Homeಮುಖಪುಟಮೋದಿ APMCಗಳನ್ನು ಕೊಲ್ಲುತ್ತಿದ್ದಾರೆ: ಟ್ವಿಟರ್‌ ಟ್ರೆಂಡಿಂಗ್‌

ಮೋದಿ APMCಗಳನ್ನು ಕೊಲ್ಲುತ್ತಿದ್ದಾರೆ: ಟ್ವಿಟರ್‌ ಟ್ರೆಂಡಿಂಗ್‌

ಹೊಸ ಕೃಷಿ ಕಾನೂನುಗಳು 6 ತಿಂಗಳಲ್ಲಿ ಮಧ್ಯಪ್ರದೇಶದ 70% ಮಂಡಿಗಳನ್ನು ಪಾರ್ಶ್ವವಾಯುವಿಗೆ ತಳ್ಳಿವೆ ಎಂದು ಯಾಸ್ಸಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಆಡಳಿತಾರೂಢ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಖಾಸಗಿ ಮಂಡಿಗಳಿಗೆ ಅವಕಾಶ ಕಲ್ಪಿಸುವುದಕ್ಕೆ ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ಜಾರಿ ಮಾಡಿರುವ ಬೆನ್ನಲ್ಲೇ ಎಪಿಎಂಸಿಗಳು ಸೊರಗತೊಡಗಿವೆ ಎಂದು ರೈತರು ಆರೋಪಿಸುತ್ತಿದ್ದಾರೆ. ಇದರಿಂದಾಗಿ ತಾವು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಇಲ್ಲದೇ ಸಿಕ್ಕಷ್ಟು ಬೆಲೆಗೆ ಮಾರಬೇಕಾದ ಪರಿಸ್ಥಿತಿ ಬಂದೊದಗಿದೆ ಎನ್ನುತ್ತಿದ್ದಾರೆ. ಈ ಬಗ್ಗೆ ಜನಸಾಮಾನ್ಯರು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, #Modi_Killing_Mandis (ಮೋದಿ ಎಪಿಎಂಸಿಗಳನ್ನು ಕೊಲ್ಲುತ್ತಿದ್ದಾರೆ) ಎಂಬ ಹ್ಯಾಷ್‌ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌ ಆಗಿದ್ದು, ಈವರೆಗೂ ಸುಮಾರು 72 ಸಾವಿರ ಟ್ವೀಟ್‌ಗಳು ದಾಖಲಾಗಿವೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಸಂಯುಕ್ತ ಕಿಸಾನ್‌ ಮೋರ್ಚಾ, ‘ಮೂರು ಕರಾಳ ಕೃಷಿ ಕಾಯ್ದೆಗಳ ಅನುಷ್ಠಾನವು ಕನಿಷ್ಠ ಬೆಂಬಲ ಬೆಲೆಯ ಮೇಲೆ ದುಷ್ಪರಿಣಾಮ ಬೀರುವುದು ಮಾತ್ರವಲ್ಲದೇ ಎಪಿಎಂಸಿ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಹುನ್ನಾರವಾಗಿದೆ. ಮಂಡಿಗಳನ್ನು ಕೊಲ್ಲುವ ಈ ಹೊಸ ಕಾನೂನುಗಳು ಸಣ್ಣ ಮತ್ತು ಬಡ ರೈತರ ಮೇಲೆ ಕೆಟ್ಟ ಪರಿಣಾಮ ಬೀರಲಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

‘ಬೇರೆ ದೇಶಗಳು ಕೋವಿಡ್‌-19 ಎದುರಿಸಲು ಮತ್ತು ಆರ್ಥಿಕತೆ ಪುನಶ್ಚೇತನಗೊಳಿಸುವತ್ತ ಗಮನಹರಿಸಿದ್ದರೆ, ಮೋದಿ ಸರ್ಕಾರ ಕೃಷಿ ಕ್ಷೇತ್ರವನ್ನು ನಾಶ ಮಾಡುತ್ತಾ ಚುನಾವಣೆಯಲ್ಲಿ ಗೆಲ್ಲುವುದರ ಬಗ್ಗೆ ಗಮನಹರಿಸಿದೆ’ ಎಂದು ಕೇಂದ್ರ ಸರ್ಕಾರದ ನಡೆಯನ್ನು ಟೀಕಿಸಿದೆ.

ಜಿಂದ್‌ಮನ್‌ ಎನ್ನುವವರು ಎಪಿಎಂಸಿ ಮಂಡಿಗಳ ಪರವಾಗಿ ಟ್ವೀಟ್‌ ಮಾಡಿದ್ದು, ‘ಮಂಡಿಗಳಿಗೆ ರೈತರು ತರುವ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ದೊರಕುವುದು ಎಂಬ ನಂಬಿಕೆ ಎಂಪಿಎಂಸಿಗಳಲ್ಲಿದೆ. ಆದರೆ ಮೋದಿ ಮಂಡಿಗಳನ್ನು ನಾಶಮಾಡುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.

ಮಂಡಿಗಳೆಂದರೆ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಎಂದರ್ಥ. ಅವುಗಳನ್ನು ರದ್ದುಗೊಳಿಸುವ ಮೂಲಕ ಸರ್ಕಾರವು ರೈತರನ್ನು ಬಂಡವಾಳಶಾಹಿಗಳ ಮರ್ಜಿಗೆ ದೂಕುತ್ತಿದೆ. ಒಂದು ದೇಶ, ಒಂದು ಮಂಡಿ ಎಂಬುದು ಕೇವಲ ಮರೀಚಿಕೆ ಎಂದು ಮತ್ತೊಬ್ಬ ಟ್ವಿಟರ್ ಬಳಕೆದಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೊಸ ಕೃಷಿ ಕಾನೂನುಗಳು 6 ತಿಂಗಳಲ್ಲಿ ಮಧ್ಯಪ್ರದೇಶದ 70% ಮಂಡಿಗಳನ್ನು ಪಾರ್ಶ್ವವಾಯುವಿಗೆ ತಳ್ಳಿವೆ ಎಂದು ಯಾಸ್ಸಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಮಾಡಿರುವ ರೈತ ವಿರೋಧಿ ಕೃಷಿ ಕಾಯ್ದೆಗಳು ರದ್ದಾಗಬೇಕು ಮತ್ತು ಕನಿಷ್ಠ ಬೆಂಬಲ ಬೆಲೆ ಕಾನೂನುಬದ್ಧವಾಗಬೇಕು ಎಂದು ಒತ್ತಾಯಿಸಿ ಕಳೆದ 140 ದಿನಗಳಿಂದ ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶದ ಪಶ್ಚಿಮ ಭಾಗದ ರೈತರು ದೆಹಲಿ ಗಡಿಗಳಲ್ಲಿ ಮೊಕ್ಕಾಮ್‌ ಹೂಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈವರೆಗೂ ರೈತರ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡದ ಒಕ್ಕೂಟ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಮಾಡಿರುವುದಲ್ಲದೇ, ರಸಗೊಬ್ಬರ ದರ ಏರಿಕೆಗೆ ಮೌನವಾಗಿಯೇ ಸಮ್ಮತಿ ಸೂಚಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿ ಈವರೆಗೂ ಸುಮಾರು 13 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಇತ್ತು. ರೈತರು ಮಂಡಿಗಳಲ್ಲಿ ಕನಿಷ್ಠ ಬೆಂಬಲ ಬೆಲೆಗೆ ತಮ್ಮ ಬೆಳೆಗಳನ್ನು ಮಾರುತ್ತಿದ್ದರು. ಪ್ರಸ್ತುತ ರಾಜ್ಯ ಬಿಜೆಪಿ ಸರ್ಕಾರವು ಸಹ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದೆ. ಹಾಗಾಗಿ ಇಲ್ಲಿಯ ಎಪಿಎಂಸಿಗಳು ಸಹ ಸೊರಗುತ್ತಿವೆ ಎಂಬ ಆರೋಪ ಕೇಳಿಬಂದಿವೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ; ರೈತ ಹೋರಾಟ: ಕೇಂದ್ರದೊಂದಿಗೆ ಮಾತುಕತೆಗೆ ಸಿದ್ದವಿದ್ದೇವೆ, ಹಕ್ಕೊತ್ತಾಯಗಳು ಅವೆ ಇರಲಿವೆ- ರಾಕೇಶ್‌ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...