Homeಮುಖಪುಟಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

ಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅತ್ಯಂತ ತುಚ್ಛವಾಗಿ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಿಮಂತ ಬಿಸ್ವಾ ಅವರನ್ನು ವಜಾಗೊಳಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಒತ್ತಾಯಿಸಿದ್ದಾರೆ.

ಶರ್ಮಾ ಅವರ ಹೇಳಿಕೆಗಳಿಗೆ ಬೇಸರ ವ್ಯಕ್ತಪಡಿಸಿರುವ ಕೆಸಿಆರ್‌, “ಮೋದಿಜಿ! ಇದೇನಾ ನಮ್ಮ ಭಾರತೀಯ ಸಂಸ್ಕೃತಿ? ವೇದಗಳು, ಮಹಾಭಾರತ, ರಾಮಾಯಣ ಮತ್ತು ಭಗವದ್ಗೀತೆಗಳಲ್ಲಿ ಇದನ್ನೇ ಕಲಿಸಲಾಗಿದೆಯೇ? ನಾನು ಬಿಜೆಪಿ ಅಧ್ಯಕ್ಷ ನಡ್ಡಾಜಿ ಅವರನ್ನು ಕೇಳುತ್ತಿದ್ದೇನೆ. ಇದು ನಮ್ಮ ಸಂಸ್ಕೃತಿಯೇ?” ಎಂದು ಪ್ರಶ್ನಿಸಿದ್ದಾರೆ.

ಶುಕ್ರವಾರ, ಫೆಬ್ರವರಿ 11ರಂದು ಉತ್ತರಾಖಂಡ್‌ನಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಾ ಶರ್ಮಾ ಅವರು ರಾಹುಲ್ ಗಾಂಧಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸೆಪ್ಟೆಂಬರ್ 2016ರ ಸರ್ಜಿಕಲ್ ಸ್ಟ್ರೈಕ್‌ನ ಪುರಾವೆಯನ್ನು ಕೋರಿದ್ದಕ್ಕಾಗಿ ಮತ್ತು ಕೋವಿಡ್-19 ಲಸಿಕೆಗಳ ಪರಿಣಾಮಕಾರಿವನ್ನು ಪ್ರಶ್ನಿಸಿದ್ದಕ್ಕಾಗಿ ರಾಹುಲ್‌ ಅವರನ್ನು ಅಸಂವಿಧಾನಿಕವಾಗಿ ನಿಂದಿಸಿದ್ದರು. “ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ಬಿಜೆಪಿ ಎಂದಾದರೂ ಪುರಾವೆ ಕೇಳಿದೆಯೇ?” ಎಂದು ಶರ್ಮಾ ಹೇಳಿದ್ದರು.

ಹೈದರಾಬಾದ್‌ನಿಂದ ಸುಮಾರು 55 ಕಿ.ಮೀ. ದೂರದಲ್ಲಿರುವ ರಾಯಗಿರಿಯಲ್ಲಿ ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿದ ಅವರು, “ನೀವು ಅವರನ್ನು (ಅಸ್ಸಾಂ ಸಿಎಂ) ವಜಾ ಮಾಡಿ ಎಂದು ನಾನು ಒತ್ತಾಯಿಸುತ್ತಿದ್ದೇನೆ. ಮುಖ್ಯಮಂತ್ರಿಯೊಬ್ಬರು ಈ ರೀತಿ ಮಾತನಾಡಬಹುದೇ? ಎಲ್ಲಕ್ಕೂ ಮಿತಿಗಳಿರುತ್ತವೆ. ನೀವು ಅಹಂಕಾರ ತೋರಿಸುತ್ತಿರಿ. ತಮಾಷೆ ಮಾಡುತ್ತೀರಾ? ಜನರು ಮೌನವಾಗಿರುತ್ತಾರೆ ಎಂದು ನೀವು ಭಾವಿಸುತ್ತೀರಿ” ಎಂದು ಹೇಳಿದರು.

“ಇದು ಬಿಜೆಪಿಯ ಸಂಸ್ಕೃತಿಯೇ? ಇದು ಹಿಂದೂ ಧರ್ಮ ಮತ್ತು ಭಾರತೀಯ ಸಂಸ್ಕೃತಿಯೇ? ನಾನು ಭಾರತೀಯನಾಗಿ ಬೇಡಿಕೆ ಇಡುತ್ತಿದ್ದೇನೆ. ನನಗೆ ನಾಚಿಕೆಯಾಗುತ್ತಿದೆ. ಇದು ದೇಶಕ್ಕೆ ಒಳ್ಳೆಯದಲ್ಲ. ನಾವು ಕೈಮುಗಿದು ಸುಮ್ಮನಿರುತ್ತೇವೆ ಎಂದು ನೀವು ಭಾವಿಸುತ್ತೀರಾ?” ಎಂದು ಕೆಸಿಆರ್ ಪ್ರಶ್ನಿಸಿದ್ದಾರೆ.

ಉತ್ತರಾಖಂಡ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ಶರ್ಮಾ, ಲಸಿಕೆಗಳು ಮತ್ತು ಸರ್ಜಿಕಲ್ ಸ್ಟ್ರೈಕ್‌ಗಳ ಪರಿಣಾಮಕಾರಿತ್ವದ ಪುರಾವೆಯನ್ನು ಒತ್ತಾಯಿಸಿ ಕಾಂಗ್ರೆಸ್ ನಕಾರಾತ್ಮಕ ರಾಜಕೀಯ ಮಾಡುತ್ತಿದೆ. ವೀರ ಸೈನಿಕರ ಶೌರ್ಯವನ್ನು ಪ್ರಶ್ನಿಸುತ್ತಿದೆ ಎಂದಿದ್ದರು.

“ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ನಾವು ಎಂದಾದರೂ ರಾಹುಲ್ ಗಾಂಧಿ ಅವರಿಂದ ಪುರಾವೆ ಕೇಳಿದ್ದೇವೆಯೇ?” ಫೆಬ್ರವರಿ 14 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದ ಶರ್ಮಾ ಅವರು ಸುದ್ದಿಗಾರರನ್ನು ಕೇಳಿದ್ದರು.

“ಉತ್ತರಾಖಂಡದಲ್ಲಿ ಮುಸ್ಲಿಂ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಕಾಂಗ್ರೆಸ್ ಮುಚ್ಚಿದ ಆಶ್ವಾಸನೆಗಳನ್ನು ನೀಡಿದೆ” ಎಂದಿದ್ದ ಶರ್ಮಾ, “ಜಿನ್ನಾ ಅವರ ಆತ್ಮ ಕಾಂಗ್ರೆಸ್ ಪಕ್ಷವನ್ನು ಪ್ರವೇಶಿಸಿದೆ ಎಂದು ತೋರುತ್ತದೆ. ಇದು ಜಿನ್ನಾ ಮಾತನಾಡುವ ಭಾಷೆಯನ್ನೇ ಮಾತನಾಡುತ್ತಿದೆ” ಎಂದು ದೂರಿದ್ದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಗಳನ್ನು ವಿರೋಧಿಸಿ ಕಾಂಗ್ರೆಸ್‌ನ ಯುವ ಮತ್ತು ವಿದ್ಯಾರ್ಥಿ ಘಟಕಗಳ ಸದಸ್ಯರು ಫೆಬ್ರವರಿ 12ರ ಶನಿವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು.

ಭಾರತೀಯ ಯುವ ಕಾಂಗ್ರೆಸ್ ಘಟಕದ (ಐವೈಸಿ) ಕಾರ್ಯಕರ್ತರು ಘಟಕದ ಅಧ್ಯಕ್ಷ ಶ್ರೀನಿವಾಸ್ ಬಿವಿ ನೇತೃತ್ವದಲ್ಲಿ ಅಸ್ಸಾಂ ಭವನದ ಬಳಿ ಪ್ರತಿಭಟನೆ ನಡೆಸಿದರೆ, ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟವು ತನ್ನ ರಾಷ್ಟ್ರೀಯ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿತ್ತು.


ಇದನ್ನೂ ಓದಿರಿ: ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...