ನಮ್ಮಪ್ಪ ಹರಕೆ ಹೊತ್ತಿದ್ದರು.  ಕಾಶಿಗೆ ಹೋಗಿ ಹರಕೆ‌ ಹೊತ್ತು ನನ್ನ ಹೆಸರು ಇಟ್ಟರು. ಕಾಶಿಯಲ್ಲಿ ಮೋಕ್ಷ ಪಡೆಯಲು ಎಲ್ಲರು ಹಂಬಲಿಸುತ್ತಾರೆ. ಮುಸ್ಲಿಂರಿಗೆ ಮೆಕ್ಕಾ ಇದ್ದಂತೆ ಕ್ರೈಸ್ತರಿಗೆ ರೋಮ್ ಇದ್ದಂತೆ. ಹಿಂದೂಗಳಿಗೆ ಕಾಶಿ ಪವಿತ್ರವಾದದ್ದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ರಂಗಾಯಣದ ಗೌರವ ಹಾಳುಮಾಡದಿರಿ: ಹಿರಿಯ ಸಾಹಿತಿಗಳು, ರಂಗಕರ್ಮಿಗಳು, ಚಿಂತಕರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...