Homeಕರ್ನಾಟಕಬಂದ ಪುಟ್ಟಾ... ಹೋದ ಪುಟ್ಟಾ...

ಬಂದ ಪುಟ್ಟಾ… ಹೋದ ಪುಟ್ಟಾ…

- Advertisement -
- Advertisement -

ಬೆಲ್ಲದ ಕಟ್ಟೆಯ ಕಟ್ಟಿ
ಬೇವಿನ ಬೀಜವ ಬಿತ್ತಿ
ಜೇನು ಮಳೆಗರೆದರೆ
ವಿಷ ಹೋದಿತೇನಯ್ಯಾ?

ದಾಸರ ಈ ನುಡಿಮುತ್ತುಗಳು ಪ್ರಸ್ತುತ ಸನ್ನಿವೇಶಕ್ಕೆ ಹೇಳಿಮಾಡಿಸಿದಂತಿವೆ. ಜಾತ್ಯತೀತ, ಧರ್ಮಾತೀತ ಪರಂಪರೆಯ ಹಿನ್ನೆಲೆಯುಳ್ಳ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದು ಅಪ್ಪಟ ಚುನಾವಣಾ ಪ್ರಚಾರದ ಭಾಷಣ. ಮಕ್ಕಳನ್ನು ಮುಂದಿಟ್ಟುಕೊಂಡು ತಿಳಿವಳಿಕೆ ಮೂಡಿಸಬೇಕಿತ್ತು. ಮುಂದಿನ ಗುರಿ, ಉದ್ದೇಶಗಳ ಕುರಿತು ಅರಿವು ಹೇಳಬೇಕಿತ್ತು. ಮಕ್ಕಳ ಸಮಯಪ್ರಜ್ಞೆ, ಪ್ರಶ್ನಿಸುವ ಮನೋಭಾವದ ಕುರಿತು ಗಮನಸೆಳೆಯಬೇಕಿತ್ತು. ಮಕ್ಕಳ ಮನಸ್ಸಿನಲ್ಲಿ ಸುಂದರ ಕನಸು ಬಿತ್ತಬೇಕಿತ್ತು. ಇದ್ಯಾವುದನ್ನು ಮಾಡದ ಪ್ರಧಾನಿ ಮಕ್ಕಳ ಮನದೊಳಗೆ ದ್ವೇಷದ ಕಿಡಿ ಹೊತ್ತಿಸಿಹೋದರು. ಮುಂದೆ ಇದೇ ಕಿಡಿಗಳು ತನ್ನನ್ನೇ ಆಹುತಿ ತೆಗೆದುಕೊಳ್ಳಬಹುದು ಎಂಬುದನ್ನು ಮರೆತರು.

ಮೋದಿಯವರು 370 ಕಲಂ ರದ್ದುಮಾಡಿ ಜಮ್ಮು-ಕಾಶ್ಮೀರದ ವಿಶೇಷ ಮಾನ್ಯತೆ ತೆಗೆದುಹಾಕಿದ್ದು, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸೆಯ ಕುರಿತು ಹೇಳಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಮಠದ ನೂರಾರು ವರ್ಷಗಳ ಇತಿಹಾಸದಲ್ಲಿ ಬಂದುಹೋದ ಯಾವುದೇ ರಾಜಕೀಯ ಪಕ್ಷಗಳ ನಾಯಕರು ಕೂಡ ಇಂತಹ ಕೊಳಕು ಭಾಷಣ ಮಾಡಿರಲಿಲ್ಲ ಎಂಬುದು ಹಿರಿಯರು ಅನುಭವದ ಮಾತು.

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಭೇಟಿ ಯಾವುದೇ ಫಲವನ್ನು ಕೊಡಲು ವಿಫಲವಾಗಿದೆ. ಪ್ರಧಾನಿ ಬಂದುಹೋಗಿದ್ದಕ್ಕೆ ಖರ್ಚಾಯಿತೇ ವಿನಃ ಜನರಿಗೇನೂ ಪ್ರಯೋಜನವಾಗಲಿಲ್ಲ. ರೈತ ಸಮಾವೇಶದಲ್ಲಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ನಾಲ್ಕನೇ ಕಂತಿನ ಹಣವನ್ನು ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಿದ್ದು ಬಿಟ್ಟರೆ ಹೇಳಿಕೊಳ್ಳುವಂತಹ ಯೋಜನೆಗಳನ್ನು ಪ್ರಕಟಿಸುವ ಗೋಜಿಗೇ ಹೋಗಲಿಲ್ಲ. ತುಮಕೂರು ಫುಡ್‍ಪಾರ್ಕ್, ಎಚ್.ಎ.ಎಲ್ ಅಭಿವೃದ್ಧಿ, ಡಾ.ಶಿವಕುಮಾರ ಸ್ವಾಮಿಗಳಿಗೆ ಭಾರತರತ್ನ ಪ್ರಕಟಿಸುವ ಪ್ರಸ್ತಾಪ ಮಾಡಬಹುದೆಂಬ ಜನರ ನಿರೀಕ್ಷೆಗೆ ಹುಸಿಯಾಗಿದೆ. ಚುನಾವಣೆ ಸಮಯದಲ್ಲಿ ತುಮಕೂರು ಜಿಲ್ಲೆಗೆ ನೀಡಿದ್ದ ಭರವಸೆಗಳ ಬಗ್ಗೆಯೂ ಚಕಾರ ಎತ್ತಲಿಲ್ಲ. ತೆಂಗು, ಅಡಿಕೆ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ, ತೆಂಗು ಪಾರ್ಕ್ ನಿರ್ಮಾಣದ ಬಗ್ಗೆ ಮೋದಿ ಮೌನ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ತುಮಕೂರು ಹಲವು ಹಬ್‍ಗಳನ್ನು ಹೊಂದಿದೆ. ಕಾರಿಡಾರ್‍ಗಳು ಇವೆ. ಕೈಗಾರಿಕೆಗಳು ಸಾಕಷ್ಟಿವೆ. ಇವುಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳೇನು ಎಂಬುದನ್ನು ಭಾಷಣದಲ್ಲಿ ಪ್ರಸ್ತಾಪಿಸಲಿಲ್ಲ. ತುಮಕೂರು ನಗರವನ್ನು ಸ್ಮಾರ್ಟ್‍ಸಿಟಿಯಡಿ ಆಯ್ಕೆ ಮಾಡಿದೆಯಾದರೂ, ಅದು ಅಭಿವೃದ್ದಿಯಾಗಿಲ್ಲ. ಇನ್ನು ದೇಶದಲ್ಲಿರುವ ಸ್ಮಾರ್ಟ್ ಸಿಟಿಗಳು ಯಾವ ಹಂತದಲ್ಲಿವೆ? ಎಷ್ಟು ಹಣ ಬಿಡುಗಡೆ ಮಾಡಿದೆ ಎಂಬ ಬಗ್ಗೆ ಚಕಾರವೆತ್ತಲಿಲ್ಲ. ಪ್ರವಾಹ ಪರಿಹಾರ, ರೈತರ ಆತ್ಮಹತ್ಯೆ, 2020ಕ್ಕೆ ರೈತರ ಆದಾಯ ಡಬಲ್, ಜಿಎಸ್‍ಟಿ ರಾಜ್ಯದ ಪಾಲಿನ ಹಣ ಬಿಡುಗಡೆ – ಹೀಗೆ ಯಾವುದೇ ವಿಷಯ ಮಾತನಾಡುವ ಗೊಡವೆಗೆ ಹೋಗಲಿಲ್ಲ ಪ್ರಧಾನಿ.

ಕರ್ನಾಟಕ ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಮೂರು ತಿಂಗಳಿಗೊಮ್ಮೆ ಸರ್ಕಾರಿ ನೌಕರರ ವೇತನ ಪಾವತಿಸುವುದು ಇದನ್ನು ಪುಷ್ಟೀಕರಿಸುತ್ತದೆ. ಹೀಗಾಗಿಯೇ ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪನವರು ರೈತರ ಸಮಾವೇಶದ ಬಹಿರಂಗ ಸಭೆಯಲ್ಲೇ ನೇರವಾಗಿ ಕೇಳಿದರು. ರಾಜ್ಯ ಹಿಂದೆಂದೂ ಕಂಡರಿಯದ ಪ್ರವಾಹದಿಂದ ತತ್ತರಿಸಿದೆ. ನೂರಾರು ಗ್ರಾಮಗಳು ಮುಳುಗಡೆಯಾಗಿವೆ. ಮೂರು ಲಕ್ಷ ಮನೆಗಳು ಕುಸಿದುಬಿದ್ದಿವೆ. ಸಂತ್ರಸ್ತರು ಮನೆಗಳಿಲ್ಲದೆ ತೊಂದರೆಗೊಳಗಾಗಿದ್ದಾರೆ. ರಸ್ತೆಗಳು, ಸೇತುವೆಗಳು ನಾಶವಾಗಿವೆ. ಇದರಿಂದ 30 ಸಾವಿರ ಕೋಟಿ ನಷ್ಟವಾಗಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಧಾನಿಗೆ ನಾಲ್ಕು ಬಾರಿ ಮನವಿ ಮಾಡಿದರೂ ಕೇವಲ 1200 ಕೋಟಿ ಬಿಡುಗಡೆ ಮಾಡಿದ್ದು ಬಿಟ್ಟರೆ ಉಳಿದ ಹಣ ಬಂದಿಲ್ಲ ಎಂದು ಗೋಗರೆದರು. ಮುಖ್ಯಮಂತ್ರಿಗಳು ಮನವಿಪೂರ್ವಕ ಒತ್ತಾಯ ಮಾಡಿದರೂ ಪ್ರಧಾನಿ ಪರಿಹಾರದ ಹಣ ಬಿಡುಗಡೆ ಮಾಡುವ ಕುರಿತು ತುಟಿಬಿಚ್ಚಲಿಲ್ಲ.

ಒಂದು ರಾಜ್ಯದ ಮುಖ್ಯಮಂತ್ರಿ, ಅದೂ ತನ್ನದೇ ಪಕ್ಷದ ಮುಖ್ಯಮಂತ್ರಿಯೊಬ್ಬರು ಮನವಿ ಮಾಡಿದರೂ ಪ್ರಧಾನಿ ಹಣ ಬಿಡುಗಡೆಗೆ ಮೌನ ವಹಿಸಿದರು. ಕರ್ನಾಟಕದ ಮುಖ್ಯಮಂತ್ರಿ ಮತ್ತು ರಾಜ್ಯದ ಜನತೆಗೆ ಪ್ರಧಾನಿ ಅವಮಾನ ಮಾಡಿದರು. ಪ್ರಧಾನಿಯ ನಡವಳಿಕೆಗೆ ವಿರೋಧ ಪಕ್ಷಗಳು ಕಿಡಿಕಾರಿದವು. ಪ್ರಧಾನಿ ಬಂದ ಪುಟ್ಟ, ಹೋದ ಪುಟ್ಟ ಅನ್ನುವಂತೆ ಮಾಡಿದರು. ಪ್ರಧಾನಿಯ ಕರ್ನಾಟಕ ಭೇಟಿಯ ಉದ್ದೇಶ ಕೇವಲ ರೈತರ ಖಾತೆಗಳಿಗೆ 2000 ರೂಪಾಯಿ ಭಿಕ್ಷೆ ಹಾಕುವುದು ಬಿಟ್ಟರೆ ಬೇರೇನೂ ಆಗಿರಲಿಲ್ಲ.

ರೈತರ ಸಮಾವೇಶದಲ್ಲಿ ದಕ್ಷಿಣ ಭಾರತದ ಪ್ರಮುಖ ಬೆಳೆಗಳನ್ನು ಪ್ರಸ್ತಾಪಿಸಿದರು. ಸಮಾವೇಶದಲ್ಲಿ ಸೇರಿದ್ದ ರೈತರಿಗೆ ಅದರ ಅವಶ್ಯಕತೆ ಇರಲಿಲ್ಲ. ದಕ್ಷಿಣದ ರಾಜ್ಯಗಳಿಂದಲೇ ನವಭಾರತದ ಕನಸು ಸಾಕಾರಗೊಳ್ಳಲು ಸಾಧ್ಯ. ದಕ್ಷಿಣ ಭಾರತ ಹೊಸ ಸಂಶೋಧನೆಗೆ ಶಕ್ತಿ ತುಂಬಲಿವೆ ಎಂಬ ಮಾತುಗಳನ್ನಾಡಿದರು. ನವಭಾರತದಲ್ಲಿ ದಕ್ಷಿಣ ರಾಜ್ಯಗಳನ್ನು ಕೇಂದ್ರ ಸರ್ಕಾರ ಯಾವ ರೀತಿ ನಡೆಸಿಕೊಳ್ಳುತ್ತಿದೆ ಎಂಬುದನ್ನು ನಾವೆಲ್ಲರೂ ನೋಡುತ್ತಿದ್ದೇವೆ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...