Homeಮುಖಪುಟ'ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ' ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್: ದಾಖಲೆಯ 60 ಲಕ್ಷ...

‘ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ’ ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್: ದಾಖಲೆಯ 60 ಲಕ್ಷ ಟ್ವೀಟ್‌ಗಳು!

- Advertisement -
- Advertisement -

ಭಾರತದಾದ್ಯಂತ ಯುವಜನರು ನಿರುದ್ಯೋಗದ ವಿರುದ್ಧ ಸಿಡಿದೆದ್ದಿದ್ದು, ಉದ್ಯೋಗಕ್ಕಾಗಿ ದನಿಯೆತ್ತಿದ್ದಾರೆ. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಟ್ವಿಟರ್ ದಾಳಿ ನಡೆಸಿರುವ ಯುವಜನತೆ ಉದ್ಯೋಗ ಕೊಡಿ ಎಂದು ತಾಕೀತು ಮಾಡುತ್ತಿದ್ದಾರೆ.

#modi_job_do, #modi_rojgar_do, ಉದ್ಯೋಗ ಕೊಡಿ ಮೋದಿ ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಸದ್ದು ಮಾಡಿವೆ. ದಾಖಲೆಯ 60 ಲಕ್ಷ ಟ್ವೀಟ್‌ಗಳು ಪ್ರಸಾರವಾಗುವುದರೊಂದಿಗೆ ಭಾರತದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್ ಆದರೆ, ಪ್ರಪಂಚದಾದ್ಯಂತ ಎರಡನೇ ಸ್ಥಾನದಲ್ಲಿ ಟ್ರೆಂಡ್ ಆಗುವ ಮೂಲಕ ದಾಖಲೆ ಸೃಷ್ಟಿಸಿವೆ.

ಎಸ್‌ಎಸ್‌ಸಿ ಪರೀಕ್ಷೆಯನ್ನು ಸಮಯಕ್ಕೆ ಸರಿಯಾಗಿ ಪಾರದರ್ಶಕವಾಗಿ ನಡೆಸಬೇಕು ಮತ್ತು ಯುವಜನರಿಗೆ ಉದ್ಯೋಗ ಕಲ್ಪಿಸಬೇಕು ಎಂಬ ಹಿನ್ನೆಲೆಯಲ್ಲಿ ಈ ಟ್ವಿಟರ್ ಟ್ರೆಂಡ್ ಆರಂಭವಾಗಿದೆ.

ನರೇಂದ್ರ ಮೋದಿಯವರು 2014ರಲ್ಲಿ ಪ್ರಧಾನಿಯಾಗುವ ಮೊದಲು ವರ್ಷಕ್ಕೆ ಒಂದು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಆದರೆ ಅವರು ಪ್ರಧಾನಿಯಾದ ನಂತರ ಉದ್ಯೋಗ ಸೃಷ್ಟಿಯಾಗುವುದು ಇರಲಿ, ಇರುವ ಉದ್ಯೋಗಗಳೇ ಕಾಣೆಯಾಗುತ್ತಿವೆ. ಹಲವು ಸರ್ಕಾರೀ ಸಂಸ್ಥೆಗಳು ಖಾಸಗಿಯವರ ಪಾಲಾಗುತ್ತಾ ಬೃಹತ್ ಉದ್ಯೋಗ ನಷ್ಟ ಸಂಭವಿಸುತ್ತಿದ್ದು, ಇದಕ್ಕೆ ಮೋದಿಯವರ ಕೆಟ್ಟ ನೀತಿಗಳೇ ಕಾರಣ ಎಂದು ಯುವಜನರು ದೂರಿದ್ದಾರೆ.

ಈ 45 ವರ್ಷಗಳಲ್ಲೆ ಕಂಡು ಕೇಳರಿಯದಂತಹ ನಿರುದ್ಯೋಗ ಭಾರತದಲ್ಲಿ ಇಂದು ತಲೆಎತ್ತಿದೆ. ಈ ಕುರಿತು ಗಂಭೀರವಾಗಿ ಯೋಚಿಸಬೇಕಾದ ಮೋದಿಯವರು ಖಾಸಗಿಯವರನ್ನು ಉತ್ತೇಜಿಸುವ ಮಾತುಗಳನ್ನಾಡುತ್ತಿದ್ದಾರೆ. ಅಲ್ಲದೇ ಕೆಲಸಕ್ಕೆ ಬಾರದ ಚರ್ಚೆಯಲ್ಲಿ ಮುಳುಗಿದ್ದಾರೆ ಎಂದು ಯುವಜನರು ಕಿಡಿಕಾರಿದ್ದಾರೆ.

ಮೋದಿ ಸರ್ಕಾರ ನಮ್ಮ ರಾಷ್ಟ್ರದ ಆರ್ಥಿಕ ಬೆಳವಣಿಗೆಯನ್ನು ನಾಶಪಡಿಸಿದೆ. ಲಕ್ಷಾಂತರ ಯುವಜನರು ನಿರುದ್ಯೋಗಿಗಳಾಗಿದ್ದಾರೆ. ಮೋದಿಯವರು 2 ಕೋಟಿ ಉದ್ಯೋಗಗಳ ಭರವಸೆ ನೀಡಿದ್ದರು. ಆದರೆ ಉದ್ಯೋಗಗಳು ಎಲ್ಲಿವೆ? ಎಂದು ಮಹಮ್ಮದ್ ಕಬೀರ್ ಅಹ್ಮದ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ವರ್ಷಕ್ಕೆ ಕೋಟಿ ಉದ್ಯೋಗಗಳು ಇಲ್ಲ,
15 ಲಕ್ಷ ಇಲ್ಲ,
100 ಸ್ಮಾರ್ಟ್ ಸಿಟೀಸ್ ಇಲ್ಲ,
ಬುಲೆಟ್ ರೈಲು ಇಲ್ಲ,
ರೈತರ ಆದಾಯ ಡಬಲ್ ಇಲ್ಲ,
ಭಯೋತ್ಪಾದನೆಯನ್ನು ತೆಗೆದುಹಾಕುವುದು ಇಲ್ಲ,
ಆದರೆ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಮಾತ್ರ ಆಗಿದೆ ಎಂದು ಗೌರವ್ ಪಾಂಡಿ ವ್ಯಂಗ್ಯವಾಡಿದ್ದಾರೆ.

ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಉದ್ಯೋಗಬೇಕು, ಕೌಶಲ್ಯಬೇಕು ಎಂದು ಆಗ್ರಹಿಸಿ ಟ್ವೀಟ್ ಮಾಡಿರುವುದನ್ನು ನೆನಪಿಸಿರುವ ಯುವಜನರು ಹೀಗೇಕೆ ಉದ್ಯೋಗ ಕೊಡುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿ: ಬಿಹಾರ: 19 ಲಕ್ಷ ಉದ್ಯೋಗ ನೀಡದಿದ್ದರೆ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ – ತೇಜಸ್ವಿ ಯಾದವ್ ಎಚ್ಚರಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Petrol tax decrease immidiatly and also collected tax amt utilize the honestly and important public require ments. Present situation regarding vehicle on different taxes(lifetax, insurence, toll tax , tragic taxes vehicle loan and intrest), fines, is very irritate the common and middle classes, govt concentrate to common rule to vip and common publics.

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...