Homeಅಂಕಣಗಳುಮೋದಿಜಿಯ ಸಮುದ್ರ ಗೀತೆಗಳು

ಮೋದಿಜಿಯ ಸಮುದ್ರ ಗೀತೆಗಳು

- Advertisement -
- Advertisement -

| ಥೂತ್ತೇರಿ ಯಾಹೂ |

ಭಾಜಪದ ಮೊದಲ ಪ್ರಧಾನಿ ವಾಜಪೇಯಿ ಆಗಾಗ್ಗೆ ಕವನ ಕೆರೆಯುತ್ತಿದ್ದರು. ಕವಿ ಹೃದಯವೂ ಅವರಿಗಿತ್ತು. ಆದ್ದರಿಂದ ಬಿಜೆಪಿ-ಕವಿ ಎನಿಸಿದ್ದರು. ಅವರಿಗೆ ನಾನೇನು ಕಡಿಮೆ ಎಂದು ಸೆಡ್ಡು ಹೊಡೆದಿರುವ ಈಗಿನ ಪ್ರಧಾನಿ ನರೇಂದ್ರ ಮೋದಿಯೂ ಪದಬೇಧಿ ಮಾಡಿಕೊಂಡು ಅದನ್ನೇ ಕಾವ್ಯವೆಂದು ಪರಿಗಣಿಸಿ ಬಿಜೆಪಿ ಕಾವ್ಯಪ್ರಿಯರಿಗೆ ಬಡಿಸಿದ್ದಾರಂತಲ್ಲಾ. ಅದನ್ನ ಕನ್ನಡ ಕರಪತ್ರ ಎಂಬ ಪತ್ರಿಕೆ ಪ್ರಕಟಿಸಿರುವುದಲ್ಲದೆ ಮೋದಿಯ ಪ್ರಾಮಾಣಿಕ ಅಭಿವ್ಯಕ್ತಿಯನ್ನ ತಿರುಚಿ ಪ್ರಕಟಿಸಿದೆಯಲ್ಲಾ. ವಾಸ್ತವವಾಗಿ ಮೋದಿ ಮೂಲಪ್ರತಿ ಹೇಗಿತ್ತು ಎಂಬ ಊಹೆಯ ಸಾಲುಗಳನ್ನು ನ್ಯಾಯಪಥ ಓದುಗರಿಗೆ ಕೊಡುವುದು ನಮ್ಮ ಧರ್ಮ. ಇದು ಕವಿಯೊಬ್ಬನ ಕಾವ್ಯದ ಸಾಲುಗಳ ನಡುವಿನ ಅಕ್ರಮ ಪ್ರವೇಶವಲ್ಲ. ಕಳೆದ ಶತಮಾನದಲ್ಲೇ ವರಕವಿ ಬೇಂದ್ರೆಯವರು ವಾಚನಕ್ಕೆ ಕಳುಹಿಸಿದ ಕವನದ ಸಾಲುಗಳಲ್ಲಿ ಕಡೆಯ ಕೆಲಸಾಲುಗಳು ಬಿಟ್ಟು ಹೋಗಿದ್ದು ಅದನ್ನ ಊಹಿಸಿ ಬರೆದು ಪೂರ್ಣಗೊಳಿಸಿದ ಕೀರ್ತಿ, ಕೀರ್ತಿನಾಥ ಕುರ್ತುಕೋಟಿಯವರದ್ದು. ಅಂತಹ ಭಾಗ್ಯ ಯಾಹುಗೆ ದೊರಕಿದ್ದು ಭಿನ್ನದೊಳಗಿನ ಸೌಭಾಗ್ಯವಲ್ಲವೆ, ಥೂತ್ತೇರಿ!

“ಮೋದಿಯ ಪದಬೇದಿ”

1

ನಮಸ್ತೇ ಸದಾ ವತ್ಸಲೇ ಸಾಗರ;
ನೀನು ಧೀರ ಗಂಭೀರ, ಆದರೆ ನಾನು,
ಸೀರ, ಬೀರ, ಚ್ವೌರ, ಕ್ವಾರ,
ನೀನು ನೀಲಿ
ನಮ್ಮ ಸಂಘ ಹಳದಿ
ನೀನು ಜಗತ್ತಿಗೆ ಜೀವನ ನೀಡುವೆ
ನಾನು ಸಂಘವೆಂಬ ವಿಷವೃಕ್ಷಕ್ಕೆ
ಹಾಲೆರೆಯುವೆ.
ಸಮುದ್ರದ ಮೇಲೆ ಕೋಲಾಹಲವಿದೆ,
ಭಾರತದ ಒಳಗೆ ಹಾಲಾಹಲವಿದೆ,
ನೀನು ವಿಚಲಿತನಾಗಲ್ಲ,
ನಾವು ಸದಾ ವಿಚಲಿತರು.
ಗರ್ಜಿಸುವ ಕನ್ನಯ್ಯನನ್ನು ಕಂಡರೆ
ನಮ್ಮವರು ಭಯಭೀತರಾಗುತ್ತಾರೆ.
ಸಾಬರನ್ನು ಕಂಡರೆ ಸಣ್ಣಗೆ ನಡುಗುತ್ತಾರೆ.
ನಿನ್ನೊಳಗೆ ಅಡಗಿರುವ ಶಾರ್ಕುಗಳಂತೆ
ಭಾರತದಲ್ಲಿ ಅಡಿಗಿದ್ದಾರವರು.

2
ನಮಸ್ತೇ ಸದಾವತ್ಸಲೇ ಸಾಗರ;
ನೀನು ಶಕ್ತಿಭಂಡಾರ.
ನಾನು ಕುಯುಕ್ತಿ ಬಿಡಾರ,
ನೀನು ಯಾವತ್ತೂ ನಿನ್ನ ಪರಿಧಿಯಲ್ಲಿರುತ್ತೀ.
ನಾವು ಸದಾ ಪರಿಧಿ ಮೀರುತ್ತೇವೆ,
ನೀನು ಯಾವತ್ತೂ ದೊಡ್ಡತನದ ಬೋಧನೆ ಮಾಡುತ್ತಿ,
ನಾವು ಪ್ರತಿಬಾರಿ ಸಣ್ಣತನದಲ್ಲೇ ವಾದಿಸುತ್ತೇವೆ.
ನಿನ್ನ ಅಲೆಗಳಲ್ಲಿ ಜೀವನ ಸಂದೇಶವಿದೆ,
ನಮ್ಮ ಮಾತುಗಳಲ್ಲಿ ಸರ್ವನಾಶದ ಆಶಯವಿದೆ.
ನಿನಗೆ ಯಾವ ಆಸೆಯೂ ಇಲ್ಲ,
ಭರತಖಂಡವನ್ನು ಹಿಂದೂ ರಾಷ್ಟ್ರ ಮಾಡುವ ದುರಾಶೆ ನಮ್ಮನ್ನು ಆಕ್ರಮಿಸಿದೆ.

3
ನಮಸ್ತೆ ಸದಾವತ್ಸಲೇ ಸಾಗರ;
ನಡೆಯುತ್ತಲೇ ಜೀವನ ನಡೆಸುತ್ತಿ,
ನಾನು ತಿರುಗುತ್ತಲೇ ಜೀವನ ನಡೆಸುತ್ತಿದ್ದೇನೆ.
ತಿರುಗಲು ನನಗೆ ಆಯಾಸವೇ ಇಲ್ಲ
ಏಕೆಂದರೆ ನನಗೆ ಮನೆ ಎಂಬುದೇ ಇಲ್ಲ,
ಅದಕ್ಕೆ ವಿದೇಶಗಳ ತಿರುಗುತ್ತೇನೆ.
ನನ್ನ ದೇಶದಲ್ಲೇ ತಿರುಗಿದರೆ
ಅತಿವೃಷ್ಠಿ ಅನಾವೃಷ್ಠಿಗೆ ತುತ್ತಾದವರ
ಅತಿಯಾದ ಬೇಡಿಕೆ ನಿಂದನೆಯ ನರಕ,
ಅದಕ್ಕೆ ವಿದೇಶಗಳ ತಿರುಗುತ್ತೇನೆ.
ನಾಯಿಗೆ ಕೆಲಸವಿಲ್ಲ,
ಕೂರಲು ಸಮಯವಿಲ್ಲ ಎಂಬಂತೆ,
ನನ್ನ ಅಲೆಮಾರಿ ಸಂದೇಶ
ಅನವರತ-ಅನವರತ.

4
ಓಂ ನಮೋ ಸದಾವತ್ಸಲೇ ಸಾಗರ:
ಅಲೆಯಿಂದ ಅಲೆಗಳು ಹೊರಬೀಳುವುದಿಲ್ಲ.
ಇದೇ ಸಂಘಕ್ಕೆ ಆದರ್ಶ,
ಬಿದ್ದರೂ ಉಪ ಅಲೆಗಳ ಆಶ್ರಯ,
ಹಿಂದೂ ಮಹಾಸಭಾ, ವಿಶ್ವಹಿಂದೂ ಪರಿಷತ್,
ಆರೆಸ್ಸೆಸ್ಸು, ಭಜರಂಗದಳದ ಅಲೆಗಳೆಲ್ಲಾ
ಸಂಘ ಸಂಯಮಗೊಂಡ ಸಮುಚ್ಛಯಗಳು.

5
ನಮಸ್ತೆ ಸದಾವತ್ಸಲೇ ಸಾಗರ:
ಸೂರ್ಯನ ಜೊತೆಗೆ ನಿನ್ನ ಗೆಳೆತನ ಹಳೆಯದು,
ನನ್ನ ಸಂಘ ಪರಿವಾರದ ಗೆಳೆತನವೂ ಹಳೆಯದು.
ಜೀವಂತ ಜಲ ನೀನು,
ನಿನ್ನನ್ನು ಕುಡಿದು, ಹೊರಬಿಡುವ ಜನ್ಮವಷ್ಟೇ ನನ್ನದು.
ನೀನು ಆಗಸವನ್ನ ಚುಂಬಿಸುತ್ತೀ,
ನಾನೇನು ಚುಂಬಿಸಲೀ,
ಚುಂಬನದಿಂದ ವಂಚಿತ ನಾನು.
ನೀನು ಮೋಡವಾಗಿ ಮಳೆ ಸುರಿಸುತ್ತಿ,
ನಾನು ಜನಸಾಗರದ ಮೇಲೆ ಸುಳ್ಳು ಸುರಿಸುತ್ತೇನೆ.
ನೀನು ಮಧುರಭಾವ ಇಟ್ಟುಕೊಂಡಿದ್ದಿ,
ಸಂಘ ಸೇರಿದಾಗಲೇ ನನ್ನ ಮಧುರಭಾವ ಮಾಯವಾಯ್ತು,
ಈಗೇನಿದ್ದರೂ ಮಧುರ ಕಾಶ ತಲೆನೋವಷ್ಟೇ..

6
ಓಂ ನಮೋ ಸದಾವತ್ಸಲೇ ಸಾಗರ:
ಜೀವನದ ಈ ಸೌಂದರ್ಯ ನೀಲಕಂಠನ ಆದರ್ಶ ನಿನ್ನದು,
ಜೀವನದ ಸೌಂದರ್ಯ ಹಾಳುಮಾಡುವುದೇ ನಮ್ಮ ಆದರ್ಶ.
ನೀನು ಭೂಮಿಯ ವಿಷವನ್ನು ಕುಡಿಯುತ್ತಿ,
ನಾವು ಭರತ ಖಂಡಕೆ ವಿಷ ಉಣಿಸುತ್ತೇವೆ.
ನೀನು ಲವಣಾಂಶವನ್ನು ನಿನ್ನಲ್ಲೇ ಇಟ್ಟುಕೊಳ್ಳುವೆ,
ನಾವು ತಡೆಯಲಾಗದೆ ಆಗಾಗ್ಗೆ ಬಿಟ್ಟುಬಿಡುತ್ತೇವೆ.
ನೀನು ಜಗತ್ತಿಗೆ ಹೊಸ ಜೀವನ ನೀಡುತ್ತಿ,
ನಾವು ಜಗತ್ತಿಗೆ ಹೊಸ ನರಕ ಕೊಡುತ್ತಿದ್ದೇವೆ.
ನೀನು ಜೀವನ ನಡೆಸುವ ಮರ್ಮ ನೀಡುತ್ತಿ,
ನಾವು ಜೀವನ ಸರ್ವನಾಶ ಮಾಡುವ ಕರ್ಮ ನೀಡುತ್ತೇವೆ.
ಹೇ ಸಮುದ್ರವೆ, ನಿನಗೆ ನನ್ನ ಶತಸಹಸ್ರ
ಪ್ರಣಾಮಗಳು.
ಥೂ…. ಥೂ….. ಥೂತ್ತೇರಿ!!!

ಸೆ: ಕನ್ನಡ ಕರಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...