Homeಕರೋನಾ ತಲ್ಲಣಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ದಿನೇದಿನೇ ಹದಗೆಡುತ್ತಿದ್ದು ಪ್ರಸ್ತುತ ಆಘಾತಕಾರಿ ಹಂತಕ್ಕೆ ತಲುಪಿದೆ. ಇಂತಹ ಪರಿಸ್ಥಿತಿಯಲ್ಲಿ ಮತ್ತಷ್ಟು ಕಾಲಹರಣ ಮಾಡದೇ ಕೊರೊನಾ ಸಮಸ್ಯೆಯನ್ನು ನಿಯಂತ್ರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದ ‘ಕರ್ನಾಟಕ ಜನಾರೋಗ್ಯ ಚಳುವಳಿ’ಯ ಹ್ಯಾಶ್‌‌ಟ್ಯಾಗ್‌ ಆಂದೋಲನವು ಶನಿವಾರ ಟ್ರೆಂಡ್ ಆಗಿದೆ.

ಜನಾರೋಗ್ಯ ಚಳುವಳಿಯು, ‘ರಾಜ್ಯದಲ್ಲಿ ಆಕ್ಸಿಜನ್ ಬೆಡ್ ಹೆಚ್ಚಿಸಿ’, ‘ಪ್ರತಿದಿನ ಎಷ್ಟು ಹೊಸ ಬೆಡ್ ವ್ಯವಸ್ಥೆ ಆಯಿತು ಎಂಬ ವರದಿ ಕೊಡಿ’, ‘ಬೆಂಗಳೂರಿನ ಸರ್ಕಾರೀ ಆರೋಗ್ಯ ವ್ಯವಸ್ಥೆ ಬಲಪಡಿಸಿ’, ‘ಒಕ್ಕೂಟ ಸರ್ಕಾರದಿಂದ ಆಕ್ಸಿಜನ್ ಪಾಲಿನ ಹಕ್ಕು ಪಡೆದಿದ್ದರ ಲೆಕ್ಕ ಕೊಡಿ’ ಮುಂತಾದ ಬೇಡಿಕೆಗಳನ್ನು ಇಟ್ಟು, #DemandEverydayReport, #Implement_Citizen’s_charter, #oxygenbedslekkakodi ಜೊತೆಗೆ #ModiOxygenDo ಮುಂತಾದ ಹ್ಯಾಶ್‌ಟ್ಯಾಗ್‌ಗನ್ನು ಇಟ್ಟು ಟ್ವಿಟರ್‌ ಅಭಿಯಾನ ನಡೆಸಿದೆ.

ಅದರಲ್ಲೂ ದೇಶದಾದ್ಯಂತ ಆಮ್ಲಜನಕ ಕೊರತೆ ಇರುವ ಬಗ್ಗೆ ವರದಿಗಳಾಗುತ್ತಿದ್ದು, ‘ಭಾಷಣಕಾರ ಮೋದಿ’(भाषणबाज_मोदी) ಹಾಗೂ #ModiOxygenDo( ಮೋದಿ ಆಮ್ಲಜನಕ ಕೊಡಿ) ದೇಶದಾದ್ಯಂತ ಟ್ರೆಂಡ್ ಆಗಿದೆ.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ: ಶನಿವಾರ ಮತ್ತು ಭಾನುವಾರ ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ

ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಸುಧಾಕರ್‌‌ ಅವರಿಗೆ ಟ್ಯಾಗ್‌ ಮಾಡಿ, ಕರ್ನಾಕಟ ಜನಾರೋಗ್ಯ ಚಳುವಳಿಯು, “ಹಾಸಿಗೆಗಳ ಕುರಿತು ದೈನಂದಿನ ವರದಿ ನೀಡಬೇಕು ಎಂದು ಒತ್ತಾಯಿಸುತ್ತಿದ್ದೇವೆ” ಎಂದು ಟ್ವೀಟ್ ಮಾಡಿದೆ.

ಆಕಾಶ್ ಅವರು, ಪ್ರಧಾನ ಮಂತ್ರಿ ಯಾರ ಬಗ್ಗೆ ಕಾಳಜಿ ವಹಿಸಿದ್ದಾರೆ? ಎಂದು ಪ್ರಧಾನಿ, ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವ ಸುಧಾಕರ್‌ ಅವರಿಗೆ ಟ್ಯಾಗ್ ಮಾಡಿ ಪ್ರಶ್ನಿಸಿದ್ದಾರೆ?.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

“ಸಾವಿರಾರು ನಾಗರಿಕರ ಸಾವಿಗಿಂತ ಗರ್ಭಿಣಿ ಆನೆ ಸಾವಿಗೀಡಾಗಿದ್ದಕ್ಕೆ ನಮ್ಮ ಕ್ರಿಕೇಟಿಗರು ಮತ್ತು ನಟರು ಮಾತನಾಡುತ್ತಾರೆ. ಅವರು ತಮ್ಮ ಗುಲಾಮಗಿರಿಯ ಬಗ್ಗೆ ನಾಚಿಕೆಪಡುವವರೆಗೂ ಇದನ್ನು ಶೇರ್‌ ಮಾಡಿ” ಎಂದು ತೆಲಂಗಾಣದ ಶಾಸಕಿ ದನಸಾರಿ ಅನಸೂಯ ಅವರು, ಕೊರೊನಾದಿಂದ ಸಾವಿಗೀಡಾಗಿರುವವರ ಶರೀರವನ್ನು ಸುಡುತ್ತಿರುವ ಚಿತ್ರವನ್ನು ಟ್ವೀಟ್‌ ಮಾಡಿದ್ದಾರೆ

ಇದನ್ನೂ ಓದಿ: ಆಕ್ಸಿಜನ್, ಐಸಿಯು ಕೊರತೆಯಿಂದ ಉಂಟಾಗುವ ಸಾವುಗಳಿಗೆ ಕೇಂದ್ರವೇ ಹೊಣೆ- ರಾಹುಲ್ ಗಾಂಧಿ

 

ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ವಿಡಿಯೊ ನೋಡಿ►► ಕೋವಿಡ್ ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲಿ ಜಿಲ್ಲಾ/ತಾಲೂಕು ಮಟ್ಟದಲ್ಲಿ ನಾವೇನು ಮಾಡಬಹುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...