Homeಕರೋನಾ ತಲ್ಲಣಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ದಿನೇದಿನೇ ಹದಗೆಡುತ್ತಿದ್ದು ಪ್ರಸ್ತುತ ಆಘಾತಕಾರಿ ಹಂತಕ್ಕೆ ತಲುಪಿದೆ. ಇಂತಹ ಪರಿಸ್ಥಿತಿಯಲ್ಲಿ ಮತ್ತಷ್ಟು ಕಾಲಹರಣ ಮಾಡದೇ ಕೊರೊನಾ ಸಮಸ್ಯೆಯನ್ನು ನಿಯಂತ್ರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದ ‘ಕರ್ನಾಟಕ ಜನಾರೋಗ್ಯ ಚಳುವಳಿ’ಯ ಹ್ಯಾಶ್‌‌ಟ್ಯಾಗ್‌ ಆಂದೋಲನವು ಶನಿವಾರ ಟ್ರೆಂಡ್ ಆಗಿದೆ.

ಜನಾರೋಗ್ಯ ಚಳುವಳಿಯು, ‘ರಾಜ್ಯದಲ್ಲಿ ಆಕ್ಸಿಜನ್ ಬೆಡ್ ಹೆಚ್ಚಿಸಿ’, ‘ಪ್ರತಿದಿನ ಎಷ್ಟು ಹೊಸ ಬೆಡ್ ವ್ಯವಸ್ಥೆ ಆಯಿತು ಎಂಬ ವರದಿ ಕೊಡಿ’, ‘ಬೆಂಗಳೂರಿನ ಸರ್ಕಾರೀ ಆರೋಗ್ಯ ವ್ಯವಸ್ಥೆ ಬಲಪಡಿಸಿ’, ‘ಒಕ್ಕೂಟ ಸರ್ಕಾರದಿಂದ ಆಕ್ಸಿಜನ್ ಪಾಲಿನ ಹಕ್ಕು ಪಡೆದಿದ್ದರ ಲೆಕ್ಕ ಕೊಡಿ’ ಮುಂತಾದ ಬೇಡಿಕೆಗಳನ್ನು ಇಟ್ಟು, #DemandEverydayReport, #Implement_Citizen’s_charter, #oxygenbedslekkakodi ಜೊತೆಗೆ #ModiOxygenDo ಮುಂತಾದ ಹ್ಯಾಶ್‌ಟ್ಯಾಗ್‌ಗನ್ನು ಇಟ್ಟು ಟ್ವಿಟರ್‌ ಅಭಿಯಾನ ನಡೆಸಿದೆ.

ಅದರಲ್ಲೂ ದೇಶದಾದ್ಯಂತ ಆಮ್ಲಜನಕ ಕೊರತೆ ಇರುವ ಬಗ್ಗೆ ವರದಿಗಳಾಗುತ್ತಿದ್ದು, ‘ಭಾಷಣಕಾರ ಮೋದಿ’(भाषणबाज_मोदी) ಹಾಗೂ #ModiOxygenDo( ಮೋದಿ ಆಮ್ಲಜನಕ ಕೊಡಿ) ದೇಶದಾದ್ಯಂತ ಟ್ರೆಂಡ್ ಆಗಿದೆ.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ: ಶನಿವಾರ ಮತ್ತು ಭಾನುವಾರ ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ

ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಸುಧಾಕರ್‌‌ ಅವರಿಗೆ ಟ್ಯಾಗ್‌ ಮಾಡಿ, ಕರ್ನಾಕಟ ಜನಾರೋಗ್ಯ ಚಳುವಳಿಯು, “ಹಾಸಿಗೆಗಳ ಕುರಿತು ದೈನಂದಿನ ವರದಿ ನೀಡಬೇಕು ಎಂದು ಒತ್ತಾಯಿಸುತ್ತಿದ್ದೇವೆ” ಎಂದು ಟ್ವೀಟ್ ಮಾಡಿದೆ.

ಆಕಾಶ್ ಅವರು, ಪ್ರಧಾನ ಮಂತ್ರಿ ಯಾರ ಬಗ್ಗೆ ಕಾಳಜಿ ವಹಿಸಿದ್ದಾರೆ? ಎಂದು ಪ್ರಧಾನಿ, ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವ ಸುಧಾಕರ್‌ ಅವರಿಗೆ ಟ್ಯಾಗ್ ಮಾಡಿ ಪ್ರಶ್ನಿಸಿದ್ದಾರೆ?.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

“ಸಾವಿರಾರು ನಾಗರಿಕರ ಸಾವಿಗಿಂತ ಗರ್ಭಿಣಿ ಆನೆ ಸಾವಿಗೀಡಾಗಿದ್ದಕ್ಕೆ ನಮ್ಮ ಕ್ರಿಕೇಟಿಗರು ಮತ್ತು ನಟರು ಮಾತನಾಡುತ್ತಾರೆ. ಅವರು ತಮ್ಮ ಗುಲಾಮಗಿರಿಯ ಬಗ್ಗೆ ನಾಚಿಕೆಪಡುವವರೆಗೂ ಇದನ್ನು ಶೇರ್‌ ಮಾಡಿ” ಎಂದು ತೆಲಂಗಾಣದ ಶಾಸಕಿ ದನಸಾರಿ ಅನಸೂಯ ಅವರು, ಕೊರೊನಾದಿಂದ ಸಾವಿಗೀಡಾಗಿರುವವರ ಶರೀರವನ್ನು ಸುಡುತ್ತಿರುವ ಚಿತ್ರವನ್ನು ಟ್ವೀಟ್‌ ಮಾಡಿದ್ದಾರೆ

ಇದನ್ನೂ ಓದಿ: ಆಕ್ಸಿಜನ್, ಐಸಿಯು ಕೊರತೆಯಿಂದ ಉಂಟಾಗುವ ಸಾವುಗಳಿಗೆ ಕೇಂದ್ರವೇ ಹೊಣೆ- ರಾಹುಲ್ ಗಾಂಧಿ

 

ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ವಿಡಿಯೊ ನೋಡಿ►► ಕೋವಿಡ್ ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲಿ ಜಿಲ್ಲಾ/ತಾಲೂಕು ಮಟ್ಟದಲ್ಲಿ ನಾವೇನು ಮಾಡಬಹುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...