Homeಮುಖಪುಟಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

ಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅತ್ಯಂತ ತುಚ್ಛವಾಗಿ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಿಮಂತ ಬಿಸ್ವಾ ಅವರನ್ನು ವಜಾಗೊಳಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಒತ್ತಾಯಿಸಿದ್ದಾರೆ.

ಶರ್ಮಾ ಅವರ ಹೇಳಿಕೆಗಳಿಗೆ ಬೇಸರ ವ್ಯಕ್ತಪಡಿಸಿರುವ ಕೆಸಿಆರ್‌, “ಮೋದಿಜಿ! ಇದೇನಾ ನಮ್ಮ ಭಾರತೀಯ ಸಂಸ್ಕೃತಿ? ವೇದಗಳು, ಮಹಾಭಾರತ, ರಾಮಾಯಣ ಮತ್ತು ಭಗವದ್ಗೀತೆಗಳಲ್ಲಿ ಇದನ್ನೇ ಕಲಿಸಲಾಗಿದೆಯೇ? ನಾನು ಬಿಜೆಪಿ ಅಧ್ಯಕ್ಷ ನಡ್ಡಾಜಿ ಅವರನ್ನು ಕೇಳುತ್ತಿದ್ದೇನೆ. ಇದು ನಮ್ಮ ಸಂಸ್ಕೃತಿಯೇ?” ಎಂದು ಪ್ರಶ್ನಿಸಿದ್ದಾರೆ.

ಶುಕ್ರವಾರ, ಫೆಬ್ರವರಿ 11ರಂದು ಉತ್ತರಾಖಂಡ್‌ನಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಾ ಶರ್ಮಾ ಅವರು ರಾಹುಲ್ ಗಾಂಧಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸೆಪ್ಟೆಂಬರ್ 2016ರ ಸರ್ಜಿಕಲ್ ಸ್ಟ್ರೈಕ್‌ನ ಪುರಾವೆಯನ್ನು ಕೋರಿದ್ದಕ್ಕಾಗಿ ಮತ್ತು ಕೋವಿಡ್-19 ಲಸಿಕೆಗಳ ಪರಿಣಾಮಕಾರಿವನ್ನು ಪ್ರಶ್ನಿಸಿದ್ದಕ್ಕಾಗಿ ರಾಹುಲ್‌ ಅವರನ್ನು ಅಸಂವಿಧಾನಿಕವಾಗಿ ನಿಂದಿಸಿದ್ದರು. “ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ಬಿಜೆಪಿ ಎಂದಾದರೂ ಪುರಾವೆ ಕೇಳಿದೆಯೇ?” ಎಂದು ಶರ್ಮಾ ಹೇಳಿದ್ದರು.

ಹೈದರಾಬಾದ್‌ನಿಂದ ಸುಮಾರು 55 ಕಿ.ಮೀ. ದೂರದಲ್ಲಿರುವ ರಾಯಗಿರಿಯಲ್ಲಿ ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿದ ಅವರು, “ನೀವು ಅವರನ್ನು (ಅಸ್ಸಾಂ ಸಿಎಂ) ವಜಾ ಮಾಡಿ ಎಂದು ನಾನು ಒತ್ತಾಯಿಸುತ್ತಿದ್ದೇನೆ. ಮುಖ್ಯಮಂತ್ರಿಯೊಬ್ಬರು ಈ ರೀತಿ ಮಾತನಾಡಬಹುದೇ? ಎಲ್ಲಕ್ಕೂ ಮಿತಿಗಳಿರುತ್ತವೆ. ನೀವು ಅಹಂಕಾರ ತೋರಿಸುತ್ತಿರಿ. ತಮಾಷೆ ಮಾಡುತ್ತೀರಾ? ಜನರು ಮೌನವಾಗಿರುತ್ತಾರೆ ಎಂದು ನೀವು ಭಾವಿಸುತ್ತೀರಿ” ಎಂದು ಹೇಳಿದರು.

“ಇದು ಬಿಜೆಪಿಯ ಸಂಸ್ಕೃತಿಯೇ? ಇದು ಹಿಂದೂ ಧರ್ಮ ಮತ್ತು ಭಾರತೀಯ ಸಂಸ್ಕೃತಿಯೇ? ನಾನು ಭಾರತೀಯನಾಗಿ ಬೇಡಿಕೆ ಇಡುತ್ತಿದ್ದೇನೆ. ನನಗೆ ನಾಚಿಕೆಯಾಗುತ್ತಿದೆ. ಇದು ದೇಶಕ್ಕೆ ಒಳ್ಳೆಯದಲ್ಲ. ನಾವು ಕೈಮುಗಿದು ಸುಮ್ಮನಿರುತ್ತೇವೆ ಎಂದು ನೀವು ಭಾವಿಸುತ್ತೀರಾ?” ಎಂದು ಕೆಸಿಆರ್ ಪ್ರಶ್ನಿಸಿದ್ದಾರೆ.

ಉತ್ತರಾಖಂಡ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ಶರ್ಮಾ, ಲಸಿಕೆಗಳು ಮತ್ತು ಸರ್ಜಿಕಲ್ ಸ್ಟ್ರೈಕ್‌ಗಳ ಪರಿಣಾಮಕಾರಿತ್ವದ ಪುರಾವೆಯನ್ನು ಒತ್ತಾಯಿಸಿ ಕಾಂಗ್ರೆಸ್ ನಕಾರಾತ್ಮಕ ರಾಜಕೀಯ ಮಾಡುತ್ತಿದೆ. ವೀರ ಸೈನಿಕರ ಶೌರ್ಯವನ್ನು ಪ್ರಶ್ನಿಸುತ್ತಿದೆ ಎಂದಿದ್ದರು.

“ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ನಾವು ಎಂದಾದರೂ ರಾಹುಲ್ ಗಾಂಧಿ ಅವರಿಂದ ಪುರಾವೆ ಕೇಳಿದ್ದೇವೆಯೇ?” ಫೆಬ್ರವರಿ 14 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದ ಶರ್ಮಾ ಅವರು ಸುದ್ದಿಗಾರರನ್ನು ಕೇಳಿದ್ದರು.

“ಉತ್ತರಾಖಂಡದಲ್ಲಿ ಮುಸ್ಲಿಂ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಕಾಂಗ್ರೆಸ್ ಮುಚ್ಚಿದ ಆಶ್ವಾಸನೆಗಳನ್ನು ನೀಡಿದೆ” ಎಂದಿದ್ದ ಶರ್ಮಾ, “ಜಿನ್ನಾ ಅವರ ಆತ್ಮ ಕಾಂಗ್ರೆಸ್ ಪಕ್ಷವನ್ನು ಪ್ರವೇಶಿಸಿದೆ ಎಂದು ತೋರುತ್ತದೆ. ಇದು ಜಿನ್ನಾ ಮಾತನಾಡುವ ಭಾಷೆಯನ್ನೇ ಮಾತನಾಡುತ್ತಿದೆ” ಎಂದು ದೂರಿದ್ದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಗಳನ್ನು ವಿರೋಧಿಸಿ ಕಾಂಗ್ರೆಸ್‌ನ ಯುವ ಮತ್ತು ವಿದ್ಯಾರ್ಥಿ ಘಟಕಗಳ ಸದಸ್ಯರು ಫೆಬ್ರವರಿ 12ರ ಶನಿವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು.

ಭಾರತೀಯ ಯುವ ಕಾಂಗ್ರೆಸ್ ಘಟಕದ (ಐವೈಸಿ) ಕಾರ್ಯಕರ್ತರು ಘಟಕದ ಅಧ್ಯಕ್ಷ ಶ್ರೀನಿವಾಸ್ ಬಿವಿ ನೇತೃತ್ವದಲ್ಲಿ ಅಸ್ಸಾಂ ಭವನದ ಬಳಿ ಪ್ರತಿಭಟನೆ ನಡೆಸಿದರೆ, ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟವು ತನ್ನ ರಾಷ್ಟ್ರೀಯ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿತ್ತು.


ಇದನ್ನೂ ಓದಿರಿ: ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...