Homeಮುಖಪುಟಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

ಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅತ್ಯಂತ ತುಚ್ಛವಾಗಿ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಿಮಂತ ಬಿಸ್ವಾ ಅವರನ್ನು ವಜಾಗೊಳಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಒತ್ತಾಯಿಸಿದ್ದಾರೆ.

ಶರ್ಮಾ ಅವರ ಹೇಳಿಕೆಗಳಿಗೆ ಬೇಸರ ವ್ಯಕ್ತಪಡಿಸಿರುವ ಕೆಸಿಆರ್‌, “ಮೋದಿಜಿ! ಇದೇನಾ ನಮ್ಮ ಭಾರತೀಯ ಸಂಸ್ಕೃತಿ? ವೇದಗಳು, ಮಹಾಭಾರತ, ರಾಮಾಯಣ ಮತ್ತು ಭಗವದ್ಗೀತೆಗಳಲ್ಲಿ ಇದನ್ನೇ ಕಲಿಸಲಾಗಿದೆಯೇ? ನಾನು ಬಿಜೆಪಿ ಅಧ್ಯಕ್ಷ ನಡ್ಡಾಜಿ ಅವರನ್ನು ಕೇಳುತ್ತಿದ್ದೇನೆ. ಇದು ನಮ್ಮ ಸಂಸ್ಕೃತಿಯೇ?” ಎಂದು ಪ್ರಶ್ನಿಸಿದ್ದಾರೆ.

ಶುಕ್ರವಾರ, ಫೆಬ್ರವರಿ 11ರಂದು ಉತ್ತರಾಖಂಡ್‌ನಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಾ ಶರ್ಮಾ ಅವರು ರಾಹುಲ್ ಗಾಂಧಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸೆಪ್ಟೆಂಬರ್ 2016ರ ಸರ್ಜಿಕಲ್ ಸ್ಟ್ರೈಕ್‌ನ ಪುರಾವೆಯನ್ನು ಕೋರಿದ್ದಕ್ಕಾಗಿ ಮತ್ತು ಕೋವಿಡ್-19 ಲಸಿಕೆಗಳ ಪರಿಣಾಮಕಾರಿವನ್ನು ಪ್ರಶ್ನಿಸಿದ್ದಕ್ಕಾಗಿ ರಾಹುಲ್‌ ಅವರನ್ನು ಅಸಂವಿಧಾನಿಕವಾಗಿ ನಿಂದಿಸಿದ್ದರು. “ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ಬಿಜೆಪಿ ಎಂದಾದರೂ ಪುರಾವೆ ಕೇಳಿದೆಯೇ?” ಎಂದು ಶರ್ಮಾ ಹೇಳಿದ್ದರು.

ಹೈದರಾಬಾದ್‌ನಿಂದ ಸುಮಾರು 55 ಕಿ.ಮೀ. ದೂರದಲ್ಲಿರುವ ರಾಯಗಿರಿಯಲ್ಲಿ ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿದ ಅವರು, “ನೀವು ಅವರನ್ನು (ಅಸ್ಸಾಂ ಸಿಎಂ) ವಜಾ ಮಾಡಿ ಎಂದು ನಾನು ಒತ್ತಾಯಿಸುತ್ತಿದ್ದೇನೆ. ಮುಖ್ಯಮಂತ್ರಿಯೊಬ್ಬರು ಈ ರೀತಿ ಮಾತನಾಡಬಹುದೇ? ಎಲ್ಲಕ್ಕೂ ಮಿತಿಗಳಿರುತ್ತವೆ. ನೀವು ಅಹಂಕಾರ ತೋರಿಸುತ್ತಿರಿ. ತಮಾಷೆ ಮಾಡುತ್ತೀರಾ? ಜನರು ಮೌನವಾಗಿರುತ್ತಾರೆ ಎಂದು ನೀವು ಭಾವಿಸುತ್ತೀರಿ” ಎಂದು ಹೇಳಿದರು.

“ಇದು ಬಿಜೆಪಿಯ ಸಂಸ್ಕೃತಿಯೇ? ಇದು ಹಿಂದೂ ಧರ್ಮ ಮತ್ತು ಭಾರತೀಯ ಸಂಸ್ಕೃತಿಯೇ? ನಾನು ಭಾರತೀಯನಾಗಿ ಬೇಡಿಕೆ ಇಡುತ್ತಿದ್ದೇನೆ. ನನಗೆ ನಾಚಿಕೆಯಾಗುತ್ತಿದೆ. ಇದು ದೇಶಕ್ಕೆ ಒಳ್ಳೆಯದಲ್ಲ. ನಾವು ಕೈಮುಗಿದು ಸುಮ್ಮನಿರುತ್ತೇವೆ ಎಂದು ನೀವು ಭಾವಿಸುತ್ತೀರಾ?” ಎಂದು ಕೆಸಿಆರ್ ಪ್ರಶ್ನಿಸಿದ್ದಾರೆ.

ಉತ್ತರಾಖಂಡ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ಶರ್ಮಾ, ಲಸಿಕೆಗಳು ಮತ್ತು ಸರ್ಜಿಕಲ್ ಸ್ಟ್ರೈಕ್‌ಗಳ ಪರಿಣಾಮಕಾರಿತ್ವದ ಪುರಾವೆಯನ್ನು ಒತ್ತಾಯಿಸಿ ಕಾಂಗ್ರೆಸ್ ನಕಾರಾತ್ಮಕ ರಾಜಕೀಯ ಮಾಡುತ್ತಿದೆ. ವೀರ ಸೈನಿಕರ ಶೌರ್ಯವನ್ನು ಪ್ರಶ್ನಿಸುತ್ತಿದೆ ಎಂದಿದ್ದರು.

“ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ನಾವು ಎಂದಾದರೂ ರಾಹುಲ್ ಗಾಂಧಿ ಅವರಿಂದ ಪುರಾವೆ ಕೇಳಿದ್ದೇವೆಯೇ?” ಫೆಬ್ರವರಿ 14 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದ ಶರ್ಮಾ ಅವರು ಸುದ್ದಿಗಾರರನ್ನು ಕೇಳಿದ್ದರು.

“ಉತ್ತರಾಖಂಡದಲ್ಲಿ ಮುಸ್ಲಿಂ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಕಾಂಗ್ರೆಸ್ ಮುಚ್ಚಿದ ಆಶ್ವಾಸನೆಗಳನ್ನು ನೀಡಿದೆ” ಎಂದಿದ್ದ ಶರ್ಮಾ, “ಜಿನ್ನಾ ಅವರ ಆತ್ಮ ಕಾಂಗ್ರೆಸ್ ಪಕ್ಷವನ್ನು ಪ್ರವೇಶಿಸಿದೆ ಎಂದು ತೋರುತ್ತದೆ. ಇದು ಜಿನ್ನಾ ಮಾತನಾಡುವ ಭಾಷೆಯನ್ನೇ ಮಾತನಾಡುತ್ತಿದೆ” ಎಂದು ದೂರಿದ್ದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಗಳನ್ನು ವಿರೋಧಿಸಿ ಕಾಂಗ್ರೆಸ್‌ನ ಯುವ ಮತ್ತು ವಿದ್ಯಾರ್ಥಿ ಘಟಕಗಳ ಸದಸ್ಯರು ಫೆಬ್ರವರಿ 12ರ ಶನಿವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು.

ಭಾರತೀಯ ಯುವ ಕಾಂಗ್ರೆಸ್ ಘಟಕದ (ಐವೈಸಿ) ಕಾರ್ಯಕರ್ತರು ಘಟಕದ ಅಧ್ಯಕ್ಷ ಶ್ರೀನಿವಾಸ್ ಬಿವಿ ನೇತೃತ್ವದಲ್ಲಿ ಅಸ್ಸಾಂ ಭವನದ ಬಳಿ ಪ್ರತಿಭಟನೆ ನಡೆಸಿದರೆ, ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟವು ತನ್ನ ರಾಷ್ಟ್ರೀಯ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿತ್ತು.


ಇದನ್ನೂ ಓದಿರಿ: ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...