Homeಅಂಕಣಗಳುಮೋದಿಜಿಯ ಸಮುದ್ರ ಗೀತೆಗಳು

ಮೋದಿಜಿಯ ಸಮುದ್ರ ಗೀತೆಗಳು

- Advertisement -
- Advertisement -

| ಥೂತ್ತೇರಿ ಯಾಹೂ |

ಭಾಜಪದ ಮೊದಲ ಪ್ರಧಾನಿ ವಾಜಪೇಯಿ ಆಗಾಗ್ಗೆ ಕವನ ಕೆರೆಯುತ್ತಿದ್ದರು. ಕವಿ ಹೃದಯವೂ ಅವರಿಗಿತ್ತು. ಆದ್ದರಿಂದ ಬಿಜೆಪಿ-ಕವಿ ಎನಿಸಿದ್ದರು. ಅವರಿಗೆ ನಾನೇನು ಕಡಿಮೆ ಎಂದು ಸೆಡ್ಡು ಹೊಡೆದಿರುವ ಈಗಿನ ಪ್ರಧಾನಿ ನರೇಂದ್ರ ಮೋದಿಯೂ ಪದಬೇಧಿ ಮಾಡಿಕೊಂಡು ಅದನ್ನೇ ಕಾವ್ಯವೆಂದು ಪರಿಗಣಿಸಿ ಬಿಜೆಪಿ ಕಾವ್ಯಪ್ರಿಯರಿಗೆ ಬಡಿಸಿದ್ದಾರಂತಲ್ಲಾ. ಅದನ್ನ ಕನ್ನಡ ಕರಪತ್ರ ಎಂಬ ಪತ್ರಿಕೆ ಪ್ರಕಟಿಸಿರುವುದಲ್ಲದೆ ಮೋದಿಯ ಪ್ರಾಮಾಣಿಕ ಅಭಿವ್ಯಕ್ತಿಯನ್ನ ತಿರುಚಿ ಪ್ರಕಟಿಸಿದೆಯಲ್ಲಾ. ವಾಸ್ತವವಾಗಿ ಮೋದಿ ಮೂಲಪ್ರತಿ ಹೇಗಿತ್ತು ಎಂಬ ಊಹೆಯ ಸಾಲುಗಳನ್ನು ನ್ಯಾಯಪಥ ಓದುಗರಿಗೆ ಕೊಡುವುದು ನಮ್ಮ ಧರ್ಮ. ಇದು ಕವಿಯೊಬ್ಬನ ಕಾವ್ಯದ ಸಾಲುಗಳ ನಡುವಿನ ಅಕ್ರಮ ಪ್ರವೇಶವಲ್ಲ. ಕಳೆದ ಶತಮಾನದಲ್ಲೇ ವರಕವಿ ಬೇಂದ್ರೆಯವರು ವಾಚನಕ್ಕೆ ಕಳುಹಿಸಿದ ಕವನದ ಸಾಲುಗಳಲ್ಲಿ ಕಡೆಯ ಕೆಲಸಾಲುಗಳು ಬಿಟ್ಟು ಹೋಗಿದ್ದು ಅದನ್ನ ಊಹಿಸಿ ಬರೆದು ಪೂರ್ಣಗೊಳಿಸಿದ ಕೀರ್ತಿ, ಕೀರ್ತಿನಾಥ ಕುರ್ತುಕೋಟಿಯವರದ್ದು. ಅಂತಹ ಭಾಗ್ಯ ಯಾಹುಗೆ ದೊರಕಿದ್ದು ಭಿನ್ನದೊಳಗಿನ ಸೌಭಾಗ್ಯವಲ್ಲವೆ, ಥೂತ್ತೇರಿ!

“ಮೋದಿಯ ಪದಬೇದಿ”

1

ನಮಸ್ತೇ ಸದಾ ವತ್ಸಲೇ ಸಾಗರ;
ನೀನು ಧೀರ ಗಂಭೀರ, ಆದರೆ ನಾನು,
ಸೀರ, ಬೀರ, ಚ್ವೌರ, ಕ್ವಾರ,
ನೀನು ನೀಲಿ
ನಮ್ಮ ಸಂಘ ಹಳದಿ
ನೀನು ಜಗತ್ತಿಗೆ ಜೀವನ ನೀಡುವೆ
ನಾನು ಸಂಘವೆಂಬ ವಿಷವೃಕ್ಷಕ್ಕೆ
ಹಾಲೆರೆಯುವೆ.
ಸಮುದ್ರದ ಮೇಲೆ ಕೋಲಾಹಲವಿದೆ,
ಭಾರತದ ಒಳಗೆ ಹಾಲಾಹಲವಿದೆ,
ನೀನು ವಿಚಲಿತನಾಗಲ್ಲ,
ನಾವು ಸದಾ ವಿಚಲಿತರು.
ಗರ್ಜಿಸುವ ಕನ್ನಯ್ಯನನ್ನು ಕಂಡರೆ
ನಮ್ಮವರು ಭಯಭೀತರಾಗುತ್ತಾರೆ.
ಸಾಬರನ್ನು ಕಂಡರೆ ಸಣ್ಣಗೆ ನಡುಗುತ್ತಾರೆ.
ನಿನ್ನೊಳಗೆ ಅಡಗಿರುವ ಶಾರ್ಕುಗಳಂತೆ
ಭಾರತದಲ್ಲಿ ಅಡಿಗಿದ್ದಾರವರು.

2
ನಮಸ್ತೇ ಸದಾವತ್ಸಲೇ ಸಾಗರ;
ನೀನು ಶಕ್ತಿಭಂಡಾರ.
ನಾನು ಕುಯುಕ್ತಿ ಬಿಡಾರ,
ನೀನು ಯಾವತ್ತೂ ನಿನ್ನ ಪರಿಧಿಯಲ್ಲಿರುತ್ತೀ.
ನಾವು ಸದಾ ಪರಿಧಿ ಮೀರುತ್ತೇವೆ,
ನೀನು ಯಾವತ್ತೂ ದೊಡ್ಡತನದ ಬೋಧನೆ ಮಾಡುತ್ತಿ,
ನಾವು ಪ್ರತಿಬಾರಿ ಸಣ್ಣತನದಲ್ಲೇ ವಾದಿಸುತ್ತೇವೆ.
ನಿನ್ನ ಅಲೆಗಳಲ್ಲಿ ಜೀವನ ಸಂದೇಶವಿದೆ,
ನಮ್ಮ ಮಾತುಗಳಲ್ಲಿ ಸರ್ವನಾಶದ ಆಶಯವಿದೆ.
ನಿನಗೆ ಯಾವ ಆಸೆಯೂ ಇಲ್ಲ,
ಭರತಖಂಡವನ್ನು ಹಿಂದೂ ರಾಷ್ಟ್ರ ಮಾಡುವ ದುರಾಶೆ ನಮ್ಮನ್ನು ಆಕ್ರಮಿಸಿದೆ.

3
ನಮಸ್ತೆ ಸದಾವತ್ಸಲೇ ಸಾಗರ;
ನಡೆಯುತ್ತಲೇ ಜೀವನ ನಡೆಸುತ್ತಿ,
ನಾನು ತಿರುಗುತ್ತಲೇ ಜೀವನ ನಡೆಸುತ್ತಿದ್ದೇನೆ.
ತಿರುಗಲು ನನಗೆ ಆಯಾಸವೇ ಇಲ್ಲ
ಏಕೆಂದರೆ ನನಗೆ ಮನೆ ಎಂಬುದೇ ಇಲ್ಲ,
ಅದಕ್ಕೆ ವಿದೇಶಗಳ ತಿರುಗುತ್ತೇನೆ.
ನನ್ನ ದೇಶದಲ್ಲೇ ತಿರುಗಿದರೆ
ಅತಿವೃಷ್ಠಿ ಅನಾವೃಷ್ಠಿಗೆ ತುತ್ತಾದವರ
ಅತಿಯಾದ ಬೇಡಿಕೆ ನಿಂದನೆಯ ನರಕ,
ಅದಕ್ಕೆ ವಿದೇಶಗಳ ತಿರುಗುತ್ತೇನೆ.
ನಾಯಿಗೆ ಕೆಲಸವಿಲ್ಲ,
ಕೂರಲು ಸಮಯವಿಲ್ಲ ಎಂಬಂತೆ,
ನನ್ನ ಅಲೆಮಾರಿ ಸಂದೇಶ
ಅನವರತ-ಅನವರತ.

4
ಓಂ ನಮೋ ಸದಾವತ್ಸಲೇ ಸಾಗರ:
ಅಲೆಯಿಂದ ಅಲೆಗಳು ಹೊರಬೀಳುವುದಿಲ್ಲ.
ಇದೇ ಸಂಘಕ್ಕೆ ಆದರ್ಶ,
ಬಿದ್ದರೂ ಉಪ ಅಲೆಗಳ ಆಶ್ರಯ,
ಹಿಂದೂ ಮಹಾಸಭಾ, ವಿಶ್ವಹಿಂದೂ ಪರಿಷತ್,
ಆರೆಸ್ಸೆಸ್ಸು, ಭಜರಂಗದಳದ ಅಲೆಗಳೆಲ್ಲಾ
ಸಂಘ ಸಂಯಮಗೊಂಡ ಸಮುಚ್ಛಯಗಳು.

5
ನಮಸ್ತೆ ಸದಾವತ್ಸಲೇ ಸಾಗರ:
ಸೂರ್ಯನ ಜೊತೆಗೆ ನಿನ್ನ ಗೆಳೆತನ ಹಳೆಯದು,
ನನ್ನ ಸಂಘ ಪರಿವಾರದ ಗೆಳೆತನವೂ ಹಳೆಯದು.
ಜೀವಂತ ಜಲ ನೀನು,
ನಿನ್ನನ್ನು ಕುಡಿದು, ಹೊರಬಿಡುವ ಜನ್ಮವಷ್ಟೇ ನನ್ನದು.
ನೀನು ಆಗಸವನ್ನ ಚುಂಬಿಸುತ್ತೀ,
ನಾನೇನು ಚುಂಬಿಸಲೀ,
ಚುಂಬನದಿಂದ ವಂಚಿತ ನಾನು.
ನೀನು ಮೋಡವಾಗಿ ಮಳೆ ಸುರಿಸುತ್ತಿ,
ನಾನು ಜನಸಾಗರದ ಮೇಲೆ ಸುಳ್ಳು ಸುರಿಸುತ್ತೇನೆ.
ನೀನು ಮಧುರಭಾವ ಇಟ್ಟುಕೊಂಡಿದ್ದಿ,
ಸಂಘ ಸೇರಿದಾಗಲೇ ನನ್ನ ಮಧುರಭಾವ ಮಾಯವಾಯ್ತು,
ಈಗೇನಿದ್ದರೂ ಮಧುರ ಕಾಶ ತಲೆನೋವಷ್ಟೇ..

6
ಓಂ ನಮೋ ಸದಾವತ್ಸಲೇ ಸಾಗರ:
ಜೀವನದ ಈ ಸೌಂದರ್ಯ ನೀಲಕಂಠನ ಆದರ್ಶ ನಿನ್ನದು,
ಜೀವನದ ಸೌಂದರ್ಯ ಹಾಳುಮಾಡುವುದೇ ನಮ್ಮ ಆದರ್ಶ.
ನೀನು ಭೂಮಿಯ ವಿಷವನ್ನು ಕುಡಿಯುತ್ತಿ,
ನಾವು ಭರತ ಖಂಡಕೆ ವಿಷ ಉಣಿಸುತ್ತೇವೆ.
ನೀನು ಲವಣಾಂಶವನ್ನು ನಿನ್ನಲ್ಲೇ ಇಟ್ಟುಕೊಳ್ಳುವೆ,
ನಾವು ತಡೆಯಲಾಗದೆ ಆಗಾಗ್ಗೆ ಬಿಟ್ಟುಬಿಡುತ್ತೇವೆ.
ನೀನು ಜಗತ್ತಿಗೆ ಹೊಸ ಜೀವನ ನೀಡುತ್ತಿ,
ನಾವು ಜಗತ್ತಿಗೆ ಹೊಸ ನರಕ ಕೊಡುತ್ತಿದ್ದೇವೆ.
ನೀನು ಜೀವನ ನಡೆಸುವ ಮರ್ಮ ನೀಡುತ್ತಿ,
ನಾವು ಜೀವನ ಸರ್ವನಾಶ ಮಾಡುವ ಕರ್ಮ ನೀಡುತ್ತೇವೆ.
ಹೇ ಸಮುದ್ರವೆ, ನಿನಗೆ ನನ್ನ ಶತಸಹಸ್ರ
ಪ್ರಣಾಮಗಳು.
ಥೂ…. ಥೂ….. ಥೂತ್ತೇರಿ!!!

ಸೆ: ಕನ್ನಡ ಕರಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...