Homeಕರೋನಾ ತಲ್ಲಣಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ದಿನೇದಿನೇ ಹದಗೆಡುತ್ತಿದ್ದು ಪ್ರಸ್ತುತ ಆಘಾತಕಾರಿ ಹಂತಕ್ಕೆ ತಲುಪಿದೆ. ಇಂತಹ ಪರಿಸ್ಥಿತಿಯಲ್ಲಿ ಮತ್ತಷ್ಟು ಕಾಲಹರಣ ಮಾಡದೇ ಕೊರೊನಾ ಸಮಸ್ಯೆಯನ್ನು ನಿಯಂತ್ರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದ ‘ಕರ್ನಾಟಕ ಜನಾರೋಗ್ಯ ಚಳುವಳಿ’ಯ ಹ್ಯಾಶ್‌‌ಟ್ಯಾಗ್‌ ಆಂದೋಲನವು ಶನಿವಾರ ಟ್ರೆಂಡ್ ಆಗಿದೆ.

ಜನಾರೋಗ್ಯ ಚಳುವಳಿಯು, ‘ರಾಜ್ಯದಲ್ಲಿ ಆಕ್ಸಿಜನ್ ಬೆಡ್ ಹೆಚ್ಚಿಸಿ’, ‘ಪ್ರತಿದಿನ ಎಷ್ಟು ಹೊಸ ಬೆಡ್ ವ್ಯವಸ್ಥೆ ಆಯಿತು ಎಂಬ ವರದಿ ಕೊಡಿ’, ‘ಬೆಂಗಳೂರಿನ ಸರ್ಕಾರೀ ಆರೋಗ್ಯ ವ್ಯವಸ್ಥೆ ಬಲಪಡಿಸಿ’, ‘ಒಕ್ಕೂಟ ಸರ್ಕಾರದಿಂದ ಆಕ್ಸಿಜನ್ ಪಾಲಿನ ಹಕ್ಕು ಪಡೆದಿದ್ದರ ಲೆಕ್ಕ ಕೊಡಿ’ ಮುಂತಾದ ಬೇಡಿಕೆಗಳನ್ನು ಇಟ್ಟು, #DemandEverydayReport, #Implement_Citizen’s_charter, #oxygenbedslekkakodi ಜೊತೆಗೆ #ModiOxygenDo ಮುಂತಾದ ಹ್ಯಾಶ್‌ಟ್ಯಾಗ್‌ಗನ್ನು ಇಟ್ಟು ಟ್ವಿಟರ್‌ ಅಭಿಯಾನ ನಡೆಸಿದೆ.

ಅದರಲ್ಲೂ ದೇಶದಾದ್ಯಂತ ಆಮ್ಲಜನಕ ಕೊರತೆ ಇರುವ ಬಗ್ಗೆ ವರದಿಗಳಾಗುತ್ತಿದ್ದು, ‘ಭಾಷಣಕಾರ ಮೋದಿ’(भाषणबाज_मोदी) ಹಾಗೂ #ModiOxygenDo( ಮೋದಿ ಆಮ್ಲಜನಕ ಕೊಡಿ) ದೇಶದಾದ್ಯಂತ ಟ್ರೆಂಡ್ ಆಗಿದೆ.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ: ಶನಿವಾರ ಮತ್ತು ಭಾನುವಾರ ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ

ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಸುಧಾಕರ್‌‌ ಅವರಿಗೆ ಟ್ಯಾಗ್‌ ಮಾಡಿ, ಕರ್ನಾಕಟ ಜನಾರೋಗ್ಯ ಚಳುವಳಿಯು, “ಹಾಸಿಗೆಗಳ ಕುರಿತು ದೈನಂದಿನ ವರದಿ ನೀಡಬೇಕು ಎಂದು ಒತ್ತಾಯಿಸುತ್ತಿದ್ದೇವೆ” ಎಂದು ಟ್ವೀಟ್ ಮಾಡಿದೆ.

ಆಕಾಶ್ ಅವರು, ಪ್ರಧಾನ ಮಂತ್ರಿ ಯಾರ ಬಗ್ಗೆ ಕಾಳಜಿ ವಹಿಸಿದ್ದಾರೆ? ಎಂದು ಪ್ರಧಾನಿ, ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವ ಸುಧಾಕರ್‌ ಅವರಿಗೆ ಟ್ಯಾಗ್ ಮಾಡಿ ಪ್ರಶ್ನಿಸಿದ್ದಾರೆ?.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

“ಸಾವಿರಾರು ನಾಗರಿಕರ ಸಾವಿಗಿಂತ ಗರ್ಭಿಣಿ ಆನೆ ಸಾವಿಗೀಡಾಗಿದ್ದಕ್ಕೆ ನಮ್ಮ ಕ್ರಿಕೇಟಿಗರು ಮತ್ತು ನಟರು ಮಾತನಾಡುತ್ತಾರೆ. ಅವರು ತಮ್ಮ ಗುಲಾಮಗಿರಿಯ ಬಗ್ಗೆ ನಾಚಿಕೆಪಡುವವರೆಗೂ ಇದನ್ನು ಶೇರ್‌ ಮಾಡಿ” ಎಂದು ತೆಲಂಗಾಣದ ಶಾಸಕಿ ದನಸಾರಿ ಅನಸೂಯ ಅವರು, ಕೊರೊನಾದಿಂದ ಸಾವಿಗೀಡಾಗಿರುವವರ ಶರೀರವನ್ನು ಸುಡುತ್ತಿರುವ ಚಿತ್ರವನ್ನು ಟ್ವೀಟ್‌ ಮಾಡಿದ್ದಾರೆ

ಇದನ್ನೂ ಓದಿ: ಆಕ್ಸಿಜನ್, ಐಸಿಯು ಕೊರತೆಯಿಂದ ಉಂಟಾಗುವ ಸಾವುಗಳಿಗೆ ಕೇಂದ್ರವೇ ಹೊಣೆ- ರಾಹುಲ್ ಗಾಂಧಿ

 

ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ವಿಡಿಯೊ ನೋಡಿ►► ಕೋವಿಡ್ ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲಿ ಜಿಲ್ಲಾ/ತಾಲೂಕು ಮಟ್ಟದಲ್ಲಿ ನಾವೇನು ಮಾಡಬಹುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...