Homeಮುಖಪುಟಮೋದಿಯವರು ಲೋಕಲ್‌ ವೋಕಲ್‌ ಭಾಷಣ: ಅವರು ಯಾವ ಲೋಕಲ್ ತಾಲೂಕದಾರಿ ಬಗ್ಗೆ ಮಾತಾಡತಾರ?

ಮೋದಿಯವರು ಲೋಕಲ್‌ ವೋಕಲ್‌ ಭಾಷಣ: ಅವರು ಯಾವ ಲೋಕಲ್ ತಾಲೂಕದಾರಿ ಬಗ್ಗೆ ಮಾತಾಡತಾರ?

- Advertisement -
- Advertisement -

ಈ ದೇಶದಾಗ ಲೋಕಲ್ ಅನ್ನೋ ಶಬ್ದಕ್ಕ ಬ್ಯಾರೆ ಬ್ಯಾರೆ ಕಡೆ ಬ್ಯಾರೆ ಬ್ಯಾರೆ ಅರ್ಥ ಅದಾವು. ಹಾವೇರಿ ಒಳಗ ಲೋಕಲ್ ಅಂದರ ದ್ಯಾಮನೂರು ಮೆಣಸಿನಕಾಯಿ, ಗುಲಬರ್ಗಾದಾಗ ಲೋಕಲ್ ಅಂದರ ಸಣ್ಣ ತೊಗರಿ ಬ್ಯಾಳಿ, ಮೈಸೂರಿನ್ಯಾಗ ಲೋಕಲ್ ಅಂದರ ಬನ್ನೂರು ಕುರಿ, ಇನ್ನ ಮುಂಬಯಿದಾಗ ಲೋಕಲ್ ಅಂದರ ಟ್ರೇನು.

ಹಂಗಾರ, ಹೋದ ಮಂಗಳವಾರ ಪಂತ ಪ್ರಧಾನರು ಠೀವಿಯೊಳಗ ಹೇಳಿದ ಲೋಕಲ್ ಅಂದರೆ ಏನು? ಅವರ ಭಾಷಣ ಇನ್ನೂ ಅರ್ಧ ಆಗಿರಲಿಲ್ಲ, ಆವಾಗನ ಐಟಿ ಸೆಲ್ಲಿನವರು ನೂರಾ ಎಂಟು ಮೀಮು ಮಾಡಿದರು. ಅವನ್ನು ನೀವು ಠೀವಿ ಪರದೆ ಬಿಟ್ಟು ನಿಮ್ಮ ಅಂಗೈಯೊಳಗಿನ ಪರದೆ ಮ್ಯಾಲೆ ಕಣ್ಣು ಹಾಕೋ ಕಿಂತ ಮುಂಚೆ

ಆ ಮೀಮುಗಳು ಒಂದು ಅಕ್ಷೋಷಿಣಿ ಸಂಖ್ಯೆಯೊಳಗ ಷೇರು, ಲೈಕು, ಕಮೆಂಟು ಆಗಿ ಹೋದವು.

ಅದರಾಗ ಒಂದು ಮೀಮು ʻಬಿ ವೋಕಲ್ ಅಬೌಟ್ ಲೋಕಲ್ʼ ಅಂತ ಇತ್ತು. ಅದನ್ನು ಪಂತ ಪ್ರಧಾನರು ಹೇಳಿರದಿದ್ದರೂ ಐಟಿ ಸೆಲ್ಲಿನವರು ಹೇಳಿದರು. ಒಮ್ಮೊಮ್ಮೆ ಇವರನ್ನ ನೋಡಿ ಅವರು ಮಾತಾಡತಾರೋ ಅಥವಾ ಅವರನ್ನು ನೋಡಿ ಇವರು ಮಾತಾಡತಾರೋ ಗೊತ್ತಾಗೋದಿಲ್ಲ. ಐಟಿ ಸೆಲ್ಲಿನವರ ಭಾಷಣ ಪಂತ ಪ್ರಧಾನರು ಬರೀತಾರೋ, ಅಥವಾ ಪಂತ ಪ್ರಧಾನರ ಭಾಷಣ ಐಟಿ ಸೆಲ್ಲಿನವರು ಬರೀತಾರೋ ಗೊತ್ತಿಲ್ಲ.

ಈ ಐಟಿ ಸೆಲ್ಲಿನವರು ಹಂಗ ಇದ್ದಾರ ಅಂದರ ನಮ್ಮ ನಾಯಕರು ನಮ್ಮದು ʻಸ್ವದೇಶಿ ಸಿದ್ಧಾಂತʼ ಅಂತ ಹೇಳಿದಾಗ ನಾವು ಚಪ್ಪಾಳೆ ಹೊಡೆಯೋ ಮಾಡತಾರ. ಸ್ವದೇಶಿ ಹಳೆಯದು, ಈಗ ಬೇಕಾಗಿರೋದು ʻಮೇಕ್ ಇನ್ ಇಂಡಿಯಾʼ ಅಂದಾಗುನೂ ಮಾಡತಾರ, ಕಡೀಕೆ ʻನಾವು ಆತ್ಮ ನಿರ್ಭರರಾಗಿ ಇರಬೇಕು. ನಾವೆಲ್ಲಾ ಲೋಕಲ್ ಕಡೆ ನೋಡಬೇಕುʼ ಅಂತ ಅಂದಾಗುನೂ ನಾವು ಅವರನ್ನ ಬೆಂಬಲಿಸೋಹಂಗ ಮಾಡತಾರ. ಅದು ಹೆಂಗ ಅಂದರ ತಲಿ ಅವರದು, ತಲಿ ಬುರಡಿ ನಮ್ಮದು. ಅಷ್ಟ ಆಗೋದರಾಗ ಬುರುಡಿ ಬಿಡೋರು ಯಾರು ಅಂತ ಗೊತ್ತಾಗೋದಿಲ್ಲ.

ಇರಲಿ, ಲೋಕಲ್ಲು ಅನ್ನೋದರ ಅರ್ಥ ʻಸ್ಥಳೀಯʼ, ʻಮಕಾಮಿʼ, ಅಥವಾ ʻತಾಲೂಕದಾರಿʼ ಅಂತ ಆಗತದ. ಹಂಗಂದರೇನು? ಹಂಗಂದರ ಸ್ಥಳೀಯರ ದುಡ್ಡು, ಅಧಿಕಾರ, ಅವರ ಜೀವಕ್ಕ ಸಂಬಂಧ ಪಟ್ಟ ನಿರ್ಧಾರಗಳನ್ನ ಅವರೇ ತೊಗೋಬೇಕು ಅನ್ನೋದು. ಅಧಿಕಾರ ಅನ್ನೋದು ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿಗಳಿಗೆ ಹರಿದು ಬರಬೇಕು, ಆಡಳಿತದೊಳಗ ಸರಿಸಮನಾದ ಭಾಗಿದಾರಿ ಇರಬೇಕು. ಇದನ್ನ ಮಾಡಲಿಕ್ಕೆ ಈ ಸರಕಾರದವರು ತಯಾರು ಇದ್ದಾರೇನು?

ಮೊದಲಿಗೆ ಆ ಕಿತ್ತಳೆ ಪಕ್ಷದವರು ಒಕ್ಕೂಟ ವ್ಯವಸ್ಥೆಯೊಳಗ ನಂಬಿಕೆ ಇಟಗೋಬೇಕು. ಅದರ ಪ್ರಕಾರ ರಾಜ್ಯಗಳಿಗೆ ಹೆಚ್ಚಿನ ಅಧಿಕಾರ ಕೊಡಬೇಕು. ನೀತಿ ನಿರೂಪಣೆಯೊಳಗ, ಕಾರ್ಯಕ್ರಮ ಜಾರಿಯೊಳಗ ಭಾಗವಹಿಸಲಿಕ್ಕೆ ರಾಜ್ಯಗಳಿಗೆ ಅವಕಾಶ ಕೊಡಬೇಕು. ಇದನ್ನ ಇವರು ಈಗಂತೂ ಮಾಡಲಿಕ್ಕೆ ಹತ್ತಿಲ್ಲ. ಇವರು ಬಂದಾಗಿನಿಂದ ಕೇಂದ್ರೀಕರಣನ ಜಾಸ್ತಿ ಆಗೇದ ಹೊರತು ವಿಕೇಂದ್ರೀಕರಣ ಇಲ್ಲ. ಯಾರು ಏಕೋಪಾಧ್ಯಾಯ ಶಾಲೆ ರೀತಿಯೊಳಗ ಏಕ ವ್ಯಕ್ತಿ ಸರಕಾರ ನಡಸತಾರೋ, ಯಾರು ಇರೋಬರೋ ಅಧಿಕಾರನ್ನೆಲ್ಲಾ ಕೇಂದ್ರದ ಮಂತ್ರಿಮಂಡಲಕ್ಕಿಂತ ಪ್ರಧಾನಿ ಕಚೇರಿಯೊಂದರ ಒಳಗ ತುರುಕಿ ಬಿಟ್ಟಾರೋ, ಅವರು ಗ್ರಾಮ ಪಂಚಾಯಿತಿ ಮಟ್ಟಕ್ಕ ಅಧಿಕಾರ ವಿಕೇಂದ್ರೀಕರಣ ಮಾಡರಿ ಅಂದರ ಕೇಳತಾರ?

ಇನ್ನ ವಿಕೇಂದ್ರೀಕೃತ ಆರ್ಥಿಕತೆ. ಸರಳವಾಗಿ ಹೇಳಬೇಕಂದರ ಅದು ಹಳ್ಳೀ ಸಾಮಾನು ಹಳ್ಳಿಯೊಳಗ ಮಾರಾಟ ಆಗಬೇಕು, ಅನ್ನೂ ಸೂತ್ರದ ಮ್ಯಾಲೆ ನಿಂತಿರೋದು. ಇದರಾಗ ಇವರಿಗೆ ನಿಜವಾಗಿಯೂ ನಂಬಿಕೆ ಅದ ಏನು? ತಾವು ನೂರಾರು ವರ್ಷದಿಂದ ಹೇಳತಾ ಬಂದಿದ್ದ ಸ್ವದೇಶಿ ಸೂತ್ರವನ್ನು ಧಡಕ್ಕನೇ ಬದಲಾಯಿಸಿ ಮೇಕ್ ಇನ್ ಇಂಡಿಯಾ ತಂದವರು ಇವರು. ಭಾರತೀಯ ಕಂಪನಿಗೆ ಕಾರುಬಾರು-ಲಾಭ ಸಿಗಬೇಕು. ಅದಕ್ಕ ನೀವು ಕಾಲ್ಗೇಟು ಬಿಟ್ಟು ಉಪ್ಪಿನಿಂದ ಹಲ್ಲು ತಿಕ್ಕರಿ, ಹಾಲಿನಿಂದ ದಾಡಿ ಮಾಡಿಕೊಳ್ಳಿರಿ ಅಂತ ಹೇಳತಿದ್ದವರು ಏಕಾಏಕಿ ಯಾವ ದೇಶದ ಕಂಪನಿ ಆದರೇನು ಭಾರತದಾಗ ಕಾರಖಾನೆ ಹಾಕಿದರ ಸಾಕು ಅಂತ ಭಾರತದಲ್ಲಿ ತಯಾರಿಸಿ ಅಂತ ಫರಮಾನು ಕೊಟ್ಟರು. ಈಗ ಈ ಕೊರೋನಾದಾಗ ಅದು ಉಲ್ಟಾ ಹೊಡದಂಗ ಕಾಣೋದಕ್ಕ ಮತ್ತ ಲೋಕಲ್ಲಿಗೆ ಬಂದಾರ.

ಗ್ರಾಮ ಉದ್ಯೋಗ, ಖಾದಿ, ಹಳ್ಳಿಗಳ ಕಾಯಿಪಲ್ಯಾ ಸಂತಿ- ದನದ ಸಂತಿ, ಉತ್ಸವ- ಜಾತ್ರಿ- ತೇರು ಇವು ಈ ದೇಶದ ಆರ್ಥಿಕತೆಗೆ ಎಷ್ಟು ಕೊಡುಗೆ ಕೊಡತಿದ್ದವು ಅನ್ನೋದು ಎಲ್ಲಾರಿಗೂ ಮರತು ಹೋಗುವಂತೆ ಮಾಡಿ. ಬರೇ ಐಟಿ-ಬಿಟಿ, ಮೈನಿಂಗು, ಅದಾನಿ -ಅಂಬಾನಿ, ಮಾತ್ರ ಖರೇ. ಬ್ಯಾರೆ ಎಲ್ಲಾ ಸುಳ್ಳು ಅಂತ ನಮ್ಮನ್ನ ನಂಬಿಸಿದರು.

ಇವರು ಲೋಕಲ್ಲಿನ ಬಗ್ಗೆ ವೋಕಲ್ಲು ಆಗೋದನ್ನ ನಂಬಲಿಕ್ಕೆ ಸಾಧ್ಯ ಇಲ್ಲ.

ಹಂಗಾದರ ಇಷ್ಟು ದಿವಸ ಜಾಗತಿಕ ಮಟ್ಟದ ಯೋಚನೆ ಇಟಗೋರಿ, ಇಡೀ ಜಗತ್ತಿನ ಮಾರುಕಟ್ಟೆಯೊಳಗ ಸ್ಪರ್ಧೆ ಮಾಡೋವಂಥಾ ಉತ್ಪನ್ನ ತಯಾರು ಮಾಡ್ರಿ, ನಿಮ್ಮ ಐಟಿ, ಬಿಟಿ ಸೇವೆ ಹೆಂಗ ಇರಬೇಕು ಅಂದರ ಅದು ವಿಶ್ವದ ಇತರ ದೇಶಗಳನ್ನ ಸೋಲಿಸಿ ಮುಂಚೂಣಿಗೆ ಬರಬೇಕು, ಅಂತ ಭಾಷಣ ಕುಟ್ಟತಿದ್ದರಲ್ಲಾ ಅದು ಏನಾತು?

ʻʻಸ್ವಾತಂತ್ರ‍್ಯ ಅಂದರ ವಿಕೇಂದ್ರೀಕರಣ. ವಿಕೇಂದ್ರೀಕರಣ ಇಲ್ಲದಿದ್ದರೆ ಸ್ವಾತಂತ್ರ‍್ಯಕ್ಕೆ ಅರ್ಥ ಇಲ್ಲ.

ಭಾರತ ಹಳ್ಳಿಗಳ ದೇಶ. ಹಳ್ಳಿಗಳು ಉಳಿಯದಿದ್ದರೆ ಈ ದೇಶ ಉಳಿಯೋದಿಲ್ಲʼʼ ಅಂತ ಹಿಂದೊಮ್ಮೆ ಇನ್ನೊಬ್ಬ ಗುಜರಾತಿ ನಾಯಕ ಹೇಳಿದ್ದರು. ಈ ದುರಿತ ಕಾಲದಾಗ ನಾವು ಆ ವಿಚಾರಗಳನ್ನು ನಮ್ಮ ಮುಂದ ಇಟ್ಟ ಮೋಹನದಾಸ ಗಾಂಧಿ ಅವರನ್ನು ನೆನಪು ಮಾಡಕೊಳ್ಳೋದು ನಮಗ ಸ್ವಲ್ಪವಾದರೂ ಸಮಾಧಾನ ತರಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...