Homeಕರ್ನಾಟಕಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

"ಉತ್ತರ ಪ್ರದೇಶದಲ್ಲಿ ಒಂದೂವರೆ ಕೋಟಿ ಜನ ಕುರುಬರು ಇದ್ದಾರೆ. ಕುರುಬ ಜನಾಂಗಕ್ಕೆ ಸೇರಿದ ಅಹಲ್ಯಾಬಾಯಿ. ಅವರನ್ನು ಮರೆತಿರುವುದು ಪ್ರಮಾದ"

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಚರಿತ್ರೆಯನ್ನು ಮುಚ್ಚಿ ಹಾಕಲು ಹೊರಟಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್‌ ಗುಡುಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಲೋಕಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು.

ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಪ್ರಧಾನಿ ಮೋದಿ ಅವರ ಕಾರ್ಯ ಸ್ವಾಗತ, ಅರ್ಹ. ಇಷ್ಟು ಬಹುದೊಡ್ಡ ಕಾರ್ಯಕ್ರಮದಲ್ಲಿ ಒಂದು ಲೋಪ ಆಗಿದೆ. ವಾರಣಾಸಿ ಜೀರ್ಣೋದ್ಧಾರ ಮಾಡಿದವರನ್ನು ಇಲ್ಲಿ ಮರೆಯಲಾಗಿದೆ ಎಂದು ತಿಳಿಸಿದ್ದಾರೆ.

ಸಾವಿರಾರು ವರ್ಷಗಳ ಹಿಂದೆ ರಾಜ ಮಹಾರಾಜರ ದಾಳಿಗೆ ಕಾಶಿ ತುತ್ತಾಗಿದ್ದು. ಅದನ್ನು  ಇಂದೂರಿನ ಮಹಾರಾಣಿ ಅಹಲ್ಯ ಬಾಯಿ ಔರ್ಕರ್ ರಕ್ಷಣೆ ಮಾಡಿದರು. ಯುದ್ದಕ್ಕೆ ಬದಲಾಗಿ ಬುದ್ದಿವಂತಿಕೆಯಿಂದ ಕಾಶಿ ವಿಶ್ವನಾಥ ದೇವಾಲಯ ಉಳಿಸಿದರು. ಮೊದಲ ಹಿಂದೂ ಧ್ವಜವನ್ನು ಹಾರಿಸಿದವರು ಅಹಲ್ಯ ಬಾಯಿ ಔರ್ಕರ್. ಅವರು ಯಾವಾಗಲೂ ಶಿವನ‌ ಹೆಸರಿನಲ್ಲೇ ಆಡಳಿತ ಮಾಡಿದವರು. ಅವರನ್ನು ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮರೆತಿದ್ದಾರೆ. ಇದು ಚರಿತ್ರೆಯನ್ನು ಮರೆತಂತಾಗಿದೆ ಎಂದು ವಿಶ್ವನಾಥ್‌ ವಿಷಾದಿಸಿದ್ದಾರೆ.

ನೀವು ಚರಿತ್ರೆ ಮುಚ್ಚಿ ಹಾಕಲು ಹೊರಟಿದ್ದೀರಾ. ತಕ್ಷಣದಲ್ಲಿ ಆ ಸ್ಥಳದಲ್ಲಿ ಅಹಲ್ಯ ಬಾಯಿ ಔರ್ಕರ್ ಪ್ರತಿಮೆ ಸ್ಥಾಪಿಸಿ. ವಾರಣಾಸಿ ಏರ್ಪೋರ್ಟ್‌‌ಗೆ ಅಹಲ್ಯ ಬಾಯಿ ಔರ್ಕರ್ ಹೆಸರಿಡಿ ಎಂದು  ಎಂದು ಪ್ರಧಾನಿಯವರಲ್ಲಿ ಮನವಿ ಮಾಡಿರುವ ಅವರು, ಕ್ರೈಸ್ತರಿಗೆ ವ್ಯಾಟಿಕನ್, ಮುಸ್ಲಿಮರಿಗೆ ಮೆಕ್ಕಾ ಇದ್ದಂತೆ ಹಿಂದೂಗಳಿಗೆ ಕಾಶಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಹಲ್ಯಾಬಾಯಿ ಕುರುಬ ಜನಾಂಗದವರು

ಉತ್ತರ ಪ್ರದೇಶದಲ್ಲಿ ಒಂದೂವರೆ ಕೋಟಿ ಜನ ಕುರುಬರು ಇದ್ದಾರೆ. ಕುರುಬ ಜನಾಂಗಕ್ಕೆ ಸೇರಿದ ಅಹಲ್ಯಾಬಾಯಿ. ಅವರನ್ನು ಮರೆತಿರುವುದು ಪ್ರಮಾದ. ಕಾಗಿನೆಲೆ ಸ್ವಾಮಿಗಳ ಜಗದ್ಗುರುಗಳನ್ನು ಮರೆತಿದ್ದೀರಾ? ಕುರುಬರು ನಿಮಗೆ ಅಪಥ್ಯವಾಗುತ್ತಿದ್ದಾರಾ? ಯಾಕೆ ಕುರುಬರನ್ನು ನೀವು ಮರೆಯುತ್ತಿದ್ದೀರಾ. ನಿರಂಜನಾಪುರಿ ಪ್ರಸನ್ನ ಸ್ವಾಮಿಗಳನ್ನು ಕರೆದಿಲ್ಲ. ಬಸವರಾಜ ಬೊಮ್ಮಾಯಿ ಸಹಾ ಮರೆತುಬಿಟ್ಟರಾ? ನಮ್ಮದು ಸಹ ದೊಡ್ಡ ಮಠ ಎಂದು ನೆನಪಿಸಿದ್ದಾರೆ.

ಹಾವೇರಿ ಕಲಬುರಗಿ ರಾಯಚೂರು ಸೇರಿ ನಾಲ್ಕು ಕಡೆ ಇದೆ. ನಮ್ಮ ಕಾಗಿನೆಲೆ ಪಕ್ಕಾ ಹಿಂದೂಗಳ ಮಠ. ಮೊದಲ ಸ್ವಾಮಿಗಳು ಪಕ್ಕಾ ಆರ್‌‌ಎಸ್‌ಎಸ್‌‌ನವರು. ಹಿಂದೂ ಧರ್ಮದ ಪ್ರತಿಪಾದಕರಾಗಿದ್ದವರು. ಅಹಲ್ಯಬಾಯಿ ಸಮಾಜದ ಗುರುಗಳನ್ನು ಮರೆತಿದ್ದೀರಾ. ಕುರುಬರು ಬೇಡವಾ ನಿಮಗೆ? ಎಂದು ಪ್ರಶ್ನಿಸಿದ್ದಾರೆ.

ತಮಗೆ ವಿಶ್ವನಾಥ್‌ ಎಂದು ಹೆಸರಿಟ್ಟ ಹಿನ್ನೆಲೆಯನ್ನು ನೆನೆಸಿಕೊಂಡಿರುವ ಅವರು, ಮಗು ಸಾವನ್ನಪ್ಪಬಾರದು ಅಂತಾ ನಮ್ಮಪ್ಪ ಹರಕೆ ಹೊತ್ತಿದ್ದರು.  ಕಾಶಿಗೆ ಹೋಗಿ ಹರಕೆ‌ ಹೊತ್ತು ನನ್ನ ಹೆಸರು ಇಟ್ಟರು. ಕಾಶಿಯಲ್ಲಿ ಮೋಕ್ಷ ಪಡೆಯಲು ಎಲ್ಲರು ಹಂಬಲಿಸುತ್ತಾರೆ. ಮುಸ್ಲಿಂರಿಗೆ ಮೆಕ್ಕಾ ಇದ್ದಂತೆ ಕ್ರೈಸ್ತರಿಗೆ ರೋಮ್ ಇದ್ದಂತೆ. ಹಿಂದೂಗಳಿಗೆ ಕಾಶಿ ಪವಿತ್ರವಾದದ್ದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ರಂಗಾಯಣದ ಗೌರವ ಹಾಳುಮಾಡದಿರಿ: ಹಿರಿಯ ಸಾಹಿತಿಗಳು, ರಂಗಕರ್ಮಿಗಳು, ಚಿಂತಕರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...