Homeಮುಖಪುಟ'ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ' ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್: ದಾಖಲೆಯ 60 ಲಕ್ಷ...

‘ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ’ ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್: ದಾಖಲೆಯ 60 ಲಕ್ಷ ಟ್ವೀಟ್‌ಗಳು!

- Advertisement -
- Advertisement -

ಭಾರತದಾದ್ಯಂತ ಯುವಜನರು ನಿರುದ್ಯೋಗದ ವಿರುದ್ಧ ಸಿಡಿದೆದ್ದಿದ್ದು, ಉದ್ಯೋಗಕ್ಕಾಗಿ ದನಿಯೆತ್ತಿದ್ದಾರೆ. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಟ್ವಿಟರ್ ದಾಳಿ ನಡೆಸಿರುವ ಯುವಜನತೆ ಉದ್ಯೋಗ ಕೊಡಿ ಎಂದು ತಾಕೀತು ಮಾಡುತ್ತಿದ್ದಾರೆ.

#modi_job_do, #modi_rojgar_do, ಉದ್ಯೋಗ ಕೊಡಿ ಮೋದಿ ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಸದ್ದು ಮಾಡಿವೆ. ದಾಖಲೆಯ 60 ಲಕ್ಷ ಟ್ವೀಟ್‌ಗಳು ಪ್ರಸಾರವಾಗುವುದರೊಂದಿಗೆ ಭಾರತದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್ ಆದರೆ, ಪ್ರಪಂಚದಾದ್ಯಂತ ಎರಡನೇ ಸ್ಥಾನದಲ್ಲಿ ಟ್ರೆಂಡ್ ಆಗುವ ಮೂಲಕ ದಾಖಲೆ ಸೃಷ್ಟಿಸಿವೆ.

ಎಸ್‌ಎಸ್‌ಸಿ ಪರೀಕ್ಷೆಯನ್ನು ಸಮಯಕ್ಕೆ ಸರಿಯಾಗಿ ಪಾರದರ್ಶಕವಾಗಿ ನಡೆಸಬೇಕು ಮತ್ತು ಯುವಜನರಿಗೆ ಉದ್ಯೋಗ ಕಲ್ಪಿಸಬೇಕು ಎಂಬ ಹಿನ್ನೆಲೆಯಲ್ಲಿ ಈ ಟ್ವಿಟರ್ ಟ್ರೆಂಡ್ ಆರಂಭವಾಗಿದೆ.

ನರೇಂದ್ರ ಮೋದಿಯವರು 2014ರಲ್ಲಿ ಪ್ರಧಾನಿಯಾಗುವ ಮೊದಲು ವರ್ಷಕ್ಕೆ ಒಂದು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಆದರೆ ಅವರು ಪ್ರಧಾನಿಯಾದ ನಂತರ ಉದ್ಯೋಗ ಸೃಷ್ಟಿಯಾಗುವುದು ಇರಲಿ, ಇರುವ ಉದ್ಯೋಗಗಳೇ ಕಾಣೆಯಾಗುತ್ತಿವೆ. ಹಲವು ಸರ್ಕಾರೀ ಸಂಸ್ಥೆಗಳು ಖಾಸಗಿಯವರ ಪಾಲಾಗುತ್ತಾ ಬೃಹತ್ ಉದ್ಯೋಗ ನಷ್ಟ ಸಂಭವಿಸುತ್ತಿದ್ದು, ಇದಕ್ಕೆ ಮೋದಿಯವರ ಕೆಟ್ಟ ನೀತಿಗಳೇ ಕಾರಣ ಎಂದು ಯುವಜನರು ದೂರಿದ್ದಾರೆ.

ಈ 45 ವರ್ಷಗಳಲ್ಲೆ ಕಂಡು ಕೇಳರಿಯದಂತಹ ನಿರುದ್ಯೋಗ ಭಾರತದಲ್ಲಿ ಇಂದು ತಲೆಎತ್ತಿದೆ. ಈ ಕುರಿತು ಗಂಭೀರವಾಗಿ ಯೋಚಿಸಬೇಕಾದ ಮೋದಿಯವರು ಖಾಸಗಿಯವರನ್ನು ಉತ್ತೇಜಿಸುವ ಮಾತುಗಳನ್ನಾಡುತ್ತಿದ್ದಾರೆ. ಅಲ್ಲದೇ ಕೆಲಸಕ್ಕೆ ಬಾರದ ಚರ್ಚೆಯಲ್ಲಿ ಮುಳುಗಿದ್ದಾರೆ ಎಂದು ಯುವಜನರು ಕಿಡಿಕಾರಿದ್ದಾರೆ.

ಮೋದಿ ಸರ್ಕಾರ ನಮ್ಮ ರಾಷ್ಟ್ರದ ಆರ್ಥಿಕ ಬೆಳವಣಿಗೆಯನ್ನು ನಾಶಪಡಿಸಿದೆ. ಲಕ್ಷಾಂತರ ಯುವಜನರು ನಿರುದ್ಯೋಗಿಗಳಾಗಿದ್ದಾರೆ. ಮೋದಿಯವರು 2 ಕೋಟಿ ಉದ್ಯೋಗಗಳ ಭರವಸೆ ನೀಡಿದ್ದರು. ಆದರೆ ಉದ್ಯೋಗಗಳು ಎಲ್ಲಿವೆ? ಎಂದು ಮಹಮ್ಮದ್ ಕಬೀರ್ ಅಹ್ಮದ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ವರ್ಷಕ್ಕೆ ಕೋಟಿ ಉದ್ಯೋಗಗಳು ಇಲ್ಲ,
15 ಲಕ್ಷ ಇಲ್ಲ,
100 ಸ್ಮಾರ್ಟ್ ಸಿಟೀಸ್ ಇಲ್ಲ,
ಬುಲೆಟ್ ರೈಲು ಇಲ್ಲ,
ರೈತರ ಆದಾಯ ಡಬಲ್ ಇಲ್ಲ,
ಭಯೋತ್ಪಾದನೆಯನ್ನು ತೆಗೆದುಹಾಕುವುದು ಇಲ್ಲ,
ಆದರೆ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಮಾತ್ರ ಆಗಿದೆ ಎಂದು ಗೌರವ್ ಪಾಂಡಿ ವ್ಯಂಗ್ಯವಾಡಿದ್ದಾರೆ.

ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಉದ್ಯೋಗಬೇಕು, ಕೌಶಲ್ಯಬೇಕು ಎಂದು ಆಗ್ರಹಿಸಿ ಟ್ವೀಟ್ ಮಾಡಿರುವುದನ್ನು ನೆನಪಿಸಿರುವ ಯುವಜನರು ಹೀಗೇಕೆ ಉದ್ಯೋಗ ಕೊಡುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿ: ಬಿಹಾರ: 19 ಲಕ್ಷ ಉದ್ಯೋಗ ನೀಡದಿದ್ದರೆ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ – ತೇಜಸ್ವಿ ಯಾದವ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Petrol tax decrease immidiatly and also collected tax amt utilize the honestly and important public require ments. Present situation regarding vehicle on different taxes(lifetax, insurence, toll tax , tragic taxes vehicle loan and intrest), fines, is very irritate the common and middle classes, govt concentrate to common rule to vip and common publics.

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...