Homeಕರೋನಾ ತಲ್ಲಣಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ದಿನೇದಿನೇ ಹದಗೆಡುತ್ತಿದ್ದು ಪ್ರಸ್ತುತ ಆಘಾತಕಾರಿ ಹಂತಕ್ಕೆ ತಲುಪಿದೆ. ಇಂತಹ ಪರಿಸ್ಥಿತಿಯಲ್ಲಿ ಮತ್ತಷ್ಟು ಕಾಲಹರಣ ಮಾಡದೇ ಕೊರೊನಾ ಸಮಸ್ಯೆಯನ್ನು ನಿಯಂತ್ರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದ ‘ಕರ್ನಾಟಕ ಜನಾರೋಗ್ಯ ಚಳುವಳಿ’ಯ ಹ್ಯಾಶ್‌‌ಟ್ಯಾಗ್‌ ಆಂದೋಲನವು ಶನಿವಾರ ಟ್ರೆಂಡ್ ಆಗಿದೆ.

ಜನಾರೋಗ್ಯ ಚಳುವಳಿಯು, ‘ರಾಜ್ಯದಲ್ಲಿ ಆಕ್ಸಿಜನ್ ಬೆಡ್ ಹೆಚ್ಚಿಸಿ’, ‘ಪ್ರತಿದಿನ ಎಷ್ಟು ಹೊಸ ಬೆಡ್ ವ್ಯವಸ್ಥೆ ಆಯಿತು ಎಂಬ ವರದಿ ಕೊಡಿ’, ‘ಬೆಂಗಳೂರಿನ ಸರ್ಕಾರೀ ಆರೋಗ್ಯ ವ್ಯವಸ್ಥೆ ಬಲಪಡಿಸಿ’, ‘ಒಕ್ಕೂಟ ಸರ್ಕಾರದಿಂದ ಆಕ್ಸಿಜನ್ ಪಾಲಿನ ಹಕ್ಕು ಪಡೆದಿದ್ದರ ಲೆಕ್ಕ ಕೊಡಿ’ ಮುಂತಾದ ಬೇಡಿಕೆಗಳನ್ನು ಇಟ್ಟು, #DemandEverydayReport, #Implement_Citizen’s_charter, #oxygenbedslekkakodi ಜೊತೆಗೆ #ModiOxygenDo ಮುಂತಾದ ಹ್ಯಾಶ್‌ಟ್ಯಾಗ್‌ಗನ್ನು ಇಟ್ಟು ಟ್ವಿಟರ್‌ ಅಭಿಯಾನ ನಡೆಸಿದೆ.

ಅದರಲ್ಲೂ ದೇಶದಾದ್ಯಂತ ಆಮ್ಲಜನಕ ಕೊರತೆ ಇರುವ ಬಗ್ಗೆ ವರದಿಗಳಾಗುತ್ತಿದ್ದು, ‘ಭಾಷಣಕಾರ ಮೋದಿ’(भाषणबाज_मोदी) ಹಾಗೂ #ModiOxygenDo( ಮೋದಿ ಆಮ್ಲಜನಕ ಕೊಡಿ) ದೇಶದಾದ್ಯಂತ ಟ್ರೆಂಡ್ ಆಗಿದೆ.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ: ಶನಿವಾರ ಮತ್ತು ಭಾನುವಾರ ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ

ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಸುಧಾಕರ್‌‌ ಅವರಿಗೆ ಟ್ಯಾಗ್‌ ಮಾಡಿ, ಕರ್ನಾಕಟ ಜನಾರೋಗ್ಯ ಚಳುವಳಿಯು, “ಹಾಸಿಗೆಗಳ ಕುರಿತು ದೈನಂದಿನ ವರದಿ ನೀಡಬೇಕು ಎಂದು ಒತ್ತಾಯಿಸುತ್ತಿದ್ದೇವೆ” ಎಂದು ಟ್ವೀಟ್ ಮಾಡಿದೆ.

ಆಕಾಶ್ ಅವರು, ಪ್ರಧಾನ ಮಂತ್ರಿ ಯಾರ ಬಗ್ಗೆ ಕಾಳಜಿ ವಹಿಸಿದ್ದಾರೆ? ಎಂದು ಪ್ರಧಾನಿ, ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವ ಸುಧಾಕರ್‌ ಅವರಿಗೆ ಟ್ಯಾಗ್ ಮಾಡಿ ಪ್ರಶ್ನಿಸಿದ್ದಾರೆ?.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

“ಸಾವಿರಾರು ನಾಗರಿಕರ ಸಾವಿಗಿಂತ ಗರ್ಭಿಣಿ ಆನೆ ಸಾವಿಗೀಡಾಗಿದ್ದಕ್ಕೆ ನಮ್ಮ ಕ್ರಿಕೇಟಿಗರು ಮತ್ತು ನಟರು ಮಾತನಾಡುತ್ತಾರೆ. ಅವರು ತಮ್ಮ ಗುಲಾಮಗಿರಿಯ ಬಗ್ಗೆ ನಾಚಿಕೆಪಡುವವರೆಗೂ ಇದನ್ನು ಶೇರ್‌ ಮಾಡಿ” ಎಂದು ತೆಲಂಗಾಣದ ಶಾಸಕಿ ದನಸಾರಿ ಅನಸೂಯ ಅವರು, ಕೊರೊನಾದಿಂದ ಸಾವಿಗೀಡಾಗಿರುವವರ ಶರೀರವನ್ನು ಸುಡುತ್ತಿರುವ ಚಿತ್ರವನ್ನು ಟ್ವೀಟ್‌ ಮಾಡಿದ್ದಾರೆ

ಇದನ್ನೂ ಓದಿ: ಆಕ್ಸಿಜನ್, ಐಸಿಯು ಕೊರತೆಯಿಂದ ಉಂಟಾಗುವ ಸಾವುಗಳಿಗೆ ಕೇಂದ್ರವೇ ಹೊಣೆ- ರಾಹುಲ್ ಗಾಂಧಿ

 

ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ವಿಡಿಯೊ ನೋಡಿ►► ಕೋವಿಡ್ ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲಿ ಜಿಲ್ಲಾ/ತಾಲೂಕು ಮಟ್ಟದಲ್ಲಿ ನಾವೇನು ಮಾಡಬಹುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...