Homeಮುಖಪುಟಮೋದಿಯವರು ಲೋಕಲ್‌ ವೋಕಲ್‌ ಭಾಷಣ: ಅವರು ಯಾವ ಲೋಕಲ್ ತಾಲೂಕದಾರಿ ಬಗ್ಗೆ ಮಾತಾಡತಾರ?

ಮೋದಿಯವರು ಲೋಕಲ್‌ ವೋಕಲ್‌ ಭಾಷಣ: ಅವರು ಯಾವ ಲೋಕಲ್ ತಾಲೂಕದಾರಿ ಬಗ್ಗೆ ಮಾತಾಡತಾರ?

- Advertisement -
- Advertisement -

ಈ ದೇಶದಾಗ ಲೋಕಲ್ ಅನ್ನೋ ಶಬ್ದಕ್ಕ ಬ್ಯಾರೆ ಬ್ಯಾರೆ ಕಡೆ ಬ್ಯಾರೆ ಬ್ಯಾರೆ ಅರ್ಥ ಅದಾವು. ಹಾವೇರಿ ಒಳಗ ಲೋಕಲ್ ಅಂದರ ದ್ಯಾಮನೂರು ಮೆಣಸಿನಕಾಯಿ, ಗುಲಬರ್ಗಾದಾಗ ಲೋಕಲ್ ಅಂದರ ಸಣ್ಣ ತೊಗರಿ ಬ್ಯಾಳಿ, ಮೈಸೂರಿನ್ಯಾಗ ಲೋಕಲ್ ಅಂದರ ಬನ್ನೂರು ಕುರಿ, ಇನ್ನ ಮುಂಬಯಿದಾಗ ಲೋಕಲ್ ಅಂದರ ಟ್ರೇನು.

ಹಂಗಾರ, ಹೋದ ಮಂಗಳವಾರ ಪಂತ ಪ್ರಧಾನರು ಠೀವಿಯೊಳಗ ಹೇಳಿದ ಲೋಕಲ್ ಅಂದರೆ ಏನು? ಅವರ ಭಾಷಣ ಇನ್ನೂ ಅರ್ಧ ಆಗಿರಲಿಲ್ಲ, ಆವಾಗನ ಐಟಿ ಸೆಲ್ಲಿನವರು ನೂರಾ ಎಂಟು ಮೀಮು ಮಾಡಿದರು. ಅವನ್ನು ನೀವು ಠೀವಿ ಪರದೆ ಬಿಟ್ಟು ನಿಮ್ಮ ಅಂಗೈಯೊಳಗಿನ ಪರದೆ ಮ್ಯಾಲೆ ಕಣ್ಣು ಹಾಕೋ ಕಿಂತ ಮುಂಚೆ

ಆ ಮೀಮುಗಳು ಒಂದು ಅಕ್ಷೋಷಿಣಿ ಸಂಖ್ಯೆಯೊಳಗ ಷೇರು, ಲೈಕು, ಕಮೆಂಟು ಆಗಿ ಹೋದವು.

ಅದರಾಗ ಒಂದು ಮೀಮು ʻಬಿ ವೋಕಲ್ ಅಬೌಟ್ ಲೋಕಲ್ʼ ಅಂತ ಇತ್ತು. ಅದನ್ನು ಪಂತ ಪ್ರಧಾನರು ಹೇಳಿರದಿದ್ದರೂ ಐಟಿ ಸೆಲ್ಲಿನವರು ಹೇಳಿದರು. ಒಮ್ಮೊಮ್ಮೆ ಇವರನ್ನ ನೋಡಿ ಅವರು ಮಾತಾಡತಾರೋ ಅಥವಾ ಅವರನ್ನು ನೋಡಿ ಇವರು ಮಾತಾಡತಾರೋ ಗೊತ್ತಾಗೋದಿಲ್ಲ. ಐಟಿ ಸೆಲ್ಲಿನವರ ಭಾಷಣ ಪಂತ ಪ್ರಧಾನರು ಬರೀತಾರೋ, ಅಥವಾ ಪಂತ ಪ್ರಧಾನರ ಭಾಷಣ ಐಟಿ ಸೆಲ್ಲಿನವರು ಬರೀತಾರೋ ಗೊತ್ತಿಲ್ಲ.

ಈ ಐಟಿ ಸೆಲ್ಲಿನವರು ಹಂಗ ಇದ್ದಾರ ಅಂದರ ನಮ್ಮ ನಾಯಕರು ನಮ್ಮದು ʻಸ್ವದೇಶಿ ಸಿದ್ಧಾಂತʼ ಅಂತ ಹೇಳಿದಾಗ ನಾವು ಚಪ್ಪಾಳೆ ಹೊಡೆಯೋ ಮಾಡತಾರ. ಸ್ವದೇಶಿ ಹಳೆಯದು, ಈಗ ಬೇಕಾಗಿರೋದು ʻಮೇಕ್ ಇನ್ ಇಂಡಿಯಾʼ ಅಂದಾಗುನೂ ಮಾಡತಾರ, ಕಡೀಕೆ ʻನಾವು ಆತ್ಮ ನಿರ್ಭರರಾಗಿ ಇರಬೇಕು. ನಾವೆಲ್ಲಾ ಲೋಕಲ್ ಕಡೆ ನೋಡಬೇಕುʼ ಅಂತ ಅಂದಾಗುನೂ ನಾವು ಅವರನ್ನ ಬೆಂಬಲಿಸೋಹಂಗ ಮಾಡತಾರ. ಅದು ಹೆಂಗ ಅಂದರ ತಲಿ ಅವರದು, ತಲಿ ಬುರಡಿ ನಮ್ಮದು. ಅಷ್ಟ ಆಗೋದರಾಗ ಬುರುಡಿ ಬಿಡೋರು ಯಾರು ಅಂತ ಗೊತ್ತಾಗೋದಿಲ್ಲ.

ಇರಲಿ, ಲೋಕಲ್ಲು ಅನ್ನೋದರ ಅರ್ಥ ʻಸ್ಥಳೀಯʼ, ʻಮಕಾಮಿʼ, ಅಥವಾ ʻತಾಲೂಕದಾರಿʼ ಅಂತ ಆಗತದ. ಹಂಗಂದರೇನು? ಹಂಗಂದರ ಸ್ಥಳೀಯರ ದುಡ್ಡು, ಅಧಿಕಾರ, ಅವರ ಜೀವಕ್ಕ ಸಂಬಂಧ ಪಟ್ಟ ನಿರ್ಧಾರಗಳನ್ನ ಅವರೇ ತೊಗೋಬೇಕು ಅನ್ನೋದು. ಅಧಿಕಾರ ಅನ್ನೋದು ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿಗಳಿಗೆ ಹರಿದು ಬರಬೇಕು, ಆಡಳಿತದೊಳಗ ಸರಿಸಮನಾದ ಭಾಗಿದಾರಿ ಇರಬೇಕು. ಇದನ್ನ ಮಾಡಲಿಕ್ಕೆ ಈ ಸರಕಾರದವರು ತಯಾರು ಇದ್ದಾರೇನು?

ಮೊದಲಿಗೆ ಆ ಕಿತ್ತಳೆ ಪಕ್ಷದವರು ಒಕ್ಕೂಟ ವ್ಯವಸ್ಥೆಯೊಳಗ ನಂಬಿಕೆ ಇಟಗೋಬೇಕು. ಅದರ ಪ್ರಕಾರ ರಾಜ್ಯಗಳಿಗೆ ಹೆಚ್ಚಿನ ಅಧಿಕಾರ ಕೊಡಬೇಕು. ನೀತಿ ನಿರೂಪಣೆಯೊಳಗ, ಕಾರ್ಯಕ್ರಮ ಜಾರಿಯೊಳಗ ಭಾಗವಹಿಸಲಿಕ್ಕೆ ರಾಜ್ಯಗಳಿಗೆ ಅವಕಾಶ ಕೊಡಬೇಕು. ಇದನ್ನ ಇವರು ಈಗಂತೂ ಮಾಡಲಿಕ್ಕೆ ಹತ್ತಿಲ್ಲ. ಇವರು ಬಂದಾಗಿನಿಂದ ಕೇಂದ್ರೀಕರಣನ ಜಾಸ್ತಿ ಆಗೇದ ಹೊರತು ವಿಕೇಂದ್ರೀಕರಣ ಇಲ್ಲ. ಯಾರು ಏಕೋಪಾಧ್ಯಾಯ ಶಾಲೆ ರೀತಿಯೊಳಗ ಏಕ ವ್ಯಕ್ತಿ ಸರಕಾರ ನಡಸತಾರೋ, ಯಾರು ಇರೋಬರೋ ಅಧಿಕಾರನ್ನೆಲ್ಲಾ ಕೇಂದ್ರದ ಮಂತ್ರಿಮಂಡಲಕ್ಕಿಂತ ಪ್ರಧಾನಿ ಕಚೇರಿಯೊಂದರ ಒಳಗ ತುರುಕಿ ಬಿಟ್ಟಾರೋ, ಅವರು ಗ್ರಾಮ ಪಂಚಾಯಿತಿ ಮಟ್ಟಕ್ಕ ಅಧಿಕಾರ ವಿಕೇಂದ್ರೀಕರಣ ಮಾಡರಿ ಅಂದರ ಕೇಳತಾರ?

ಇನ್ನ ವಿಕೇಂದ್ರೀಕೃತ ಆರ್ಥಿಕತೆ. ಸರಳವಾಗಿ ಹೇಳಬೇಕಂದರ ಅದು ಹಳ್ಳೀ ಸಾಮಾನು ಹಳ್ಳಿಯೊಳಗ ಮಾರಾಟ ಆಗಬೇಕು, ಅನ್ನೂ ಸೂತ್ರದ ಮ್ಯಾಲೆ ನಿಂತಿರೋದು. ಇದರಾಗ ಇವರಿಗೆ ನಿಜವಾಗಿಯೂ ನಂಬಿಕೆ ಅದ ಏನು? ತಾವು ನೂರಾರು ವರ್ಷದಿಂದ ಹೇಳತಾ ಬಂದಿದ್ದ ಸ್ವದೇಶಿ ಸೂತ್ರವನ್ನು ಧಡಕ್ಕನೇ ಬದಲಾಯಿಸಿ ಮೇಕ್ ಇನ್ ಇಂಡಿಯಾ ತಂದವರು ಇವರು. ಭಾರತೀಯ ಕಂಪನಿಗೆ ಕಾರುಬಾರು-ಲಾಭ ಸಿಗಬೇಕು. ಅದಕ್ಕ ನೀವು ಕಾಲ್ಗೇಟು ಬಿಟ್ಟು ಉಪ್ಪಿನಿಂದ ಹಲ್ಲು ತಿಕ್ಕರಿ, ಹಾಲಿನಿಂದ ದಾಡಿ ಮಾಡಿಕೊಳ್ಳಿರಿ ಅಂತ ಹೇಳತಿದ್ದವರು ಏಕಾಏಕಿ ಯಾವ ದೇಶದ ಕಂಪನಿ ಆದರೇನು ಭಾರತದಾಗ ಕಾರಖಾನೆ ಹಾಕಿದರ ಸಾಕು ಅಂತ ಭಾರತದಲ್ಲಿ ತಯಾರಿಸಿ ಅಂತ ಫರಮಾನು ಕೊಟ್ಟರು. ಈಗ ಈ ಕೊರೋನಾದಾಗ ಅದು ಉಲ್ಟಾ ಹೊಡದಂಗ ಕಾಣೋದಕ್ಕ ಮತ್ತ ಲೋಕಲ್ಲಿಗೆ ಬಂದಾರ.

ಗ್ರಾಮ ಉದ್ಯೋಗ, ಖಾದಿ, ಹಳ್ಳಿಗಳ ಕಾಯಿಪಲ್ಯಾ ಸಂತಿ- ದನದ ಸಂತಿ, ಉತ್ಸವ- ಜಾತ್ರಿ- ತೇರು ಇವು ಈ ದೇಶದ ಆರ್ಥಿಕತೆಗೆ ಎಷ್ಟು ಕೊಡುಗೆ ಕೊಡತಿದ್ದವು ಅನ್ನೋದು ಎಲ್ಲಾರಿಗೂ ಮರತು ಹೋಗುವಂತೆ ಮಾಡಿ. ಬರೇ ಐಟಿ-ಬಿಟಿ, ಮೈನಿಂಗು, ಅದಾನಿ -ಅಂಬಾನಿ, ಮಾತ್ರ ಖರೇ. ಬ್ಯಾರೆ ಎಲ್ಲಾ ಸುಳ್ಳು ಅಂತ ನಮ್ಮನ್ನ ನಂಬಿಸಿದರು.

ಇವರು ಲೋಕಲ್ಲಿನ ಬಗ್ಗೆ ವೋಕಲ್ಲು ಆಗೋದನ್ನ ನಂಬಲಿಕ್ಕೆ ಸಾಧ್ಯ ಇಲ್ಲ.

ಹಂಗಾದರ ಇಷ್ಟು ದಿವಸ ಜಾಗತಿಕ ಮಟ್ಟದ ಯೋಚನೆ ಇಟಗೋರಿ, ಇಡೀ ಜಗತ್ತಿನ ಮಾರುಕಟ್ಟೆಯೊಳಗ ಸ್ಪರ್ಧೆ ಮಾಡೋವಂಥಾ ಉತ್ಪನ್ನ ತಯಾರು ಮಾಡ್ರಿ, ನಿಮ್ಮ ಐಟಿ, ಬಿಟಿ ಸೇವೆ ಹೆಂಗ ಇರಬೇಕು ಅಂದರ ಅದು ವಿಶ್ವದ ಇತರ ದೇಶಗಳನ್ನ ಸೋಲಿಸಿ ಮುಂಚೂಣಿಗೆ ಬರಬೇಕು, ಅಂತ ಭಾಷಣ ಕುಟ್ಟತಿದ್ದರಲ್ಲಾ ಅದು ಏನಾತು?

ʻʻಸ್ವಾತಂತ್ರ‍್ಯ ಅಂದರ ವಿಕೇಂದ್ರೀಕರಣ. ವಿಕೇಂದ್ರೀಕರಣ ಇಲ್ಲದಿದ್ದರೆ ಸ್ವಾತಂತ್ರ‍್ಯಕ್ಕೆ ಅರ್ಥ ಇಲ್ಲ.

ಭಾರತ ಹಳ್ಳಿಗಳ ದೇಶ. ಹಳ್ಳಿಗಳು ಉಳಿಯದಿದ್ದರೆ ಈ ದೇಶ ಉಳಿಯೋದಿಲ್ಲʼʼ ಅಂತ ಹಿಂದೊಮ್ಮೆ ಇನ್ನೊಬ್ಬ ಗುಜರಾತಿ ನಾಯಕ ಹೇಳಿದ್ದರು. ಈ ದುರಿತ ಕಾಲದಾಗ ನಾವು ಆ ವಿಚಾರಗಳನ್ನು ನಮ್ಮ ಮುಂದ ಇಟ್ಟ ಮೋಹನದಾಸ ಗಾಂಧಿ ಅವರನ್ನು ನೆನಪು ಮಾಡಕೊಳ್ಳೋದು ನಮಗ ಸ್ವಲ್ಪವಾದರೂ ಸಮಾಧಾನ ತರಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...