Homeಮುಖಪುಟಮೋದಿಯವರು ಲೋಕಲ್‌ ವೋಕಲ್‌ ಭಾಷಣ: ಅವರು ಯಾವ ಲೋಕಲ್ ತಾಲೂಕದಾರಿ ಬಗ್ಗೆ ಮಾತಾಡತಾರ?

ಮೋದಿಯವರು ಲೋಕಲ್‌ ವೋಕಲ್‌ ಭಾಷಣ: ಅವರು ಯಾವ ಲೋಕಲ್ ತಾಲೂಕದಾರಿ ಬಗ್ಗೆ ಮಾತಾಡತಾರ?

- Advertisement -
- Advertisement -

ಈ ದೇಶದಾಗ ಲೋಕಲ್ ಅನ್ನೋ ಶಬ್ದಕ್ಕ ಬ್ಯಾರೆ ಬ್ಯಾರೆ ಕಡೆ ಬ್ಯಾರೆ ಬ್ಯಾರೆ ಅರ್ಥ ಅದಾವು. ಹಾವೇರಿ ಒಳಗ ಲೋಕಲ್ ಅಂದರ ದ್ಯಾಮನೂರು ಮೆಣಸಿನಕಾಯಿ, ಗುಲಬರ್ಗಾದಾಗ ಲೋಕಲ್ ಅಂದರ ಸಣ್ಣ ತೊಗರಿ ಬ್ಯಾಳಿ, ಮೈಸೂರಿನ್ಯಾಗ ಲೋಕಲ್ ಅಂದರ ಬನ್ನೂರು ಕುರಿ, ಇನ್ನ ಮುಂಬಯಿದಾಗ ಲೋಕಲ್ ಅಂದರ ಟ್ರೇನು.

ಹಂಗಾರ, ಹೋದ ಮಂಗಳವಾರ ಪಂತ ಪ್ರಧಾನರು ಠೀವಿಯೊಳಗ ಹೇಳಿದ ಲೋಕಲ್ ಅಂದರೆ ಏನು? ಅವರ ಭಾಷಣ ಇನ್ನೂ ಅರ್ಧ ಆಗಿರಲಿಲ್ಲ, ಆವಾಗನ ಐಟಿ ಸೆಲ್ಲಿನವರು ನೂರಾ ಎಂಟು ಮೀಮು ಮಾಡಿದರು. ಅವನ್ನು ನೀವು ಠೀವಿ ಪರದೆ ಬಿಟ್ಟು ನಿಮ್ಮ ಅಂಗೈಯೊಳಗಿನ ಪರದೆ ಮ್ಯಾಲೆ ಕಣ್ಣು ಹಾಕೋ ಕಿಂತ ಮುಂಚೆ

ಆ ಮೀಮುಗಳು ಒಂದು ಅಕ್ಷೋಷಿಣಿ ಸಂಖ್ಯೆಯೊಳಗ ಷೇರು, ಲೈಕು, ಕಮೆಂಟು ಆಗಿ ಹೋದವು.

ಅದರಾಗ ಒಂದು ಮೀಮು ʻಬಿ ವೋಕಲ್ ಅಬೌಟ್ ಲೋಕಲ್ʼ ಅಂತ ಇತ್ತು. ಅದನ್ನು ಪಂತ ಪ್ರಧಾನರು ಹೇಳಿರದಿದ್ದರೂ ಐಟಿ ಸೆಲ್ಲಿನವರು ಹೇಳಿದರು. ಒಮ್ಮೊಮ್ಮೆ ಇವರನ್ನ ನೋಡಿ ಅವರು ಮಾತಾಡತಾರೋ ಅಥವಾ ಅವರನ್ನು ನೋಡಿ ಇವರು ಮಾತಾಡತಾರೋ ಗೊತ್ತಾಗೋದಿಲ್ಲ. ಐಟಿ ಸೆಲ್ಲಿನವರ ಭಾಷಣ ಪಂತ ಪ್ರಧಾನರು ಬರೀತಾರೋ, ಅಥವಾ ಪಂತ ಪ್ರಧಾನರ ಭಾಷಣ ಐಟಿ ಸೆಲ್ಲಿನವರು ಬರೀತಾರೋ ಗೊತ್ತಿಲ್ಲ.

ಈ ಐಟಿ ಸೆಲ್ಲಿನವರು ಹಂಗ ಇದ್ದಾರ ಅಂದರ ನಮ್ಮ ನಾಯಕರು ನಮ್ಮದು ʻಸ್ವದೇಶಿ ಸಿದ್ಧಾಂತʼ ಅಂತ ಹೇಳಿದಾಗ ನಾವು ಚಪ್ಪಾಳೆ ಹೊಡೆಯೋ ಮಾಡತಾರ. ಸ್ವದೇಶಿ ಹಳೆಯದು, ಈಗ ಬೇಕಾಗಿರೋದು ʻಮೇಕ್ ಇನ್ ಇಂಡಿಯಾʼ ಅಂದಾಗುನೂ ಮಾಡತಾರ, ಕಡೀಕೆ ʻನಾವು ಆತ್ಮ ನಿರ್ಭರರಾಗಿ ಇರಬೇಕು. ನಾವೆಲ್ಲಾ ಲೋಕಲ್ ಕಡೆ ನೋಡಬೇಕುʼ ಅಂತ ಅಂದಾಗುನೂ ನಾವು ಅವರನ್ನ ಬೆಂಬಲಿಸೋಹಂಗ ಮಾಡತಾರ. ಅದು ಹೆಂಗ ಅಂದರ ತಲಿ ಅವರದು, ತಲಿ ಬುರಡಿ ನಮ್ಮದು. ಅಷ್ಟ ಆಗೋದರಾಗ ಬುರುಡಿ ಬಿಡೋರು ಯಾರು ಅಂತ ಗೊತ್ತಾಗೋದಿಲ್ಲ.

ಇರಲಿ, ಲೋಕಲ್ಲು ಅನ್ನೋದರ ಅರ್ಥ ʻಸ್ಥಳೀಯʼ, ʻಮಕಾಮಿʼ, ಅಥವಾ ʻತಾಲೂಕದಾರಿʼ ಅಂತ ಆಗತದ. ಹಂಗಂದರೇನು? ಹಂಗಂದರ ಸ್ಥಳೀಯರ ದುಡ್ಡು, ಅಧಿಕಾರ, ಅವರ ಜೀವಕ್ಕ ಸಂಬಂಧ ಪಟ್ಟ ನಿರ್ಧಾರಗಳನ್ನ ಅವರೇ ತೊಗೋಬೇಕು ಅನ್ನೋದು. ಅಧಿಕಾರ ಅನ್ನೋದು ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿಗಳಿಗೆ ಹರಿದು ಬರಬೇಕು, ಆಡಳಿತದೊಳಗ ಸರಿಸಮನಾದ ಭಾಗಿದಾರಿ ಇರಬೇಕು. ಇದನ್ನ ಮಾಡಲಿಕ್ಕೆ ಈ ಸರಕಾರದವರು ತಯಾರು ಇದ್ದಾರೇನು?

ಮೊದಲಿಗೆ ಆ ಕಿತ್ತಳೆ ಪಕ್ಷದವರು ಒಕ್ಕೂಟ ವ್ಯವಸ್ಥೆಯೊಳಗ ನಂಬಿಕೆ ಇಟಗೋಬೇಕು. ಅದರ ಪ್ರಕಾರ ರಾಜ್ಯಗಳಿಗೆ ಹೆಚ್ಚಿನ ಅಧಿಕಾರ ಕೊಡಬೇಕು. ನೀತಿ ನಿರೂಪಣೆಯೊಳಗ, ಕಾರ್ಯಕ್ರಮ ಜಾರಿಯೊಳಗ ಭಾಗವಹಿಸಲಿಕ್ಕೆ ರಾಜ್ಯಗಳಿಗೆ ಅವಕಾಶ ಕೊಡಬೇಕು. ಇದನ್ನ ಇವರು ಈಗಂತೂ ಮಾಡಲಿಕ್ಕೆ ಹತ್ತಿಲ್ಲ. ಇವರು ಬಂದಾಗಿನಿಂದ ಕೇಂದ್ರೀಕರಣನ ಜಾಸ್ತಿ ಆಗೇದ ಹೊರತು ವಿಕೇಂದ್ರೀಕರಣ ಇಲ್ಲ. ಯಾರು ಏಕೋಪಾಧ್ಯಾಯ ಶಾಲೆ ರೀತಿಯೊಳಗ ಏಕ ವ್ಯಕ್ತಿ ಸರಕಾರ ನಡಸತಾರೋ, ಯಾರು ಇರೋಬರೋ ಅಧಿಕಾರನ್ನೆಲ್ಲಾ ಕೇಂದ್ರದ ಮಂತ್ರಿಮಂಡಲಕ್ಕಿಂತ ಪ್ರಧಾನಿ ಕಚೇರಿಯೊಂದರ ಒಳಗ ತುರುಕಿ ಬಿಟ್ಟಾರೋ, ಅವರು ಗ್ರಾಮ ಪಂಚಾಯಿತಿ ಮಟ್ಟಕ್ಕ ಅಧಿಕಾರ ವಿಕೇಂದ್ರೀಕರಣ ಮಾಡರಿ ಅಂದರ ಕೇಳತಾರ?

ಇನ್ನ ವಿಕೇಂದ್ರೀಕೃತ ಆರ್ಥಿಕತೆ. ಸರಳವಾಗಿ ಹೇಳಬೇಕಂದರ ಅದು ಹಳ್ಳೀ ಸಾಮಾನು ಹಳ್ಳಿಯೊಳಗ ಮಾರಾಟ ಆಗಬೇಕು, ಅನ್ನೂ ಸೂತ್ರದ ಮ್ಯಾಲೆ ನಿಂತಿರೋದು. ಇದರಾಗ ಇವರಿಗೆ ನಿಜವಾಗಿಯೂ ನಂಬಿಕೆ ಅದ ಏನು? ತಾವು ನೂರಾರು ವರ್ಷದಿಂದ ಹೇಳತಾ ಬಂದಿದ್ದ ಸ್ವದೇಶಿ ಸೂತ್ರವನ್ನು ಧಡಕ್ಕನೇ ಬದಲಾಯಿಸಿ ಮೇಕ್ ಇನ್ ಇಂಡಿಯಾ ತಂದವರು ಇವರು. ಭಾರತೀಯ ಕಂಪನಿಗೆ ಕಾರುಬಾರು-ಲಾಭ ಸಿಗಬೇಕು. ಅದಕ್ಕ ನೀವು ಕಾಲ್ಗೇಟು ಬಿಟ್ಟು ಉಪ್ಪಿನಿಂದ ಹಲ್ಲು ತಿಕ್ಕರಿ, ಹಾಲಿನಿಂದ ದಾಡಿ ಮಾಡಿಕೊಳ್ಳಿರಿ ಅಂತ ಹೇಳತಿದ್ದವರು ಏಕಾಏಕಿ ಯಾವ ದೇಶದ ಕಂಪನಿ ಆದರೇನು ಭಾರತದಾಗ ಕಾರಖಾನೆ ಹಾಕಿದರ ಸಾಕು ಅಂತ ಭಾರತದಲ್ಲಿ ತಯಾರಿಸಿ ಅಂತ ಫರಮಾನು ಕೊಟ್ಟರು. ಈಗ ಈ ಕೊರೋನಾದಾಗ ಅದು ಉಲ್ಟಾ ಹೊಡದಂಗ ಕಾಣೋದಕ್ಕ ಮತ್ತ ಲೋಕಲ್ಲಿಗೆ ಬಂದಾರ.

ಗ್ರಾಮ ಉದ್ಯೋಗ, ಖಾದಿ, ಹಳ್ಳಿಗಳ ಕಾಯಿಪಲ್ಯಾ ಸಂತಿ- ದನದ ಸಂತಿ, ಉತ್ಸವ- ಜಾತ್ರಿ- ತೇರು ಇವು ಈ ದೇಶದ ಆರ್ಥಿಕತೆಗೆ ಎಷ್ಟು ಕೊಡುಗೆ ಕೊಡತಿದ್ದವು ಅನ್ನೋದು ಎಲ್ಲಾರಿಗೂ ಮರತು ಹೋಗುವಂತೆ ಮಾಡಿ. ಬರೇ ಐಟಿ-ಬಿಟಿ, ಮೈನಿಂಗು, ಅದಾನಿ -ಅಂಬಾನಿ, ಮಾತ್ರ ಖರೇ. ಬ್ಯಾರೆ ಎಲ್ಲಾ ಸುಳ್ಳು ಅಂತ ನಮ್ಮನ್ನ ನಂಬಿಸಿದರು.

ಇವರು ಲೋಕಲ್ಲಿನ ಬಗ್ಗೆ ವೋಕಲ್ಲು ಆಗೋದನ್ನ ನಂಬಲಿಕ್ಕೆ ಸಾಧ್ಯ ಇಲ್ಲ.

ಹಂಗಾದರ ಇಷ್ಟು ದಿವಸ ಜಾಗತಿಕ ಮಟ್ಟದ ಯೋಚನೆ ಇಟಗೋರಿ, ಇಡೀ ಜಗತ್ತಿನ ಮಾರುಕಟ್ಟೆಯೊಳಗ ಸ್ಪರ್ಧೆ ಮಾಡೋವಂಥಾ ಉತ್ಪನ್ನ ತಯಾರು ಮಾಡ್ರಿ, ನಿಮ್ಮ ಐಟಿ, ಬಿಟಿ ಸೇವೆ ಹೆಂಗ ಇರಬೇಕು ಅಂದರ ಅದು ವಿಶ್ವದ ಇತರ ದೇಶಗಳನ್ನ ಸೋಲಿಸಿ ಮುಂಚೂಣಿಗೆ ಬರಬೇಕು, ಅಂತ ಭಾಷಣ ಕುಟ್ಟತಿದ್ದರಲ್ಲಾ ಅದು ಏನಾತು?

ʻʻಸ್ವಾತಂತ್ರ‍್ಯ ಅಂದರ ವಿಕೇಂದ್ರೀಕರಣ. ವಿಕೇಂದ್ರೀಕರಣ ಇಲ್ಲದಿದ್ದರೆ ಸ್ವಾತಂತ್ರ‍್ಯಕ್ಕೆ ಅರ್ಥ ಇಲ್ಲ.

ಭಾರತ ಹಳ್ಳಿಗಳ ದೇಶ. ಹಳ್ಳಿಗಳು ಉಳಿಯದಿದ್ದರೆ ಈ ದೇಶ ಉಳಿಯೋದಿಲ್ಲʼʼ ಅಂತ ಹಿಂದೊಮ್ಮೆ ಇನ್ನೊಬ್ಬ ಗುಜರಾತಿ ನಾಯಕ ಹೇಳಿದ್ದರು. ಈ ದುರಿತ ಕಾಲದಾಗ ನಾವು ಆ ವಿಚಾರಗಳನ್ನು ನಮ್ಮ ಮುಂದ ಇಟ್ಟ ಮೋಹನದಾಸ ಗಾಂಧಿ ಅವರನ್ನು ನೆನಪು ಮಾಡಕೊಳ್ಳೋದು ನಮಗ ಸ್ವಲ್ಪವಾದರೂ ಸಮಾಧಾನ ತರಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...