Homeಕರ್ನಾಟಕಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

"ಉತ್ತರ ಪ್ರದೇಶದಲ್ಲಿ ಒಂದೂವರೆ ಕೋಟಿ ಜನ ಕುರುಬರು ಇದ್ದಾರೆ. ಕುರುಬ ಜನಾಂಗಕ್ಕೆ ಸೇರಿದ ಅಹಲ್ಯಾಬಾಯಿ. ಅವರನ್ನು ಮರೆತಿರುವುದು ಪ್ರಮಾದ"

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಚರಿತ್ರೆಯನ್ನು ಮುಚ್ಚಿ ಹಾಕಲು ಹೊರಟಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್‌ ಗುಡುಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಲೋಕಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು.

ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಪ್ರಧಾನಿ ಮೋದಿ ಅವರ ಕಾರ್ಯ ಸ್ವಾಗತ, ಅರ್ಹ. ಇಷ್ಟು ಬಹುದೊಡ್ಡ ಕಾರ್ಯಕ್ರಮದಲ್ಲಿ ಒಂದು ಲೋಪ ಆಗಿದೆ. ವಾರಣಾಸಿ ಜೀರ್ಣೋದ್ಧಾರ ಮಾಡಿದವರನ್ನು ಇಲ್ಲಿ ಮರೆಯಲಾಗಿದೆ ಎಂದು ತಿಳಿಸಿದ್ದಾರೆ.

ಸಾವಿರಾರು ವರ್ಷಗಳ ಹಿಂದೆ ರಾಜ ಮಹಾರಾಜರ ದಾಳಿಗೆ ಕಾಶಿ ತುತ್ತಾಗಿದ್ದು. ಅದನ್ನು  ಇಂದೂರಿನ ಮಹಾರಾಣಿ ಅಹಲ್ಯ ಬಾಯಿ ಔರ್ಕರ್ ರಕ್ಷಣೆ ಮಾಡಿದರು. ಯುದ್ದಕ್ಕೆ ಬದಲಾಗಿ ಬುದ್ದಿವಂತಿಕೆಯಿಂದ ಕಾಶಿ ವಿಶ್ವನಾಥ ದೇವಾಲಯ ಉಳಿಸಿದರು. ಮೊದಲ ಹಿಂದೂ ಧ್ವಜವನ್ನು ಹಾರಿಸಿದವರು ಅಹಲ್ಯ ಬಾಯಿ ಔರ್ಕರ್. ಅವರು ಯಾವಾಗಲೂ ಶಿವನ‌ ಹೆಸರಿನಲ್ಲೇ ಆಡಳಿತ ಮಾಡಿದವರು. ಅವರನ್ನು ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮರೆತಿದ್ದಾರೆ. ಇದು ಚರಿತ್ರೆಯನ್ನು ಮರೆತಂತಾಗಿದೆ ಎಂದು ವಿಶ್ವನಾಥ್‌ ವಿಷಾದಿಸಿದ್ದಾರೆ.

ನೀವು ಚರಿತ್ರೆ ಮುಚ್ಚಿ ಹಾಕಲು ಹೊರಟಿದ್ದೀರಾ. ತಕ್ಷಣದಲ್ಲಿ ಆ ಸ್ಥಳದಲ್ಲಿ ಅಹಲ್ಯ ಬಾಯಿ ಔರ್ಕರ್ ಪ್ರತಿಮೆ ಸ್ಥಾಪಿಸಿ. ವಾರಣಾಸಿ ಏರ್ಪೋರ್ಟ್‌‌ಗೆ ಅಹಲ್ಯ ಬಾಯಿ ಔರ್ಕರ್ ಹೆಸರಿಡಿ ಎಂದು  ಎಂದು ಪ್ರಧಾನಿಯವರಲ್ಲಿ ಮನವಿ ಮಾಡಿರುವ ಅವರು, ಕ್ರೈಸ್ತರಿಗೆ ವ್ಯಾಟಿಕನ್, ಮುಸ್ಲಿಮರಿಗೆ ಮೆಕ್ಕಾ ಇದ್ದಂತೆ ಹಿಂದೂಗಳಿಗೆ ಕಾಶಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಹಲ್ಯಾಬಾಯಿ ಕುರುಬ ಜನಾಂಗದವರು

ಉತ್ತರ ಪ್ರದೇಶದಲ್ಲಿ ಒಂದೂವರೆ ಕೋಟಿ ಜನ ಕುರುಬರು ಇದ್ದಾರೆ. ಕುರುಬ ಜನಾಂಗಕ್ಕೆ ಸೇರಿದ ಅಹಲ್ಯಾಬಾಯಿ. ಅವರನ್ನು ಮರೆತಿರುವುದು ಪ್ರಮಾದ. ಕಾಗಿನೆಲೆ ಸ್ವಾಮಿಗಳ ಜಗದ್ಗುರುಗಳನ್ನು ಮರೆತಿದ್ದೀರಾ? ಕುರುಬರು ನಿಮಗೆ ಅಪಥ್ಯವಾಗುತ್ತಿದ್ದಾರಾ? ಯಾಕೆ ಕುರುಬರನ್ನು ನೀವು ಮರೆಯುತ್ತಿದ್ದೀರಾ. ನಿರಂಜನಾಪುರಿ ಪ್ರಸನ್ನ ಸ್ವಾಮಿಗಳನ್ನು ಕರೆದಿಲ್ಲ. ಬಸವರಾಜ ಬೊಮ್ಮಾಯಿ ಸಹಾ ಮರೆತುಬಿಟ್ಟರಾ? ನಮ್ಮದು ಸಹ ದೊಡ್ಡ ಮಠ ಎಂದು ನೆನಪಿಸಿದ್ದಾರೆ.

ಹಾವೇರಿ ಕಲಬುರಗಿ ರಾಯಚೂರು ಸೇರಿ ನಾಲ್ಕು ಕಡೆ ಇದೆ. ನಮ್ಮ ಕಾಗಿನೆಲೆ ಪಕ್ಕಾ ಹಿಂದೂಗಳ ಮಠ. ಮೊದಲ ಸ್ವಾಮಿಗಳು ಪಕ್ಕಾ ಆರ್‌‌ಎಸ್‌ಎಸ್‌‌ನವರು. ಹಿಂದೂ ಧರ್ಮದ ಪ್ರತಿಪಾದಕರಾಗಿದ್ದವರು. ಅಹಲ್ಯಬಾಯಿ ಸಮಾಜದ ಗುರುಗಳನ್ನು ಮರೆತಿದ್ದೀರಾ. ಕುರುಬರು ಬೇಡವಾ ನಿಮಗೆ? ಎಂದು ಪ್ರಶ್ನಿಸಿದ್ದಾರೆ.

ತಮಗೆ ವಿಶ್ವನಾಥ್‌ ಎಂದು ಹೆಸರಿಟ್ಟ ಹಿನ್ನೆಲೆಯನ್ನು ನೆನೆಸಿಕೊಂಡಿರುವ ಅವರು, ಮಗು ಸಾವನ್ನಪ್ಪಬಾರದು ಅಂತಾ ನಮ್ಮಪ್ಪ ಹರಕೆ ಹೊತ್ತಿದ್ದರು.  ಕಾಶಿಗೆ ಹೋಗಿ ಹರಕೆ‌ ಹೊತ್ತು ನನ್ನ ಹೆಸರು ಇಟ್ಟರು. ಕಾಶಿಯಲ್ಲಿ ಮೋಕ್ಷ ಪಡೆಯಲು ಎಲ್ಲರು ಹಂಬಲಿಸುತ್ತಾರೆ. ಮುಸ್ಲಿಂರಿಗೆ ಮೆಕ್ಕಾ ಇದ್ದಂತೆ ಕ್ರೈಸ್ತರಿಗೆ ರೋಮ್ ಇದ್ದಂತೆ. ಹಿಂದೂಗಳಿಗೆ ಕಾಶಿ ಪವಿತ್ರವಾದದ್ದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ರಂಗಾಯಣದ ಗೌರವ ಹಾಳುಮಾಡದಿರಿ: ಹಿರಿಯ ಸಾಹಿತಿಗಳು, ರಂಗಕರ್ಮಿಗಳು, ಚಿಂತಕರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...