Homeಮುಖಪುಟ'ಧ್ಯಾನ'ಕ್ಕೆ ಹೊರಡುವ ಮೊದಲು ಕೊನೆಯ ಸಭೆಯಲ್ಲೂ ಸುಳ್ಳು ಹೇಳಿದ್ದ ಮೋದಿ: ಪ್ರಧಾನಿಯ 2024ರ ಚುನಾವಣಾ ಪ್ರಚಾರ...

‘ಧ್ಯಾನ’ಕ್ಕೆ ಹೊರಡುವ ಮೊದಲು ಕೊನೆಯ ಸಭೆಯಲ್ಲೂ ಸುಳ್ಳು ಹೇಳಿದ್ದ ಮೋದಿ: ಪ್ರಧಾನಿಯ 2024ರ ಚುನಾವಣಾ ಪ್ರಚಾರ ಹೇಗಿತ್ತು?

- Advertisement -
- Advertisement -

2024ರ ಲೋಕಸಭಾ ಚುನಾವಣೆಯ ಅಂತಿಮ ರ್ಯಾಲಿಯ ನಂತರ ಪ್ರಧಾನಿ ನರೇಂದ್ರ ಮೋದಿ ಕನ್ಯಾಕುಮಾರಿಯ ವಿವೇಕಾನಂದ ರಾಕ್‌ನಲ್ಲಿ ಎರಡು ದಿನಗಳ “ಧ್ಯಾನ” ಪ್ರಾರಂಭಿಸಿದ್ದಾರೆ. ಮೋದಿ ‘ಧ್ಯಾನ’ ಪ್ರಚಾರ ನೀತಿ ಸಂಹಿತೆ ಉಲ್ಲಂಘನೆ ಎಂದು ಚುನಾವಣಾ ಆಯೋಗಕ್ಕೆ ವಿರೋಧ ಪಕ್ಷಗಳು ದೂರು ನೀಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ, ನಿನ್ನೆಯೇ ಮೋದಿಯ ಧ್ಯಾನದ ಫೋಟೋಗಳು, ವಿಡಿಯೋಗಳು ಎಲ್ಲೆಡೆ ವೈರಲ್‌ ಆಗುತ್ತಿದೆ.

2024ರ ಲೋಕಸಭೆ ಚುನಾವಣೆಗೆ ಮೋದಿ ಪ್ರಚಾರದ ರೀತಿಯು ಆಕ್ಷೇಪಣೆಗೆ ಕಾರಣವಾಗಿದೆ, ಮೋದಿ ಮತಕ್ಕಾಗಿ ಧರ್ಮವನ್ನು ಬಳಸಿದ್ದಾರೆ, ಮುಸ್ಲಿಮರನ್ನು ಬಹಿರಂಗವಾಗಿ ಗುರಿಯಾಗಿಸಿಕೊಂಡಿದ್ದಾರೆ, ಮಂಗಳಸೂತ್ರ, ಗಾಂಧೀಜಿ, ಮಟನ್‌, ಮೀಸಲಾತಿಯನ್ನು ಎಳೆದು ತಂದಿದ್ದಾರೆ. ‘ಧ್ಯಾನ’ಕ್ಕೆ ಹೊರಡುವ ಮೊದಲು ಕೊನೆಯ ಬಾರಿಯ ಸಭೆಯಲ್ಲೂ ಮೋದಿ ‘ಸುಳ್ಳು ಮತ್ತು ದ್ವೇಷದ’ ಹೇಳಿಕೆ ನೀಡಿದ್ದರು. ಮೇ 30ರಂದು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟವು ಎಸ್ಸಿ,ಎಸ್ಟಿ ಒಬಿಸಿಗಳ ಮೀಸಲಾತಿ ಕಸಿದುಕೊಂಡು ಮುಸ್ಲಿಮರಿಗೆ ಮಾತ್ರ ನೀಡಲು ಪ್ರಯತ್ನಿಸುತ್ತಿದೆ ಎಂದು ಮತ್ತೊಮ್ಮೆ ಆರೋಪಿಸಿದ್ದರು. ದಲಿತರು ಮತ್ತು ಹಿಂದುಳಿದ ಜಾತಿಗಳಿಗೆ ಒದಗಿಸಲಾದ ಮೀಸಲಾತಿಯನ್ನು ಯಾರಿಗೂ ಕಿತ್ತುಕೊಳ್ಳಲು ಬಿಡಬಾರದು. ನನ್ನ ಸರ್ಕಾರದ 10 ವರ್ಷಗಳಲ್ಲಿ, ನಾನು ಎಸ್ಸಿ-ಎಸ್ಟಿ ಮತ್ತು ಒಬಿಸಿಗಳ ಮೀಸಲಾತಿಯನ್ನು ರಕ್ಷಿಸಲು ಕೆಲಸ ಮಾಡಿದ್ದೇನೆ. ನನ್ನ ಪ್ರಯತ್ನದಿಂದ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟ ತಳಮಳಗೊಂಡಿದೆ ಎಂದು ಹೇಳಿದ್ದರು.

ಅವರು ಧರ್ಮದ ಆಧಾರದ ಮೇಲೆ ಸರ್ಕಾರಿ ಉದ್ಯೋಗಗಳು, ಕ್ರೀಡೆಗಳು, ಸರ್ಕಾರಿ ಟೆಂಡರ್‌ಗಳು,  ವಿಶ್ವವಿದ್ಯಾಲಯ ಪ್ರವೇಶಗಳಲ್ಲಿ ಮೀಸಲಾತಿಯನ್ನು ಬಯಸುತ್ತಾರೆ. ಇದು ಸಂವಿಧಾನದ ಆಶಯಕ್ಕೆ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಆಶಯಕ್ಕೆ ವಿರುದ್ಧವಾಗಿದೆ. ದಲಿತರು ಮತ್ತು ಹಿಂದುಳಿದ ಜಾತಿಗಳ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಮರಿಗೆ ಮಾತ್ರ ನೀಡಬೇಕು ಎಂದು ಅವರ ಕಲ್ಪನೆಯಾಗಿದೆ ಎಂದು ಹೇಳಿದ್ದರು.

ಎರಡನೇ ಹಂತದ ಮತದಾನ ಮುಕ್ತಾಯದ ನಂತರ, ರಾಜಸ್ಥಾನದ ಬನ್ಸ್ವಾರಾದಲ್ಲಿ ಮೋದಿ ಮೊದಲ ದ್ವೇಷ ಭಾಷಣವನ್ನು ಮಾಡಿದ್ದರು. ಇದು ಮೋದಿಯ ಈ ವರ್ಷದ ಮೊದಲ ದ್ವೇಷ ಭಾಷಣವಾಗಿತ್ತು. ಮೋದಿ  ಭಾರತೀಯ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ತಮ್ಮ ಸಂಪೂರ್ಣ ಪ್ರಚಾರವನ್ನು ರೂಪಿಸಿದ್ದಾರೆ. ಮಂಗಳಸೂತ್ರ, ಕುರಿ ಮಾಂಸ, ಮುಜ್ರಾ, ಬಾಬ್ರಿ ಲಾಕ್‌ನಿಂದ ಹಿಡಿದು ಅಂತಿಮವಾಗಿ ಜಗತ್ತಿಗೆ ಮಹಾತ್ಮಾ ಗಾಂಧಿಯ ಬಗ್ಗೆ ತಿಳಿದಿಲ್ಲ ಎಂದು ಹೇಳುವವರೆಗೆ ಮೋದಿಯವರ 2024ರ ಪ್ರಚಾರವು ಬಹಿರಂಗ ಕೋಮುವಾದವನ್ನು ಕಂಡಿದೆ, ಪ್ರಚಾರ ಭಾಷಣಗಳಲ್ಲಿ ಧರ್ಮದ ಬಳಕೆಯನ್ನು ಸ್ಪಷ್ಟವಾಗಿ ನಿಷೇಧಿಸುವ ಮಾದರಿ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ನಿರ್ಲಕ್ಷಿಸಿದ್ದಾರೆ. ಸಾಲು-ಸಾಲು ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ನೀಡಿದ್ದಾರೆ.

ಮಂಗಳಸೂತ್ರ

ಏಪ್ರಿಲ್ 21ರಂದು ರಾಜಸ್ಥಾನದ ಬನ್ಸ್ವಾರಾದಲ್ಲಿ ಮಾಡಿದ ಭಾಷಣದಲ್ಲಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ ಬಹಿರಂಗವಾಗಿಯೇ ಹೇಳುತ್ತಿದ್ದ ಮೋದಿ ಭಾರತೀಯ ಮುಸ್ಲಿಮರನ್ನು ‘ನುಸುಳುಕೋರರು’, ‘ಹೆಚ್ಚು ಮಕ್ಕಳನ್ನು ಹೊಂದಿರುವವರು’ ಎಂದು ಕರೆದಿದ್ದಾರೆ.

ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎಂದು ಹೇಳಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದರು.

ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ, ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಅವರು ಅದನ್ನು ಯಾರಿಗೆ ಹಂಚುತ್ತಾರೆ? ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿತ್ತು. ಇದನ್ನು ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ? ಇದು ನಿಮಗೆ ಸ್ವೀಕಾರಾರ್ಹವೇ? ನೀವು ಕಷ್ಟಪಟ್ಟು ಸಂಪಾದಿಸಿದ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಸರ್ಕಾರಗಳಿಗೆ ಇದೆಯೇ? ತಾಯಂದಿರ ಮಂಗಳಸೂತ್ರದ ಮೌಲ್ಯವು ಚಿನ್ನ ಅಥವಾ ಅದರ ಬೆಲೆಯಲ್ಲಿಲ್ಲ, ಆದರೆ ಜೀವನದಲ್ಲಿ ಅವಳ ಕನಸುಗಳಿಗೆ ಸಂಬಂಧಿಸಿದೆ ಮತ್ತು ನೀವು ಅದನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದರು. ಮೋದಿಯ ಈ ದ್ವೇಷದ ಭಾಷಣದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಮಟನ್‌

ಬನ್ಸ್ವಾರಾದಲ್ಲಿ ಭಾಷಣ ಮಾಡುವ ಒಂದು ವಾರದ ಮೊದಲು ಏಪ್ರಿಲ್ 12ರಂದು ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ನವರಾತ್ರಿಯಲ್ಲಿ ಮಾಂಸಾಹಾರ ಸೇವಿಸುವ ಮೂಲಕ ಪ್ರತಿಪಕ್ಷಗಳು ಬಹುಸಂಖ್ಯಾತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ನಾಯಕರು ಜನರ ಭಾವನೆಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅವರು ಜನರ ಭಾವನೆಗಳೊಂದಿಗೆ ಆಟವಾಡುತ್ತಾರೆ. ಸಾವನ್ ಸಮಯದಲ್ಲಿ ಮಾಂಸಾಹಾರ ಸೇವಿಸಿದ್ದಾರೆ. ಅಷ್ಟೇ ಅಲ್ಲ, ದೇಶದ ಜನರನ್ನು ಅಪಹಾಸ್ಯ ಮಾಡಲು ವಿಡಿಯೋ ಕೂಡ ಮಾಡಿದ್ದಾರೆ ಎಂದು ಹೇಳಿದ್ದರು.  ಇದಕ್ಕೂ ಒಂದು ಒಂದು ಹೆಜ್ಜೆ ಮುಂದೆ ಹೋಗಿ ಮೋದಿ ವಿರೋಧ ಪಕ್ಷದ ನಾಯಕರನ್ನು ಮೊಘಲರೊಂದಿಗೆ ಹೋಲಿಸಿದ್ದಾರೆ.

ಮೊಘಲರು ಆಕ್ರಮಣ ಮಾಡಿದಾಗ, ಒಬ್ಬ ಆಡಳಿತಗಾರನನ್ನು ಸೋಲಿಸುವುದರಿಂದ ಅವರು ತೃಪ್ತರಾಗುವುದಿಲ್ಲ. ಅವರು ಮಂದಿರಗಳನ್ನು ಮತ್ತು ಇತರ ಪೂಜಾ ಸ್ಥಳಗಳನ್ನು ನಾಶಪಡಿಸುವವರೆಗೆ ಮತ್ತು ಅವರು ತೃಪ್ತರಾಗುವುದಿಲ್ಲ. ಅದರಲ್ಲಿ ಅವರು ಮೋಜು ಮಾಡುತ್ತಿದ್ದರು. ಅದೇ ರೀತಿ ಸಾವನ ಮಾಸದಲ್ಲಿ ವೀಡಿಯೋ ತೋರಿಸುವ ಮೂಲಕ ಮೊಘಲರ ಕಾಲದ ಮನಸ್ಥಿತಿಯನ್ನು ತೋರಿಸಿ ದೇಶದ ಜನರನ್ನು ಗೇಲಿ ಮಾಡಿ ತಮ್ಮ ವೋಟ್ ಬ್ಯಾಂಕ್ ಗಟ್ಟಿಗೊಳಿಸಿಕೊಳ್ಳುತ್ತಿದ್ದಾರೆ ಎಂದು ಮೋದಿ ಹೇಳಿದ್ದರು.

ಮುಸ್ಲಿಂ ಮೀಸಲಾತಿ ಮತ್ತು ಬಜೆಟ್

ಮೀಸಲಾತಿಯ ಮೇಲಿನ 50% ಮಿತಿಯನ್ನು ತೆಗೆದುಹಾಕುವ ಮತ್ತು ಖಾಸಗಿ ಕ್ಷೇತ್ರಕ್ಕೆ ಮೀಸಲಾತಿಯನ್ನು ವಿಸ್ತರಿಸುವ ಕಾಂಗ್ರೆಸ್ ಪ್ರಣಾಳಿಕೆಯ ಭರವಸೆ ಬಗ್ಗೆ ಮೋದಿ ಸತತ ತನ್ನ ಭಾಷಣಗಳಲ್ಲಿ ಸುಳ್ಳು ಹೇಳಿದ್ದಾರೆ.  ಇಂಡಿಯಾ ಮೈತ್ರಿಕೂಟವು ಧರ್ಮಾಧಾರಿತ ಮೀಸಲಾತಿಯನ್ನು ನೀಡುತ್ತದೆ ಎಂದು ಮೋದಿ ತಮ್ಮ ಭಾಷಣಗಳಲ್ಲಿ ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಘೋಸಿಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಇಂಡಿಯಾ ಮೈತ್ರಿಕೂಟವು “ಸಂವಿಧಾನವನ್ನು ಪುನಃ ಬರೆಯುತ್ತದೆ” ಮತ್ತು ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಮೊದಲನೆಯದಾಗಿ, ಇಂಡಿಯಾ ಮೈತ್ರಿಕೂಟವು ಸಂವಿಧಾನವನ್ನು ಬದಲಾಯಿಸುತ್ತದೆ ಮತ್ತು ಭಾರತದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ನೀಡುವ ರೀತಿಯಲ್ಲಿ ಸಂವಿಧಾನವನ್ನು ಬರೆಯುತ್ತದೆ. ಎರಡನೆಯದಾಗಿ ಎಸ್ಸಿ, ಎಸ್ಟಿ, ಒಬಿಸಿಗಳಿಗೆ ನೀಡಿದ ಮೀಸಲಾತಿಯನ್ನು ಕೊನೆಗೊಳಿಸುತ್ತಾರೆ.  ಮೂರನೆಯದಾಗಿ ಅವರು ಮುಸ್ಲಿಮರಿಗೆ ಧರ್ಮದ ಆಧಾರದ ಮೇಲೆ ಸಂಪೂರ್ಣ ಮೀಸಲಾತಿ ನೀಡುತ್ತಾರೆ ಎಂದು ಹೇಳಿದ್ದಾರೆ.

ಇಂದು ಎಸ್‌ಪಿ, ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ವೋಟ್ ಬ್ಯಾಂಕ್ ರಾಜಕಾರಣ ಈ ಮಟ್ಟಕ್ಕೆ ಕುಸಿದಿದೆ. ಅವರು ಭಾರತದಲ್ಲಿ ಬಹುಸಂಖ್ಯಾತ ಸಮುದಾಯವನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಲು ಬಯಸುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ತನ್ನ ಬಜೆಟ್‌ನಲ್ಲಿ 15% ಮೀಸಲಿಡುವುದಾಗಿ ಅವರು ಈ ಹಿಂದೆ ಹೇಳಿಕೊಂಡಿದ್ದರು ಎಂದು ಮೋದಿ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಮಧ್ಯಪ್ರದೇಶದ ಧಾರ್‌ನಲ್ಲಿ ನಡೆದ ರ್ಯಾಲಿಯಲ್ಲಿ ಅವರು ಪ್ರತಿಪಕ್ಷಗಳು ಕ್ರೀಡೆಯಲ್ಲಿಯೂ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಚಿಂತಿಸುತ್ತಿದೆ. ಕ್ರೀಡೆಯಲ್ಲೂ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುವುದು ಕಾಂಗ್ರೆಸ್ ಉದ್ದೇಶ ಎಂದು ಹೇಳಿದ್ದರು.

ಮೋದಿ ಉಲ್ಟಾ ಹೇಳಿಕೆ:

ಮೋದಿಯ ಚುನಾವಣಾ ಪ್ರಚಾರವು ಮುಸ್ಲಿಮರನ್ನು ಗುರಿಯಾಗಿಸುವ ಮೂಲಕ ನಡೆದರೆ,  ದೂರದರ್ಶನ ಸಂದರ್ಶನಗಳಲ್ಲಿ ದ್ವೇಷ ಮಾಡಿರುವುದನ್ನು ನಿರಾಕರಿಸಿದ್ದಾರೆ ಮತ್ತು ನಂತರದ ಚುನಾವಣಾ ರ್ಯಾಲಿಗಳಲ್ಲಿ ಪ್ರಧಾನಿ ಅದೇ ಪ್ರಚೋದನಕಾರಿ ಭಾಷಣಗಳನ್ನು ಮತ್ತೆ ಮುಂದುವರಿಸುತ್ತಾರೆ.

ನಾನು ಹಿಂದೂ-ಮುಸಲ್ಮಾನ ಎಂದು ರಾಜಕೀಯ ಮಾಡುವ ದಿನ, ಸಾರ್ವಜನಿಕ ಜೀವನಕ್ಕೆ ಅನರ್ಹನಾಗುತ್ತೇನೆ. ನಾನು ಅಂತಹ ರಾಜಕೀಯ ಮಾಡುವುದಿಲ್ಲ ಎಂದು ಮೋದಿ ಮೇ 14ರಂದು ಸಂದರ್ಶನದಲ್ಲಿ ಹೇಳಿದ್ದರು. ಮರುದಿನ ಮಹಾರಾಷ್ಟ್ರದ ದಿಂಡೋರಿ ಮತ್ತು ಕಲ್ಯಾಣ್‌ನಲ್ಲಿ ನಡೆದ ರ್ಯಾಲಿಯಲ್ಲಿ ಮೋದಿ ಮತ್ತೊಮ್ಮೆ ಮುಸ್ಲಿಮರನ್ನು ಗುರಿಯಾಗಿಸಿದರು.

ಮಧ್ಯಪ್ರದೇಶದ ಖಾರ್ಗೋನ್ ಮತ್ತು ಧಾರ್ ಜಿಲ್ಲೆಗಳಲ್ಲಿ ಮೇ 7ರಂದು ಮಾತನಾಡಿದ ಮೋದಿ ರಾಮಮಂದಿರಕ್ಕೆ ‘ಬಾಬ್ರಿ ಬೀಗ” ಹಾಕುವುದನ್ನು ತಡೆಯಲು ಮತ್ತು  ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ಮರಳಿ ತರುವುದನ್ನು ತಡೆಯಲು ಬಿಜೆಪಿಗೆ 400 ಸ್ಥಾನಗಳು ಬೇಕು ಎಂದು ಹೇಳಿದ್ದರು.

ಮೇ.16 ರಂದು ಜೈದ್‌ಪುರದಲ್ಲಿ ಮಾತನಾಡಿದ ಮೋದಿ, ಇಂಡಿಯಾ ಮೈತ್ರಿಗೆ ಅಧಿಕಾರ ಕೊಟ್ಟರೆ, ಅವರು ರಾಮ ಮಂದಿರವನ್ನು ಬುಲ್ಡೋಜರ್ ಮಾಡುತ್ತಾರೆ ಎಂದು ಹೇಳಿದ್ದಾರೆ.

ಗಾಂಧಿ ಬಗ್ಗೆ ಯಾರಿಗೂ ಗೊತ್ತಿರಲಿಲ್ಲ

ಮೇ 28ರಂದು ಕೊನೆಯ ಹಂತದ ಚುನಾವಣಾ ಪ್ರಚಾರ ಮುಗಿಯುವ ಎರಡು ದಿನಗಳ ಮೊದಲು, ರಾಷ್ಟ್ರಪಿತ ಮಹಾತ್ಮ ಗಾಂಧಿ ಕುರಿತು ಚಲನಚಿತ್ರವನ್ನು ನಿರ್ಮಿಸಿದ ನಂತರವೇ ಜಗತ್ತಿಗೆ ತಿಳಿದಿದೆ ಎಂದು ಹೇಳಿದ್ದರು.

ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ 75 ವರ್ಷಗಳಲ್ಲಿ ಗಾಂಧಿಯವರ ಜಾಗತಿಕ ಖ್ಯಾತಿಯನ್ನು ಹೆಚ್ಚು ಮಾಡುವುದು ದೇಶದ ಕೆಲಸವಾಗಿರಲಿಲ್ಲವೇ ಎಂದು  ಪ್ರಶ್ನಿಸಿದ್ದರು. ಮಹಾತ್ಮಾ ಗಾಂಧೀಜಿ ಒಬ್ಬ ಮಹಾನ್ ಚೇತನ. ಕಳೆದ 75 ವರ್ಷಗಳಲ್ಲಿ ಅವರಿಗೆ ಜಾಗತಿಕ ಮನ್ನಣೆಯನ್ನು ತಂದುಕೊಡುವುದು ನಮ್ಮ ಜವಾಬ್ದಾರಿಯಲ್ಲವೇ? ಇದು ಯಾರಿಗೂ ತಿಳಿದಿರಲಿಲ್ಲ, ದಯವಿಟ್ಟು ನನ್ನನ್ನು ಕ್ಷಮಿಸಿ. ಮೊದಲ ಬಾರಿಗೆ, 1982ರಲ್ಲಿ ಗಾಂಧಿ ಚಲನಚಿತ್ರವನ್ನು ನಿರ್ಮಿಸಿದಾಗ, ಅವರು ಯಾರು ಎಂದು ಜಗತ್ತು ಕುತೂಹಲದಿಂದ ನೋಡಿತ್ತು. ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಅವರ ಬಗ್ಗೆ ಜಗತ್ತಿಗೆ ತಿಳಿದಿದ್ದರೆ, ಜಗತ್ತು ಗಾಂಧಿ ಬಗ್ಗೆ ಕೂಡ ಅಷ್ಟೇ ತಿಳಿದಿರಬೇಕಿತ್ತು.  ಗಾಂಧಿ ಮತ್ತು ಅವರ ಮೂಲಕ ಭಾರತವನ್ನು ಗುರುತಿಸಬೇಕಾಗಿತ್ತು ಎಂದು ನಾನು ಜಗತ್ತನ್ನು ಸುತ್ತಿದ ನಂತರ ಹೇಳುತ್ತಿದ್ದೇನೆ ಎಂದು ಮೋದಿ ಹೇಳಿದ್ದರು.

ಇದನ್ನು ಓದಿ: ಕೊನೆಯ ಹಂತದ ಮತದಾನ: ಪ.ಬಂಗಾಳದ ಹಲವೆಡೆ ಹಿಂಸಾಚಾರ; ಮತಯಂತ್ರಗಳನ್ನು ಹೊತ್ತೊಯ್ದು ನೀರಿಗೆ ಎಸೆದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...