Homeಅಂಕಣಗಳುಮೋದಿ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ನಾಶಮಾಡುತ್ತಿರುವುದು ಅಕ್ಷಮ್ಯ...

ಮೋದಿ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ನಾಶಮಾಡುತ್ತಿರುವುದು ಅಕ್ಷಮ್ಯ…

- Advertisement -
- Advertisement -

ಖಾಸಗೀಕರಣಕ್ಕೆ ಹಾತೊರೆಯುತ್ತಿರುವ ಸರ್ಕಾರ ನಮ್ಮ ಸಾರ್ವಜನಿಕ ಉದ್ಯಮಗಳು ನಷ್ಟಕ್ಕೆ ಏಕೆ ಒಳಗಾದವು? ಅವುಗಳನ್ನು ಲಾಭದಾಯಕ ಮಾಡುವುದು ಹೇಗೆ ಎಂಬುದರ ಕುರಿತು ಗಂಭೀರವಾಗಿ ವಿಚಾರ ಮಾಡದೇ ಅವುಗಳನ್ನು ಮುಚ್ಚಿಸಿ, ಖಾಸಗಿಯವರಿಗೆ ದೋಚಲು ಅವಕಾಶ ಮಾಡಿಕೊಡಲು ಹೊರಟಿರುವುದು ದೇಶದ ದೌರ್ಭಾಗ್ಯವೇ ಸರಿ.

ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಮಾರಾಟ ಮಾಡುವುದು ಮೋದಿ ಸರ್ಕಾರದ ಧೋರಣೆಯಾಗಿದೆ. ಕೆಲವು ಸಾರ್ವಜನಿಕ ವಲಯದ ಉದ್ದಿಮೆಗಳು ಅನೇಕ ವರ್ಷದಿಂದ ನಷ್ಟದಲ್ಲಿ ನಡೆಯುತ್ತಿವೆ. ಅವುಗಳನ್ನು ಮುಚ್ಚಲು ಅಭ್ಯಂತರವಿಲ್ಲ. ಆದರೆ ಕೆಲವು ಲಾಭದಾಯಕವಾದ ಸಂಸ್ಥೆಗಳನ್ನು ಅವುಗಳನ್ನು ನಿರ್ವಹಿಸುತ್ತಿದ್ದ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ನಷ್ಟದಲ್ಲಿ ನಡೆಯುವಂತೆ ಮಾಡಿ ಕಬಳಿಸಿದ್ದೂ ಉಂಟು.

ಭಾರತದ ಆಭರಣಗಳೆಂದು ಕರೆಯಲ್ಪಡುತ್ತಿದ್ದ ಸಾರ್ವಜನಿಕವಲಯದ ಉದ್ದಿಮೆಗಳನ್ನು ಜವಹಾರ್‍ಲಾಲ್ ನೆಹರು ಅವರು ಆರಂಭಿಸಿದ್ದರು. ಆ ಹೆಮ್ಮೆಯ ದಿನಗಳು ಆಗಿಹೋಯಿತು. ಈಗ ಅವುಗಳನ್ನೆಲ್ಲ ನಷ್ಟದಲ್ಲಿ ನಡೆಯುತ್ತಿದೆಯೆಂದು ಹೆಸರಿಸಿ ಅವುಗಳನ್ನು ತಮಗೆ ಬೇಕಾದ ಉದ್ದಿಮೆದಾರರಿಗೆ ಮಾರಾಟ ಮಾಡುವ ಹುನ್ನಾರ ನಡದಿದೆ. ಉದಾಹರಣೆಗೆ BEML, BEL ಮುಂತಾದ ಲಾಭದಾಯಕ ಉದ್ಯಮಗಳನ್ನು ಮಾರಾಟ ಮಾಡುವ ವಿಚಾರ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.

ಸ್ವಾತಂತ್ರ್ಯ ಬಂದ ಮೊದಲ ಕೆಲವು ವರ್ಷಗಳ ಕಾಲ ಖಾಸಗಿ ಉದ್ದಿಮೆದಾರರು ಲಕ್ಷಾಂತರ ಹಣ ಹೂಡಿ ಉದ್ಯಮಗಳನ್ನು ಆರಂಭಿಸಲು ಬಂಡವಾಳ ಹಾಕಲು ಹಿಂದೇಟು ಹಾಕುತ್ತಿದ್ದರು. ಅಂತಹ ಸಂದರ್ಭದಲ್ಲಿ ಸರ್ಕಾರಿ ಸ್ವಾಮ್ಯದ ಉದ್ಯಮಗಳಿಗೆ ನೆಹರು ಅವರು ಉತ್ತೇಜನ ಕೊಟ್ಟರು. ಅವೆಲ್ಲ ಲಾಭದಾಯಕ ಸಂಸ್ಥೆಗಳಾಗಿ ಮುಂದುವರೆದವು. ಅದರಿಂದ ದೇಶದ ಆರ್ಥಿಕತೆ ದೌಡಾಯಿಸಿತು. ಆರ್ಥಿಕ ಪ್ರಗತಿ ಆಯಿತು.

ನೆಹರು ಅವರು ಈ ಸರ್ಕಾರಿ ಉದ್ಯಮಗಳನ್ನು ಆರಂಭಿಸಲು ಮತ್ತೊಂದು ಪ್ರಬಲ ಉದ್ದೇಶವಿತ್ತು. ಅದೇನೆಂದರೆ ಜನತೆಗೆ ಉದ್ಯೋಗ ಒದಗಿಸುವುದು. ಉದ್ಯಮೀಕರಣ ದಾಪುಗಾಲಿಟ್ಟಿತಾದರೂ ಜನತೆಗೆ ಉದ್ಯೋಗ ಒದಗಿಸುವ ಗುರಿ ತಲುಪಲಾಗಲಿಲ್ಲ. ನಿರ್ವಹಣೆಯ ಅನಾದರದಿಂದ ಹಾಗೂ ಕಾರ್ಮಿಕ ಸಂಘಟನೆಗಳ ಕಾಟದಿಂದ ಉದ್ಯಮಗಳು ಸೊರಗಲು ಆರಂಭವಾದವು.

ಕೇಂದ್ರದಿಂದ ಆರಂಭವಾದ ಸಾರ್ವಜನಿಕ ವಲಯದ ಉದ್ಯಮಗಳು ಲಾಭದಾಯಕವಾಗಿಯೇ ನಡೆದವಾದರೂ, ರಾಜ್ಯಗಳು ಆರಂಭಿಸಿದ ಸಾರ್ವಜನಿಕ ವಲಯದ ಉದ್ಯಮಗಳು ಕಾಲಕ್ರಮೇಣ ನೆಲಕಚ್ಚಿದವು. ಅವುಗಳಿಗೆ ಆಕ್ಸಿಜನ್ ಕೊಟ್ಟು ಜೀವಂತವಾಗಿಡಲು ವರ್ಷ ವರ್ಷ ಲಕ್ಷಾಂತರ ರೂಗಳನ್ನು ಕೇಂದ್ರ ಸರ್ಕಾರ ಒದಗಿಸಬೇಕಾಯಿತು.

1991ರಲ್ಲಿ ಉದಾರೀಕರಣ ಖಾಸಗೀಕರಣದತ್ತ ಸರ್ಕಾರ ವಾಲಿತು. ಈ ರಾಷ್ಟ್ರೀಕೃತ ಉದ್ಯಮಗಳಿಗಿಂತ ಉತ್ತಮವಾಗಿ ಖಾಸಗಿ ಉದ್ಯಮಗಳು ನಡೆಯುತ್ತಿದ್ದುದರಿಂದ ಸರ್ಕಾರಿ ಉದ್ಯಮಗಳನ್ನು ಸರ್ಕಾರ ಸ್ಥಗಿತ ಗೊಳಿಸಿದವು. ಅವುಗಳ ಷೇರುಗಳನ್ನು ಮಾರಲು ಆರಂಭವಾಯಿತು. ಸರ್ಕಾರ ಕೆಲವು ಕಂಪನಿಗಳ ಷೇರುಗಳನ್ನು ಸಂಪೂರ್ಣವಾಗಿ ಇನ್ನು ಕೆಲವು ಕಂಪನಿಗಳ ಷೇರುಗಳನ್ನು ಭಾಗಶಃ ಮಾರಾಟ ಮಾಡಿದವು ಈ ನಿಲುವಿಗೆ ಸರ್ಕಾರ ತನ್ನ ಸಮರ್ಥನೆ ನೀಡಿತು.

ಪ್ರವಾಸೋದ್ಯಮ, ಹೊಟೇಲ್ ನಡೆಸುವುದು ದಿನಬಳಕೆಯ ವಸ್ತುಗಳ ಉತ್ಪಾದನೆ, ಸಾರಿಗೆವಾಹನಗಳ ಉತ್ಪಾದನೆಗಳನ್ನು ಖಾಸಗಿ ಉದ್ಯಮಿಗಳು ಯಶಸ್ವಿಯಾಗಿ ನಡೆಸುವರಾಗಿದ್ದರಿಂದ ಸರ್ಕಾರ ಈ ಉದ್ಯಮಗಳಿಗೆ ಕೈಹಾಕಬಾರದು. ಸಾರ್ವಜನಿಕ ಉದ್ಯಮಗಳ ಆರೋಗ್ಯಕ್ಕೆ ಸಂಬಂಧಪಟ್ಟ ವಿದ್ಯಮಾನಗಳನ್ನು ಬಲಪಡಿಸುವುದು ಸರ್ಕಾರದ ನಿಲುವಾಯಿತು.

ತದನಂತರ ಅಸ್ತಿತ್ವಕ್ಕೆ ಬಂದ ಸರ್ಕಾರಗಳೂ ಲಾಭದಾಯಕವಾಗಿ ನಡೆಯುತ್ತಿದ್ದ ಸಾರ್ವಜನಿಕ ಉದ್ದಿಮೆಗಳ ಷೇರುಗಳನ್ನು ಮಾರಾಟ ಮಾಡಿ ಒಂದು ಲಕ್ಷ ಕೋಟಿ ರೂಗಳ ಬಂಡವಾಳ ಹಿಂಪಡೆಯಬೇಕೆಂದು ನಿರ್ಧರಿಸಿದವು. ಸಾರ್ವಜನಿಕ ವಲಯದ ಉದ್ಯಮಗಳನ್ನು ಬೆಳೆಸುವುದು ಅನವಶ್ಯಕ. ಖಾಸಗೀಕರಣವೇ ಮುಕ್ತಿದಾಯಕ ಎಂದು ಸರ್ಕಾರ ಭಾವಿಸಿತು. ಸಾರ್ವಜನಿಕ ವಲಯದ ಉದ್ಯಮಗಳ ಷೇರುಗಳ ಮಾರಾಟದ ಜೊತೆಗೆ ಸರ್ಕಾರ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳನ್ನು ಖಾಸಗೀಕರಣ ಮಾಡತೊಡಗಿದವು. ಹಣಕಾಸಿನ ಕೊರತೆ ಖಾಸಗೀಕರಣಕ್ಕೆ ಕಾರಣ ಎಂದು ಸಬೂಬು ಹೇಳಿತು. ಭಾರತ್ ಪೆಟ್ರೋಲಿಯಂನಂತಹ ಲಾಭದಾಯಕ, ಪ್ರತಿಷ್ಠಿತ ಉದ್ಯಮದ ಷೇರುಗಳನ್ನು ಕೂಡ ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿರುವುದು ದುರ್ದೈವ.

ಸಾಮಾನ್ಯ ಜನರಿಗೆ ಆರೋಗ್ಯ ಕಾಪಾಡಿಕೊಳ್ಳಲು, ಉತ್ತಮ ಶಿಕ್ಷಣ ಪಡೆಯಲು ಇದ್ದ ಅವಕಾಶವನ್ನು ಸರ್ಕಾರ ಲಾಭಕೋರ ಖಾಸಗಿ ಸಂಸ್ಥೆಗಳಿಗೆ ವಹಿಸಿ ಪ್ರಜಾದ್ರೋಹ ಎಸಗಲಾಗಿದೆ.

ಅದರಂತೆಯೇ ಷಿಪ್ಪಿಂಗ್ ಇಂಡಸ್ಟ್ರಿ ಆಫ್ ಇಂಡಿಯಾ ಮತ್ತು ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾ ಕಂಪನಿಗಳ ಷೇರುಗಳನ್ನು ಮಾರಾಟ ಮಾಡಲು ತೀರ್ಮಾನಿಸಿರುವುದರ ಲಾಜಿಕ್ ಏನು ಎಂಬುದು ಒಂದು ಚಿದಂಬರ ರಹಸ್ಯವಾಗಿದೆ. ಒಟ್ಟಿನಲ್ಲಿ ಈ ಎಲ್ಲಾ ಸಾರ್ವಜನಿಕ ಸೇವಾಉದ್ಯಮಗಳ ಶೇ.51ರಷ್ಟು ಷೇರುಗಳನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ. ಇದಕ್ಕಿರುವ ಏಕೈಕ ಕಾರಣ ಇಂದಿನ ಸರ್ಕಾರಕ್ಕೆ ಉಡಾಯಿಸಲು ಹಣ ಬೇಕು. ಅದೇ ದೃಷ್ಟಿಯಿಂದ ರಿಸರ್ವ್ ಬ್ಯಾಂಕಿನ ರಿಸರ್ವ್ ಫಂಡಿನಲ್ಲಿ ಒಂದು ಭಾಗ ಅಂದರೆ ಎಷ್ಟೋ ಕೋಟಿ ಹಣ ಸರ್ಕಾರಕ್ಕೆ ಕೊಡಿ ಎಂಬ ಒತ್ತಾಯ ಬಂದಿದೆ. ನವರತ್ನಗಳಲ್ಲಿ ಒಂದಾದ ಭಾರತ್ ಪೆಟ್ರೋಲಿಯಂ ಕಂಪನಿಯನ್ನು ಮಾರಲು ಹೊರಟಿವುದರ ರಹಸ್ಯವೇನು? ಇದರಿಂದ ನಾವು ಕಲಿಯಬಹುದಾದ ಪಾಠ ಯಾವುದು?

ಲಾಭದಾಯಕವೋ, ನಷ್ಟವೋ PSUಗಳನ್ನು ಮಾರಾಟ ಮಾಡುವುದು ನಮ್ಮ ಧ್ಯೇಯ ಎಂದು ಸರ್ಕಾರ ಭಾವಿಸಿರಬಹುದು.

ಖಾಸಗೀಕರಣಕ್ಕೆ ಹಾತೊರೆಯುತ್ತಿರುವ ಸರ್ಕಾರ ನಮ್ಮ ಸಾರ್ವಜನಿಕ ಉದ್ಯಮಗಳು ನಷ್ಟಕ್ಕೆ ಏಕೆ ಒಳಗಾದವು? ಅವುಗಳನ್ನು ಲಾಭದಾಯಕ ಮಾಡುವುದು ಹೇಗೆ ಎಂಬುದರ ಕುರಿತು ಗಂಭೀರವಾಗಿ ವಿಚಾರ ಮಾಡದೇ ಅವುಗಳನ್ನು ಮುಚ್ಚಿಸಿ, ಖಾಸಗಿಯವರಿಗೆ ದೋಚಲು ಅವಕಾಶ ಮಾಡಿಕೊಡಲು ಹೊರಟಿರುವುದು ದೇಶದ ದೌರ್ಭಾಗ್ಯವೇ ಸರಿ.

PSUಗಳನ್ನು ಮುಗಿಸುವುದಕ್ಕೆ ಕಾರಣಗಳೇನು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ರಿಸರ್ವ್ ಬ್ಯಾಂಕಿನ ರಿಸರ್ವ್ ಫಂಡಿಗೆ ಏಕೆ ಲಗ್ಗೆ ಹಾಕಬೇಕು ಎಂಬುದನ್ನು ಜನತೆಗೆ ಸ್ಪಷ್ಟ ನುಡಿಗಳಲ್ಲಿ ಮನವರಿಕೆ ಮಾಡಿಕೊಡಬೇಕು. ಈ ಬಗೆಗೆ ಸರ್ಕಾರದ ಪಾಲಿಸಿ ಏನು ಎಂಬುದನ್ನು ನಿರ್ದಿಷ್ಟವಾಗಿ ತಿಳಿಸಬೇಕು. PSUಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ತಮ್ಮ ಭವಿಷ್ಯದ ಬಗೆಗೆ ಗಾಬರಿ ಉಂಟಾಗುತ್ತದೆ.

ಚುನಾಯಿತ ಸರ್ಕಾರ ಅಭಿವೃದ್ಧಿ ಮತ್ತು ಸಮಾನತೆಗೆ ಬದ್ಧನಾಗಿರಬೇಕು. ಅಭಿವೃದ್ಧಿಯ ಎಲ್ಲ ಆಯಾಮಗಳನ್ನು ಪಟ್ಟಭದ್ರ ಹಿತಾಸಕ್ತಿಗಳೇ ನಿರ್ಧರಿಸುವುದಾದರೆ ಜನಸಾಮಾನ್ಯರ ಪಾಡೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...