Homeಮುಖಪುಟಮಹಾರಾಷ್ಟ್ರ-ಹರ್ಯಾಣ ಫಲಿತಾಂಶ ಅವಮಾನಕರ ಗೆಲುವು ಸಮಾಧಾನಕರ ಸೋಲು

ಮಹಾರಾಷ್ಟ್ರ-ಹರ್ಯಾಣ ಫಲಿತಾಂಶ ಅವಮಾನಕರ ಗೆಲುವು ಸಮಾಧಾನಕರ ಸೋಲು

- Advertisement -
- Advertisement -

| ಎ. ನಾರಾಯಣ |

ಗೆಲುವಿನಲ್ಲೂ ಸೋಲುವುದು ಎಂದರೆ ಹೀಗೆ. ಸೋಲಿನಲ್ಲೂ ಸಂಭ್ರಮಿಸಲು ಸಾಧ್ಯವಾಗುವುದು ಎಂದರೆ ಅದು ಹೀಗೆ. ಹೋದವಾರ ಮಹಾರಾಷ್ಟ್ರ ಮತ್ತು ಹರ್ಯಾಣ ರಾಜ್ಯ ವಿಧಾನಸಭಾ ಚುನಾವಣೆಗಳ ಫಲಿತಾಂಶ ಕಂಡ ಯಾರಿಗಾದರೂ ಹೀಗನಿಸದೆ ಇರದು. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನಾ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದು ಮತ್ತೊಮ್ಮೆ ಅಧಿಕಾರಕ್ಕೇರುವುದರಲ್ಲಿದೆ. ಹರ್ಯಾಣದಲ್ಲಿ ಬಿಜೆಪಿ ಬಹುಮತ ಪಡೆಯದಿದ್ದರೂ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಕಾರಣ ಚುನಾವಣೋತ್ತರ ಮೈತ್ರಿಕೂಟ ರಚಿಸಿಕೊಂಡು ಅಲ್ಲೂ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೂ ಬಿಜೆಪಿಗೆ ಇದು ಅವಮಾನಕರ ಗೆಲುವು. ಆ ಪಕ್ಷದ ಅಹಂಕಾರಕ್ಕೆ ಚುನಾವಣಾ ಫಲಿತಾಂಶ ಬಹುದೊಡ್ಡ ಮರ್ಮಾಘಾತ ನೀಡಿದೆ. ಹೀಗಂತ ಹೇಳಿದ್ದು ಬೇರೆ ಯಾರೂ ಅಲ್ಲ. ಸ್ವತಃ ಬಿಜೆಪಿಯ ಮಿತ್ರಪಕ್ಷವಾದ ಶಿವಸೇನೆ ಈ ರೀತಿ ತನ್ನ ಮುಖವಾಣಿ “ಸಾಮ್ನಾ” ದಲ್ಲಿ ಬರೆದಿದೆ.

ಯಾಕೆ ಬಿಜೆಪಿಗೆ ಇದು ಅವಮಾನಕರ ಗೆಲುವು ಅಂತ ತಿಳಿದುಕೊಳ್ಳಬೇಕಾದರೆ ಚುನಾವಣಾಪೂರ್ವದಲ್ಲಿ ಈ ಎರಡು ರಾಜ್ಯಗಳ ಸೋಲು-ಗೆಲುವಿನ ಲೆಕ್ಕಾಚಾರ ನಡೆಯುತಿದ್ದ ರೀತಿಯನ್ನೊಮ್ಮೆ ನೆನಪಿಸಿಕೊಳ್ಳಬೇಕು. ಹೇಳಿ ಕೇಳಿ ಇದು ಕೇಂದ್ರದ ಬಿಜೆಪಿ ಸರಕಾರ ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ನಡೆದ ಮೊದಲ ಚುನಾವಣೆ. ಹೀಗಾಗಿ ತನ್ನ ರಾಷ್ಟ್ರಪ್ರೇಮವನ್ನು ಜನರ ಮುಂದಿಡಲು ಬಿಜೆಪಿಯ ಬಳಿ ಹೊಸದೊಂದು ಅಸ್ತ್ರವಿತ್ತು. ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಇನ್ನೊಂದು ರೀತಿಯ ರಾಷ್ಟ್ರೀಯತೆಯ ಅಸ್ತ್ರ ಹಿಡಿದುಕೊಂಡು ಸಾಧಿಸಿದ ಅಭೂತಪೂರ್ವ ವಿಜಯದ ಗುಂಗು ಆ ಪಕ್ಷದ ತಲೆಯೆಲ್ಲಾ ತುಂಬಿತ್ತು. ಅದು ತಾನು ಮಹಾರಾಷ್ಟ್ರದಲ್ಲಿ ಸುಮಾರು 200 ಸ್ಥಾನಗಳನ್ನು (ಒಟ್ಟು 288) ಮತ್ತು ಹರ್ಯಾಣದಲ್ಲಿ ಸುಮಾರು 70 ಸ್ಥಾನಗಳನ್ನು (ಒಟ್ಟು 90) ಗೆಲ್ಲುವುದು ಶತಸಿದ್ಧ ಎಂದು ಹೋದಲ್ಲಿಬಂದಲ್ಲಿ ಸಾರುತಿತ್ತು. ವಿರೋಧ ಪಕ್ಷಗಳು ಲೆಕ್ಕಕ್ಕಿಲ್ಲ ಅಂತ ಅಣಕಿಸುತಿತ್ತು. ಅದರ ತಾಳಕ್ಕೆ ತಕ್ಕಂತೆ ಕುಣಿಯುವ ಮಾಧ್ಯಮಗಳಂತೂ ಈ ಚುನಾವಣೆಯ ಅಗತ್ಯವೇ ಇಲ್ಲವೆಂತಲೂ, ಬಿಜೆಪಿಗೆ ಎರಡೂ ರಾಜ್ಯಗಳಲ್ಲೂ ಸವಾಲೇ ಇಲ್ಲ ಅಂತಲೂ ನಿರಂತರ ವರದಿ ಮಾಡಿದವು. ಕೊನೆಗೆ ಮತಗಟ್ಟೆ ಸಮೀಕ್ಷೆಗಳು (ಒಂದೆರಡು ಸಮೀಕ್ಷೆಗಳನ್ನು ಬಿಟ್ಟರೆ) ಬಿಜೆಪಿಯ ಸ್ಥಾನಗಳ ಲೆಕ್ಕಾಚಾರವನ್ನು ಯಥಾವತ್ತಾಗಿ ನಕಲು ಮಾಡಿ ಜನರ ಮುಂದಿರಿಸಿದವು. ಫಲಿತಾಂಶ ಬಂದಾಗ ಎಲ್ಲರಿಗೂ ದಿಗಿಲು. ಮಹಾರಾಷ್ಟ್ರದಲ್ಲಿ ಪ್ರಯಾಸದ ಜಯ. ಹರ್ಯಾಣದಲ್ಲಿ ಸರಳ ಬಹುಮತವೂ ಇಲ್ಲ! ಈಗ ಮಹಾರಾಷ್ಟ್ರದಲ್ಲಿ ಶಿವಸೇನೆ ಬಿಜೆಪಿಯನ್ನು ತನ್ನ ತಾಳಕ್ಕೆ ತಕ್ಕ ಹಾಗೆ ಕುಣಿಸಲು ಮುಂದಾಗಿದೆ. ಹರ್ಯಾಣದಲ್ಲಿ ಜನನಾಯಕ ಜನತಾ ಪಕ್ಷ ಎಂಬ ಹೊಸ ಪಕ್ಷದ ಜತೆ ಹೆಣಗಾಡಿಕೊಂಡು ಸರಕಾರ ರಚಿಸಿಕೊಂಡಿದೆ.

ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾಂಗ್ರೆಸ್ ಪಕ್ಷ (ಎನ್.ಸಿ.ಪಿ) ಸೋಲಿನಲ್ಲೂ ಸಾವರಿಸಿಕೊಂಡು ಮುಗುಳ್ನಗುತ್ತಿರುವುದು ಇದೇ ಕಾರಣಕ್ಕೆ. ಈ ಎರಡೂ ಪಕ್ಷಗಳೂ ಬಿಜೆಪಿಯಿಂದ ಅಧಿಕಾರ ಕಸಿದುಕೊಳ್ಳುವಷ್ಟರಮಟ್ಟಿಗೆ ಸಾಧನೆ ತೋರದೇ ಹೋಗಿದ್ದರೂ ತಾವಿನ್ನು ಅಸ್ತಿತ್ವದಲ್ಲಿದ್ದೇವೆ ಮಾತ್ರವಲ್ಲ, ಬಿಜೆಪಿಯ ನಿದ್ದೆ ಕೆಡಿಸುವಷ್ಟರಮಟ್ಟಿಗೆ ಇನ್ನೂ ಜನಬೆಂಬಲವನ್ನೂ ಉಳಿಸಿಕೊಂಡಿದ್ದೇವೆ ಎಂಬ ಸಂದೇಶವನ್ನು ಎರಡೂ ಪಕ್ಷಗಳು ಸ್ಪಷ್ಟವಾಗಿ ರವಾನಿಸಿವೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಇನ್ನಿಲ್ಲದ ಸವಾಲುಗಳ ನಡುವೆ ಚುನಾವಣೆ ಎದುರಿಸಿತ್ತು. ಇನ್ನೇನು ಚುನಾವಣೆಗೆ ವರ್ಷ ಇದೆ ಎನ್ನುವಾಗಲೇ ಬಿಜೆಪಿ ಕಾಂಗ್ರೆಸ್ ಪಾಳಯದ ನಾಯಕರನ್ನು ಒಬ್ಬೊಬ್ಬರಾಗಿ ಖರೀದಿಸಲು ತೊಡಗಿತ್ತು. ಚುನಾವಣಾ ಘೋಷಣೆಯಾಗುವ ವೇಳೆಗೆ ಸ್ವತಃ ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲರನ್ನೂ ಬಿಜೆಪಿ ಎಗ್ಗಿಲ್ಲದೆ ಖರೀದಿಸಿ ತನ್ನ ಬಳಿ ಇರಿಸಿಕೊಂಡಿತ್ತು. ಅವರಲ್ಲಿ ಕೆಲವರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿತು ಕೂಡ. ಕಾಂಗ್ರೆಸ್ ಪಾಳಯದಲ್ಲಿ ಉತ್ಸಾಹವೇ ಉಡುಗಿಹೋಗಿತ್ತು. ಸಾಲದು ಎಂಬುದಕ್ಕೆ ಮಾಧ್ಯಮಗಳು ಈ ಬಾರಿ ಮಹಾರಾಷ್ಟ್ರದಲ್ಲಿ ಸ್ಪರ್ಧೆಯೇ ಇಲ್ಲ, ಇದೊಂದು ಏಕಮುಖ ಚುನಾವಣೆ ಎಂಬಂತೆ ಮೇಲಿಂದ ಮೇಲೆ ಬರೆದ ಕಾರಣ ಸಾಮಾನ್ಯ ಕಾರ್ಯಕರ್ತರ ಜಂಘಾಬಲವೂ ಕುಸಿದಿತ್ತು. ಎನ್.ಸಿ.ಪಿ. ಕೂಡಾ ಇಂತಹದ್ದೇ ಸಮಸ್ಯೆಗಳನ್ನ ಎದುರಿಸಿತ್ತು. ಇದೇನಿದ್ದರೂ ಮುಳುಗುತ್ತಿರುವ ಹಡಗು ಅಂತ ಆ ಪಕ್ಷದಿಂದಲೂ ಆಯಕಟ್ಟಿನ ನಾಯಕರನೇಕರು ಬಿಜೆಪಿಗೆ ತಮ್ಮನ್ನು ಮಾರಿಕೊಂಡಿದ್ದರು. ಹರ್ಯಾಣದಲ್ಲೂ ಹೆಚ್ಚು ಕಡಿಮೆ ಇಂತಹದ್ದೇ ಕತೆ. ಸಾಲದ್ದಕ್ಕೆ ಅಲ್ಲಿ ಕಾಂಗ್ರೆಸ್ ಕಡೆಯ ಕ್ಷಣದವರೆಗೂ ತೀವ್ರವಾದ ಆಂತರಿಕ ಕಚ್ಚಾಟವನ್ನೂ ಎದುರಿಸುತಿತ್ತು. ಇವೆಲ್ಲವನ್ನೂ ಮೀರಿ ನಿಂತು ಕಾಂಗ್ರೆಸ್ ಮತ್ತು ಎನ್.ಸಿ.ಪಿ. ಮಹಾರಾಷ್ಟ್ರದಲ್ಲಿ ಹೋದ ಚುನಾವಣೆಯಲ್ಲಿ ಗೆದ್ದದ್ದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾನಗಳನ್ನು ಗಳಿಸಿದವು. ಹರ್ಯಾಣದಲ್ಲಿ ಕಾಂಗ್ರೆಸ್ ತನ್ನ ಸಂಖ್ಯಾಬಲವನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿತು. ಅಸ್ತಿತ್ವದಲ್ಲೇ ಇಲ್ಲ ಅಂತ ಎಲ್ಲರೂ ಕಡೆಗಣಿಸಿದ ಎರಡು ವಿರೋಧ ಪಕ್ಷಗಳು ಈ ರೀತಿ ಪುಟಿದೆದ್ದು ನಿಂತದ್ದು ಈ ಕಾಲದ ದೊಡ್ಡ ರಾಜಕೀಯ ಬೆಳವಣಿಗೆ. ಮೋದಿ-ಶಾ ದ್ವಯರ ಏಕಚಕ್ರಾಧಿಪತ್ಯದ ಲೆಕ್ಕಾಚಾರಕ್ಕೆ ಇಷ್ಟರಮಟ್ಟಿಗಾದರೂ ಆದ ಹಿನ್ನಡೆ ದೇಶದಲ್ಲಿ ಹೊಸ ರಾಜಕೀಯ ಸಾಧ್ಯತೆಗಳ ಚರ್ಚೆಗೆ ವೇದಿಕೆ ಒದಗಿಸಿದೆ.

ಕಾಂಗ್ರೆಸ್ ಇಲ್ಲಿ ಗಮನಿಸಬೇಕಾದದ್ದು ಇಷ್ಟನ್ನೇ ಅಲ್ಲ. ಲೋಕಸಭಾ ಚುನಾವಣೆಯ ಸೋಲಿನ ಆಘಾತದಿಂದ ಇನ್ನೂ ಚೇತರಿಸಿಕೊಳ್ಳಲಾಗದೆ ಚಡಪಡಿಸುತ್ತಿರುವ ಕಾಂಗ್ರೆಸ್ ಗೆ ಈ ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ನೀಡಿದ ಇನ್ನೊಂದು ಸಂದೇಶ ಏನು ಎಂದರೆ ಅದು ಇನ್ನೂ ಕೇವಲ ನೆಹರೂ ಕುಟುಂಬದ ಕುಡಿಗಳನ್ನು ಮಾತ್ರ ನೆಚ್ಚಿಕೊಂಡು ರಾಜಕೀಯ ಮಾಡಲು ಸಾಧ್ಯವಿಲ್ಲ ಎನ್ನುವುದು. ನೆಹರೂ ಕುಟುಂಬದ ವ್ಯಕ್ತಿಯೊಬ್ಬ ಪಕ್ಷ ಮುನ್ನಡೆಸಲು ಅಗತ್ಯ ಇರಬಹುದು. ಆದರೆ ಹೊಸ ತಲೆಮಾರಿನ ಮತದಾರರನ್ನು ಸೆಳೆಯುವ ಶಕ್ತಿ ವಂಶದ ಕುಡಿಗಳಲ್ಲಿ ಉಳಿದಿಲ್ಲ. ಆ ಪಕ್ಷ ಪ್ರಬಲ ಪ್ರಾದೇಶಿಕ ನಾಯಕರನ್ನು ಬೆಳೆಸದೆ ಹೋದರೆ ಅದು ಸಂಪೂರ್ಣವಾಗಿ ಚೇತರಿಸಿಕೊಳ್ಳುವ ಸಾಧ್ಯತೆಗಳು ಕಾಣಿಸುತ್ತಿಲ್ಲ. ಹರ್ಯಾಣದಲ್ಲಿ ಕಾಂಗ್ರೆಸ್ಸಿಗೆ ಗೆಲುವು ತಂದುಕೊಟ್ಟಿದ್ದು ಬೂಪಿಂದರ್ ಸಿಂಗ್ ಹೂಡಾ ಎನ್ನುವ ಪ್ರಾದೇಶಿಕ ನಾಯಕ. ಮಹಾರಾಷ್ಟ್ರದಲ್ಲಿ ಅದು ಗೆದ್ದಷ್ಟು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದ್ದು ಸ್ಥಳೀಯ ನಾಯಕತ್ವದ ಕಾರಣಕ್ಕೆ. ಕಾಂಗ್ರೆಸ್ ಸ್ಥಳೀಯ ನಾಯಕರೆಲ್ಲಾ ಅವರವರ ಕ್ಷೇತ್ರಗಳಿಗೆ ಸೀಮಿತವಾಗಿ ಉಳಿದಿದ್ದರೆ, ಕಾಂಗ್ರೆಸ್-ಎನ್.ಸಿ.ಪಿ. ಮೈತ್ರಿಕೂಟವನ್ನು ಜನರತ್ತ ಒಯ್ದದ್ದು ಶರದ್ ಪವಾರ್ ಎಂಬ ಏಕಾಕಿ ನಾಯಕ. ಇಳಿವಯಸ್ಸಲ್ಲೂ ಈ ಚುನಾವಣೆಯನ್ನೊಂದು ಸವಾಲಾಗಿ ತೆಗೆದುಕೊಂಡು ಕಾಲಿಗೆ ಚಕ್ರಕಟ್ಟಿಕೊಂಡಂತೆ ಇಡೀ ರಾಜ್ಯ ತಿರುಗಿ ಪವಾರ್ ಮೈತ್ರಿಕೂಟಕ್ಕೆ ಮತ್ತೆ ಜನ ಒಲಿಯುವಂತೆ ಮಾಡಿದರು. ಈ ಯಶಸ್ಸನ್ನು ಮುಂದಿನ ಹಂತಕ್ಕೆ ಒಯ್ಯಬೇಕಾದರೆ, ಕಾಂಗ್ರೆಸ್ಸಿಗೆ ಹೊಸ ಮುಖಗಳ ಅಗತ್ಯವಿದೆ. ಈ ಅಗತ್ಯವನ್ನು ಆ ಪಕ್ಷ ಗುರುತಿಸದೆ ಹೋದರೆ ಮತ್ತೆ ಅದಕ್ಕೆ ಸೋಲಿನಲ್ಲೇ ಸಮಾಧಾನ ಪಟ್ಟುಕೊಳ್ಳುವ ಸ್ಥಿತಿ ಶಾಶ್ವತವಾದೀತು.

ಇನ್ನೊಂದು ವಿಷಯ. ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ವಿಜಯವನ್ನು ದಾಖಲಿಸಿದ ನಂತರ ಬಿಜೆಪಿಯವರು ಈ ದೇಶದ ರಾಜಕೀಯದಲ್ಲಿ ಇನ್ನು ಜಾತಿ-ಆಧಾರಿತ ಮತಗಳಿಕೆಗೆ ಅವಕಾಶವಿಲ್ಲವೆಂದೂ, ಇನ್ನು ಏನಿದ್ದರೂ ‘ಅಭಿವೃದ್ಧಿ’ ಮತ್ತು ರಾಷ್ಟ್ರೀಯತೆಯ ಹೆಸರಿನಲ್ಲೇ ಚುನಾವಣೆ ನಡೆಯುವುದು ಎಂಬ ವಾದವೊಂದನ್ನು ಮುಂಚೂಣಿಗೆ ತಂದರು. ಹಾಗೆಯೇ ವಿವಿಧ ರಾಜ್ಯಗಳಲ್ಲಿ ನಿರ್ಣಾಯಕವಾಗಿರುವ ಪ್ರಬಲ ಜಾತಿಗಳ ಪ್ರಭಾವದಿಂದ ಆಯಾ ರಾಜ್ಯಗಳ ರಾಜಕೀಯವನ್ನು ಹೊರತಂದು ಅಲ್ಲೆಲ್ಲಾ ಧರ್ಮಾಧಾರಿತವಾದ ಹೊಸ ರಾಜಕೀಯವೊಂದನ್ನು ಕಟ್ಟುವ ಇರಾದೆಯೂ ಬಿಜೆಪಿಯದ್ದಾಗಿತ್ತು. ಜಾತಿ ರಾಜಕೀಯ ಕೊನೆಯಾಗಬೇಕು ಎನ್ನುವುದು ಸರಿಯಾದ ವಾದವೇ ಆಗಿದ್ದರೂ, ಅದಕ್ಕೆ ಬಿಜೆಪಿಯ ಧರ್ಮ-ಆಧಾರಿತ ರಾಜಕೀಯ ಉತ್ತರವಾಗಬಾರದು. ಹಾಗೆ ನೋಡಿದರೆ ಪ್ರಬಲ ಜಾತಿಗಳನ್ನು ಮಣಿಸಲು ಬಿಜೆಪಿ ಕೂಡಾ ಸಣ್ಣಸಣ್ಣ ಜಾತಿಗಳನ್ನು ಒಗ್ಗೂಡಿಸುವ ಜಾತಿ ರಾಜಕೀಯವನ್ನೇ ನೆಚ್ಚಿಕೊಂಡದ್ದು ಎನ್ನುವುದು ಕೂಡಾ ಸತ್ಯ. ಅದೇನೇ ಇರಲಿ, ಮಹಾರಾಷ್ಟ್ರ ಮತ್ತು ಹರ್ಯಾಣದ ಚುನಾವಣಾ ಫಲಿತಾಂಶಗಳನ್ನು ನೋಡಿದರೆ ಜಾತಿಯ ಪ್ರಭಾವ ಕುಗ್ಗುವುದು ಬಿಡಿ, ನಗರ ಮಧ್ಯಮ ವರ್ಗಗಳ ಆಚೆಗೆ ಜಾತಿ-ಆಧಾರಿತ ರಾಜಕೀಯ ಸಣ್ಣಗೆ ಅಲುಗಾಡಿದ ಹಾಗೆಯೂ ಕಾಣಿಸುತ್ತಿಲ್ಲ. ಮಹಾರಾಷ್ಟ್ರದಲ್ಲಿ ಮರಾಠರು ಶರದ್ ಪವಾರರ ಕೈಹಿಡಿದದ್ದು, ಅದೇರೀತಿ ಮರಾಠರಿಗೆ ಮೀಸಲಾತಿ ನೀಡಿದ ಕಾರಣಕ್ಕೆ ದಲಿತ ಮತ್ತು ಹಿಂದುಳಿದ ಮತಗಳು ಬಿಜೆಪಿಯಿಂದ ದೂರ ಸರಿದದ್ದು ಕಂಡುಬರುತ್ತದೆ. ಹರ್ಯಾಣದಲ್ಲಿ ಕಾಂಗ್ರೆಸ್ ಜಾಟರ ಸಮುದಾಯದ ಭೂಪಿಂದರ್ ಸಿಂಗ್ ಮತ್ತು ದಲಿತ ಸಮುದಾಯದ ಕುಮಾರಿ ಶೆಲ್ಜಾ ಅವರನ್ನು ಮುಂಚೂಣಿಗೆ ತಂದ ಕಾರಣಕ್ಕೆ ಆ ಪಕ್ಷಕ್ಕೆ ಜಾಟ- ದಲಿತರ ಮತಗಳು ಒಲಿದಂತೆಯೂ ಕಂಡುಬರುತ್ತದೆ. ಒಟ್ಟಿನಲ್ಲಿ, ಭಾರತದ ಚುನಾವಣೆಗಳ ಒಳಸುಳಿಗಳನ್ನು ಸುಲಭ ಲೆಕ್ಕಾಚಾರದಲ್ಲಿ ಅರ್ಥಮಾಡಿಕೊಳ್ಳುವ ಹಾಗಿಲ್ಲ ಎನ್ನುವುದಕ್ಕೆ ಇನ್ನೊಂದು ಸಾಕ್ಷಿಯಾಗಿ ಎರಡು ರಾಜ್ಯಗಳ ಚುನಾವಣಾ ಫಲಿತಾಂಶಗಳು ನಮ್ಮ ಮುಂದಿವೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...