Homeಮುಖಪುಟ'ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ' ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್: ದಾಖಲೆಯ 60 ಲಕ್ಷ...

‘ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ’ ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್: ದಾಖಲೆಯ 60 ಲಕ್ಷ ಟ್ವೀಟ್‌ಗಳು!

- Advertisement -
- Advertisement -

ಭಾರತದಾದ್ಯಂತ ಯುವಜನರು ನಿರುದ್ಯೋಗದ ವಿರುದ್ಧ ಸಿಡಿದೆದ್ದಿದ್ದು, ಉದ್ಯೋಗಕ್ಕಾಗಿ ದನಿಯೆತ್ತಿದ್ದಾರೆ. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಟ್ವಿಟರ್ ದಾಳಿ ನಡೆಸಿರುವ ಯುವಜನತೆ ಉದ್ಯೋಗ ಕೊಡಿ ಎಂದು ತಾಕೀತು ಮಾಡುತ್ತಿದ್ದಾರೆ.

#modi_job_do, #modi_rojgar_do, ಉದ್ಯೋಗ ಕೊಡಿ ಮೋದಿ ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಸದ್ದು ಮಾಡಿವೆ. ದಾಖಲೆಯ 60 ಲಕ್ಷ ಟ್ವೀಟ್‌ಗಳು ಪ್ರಸಾರವಾಗುವುದರೊಂದಿಗೆ ಭಾರತದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್ ಆದರೆ, ಪ್ರಪಂಚದಾದ್ಯಂತ ಎರಡನೇ ಸ್ಥಾನದಲ್ಲಿ ಟ್ರೆಂಡ್ ಆಗುವ ಮೂಲಕ ದಾಖಲೆ ಸೃಷ್ಟಿಸಿವೆ.

ಎಸ್‌ಎಸ್‌ಸಿ ಪರೀಕ್ಷೆಯನ್ನು ಸಮಯಕ್ಕೆ ಸರಿಯಾಗಿ ಪಾರದರ್ಶಕವಾಗಿ ನಡೆಸಬೇಕು ಮತ್ತು ಯುವಜನರಿಗೆ ಉದ್ಯೋಗ ಕಲ್ಪಿಸಬೇಕು ಎಂಬ ಹಿನ್ನೆಲೆಯಲ್ಲಿ ಈ ಟ್ವಿಟರ್ ಟ್ರೆಂಡ್ ಆರಂಭವಾಗಿದೆ.

ನರೇಂದ್ರ ಮೋದಿಯವರು 2014ರಲ್ಲಿ ಪ್ರಧಾನಿಯಾಗುವ ಮೊದಲು ವರ್ಷಕ್ಕೆ ಒಂದು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಆದರೆ ಅವರು ಪ್ರಧಾನಿಯಾದ ನಂತರ ಉದ್ಯೋಗ ಸೃಷ್ಟಿಯಾಗುವುದು ಇರಲಿ, ಇರುವ ಉದ್ಯೋಗಗಳೇ ಕಾಣೆಯಾಗುತ್ತಿವೆ. ಹಲವು ಸರ್ಕಾರೀ ಸಂಸ್ಥೆಗಳು ಖಾಸಗಿಯವರ ಪಾಲಾಗುತ್ತಾ ಬೃಹತ್ ಉದ್ಯೋಗ ನಷ್ಟ ಸಂಭವಿಸುತ್ತಿದ್ದು, ಇದಕ್ಕೆ ಮೋದಿಯವರ ಕೆಟ್ಟ ನೀತಿಗಳೇ ಕಾರಣ ಎಂದು ಯುವಜನರು ದೂರಿದ್ದಾರೆ.

ಈ 45 ವರ್ಷಗಳಲ್ಲೆ ಕಂಡು ಕೇಳರಿಯದಂತಹ ನಿರುದ್ಯೋಗ ಭಾರತದಲ್ಲಿ ಇಂದು ತಲೆಎತ್ತಿದೆ. ಈ ಕುರಿತು ಗಂಭೀರವಾಗಿ ಯೋಚಿಸಬೇಕಾದ ಮೋದಿಯವರು ಖಾಸಗಿಯವರನ್ನು ಉತ್ತೇಜಿಸುವ ಮಾತುಗಳನ್ನಾಡುತ್ತಿದ್ದಾರೆ. ಅಲ್ಲದೇ ಕೆಲಸಕ್ಕೆ ಬಾರದ ಚರ್ಚೆಯಲ್ಲಿ ಮುಳುಗಿದ್ದಾರೆ ಎಂದು ಯುವಜನರು ಕಿಡಿಕಾರಿದ್ದಾರೆ.

ಮೋದಿ ಸರ್ಕಾರ ನಮ್ಮ ರಾಷ್ಟ್ರದ ಆರ್ಥಿಕ ಬೆಳವಣಿಗೆಯನ್ನು ನಾಶಪಡಿಸಿದೆ. ಲಕ್ಷಾಂತರ ಯುವಜನರು ನಿರುದ್ಯೋಗಿಗಳಾಗಿದ್ದಾರೆ. ಮೋದಿಯವರು 2 ಕೋಟಿ ಉದ್ಯೋಗಗಳ ಭರವಸೆ ನೀಡಿದ್ದರು. ಆದರೆ ಉದ್ಯೋಗಗಳು ಎಲ್ಲಿವೆ? ಎಂದು ಮಹಮ್ಮದ್ ಕಬೀರ್ ಅಹ್ಮದ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ವರ್ಷಕ್ಕೆ ಕೋಟಿ ಉದ್ಯೋಗಗಳು ಇಲ್ಲ,
15 ಲಕ್ಷ ಇಲ್ಲ,
100 ಸ್ಮಾರ್ಟ್ ಸಿಟೀಸ್ ಇಲ್ಲ,
ಬುಲೆಟ್ ರೈಲು ಇಲ್ಲ,
ರೈತರ ಆದಾಯ ಡಬಲ್ ಇಲ್ಲ,
ಭಯೋತ್ಪಾದನೆಯನ್ನು ತೆಗೆದುಹಾಕುವುದು ಇಲ್ಲ,
ಆದರೆ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಮಾತ್ರ ಆಗಿದೆ ಎಂದು ಗೌರವ್ ಪಾಂಡಿ ವ್ಯಂಗ್ಯವಾಡಿದ್ದಾರೆ.

ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಉದ್ಯೋಗಬೇಕು, ಕೌಶಲ್ಯಬೇಕು ಎಂದು ಆಗ್ರಹಿಸಿ ಟ್ವೀಟ್ ಮಾಡಿರುವುದನ್ನು ನೆನಪಿಸಿರುವ ಯುವಜನರು ಹೀಗೇಕೆ ಉದ್ಯೋಗ ಕೊಡುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿ: ಬಿಹಾರ: 19 ಲಕ್ಷ ಉದ್ಯೋಗ ನೀಡದಿದ್ದರೆ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ – ತೇಜಸ್ವಿ ಯಾದವ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Petrol tax decrease immidiatly and also collected tax amt utilize the honestly and important public require ments. Present situation regarding vehicle on different taxes(lifetax, insurence, toll tax , tragic taxes vehicle loan and intrest), fines, is very irritate the common and middle classes, govt concentrate to common rule to vip and common publics.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...