Homeಮುಖಪುಟ'ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ' ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್: ದಾಖಲೆಯ 60 ಲಕ್ಷ...

‘ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ’ ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್: ದಾಖಲೆಯ 60 ಲಕ್ಷ ಟ್ವೀಟ್‌ಗಳು!

- Advertisement -
- Advertisement -

ಭಾರತದಾದ್ಯಂತ ಯುವಜನರು ನಿರುದ್ಯೋಗದ ವಿರುದ್ಧ ಸಿಡಿದೆದ್ದಿದ್ದು, ಉದ್ಯೋಗಕ್ಕಾಗಿ ದನಿಯೆತ್ತಿದ್ದಾರೆ. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಟ್ವಿಟರ್ ದಾಳಿ ನಡೆಸಿರುವ ಯುವಜನತೆ ಉದ್ಯೋಗ ಕೊಡಿ ಎಂದು ತಾಕೀತು ಮಾಡುತ್ತಿದ್ದಾರೆ.

#modi_job_do, #modi_rojgar_do, ಉದ್ಯೋಗ ಕೊಡಿ ಮೋದಿ ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಸದ್ದು ಮಾಡಿವೆ. ದಾಖಲೆಯ 60 ಲಕ್ಷ ಟ್ವೀಟ್‌ಗಳು ಪ್ರಸಾರವಾಗುವುದರೊಂದಿಗೆ ಭಾರತದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್ ಆದರೆ, ಪ್ರಪಂಚದಾದ್ಯಂತ ಎರಡನೇ ಸ್ಥಾನದಲ್ಲಿ ಟ್ರೆಂಡ್ ಆಗುವ ಮೂಲಕ ದಾಖಲೆ ಸೃಷ್ಟಿಸಿವೆ.

ಎಸ್‌ಎಸ್‌ಸಿ ಪರೀಕ್ಷೆಯನ್ನು ಸಮಯಕ್ಕೆ ಸರಿಯಾಗಿ ಪಾರದರ್ಶಕವಾಗಿ ನಡೆಸಬೇಕು ಮತ್ತು ಯುವಜನರಿಗೆ ಉದ್ಯೋಗ ಕಲ್ಪಿಸಬೇಕು ಎಂಬ ಹಿನ್ನೆಲೆಯಲ್ಲಿ ಈ ಟ್ವಿಟರ್ ಟ್ರೆಂಡ್ ಆರಂಭವಾಗಿದೆ.

ನರೇಂದ್ರ ಮೋದಿಯವರು 2014ರಲ್ಲಿ ಪ್ರಧಾನಿಯಾಗುವ ಮೊದಲು ವರ್ಷಕ್ಕೆ ಒಂದು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಆದರೆ ಅವರು ಪ್ರಧಾನಿಯಾದ ನಂತರ ಉದ್ಯೋಗ ಸೃಷ್ಟಿಯಾಗುವುದು ಇರಲಿ, ಇರುವ ಉದ್ಯೋಗಗಳೇ ಕಾಣೆಯಾಗುತ್ತಿವೆ. ಹಲವು ಸರ್ಕಾರೀ ಸಂಸ್ಥೆಗಳು ಖಾಸಗಿಯವರ ಪಾಲಾಗುತ್ತಾ ಬೃಹತ್ ಉದ್ಯೋಗ ನಷ್ಟ ಸಂಭವಿಸುತ್ತಿದ್ದು, ಇದಕ್ಕೆ ಮೋದಿಯವರ ಕೆಟ್ಟ ನೀತಿಗಳೇ ಕಾರಣ ಎಂದು ಯುವಜನರು ದೂರಿದ್ದಾರೆ.

ಈ 45 ವರ್ಷಗಳಲ್ಲೆ ಕಂಡು ಕೇಳರಿಯದಂತಹ ನಿರುದ್ಯೋಗ ಭಾರತದಲ್ಲಿ ಇಂದು ತಲೆಎತ್ತಿದೆ. ಈ ಕುರಿತು ಗಂಭೀರವಾಗಿ ಯೋಚಿಸಬೇಕಾದ ಮೋದಿಯವರು ಖಾಸಗಿಯವರನ್ನು ಉತ್ತೇಜಿಸುವ ಮಾತುಗಳನ್ನಾಡುತ್ತಿದ್ದಾರೆ. ಅಲ್ಲದೇ ಕೆಲಸಕ್ಕೆ ಬಾರದ ಚರ್ಚೆಯಲ್ಲಿ ಮುಳುಗಿದ್ದಾರೆ ಎಂದು ಯುವಜನರು ಕಿಡಿಕಾರಿದ್ದಾರೆ.

ಮೋದಿ ಸರ್ಕಾರ ನಮ್ಮ ರಾಷ್ಟ್ರದ ಆರ್ಥಿಕ ಬೆಳವಣಿಗೆಯನ್ನು ನಾಶಪಡಿಸಿದೆ. ಲಕ್ಷಾಂತರ ಯುವಜನರು ನಿರುದ್ಯೋಗಿಗಳಾಗಿದ್ದಾರೆ. ಮೋದಿಯವರು 2 ಕೋಟಿ ಉದ್ಯೋಗಗಳ ಭರವಸೆ ನೀಡಿದ್ದರು. ಆದರೆ ಉದ್ಯೋಗಗಳು ಎಲ್ಲಿವೆ? ಎಂದು ಮಹಮ್ಮದ್ ಕಬೀರ್ ಅಹ್ಮದ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ವರ್ಷಕ್ಕೆ ಕೋಟಿ ಉದ್ಯೋಗಗಳು ಇಲ್ಲ,
15 ಲಕ್ಷ ಇಲ್ಲ,
100 ಸ್ಮಾರ್ಟ್ ಸಿಟೀಸ್ ಇಲ್ಲ,
ಬುಲೆಟ್ ರೈಲು ಇಲ್ಲ,
ರೈತರ ಆದಾಯ ಡಬಲ್ ಇಲ್ಲ,
ಭಯೋತ್ಪಾದನೆಯನ್ನು ತೆಗೆದುಹಾಕುವುದು ಇಲ್ಲ,
ಆದರೆ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಮಾತ್ರ ಆಗಿದೆ ಎಂದು ಗೌರವ್ ಪಾಂಡಿ ವ್ಯಂಗ್ಯವಾಡಿದ್ದಾರೆ.

ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಉದ್ಯೋಗಬೇಕು, ಕೌಶಲ್ಯಬೇಕು ಎಂದು ಆಗ್ರಹಿಸಿ ಟ್ವೀಟ್ ಮಾಡಿರುವುದನ್ನು ನೆನಪಿಸಿರುವ ಯುವಜನರು ಹೀಗೇಕೆ ಉದ್ಯೋಗ ಕೊಡುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿ: ಬಿಹಾರ: 19 ಲಕ್ಷ ಉದ್ಯೋಗ ನೀಡದಿದ್ದರೆ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ – ತೇಜಸ್ವಿ ಯಾದವ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Petrol tax decrease immidiatly and also collected tax amt utilize the honestly and important public require ments. Present situation regarding vehicle on different taxes(lifetax, insurence, toll tax , tragic taxes vehicle loan and intrest), fines, is very irritate the common and middle classes, govt concentrate to common rule to vip and common publics.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...

ಅಮೆರಿಕದ ಯಾವುದೇ ದಾಳಿ ಎದುರಿಸಲು ನಾವು ಸಿದ್ದ : ಟ್ರಂಪ್ ಬೆದರಿಕೆ ಬೆನ್ನಲ್ಲೇ ಕ್ಯೂಬಾ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಕ್ಯೂಬಾವನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯೂಬಾದ ಉಪ ವಿದೇಶಾಂಗ ಸಚಿವ ಕಾರ್ಲೋಸ್ ಫೆರ್ನಾಂಡಿಸ್ ಡಿ ಕೊಸ್ಸಿಯೊ, ಅಮೆರಿಕ ಯಾವುದೇ...

ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...