Homeಮುಖಪುಟಮೋದಿ APMCಗಳನ್ನು ಕೊಲ್ಲುತ್ತಿದ್ದಾರೆ: ಟ್ವಿಟರ್‌ ಟ್ರೆಂಡಿಂಗ್‌

ಮೋದಿ APMCಗಳನ್ನು ಕೊಲ್ಲುತ್ತಿದ್ದಾರೆ: ಟ್ವಿಟರ್‌ ಟ್ರೆಂಡಿಂಗ್‌

ಹೊಸ ಕೃಷಿ ಕಾನೂನುಗಳು 6 ತಿಂಗಳಲ್ಲಿ ಮಧ್ಯಪ್ರದೇಶದ 70% ಮಂಡಿಗಳನ್ನು ಪಾರ್ಶ್ವವಾಯುವಿಗೆ ತಳ್ಳಿವೆ ಎಂದು ಯಾಸ್ಸಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಆಡಳಿತಾರೂಢ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಖಾಸಗಿ ಮಂಡಿಗಳಿಗೆ ಅವಕಾಶ ಕಲ್ಪಿಸುವುದಕ್ಕೆ ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ಜಾರಿ ಮಾಡಿರುವ ಬೆನ್ನಲ್ಲೇ ಎಪಿಎಂಸಿಗಳು ಸೊರಗತೊಡಗಿವೆ ಎಂದು ರೈತರು ಆರೋಪಿಸುತ್ತಿದ್ದಾರೆ. ಇದರಿಂದಾಗಿ ತಾವು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಇಲ್ಲದೇ ಸಿಕ್ಕಷ್ಟು ಬೆಲೆಗೆ ಮಾರಬೇಕಾದ ಪರಿಸ್ಥಿತಿ ಬಂದೊದಗಿದೆ ಎನ್ನುತ್ತಿದ್ದಾರೆ. ಈ ಬಗ್ಗೆ ಜನಸಾಮಾನ್ಯರು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, #Modi_Killing_Mandis (ಮೋದಿ ಎಪಿಎಂಸಿಗಳನ್ನು ಕೊಲ್ಲುತ್ತಿದ್ದಾರೆ) ಎಂಬ ಹ್ಯಾಷ್‌ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌ ಆಗಿದ್ದು, ಈವರೆಗೂ ಸುಮಾರು 72 ಸಾವಿರ ಟ್ವೀಟ್‌ಗಳು ದಾಖಲಾಗಿವೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಸಂಯುಕ್ತ ಕಿಸಾನ್‌ ಮೋರ್ಚಾ, ‘ಮೂರು ಕರಾಳ ಕೃಷಿ ಕಾಯ್ದೆಗಳ ಅನುಷ್ಠಾನವು ಕನಿಷ್ಠ ಬೆಂಬಲ ಬೆಲೆಯ ಮೇಲೆ ದುಷ್ಪರಿಣಾಮ ಬೀರುವುದು ಮಾತ್ರವಲ್ಲದೇ ಎಪಿಎಂಸಿ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಹುನ್ನಾರವಾಗಿದೆ. ಮಂಡಿಗಳನ್ನು ಕೊಲ್ಲುವ ಈ ಹೊಸ ಕಾನೂನುಗಳು ಸಣ್ಣ ಮತ್ತು ಬಡ ರೈತರ ಮೇಲೆ ಕೆಟ್ಟ ಪರಿಣಾಮ ಬೀರಲಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

‘ಬೇರೆ ದೇಶಗಳು ಕೋವಿಡ್‌-19 ಎದುರಿಸಲು ಮತ್ತು ಆರ್ಥಿಕತೆ ಪುನಶ್ಚೇತನಗೊಳಿಸುವತ್ತ ಗಮನಹರಿಸಿದ್ದರೆ, ಮೋದಿ ಸರ್ಕಾರ ಕೃಷಿ ಕ್ಷೇತ್ರವನ್ನು ನಾಶ ಮಾಡುತ್ತಾ ಚುನಾವಣೆಯಲ್ಲಿ ಗೆಲ್ಲುವುದರ ಬಗ್ಗೆ ಗಮನಹರಿಸಿದೆ’ ಎಂದು ಕೇಂದ್ರ ಸರ್ಕಾರದ ನಡೆಯನ್ನು ಟೀಕಿಸಿದೆ.

ಜಿಂದ್‌ಮನ್‌ ಎನ್ನುವವರು ಎಪಿಎಂಸಿ ಮಂಡಿಗಳ ಪರವಾಗಿ ಟ್ವೀಟ್‌ ಮಾಡಿದ್ದು, ‘ಮಂಡಿಗಳಿಗೆ ರೈತರು ತರುವ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ದೊರಕುವುದು ಎಂಬ ನಂಬಿಕೆ ಎಂಪಿಎಂಸಿಗಳಲ್ಲಿದೆ. ಆದರೆ ಮೋದಿ ಮಂಡಿಗಳನ್ನು ನಾಶಮಾಡುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.

ಮಂಡಿಗಳೆಂದರೆ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಎಂದರ್ಥ. ಅವುಗಳನ್ನು ರದ್ದುಗೊಳಿಸುವ ಮೂಲಕ ಸರ್ಕಾರವು ರೈತರನ್ನು ಬಂಡವಾಳಶಾಹಿಗಳ ಮರ್ಜಿಗೆ ದೂಕುತ್ತಿದೆ. ಒಂದು ದೇಶ, ಒಂದು ಮಂಡಿ ಎಂಬುದು ಕೇವಲ ಮರೀಚಿಕೆ ಎಂದು ಮತ್ತೊಬ್ಬ ಟ್ವಿಟರ್ ಬಳಕೆದಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೊಸ ಕೃಷಿ ಕಾನೂನುಗಳು 6 ತಿಂಗಳಲ್ಲಿ ಮಧ್ಯಪ್ರದೇಶದ 70% ಮಂಡಿಗಳನ್ನು ಪಾರ್ಶ್ವವಾಯುವಿಗೆ ತಳ್ಳಿವೆ ಎಂದು ಯಾಸ್ಸಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಮಾಡಿರುವ ರೈತ ವಿರೋಧಿ ಕೃಷಿ ಕಾಯ್ದೆಗಳು ರದ್ದಾಗಬೇಕು ಮತ್ತು ಕನಿಷ್ಠ ಬೆಂಬಲ ಬೆಲೆ ಕಾನೂನುಬದ್ಧವಾಗಬೇಕು ಎಂದು ಒತ್ತಾಯಿಸಿ ಕಳೆದ 140 ದಿನಗಳಿಂದ ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶದ ಪಶ್ಚಿಮ ಭಾಗದ ರೈತರು ದೆಹಲಿ ಗಡಿಗಳಲ್ಲಿ ಮೊಕ್ಕಾಮ್‌ ಹೂಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈವರೆಗೂ ರೈತರ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡದ ಒಕ್ಕೂಟ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಮಾಡಿರುವುದಲ್ಲದೇ, ರಸಗೊಬ್ಬರ ದರ ಏರಿಕೆಗೆ ಮೌನವಾಗಿಯೇ ಸಮ್ಮತಿ ಸೂಚಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿ ಈವರೆಗೂ ಸುಮಾರು 13 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಇತ್ತು. ರೈತರು ಮಂಡಿಗಳಲ್ಲಿ ಕನಿಷ್ಠ ಬೆಂಬಲ ಬೆಲೆಗೆ ತಮ್ಮ ಬೆಳೆಗಳನ್ನು ಮಾರುತ್ತಿದ್ದರು. ಪ್ರಸ್ತುತ ರಾಜ್ಯ ಬಿಜೆಪಿ ಸರ್ಕಾರವು ಸಹ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದೆ. ಹಾಗಾಗಿ ಇಲ್ಲಿಯ ಎಪಿಎಂಸಿಗಳು ಸಹ ಸೊರಗುತ್ತಿವೆ ಎಂಬ ಆರೋಪ ಕೇಳಿಬಂದಿವೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ; ರೈತ ಹೋರಾಟ: ಕೇಂದ್ರದೊಂದಿಗೆ ಮಾತುಕತೆಗೆ ಸಿದ್ದವಿದ್ದೇವೆ, ಹಕ್ಕೊತ್ತಾಯಗಳು ಅವೆ ಇರಲಿವೆ- ರಾಕೇಶ್‌ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...