Homeಮುಖಪುಟಮೋದಿ APMCಗಳನ್ನು ಕೊಲ್ಲುತ್ತಿದ್ದಾರೆ: ಟ್ವಿಟರ್‌ ಟ್ರೆಂಡಿಂಗ್‌

ಮೋದಿ APMCಗಳನ್ನು ಕೊಲ್ಲುತ್ತಿದ್ದಾರೆ: ಟ್ವಿಟರ್‌ ಟ್ರೆಂಡಿಂಗ್‌

ಹೊಸ ಕೃಷಿ ಕಾನೂನುಗಳು 6 ತಿಂಗಳಲ್ಲಿ ಮಧ್ಯಪ್ರದೇಶದ 70% ಮಂಡಿಗಳನ್ನು ಪಾರ್ಶ್ವವಾಯುವಿಗೆ ತಳ್ಳಿವೆ ಎಂದು ಯಾಸ್ಸಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಆಡಳಿತಾರೂಢ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಖಾಸಗಿ ಮಂಡಿಗಳಿಗೆ ಅವಕಾಶ ಕಲ್ಪಿಸುವುದಕ್ಕೆ ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ಜಾರಿ ಮಾಡಿರುವ ಬೆನ್ನಲ್ಲೇ ಎಪಿಎಂಸಿಗಳು ಸೊರಗತೊಡಗಿವೆ ಎಂದು ರೈತರು ಆರೋಪಿಸುತ್ತಿದ್ದಾರೆ. ಇದರಿಂದಾಗಿ ತಾವು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಇಲ್ಲದೇ ಸಿಕ್ಕಷ್ಟು ಬೆಲೆಗೆ ಮಾರಬೇಕಾದ ಪರಿಸ್ಥಿತಿ ಬಂದೊದಗಿದೆ ಎನ್ನುತ್ತಿದ್ದಾರೆ. ಈ ಬಗ್ಗೆ ಜನಸಾಮಾನ್ಯರು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, #Modi_Killing_Mandis (ಮೋದಿ ಎಪಿಎಂಸಿಗಳನ್ನು ಕೊಲ್ಲುತ್ತಿದ್ದಾರೆ) ಎಂಬ ಹ್ಯಾಷ್‌ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಡಿಂಗ್‌ ಆಗಿದ್ದು, ಈವರೆಗೂ ಸುಮಾರು 72 ಸಾವಿರ ಟ್ವೀಟ್‌ಗಳು ದಾಖಲಾಗಿವೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಸಂಯುಕ್ತ ಕಿಸಾನ್‌ ಮೋರ್ಚಾ, ‘ಮೂರು ಕರಾಳ ಕೃಷಿ ಕಾಯ್ದೆಗಳ ಅನುಷ್ಠಾನವು ಕನಿಷ್ಠ ಬೆಂಬಲ ಬೆಲೆಯ ಮೇಲೆ ದುಷ್ಪರಿಣಾಮ ಬೀರುವುದು ಮಾತ್ರವಲ್ಲದೇ ಎಪಿಎಂಸಿ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಹುನ್ನಾರವಾಗಿದೆ. ಮಂಡಿಗಳನ್ನು ಕೊಲ್ಲುವ ಈ ಹೊಸ ಕಾನೂನುಗಳು ಸಣ್ಣ ಮತ್ತು ಬಡ ರೈತರ ಮೇಲೆ ಕೆಟ್ಟ ಪರಿಣಾಮ ಬೀರಲಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

‘ಬೇರೆ ದೇಶಗಳು ಕೋವಿಡ್‌-19 ಎದುರಿಸಲು ಮತ್ತು ಆರ್ಥಿಕತೆ ಪುನಶ್ಚೇತನಗೊಳಿಸುವತ್ತ ಗಮನಹರಿಸಿದ್ದರೆ, ಮೋದಿ ಸರ್ಕಾರ ಕೃಷಿ ಕ್ಷೇತ್ರವನ್ನು ನಾಶ ಮಾಡುತ್ತಾ ಚುನಾವಣೆಯಲ್ಲಿ ಗೆಲ್ಲುವುದರ ಬಗ್ಗೆ ಗಮನಹರಿಸಿದೆ’ ಎಂದು ಕೇಂದ್ರ ಸರ್ಕಾರದ ನಡೆಯನ್ನು ಟೀಕಿಸಿದೆ.

ಜಿಂದ್‌ಮನ್‌ ಎನ್ನುವವರು ಎಪಿಎಂಸಿ ಮಂಡಿಗಳ ಪರವಾಗಿ ಟ್ವೀಟ್‌ ಮಾಡಿದ್ದು, ‘ಮಂಡಿಗಳಿಗೆ ರೈತರು ತರುವ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ದೊರಕುವುದು ಎಂಬ ನಂಬಿಕೆ ಎಂಪಿಎಂಸಿಗಳಲ್ಲಿದೆ. ಆದರೆ ಮೋದಿ ಮಂಡಿಗಳನ್ನು ನಾಶಮಾಡುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.

ಮಂಡಿಗಳೆಂದರೆ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಎಂದರ್ಥ. ಅವುಗಳನ್ನು ರದ್ದುಗೊಳಿಸುವ ಮೂಲಕ ಸರ್ಕಾರವು ರೈತರನ್ನು ಬಂಡವಾಳಶಾಹಿಗಳ ಮರ್ಜಿಗೆ ದೂಕುತ್ತಿದೆ. ಒಂದು ದೇಶ, ಒಂದು ಮಂಡಿ ಎಂಬುದು ಕೇವಲ ಮರೀಚಿಕೆ ಎಂದು ಮತ್ತೊಬ್ಬ ಟ್ವಿಟರ್ ಬಳಕೆದಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೊಸ ಕೃಷಿ ಕಾನೂನುಗಳು 6 ತಿಂಗಳಲ್ಲಿ ಮಧ್ಯಪ್ರದೇಶದ 70% ಮಂಡಿಗಳನ್ನು ಪಾರ್ಶ್ವವಾಯುವಿಗೆ ತಳ್ಳಿವೆ ಎಂದು ಯಾಸ್ಸಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಮಾಡಿರುವ ರೈತ ವಿರೋಧಿ ಕೃಷಿ ಕಾಯ್ದೆಗಳು ರದ್ದಾಗಬೇಕು ಮತ್ತು ಕನಿಷ್ಠ ಬೆಂಬಲ ಬೆಲೆ ಕಾನೂನುಬದ್ಧವಾಗಬೇಕು ಎಂದು ಒತ್ತಾಯಿಸಿ ಕಳೆದ 140 ದಿನಗಳಿಂದ ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶದ ಪಶ್ಚಿಮ ಭಾಗದ ರೈತರು ದೆಹಲಿ ಗಡಿಗಳಲ್ಲಿ ಮೊಕ್ಕಾಮ್‌ ಹೂಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈವರೆಗೂ ರೈತರ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡದ ಒಕ್ಕೂಟ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಮಾಡಿರುವುದಲ್ಲದೇ, ರಸಗೊಬ್ಬರ ದರ ಏರಿಕೆಗೆ ಮೌನವಾಗಿಯೇ ಸಮ್ಮತಿ ಸೂಚಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿ ಈವರೆಗೂ ಸುಮಾರು 13 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಇತ್ತು. ರೈತರು ಮಂಡಿಗಳಲ್ಲಿ ಕನಿಷ್ಠ ಬೆಂಬಲ ಬೆಲೆಗೆ ತಮ್ಮ ಬೆಳೆಗಳನ್ನು ಮಾರುತ್ತಿದ್ದರು. ಪ್ರಸ್ತುತ ರಾಜ್ಯ ಬಿಜೆಪಿ ಸರ್ಕಾರವು ಸಹ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದೆ. ಹಾಗಾಗಿ ಇಲ್ಲಿಯ ಎಪಿಎಂಸಿಗಳು ಸಹ ಸೊರಗುತ್ತಿವೆ ಎಂಬ ಆರೋಪ ಕೇಳಿಬಂದಿವೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ; ರೈತ ಹೋರಾಟ: ಕೇಂದ್ರದೊಂದಿಗೆ ಮಾತುಕತೆಗೆ ಸಿದ್ದವಿದ್ದೇವೆ, ಹಕ್ಕೊತ್ತಾಯಗಳು ಅವೆ ಇರಲಿವೆ- ರಾಕೇಶ್‌ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...