Homeಕರ್ನಾಟಕಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

"ಉತ್ತರ ಪ್ರದೇಶದಲ್ಲಿ ಒಂದೂವರೆ ಕೋಟಿ ಜನ ಕುರುಬರು ಇದ್ದಾರೆ. ಕುರುಬ ಜನಾಂಗಕ್ಕೆ ಸೇರಿದ ಅಹಲ್ಯಾಬಾಯಿ. ಅವರನ್ನು ಮರೆತಿರುವುದು ಪ್ರಮಾದ"

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಚರಿತ್ರೆಯನ್ನು ಮುಚ್ಚಿ ಹಾಕಲು ಹೊರಟಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್‌ ಗುಡುಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಲೋಕಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು.

ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಪ್ರಧಾನಿ ಮೋದಿ ಅವರ ಕಾರ್ಯ ಸ್ವಾಗತ, ಅರ್ಹ. ಇಷ್ಟು ಬಹುದೊಡ್ಡ ಕಾರ್ಯಕ್ರಮದಲ್ಲಿ ಒಂದು ಲೋಪ ಆಗಿದೆ. ವಾರಣಾಸಿ ಜೀರ್ಣೋದ್ಧಾರ ಮಾಡಿದವರನ್ನು ಇಲ್ಲಿ ಮರೆಯಲಾಗಿದೆ ಎಂದು ತಿಳಿಸಿದ್ದಾರೆ.

ಸಾವಿರಾರು ವರ್ಷಗಳ ಹಿಂದೆ ರಾಜ ಮಹಾರಾಜರ ದಾಳಿಗೆ ಕಾಶಿ ತುತ್ತಾಗಿದ್ದು. ಅದನ್ನು  ಇಂದೂರಿನ ಮಹಾರಾಣಿ ಅಹಲ್ಯ ಬಾಯಿ ಔರ್ಕರ್ ರಕ್ಷಣೆ ಮಾಡಿದರು. ಯುದ್ದಕ್ಕೆ ಬದಲಾಗಿ ಬುದ್ದಿವಂತಿಕೆಯಿಂದ ಕಾಶಿ ವಿಶ್ವನಾಥ ದೇವಾಲಯ ಉಳಿಸಿದರು. ಮೊದಲ ಹಿಂದೂ ಧ್ವಜವನ್ನು ಹಾರಿಸಿದವರು ಅಹಲ್ಯ ಬಾಯಿ ಔರ್ಕರ್. ಅವರು ಯಾವಾಗಲೂ ಶಿವನ‌ ಹೆಸರಿನಲ್ಲೇ ಆಡಳಿತ ಮಾಡಿದವರು. ಅವರನ್ನು ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮರೆತಿದ್ದಾರೆ. ಇದು ಚರಿತ್ರೆಯನ್ನು ಮರೆತಂತಾಗಿದೆ ಎಂದು ವಿಶ್ವನಾಥ್‌ ವಿಷಾದಿಸಿದ್ದಾರೆ.

ನೀವು ಚರಿತ್ರೆ ಮುಚ್ಚಿ ಹಾಕಲು ಹೊರಟಿದ್ದೀರಾ. ತಕ್ಷಣದಲ್ಲಿ ಆ ಸ್ಥಳದಲ್ಲಿ ಅಹಲ್ಯ ಬಾಯಿ ಔರ್ಕರ್ ಪ್ರತಿಮೆ ಸ್ಥಾಪಿಸಿ. ವಾರಣಾಸಿ ಏರ್ಪೋರ್ಟ್‌‌ಗೆ ಅಹಲ್ಯ ಬಾಯಿ ಔರ್ಕರ್ ಹೆಸರಿಡಿ ಎಂದು  ಎಂದು ಪ್ರಧಾನಿಯವರಲ್ಲಿ ಮನವಿ ಮಾಡಿರುವ ಅವರು, ಕ್ರೈಸ್ತರಿಗೆ ವ್ಯಾಟಿಕನ್, ಮುಸ್ಲಿಮರಿಗೆ ಮೆಕ್ಕಾ ಇದ್ದಂತೆ ಹಿಂದೂಗಳಿಗೆ ಕಾಶಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಹಲ್ಯಾಬಾಯಿ ಕುರುಬ ಜನಾಂಗದವರು

ಉತ್ತರ ಪ್ರದೇಶದಲ್ಲಿ ಒಂದೂವರೆ ಕೋಟಿ ಜನ ಕುರುಬರು ಇದ್ದಾರೆ. ಕುರುಬ ಜನಾಂಗಕ್ಕೆ ಸೇರಿದ ಅಹಲ್ಯಾಬಾಯಿ. ಅವರನ್ನು ಮರೆತಿರುವುದು ಪ್ರಮಾದ. ಕಾಗಿನೆಲೆ ಸ್ವಾಮಿಗಳ ಜಗದ್ಗುರುಗಳನ್ನು ಮರೆತಿದ್ದೀರಾ? ಕುರುಬರು ನಿಮಗೆ ಅಪಥ್ಯವಾಗುತ್ತಿದ್ದಾರಾ? ಯಾಕೆ ಕುರುಬರನ್ನು ನೀವು ಮರೆಯುತ್ತಿದ್ದೀರಾ. ನಿರಂಜನಾಪುರಿ ಪ್ರಸನ್ನ ಸ್ವಾಮಿಗಳನ್ನು ಕರೆದಿಲ್ಲ. ಬಸವರಾಜ ಬೊಮ್ಮಾಯಿ ಸಹಾ ಮರೆತುಬಿಟ್ಟರಾ? ನಮ್ಮದು ಸಹ ದೊಡ್ಡ ಮಠ ಎಂದು ನೆನಪಿಸಿದ್ದಾರೆ.

ಹಾವೇರಿ ಕಲಬುರಗಿ ರಾಯಚೂರು ಸೇರಿ ನಾಲ್ಕು ಕಡೆ ಇದೆ. ನಮ್ಮ ಕಾಗಿನೆಲೆ ಪಕ್ಕಾ ಹಿಂದೂಗಳ ಮಠ. ಮೊದಲ ಸ್ವಾಮಿಗಳು ಪಕ್ಕಾ ಆರ್‌‌ಎಸ್‌ಎಸ್‌‌ನವರು. ಹಿಂದೂ ಧರ್ಮದ ಪ್ರತಿಪಾದಕರಾಗಿದ್ದವರು. ಅಹಲ್ಯಬಾಯಿ ಸಮಾಜದ ಗುರುಗಳನ್ನು ಮರೆತಿದ್ದೀರಾ. ಕುರುಬರು ಬೇಡವಾ ನಿಮಗೆ? ಎಂದು ಪ್ರಶ್ನಿಸಿದ್ದಾರೆ.

ತಮಗೆ ವಿಶ್ವನಾಥ್‌ ಎಂದು ಹೆಸರಿಟ್ಟ ಹಿನ್ನೆಲೆಯನ್ನು ನೆನೆಸಿಕೊಂಡಿರುವ ಅವರು, ಮಗು ಸಾವನ್ನಪ್ಪಬಾರದು ಅಂತಾ ನಮ್ಮಪ್ಪ ಹರಕೆ ಹೊತ್ತಿದ್ದರು.  ಕಾಶಿಗೆ ಹೋಗಿ ಹರಕೆ‌ ಹೊತ್ತು ನನ್ನ ಹೆಸರು ಇಟ್ಟರು. ಕಾಶಿಯಲ್ಲಿ ಮೋಕ್ಷ ಪಡೆಯಲು ಎಲ್ಲರು ಹಂಬಲಿಸುತ್ತಾರೆ. ಮುಸ್ಲಿಂರಿಗೆ ಮೆಕ್ಕಾ ಇದ್ದಂತೆ ಕ್ರೈಸ್ತರಿಗೆ ರೋಮ್ ಇದ್ದಂತೆ. ಹಿಂದೂಗಳಿಗೆ ಕಾಶಿ ಪವಿತ್ರವಾದದ್ದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ರಂಗಾಯಣದ ಗೌರವ ಹಾಳುಮಾಡದಿರಿ: ಹಿರಿಯ ಸಾಹಿತಿಗಳು, ರಂಗಕರ್ಮಿಗಳು, ಚಿಂತಕರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...