Homeಮುಖಪುಟಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

ಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅತ್ಯಂತ ತುಚ್ಛವಾಗಿ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಿಮಂತ ಬಿಸ್ವಾ ಅವರನ್ನು ವಜಾಗೊಳಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಒತ್ತಾಯಿಸಿದ್ದಾರೆ.

ಶರ್ಮಾ ಅವರ ಹೇಳಿಕೆಗಳಿಗೆ ಬೇಸರ ವ್ಯಕ್ತಪಡಿಸಿರುವ ಕೆಸಿಆರ್‌, “ಮೋದಿಜಿ! ಇದೇನಾ ನಮ್ಮ ಭಾರತೀಯ ಸಂಸ್ಕೃತಿ? ವೇದಗಳು, ಮಹಾಭಾರತ, ರಾಮಾಯಣ ಮತ್ತು ಭಗವದ್ಗೀತೆಗಳಲ್ಲಿ ಇದನ್ನೇ ಕಲಿಸಲಾಗಿದೆಯೇ? ನಾನು ಬಿಜೆಪಿ ಅಧ್ಯಕ್ಷ ನಡ್ಡಾಜಿ ಅವರನ್ನು ಕೇಳುತ್ತಿದ್ದೇನೆ. ಇದು ನಮ್ಮ ಸಂಸ್ಕೃತಿಯೇ?” ಎಂದು ಪ್ರಶ್ನಿಸಿದ್ದಾರೆ.

ಶುಕ್ರವಾರ, ಫೆಬ್ರವರಿ 11ರಂದು ಉತ್ತರಾಖಂಡ್‌ನಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಾ ಶರ್ಮಾ ಅವರು ರಾಹುಲ್ ಗಾಂಧಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸೆಪ್ಟೆಂಬರ್ 2016ರ ಸರ್ಜಿಕಲ್ ಸ್ಟ್ರೈಕ್‌ನ ಪುರಾವೆಯನ್ನು ಕೋರಿದ್ದಕ್ಕಾಗಿ ಮತ್ತು ಕೋವಿಡ್-19 ಲಸಿಕೆಗಳ ಪರಿಣಾಮಕಾರಿವನ್ನು ಪ್ರಶ್ನಿಸಿದ್ದಕ್ಕಾಗಿ ರಾಹುಲ್‌ ಅವರನ್ನು ಅಸಂವಿಧಾನಿಕವಾಗಿ ನಿಂದಿಸಿದ್ದರು. “ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ಬಿಜೆಪಿ ಎಂದಾದರೂ ಪುರಾವೆ ಕೇಳಿದೆಯೇ?” ಎಂದು ಶರ್ಮಾ ಹೇಳಿದ್ದರು.

ಹೈದರಾಬಾದ್‌ನಿಂದ ಸುಮಾರು 55 ಕಿ.ಮೀ. ದೂರದಲ್ಲಿರುವ ರಾಯಗಿರಿಯಲ್ಲಿ ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿದ ಅವರು, “ನೀವು ಅವರನ್ನು (ಅಸ್ಸಾಂ ಸಿಎಂ) ವಜಾ ಮಾಡಿ ಎಂದು ನಾನು ಒತ್ತಾಯಿಸುತ್ತಿದ್ದೇನೆ. ಮುಖ್ಯಮಂತ್ರಿಯೊಬ್ಬರು ಈ ರೀತಿ ಮಾತನಾಡಬಹುದೇ? ಎಲ್ಲಕ್ಕೂ ಮಿತಿಗಳಿರುತ್ತವೆ. ನೀವು ಅಹಂಕಾರ ತೋರಿಸುತ್ತಿರಿ. ತಮಾಷೆ ಮಾಡುತ್ತೀರಾ? ಜನರು ಮೌನವಾಗಿರುತ್ತಾರೆ ಎಂದು ನೀವು ಭಾವಿಸುತ್ತೀರಿ” ಎಂದು ಹೇಳಿದರು.

“ಇದು ಬಿಜೆಪಿಯ ಸಂಸ್ಕೃತಿಯೇ? ಇದು ಹಿಂದೂ ಧರ್ಮ ಮತ್ತು ಭಾರತೀಯ ಸಂಸ್ಕೃತಿಯೇ? ನಾನು ಭಾರತೀಯನಾಗಿ ಬೇಡಿಕೆ ಇಡುತ್ತಿದ್ದೇನೆ. ನನಗೆ ನಾಚಿಕೆಯಾಗುತ್ತಿದೆ. ಇದು ದೇಶಕ್ಕೆ ಒಳ್ಳೆಯದಲ್ಲ. ನಾವು ಕೈಮುಗಿದು ಸುಮ್ಮನಿರುತ್ತೇವೆ ಎಂದು ನೀವು ಭಾವಿಸುತ್ತೀರಾ?” ಎಂದು ಕೆಸಿಆರ್ ಪ್ರಶ್ನಿಸಿದ್ದಾರೆ.

ಉತ್ತರಾಖಂಡ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ಶರ್ಮಾ, ಲಸಿಕೆಗಳು ಮತ್ತು ಸರ್ಜಿಕಲ್ ಸ್ಟ್ರೈಕ್‌ಗಳ ಪರಿಣಾಮಕಾರಿತ್ವದ ಪುರಾವೆಯನ್ನು ಒತ್ತಾಯಿಸಿ ಕಾಂಗ್ರೆಸ್ ನಕಾರಾತ್ಮಕ ರಾಜಕೀಯ ಮಾಡುತ್ತಿದೆ. ವೀರ ಸೈನಿಕರ ಶೌರ್ಯವನ್ನು ಪ್ರಶ್ನಿಸುತ್ತಿದೆ ಎಂದಿದ್ದರು.

“ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ನಾವು ಎಂದಾದರೂ ರಾಹುಲ್ ಗಾಂಧಿ ಅವರಿಂದ ಪುರಾವೆ ಕೇಳಿದ್ದೇವೆಯೇ?” ಫೆಬ್ರವರಿ 14 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದ ಶರ್ಮಾ ಅವರು ಸುದ್ದಿಗಾರರನ್ನು ಕೇಳಿದ್ದರು.

“ಉತ್ತರಾಖಂಡದಲ್ಲಿ ಮುಸ್ಲಿಂ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಕಾಂಗ್ರೆಸ್ ಮುಚ್ಚಿದ ಆಶ್ವಾಸನೆಗಳನ್ನು ನೀಡಿದೆ” ಎಂದಿದ್ದ ಶರ್ಮಾ, “ಜಿನ್ನಾ ಅವರ ಆತ್ಮ ಕಾಂಗ್ರೆಸ್ ಪಕ್ಷವನ್ನು ಪ್ರವೇಶಿಸಿದೆ ಎಂದು ತೋರುತ್ತದೆ. ಇದು ಜಿನ್ನಾ ಮಾತನಾಡುವ ಭಾಷೆಯನ್ನೇ ಮಾತನಾಡುತ್ತಿದೆ” ಎಂದು ದೂರಿದ್ದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಗಳನ್ನು ವಿರೋಧಿಸಿ ಕಾಂಗ್ರೆಸ್‌ನ ಯುವ ಮತ್ತು ವಿದ್ಯಾರ್ಥಿ ಘಟಕಗಳ ಸದಸ್ಯರು ಫೆಬ್ರವರಿ 12ರ ಶನಿವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು.

ಭಾರತೀಯ ಯುವ ಕಾಂಗ್ರೆಸ್ ಘಟಕದ (ಐವೈಸಿ) ಕಾರ್ಯಕರ್ತರು ಘಟಕದ ಅಧ್ಯಕ್ಷ ಶ್ರೀನಿವಾಸ್ ಬಿವಿ ನೇತೃತ್ವದಲ್ಲಿ ಅಸ್ಸಾಂ ಭವನದ ಬಳಿ ಪ್ರತಿಭಟನೆ ನಡೆಸಿದರೆ, ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟವು ತನ್ನ ರಾಷ್ಟ್ರೀಯ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿತ್ತು.


ಇದನ್ನೂ ಓದಿರಿ: ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...