Homeಮುಖಪುಟಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? - ಇಲ್ಲಿದೆ ಡೀಟೈಲ್ಸ್

ಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? – ಇಲ್ಲಿದೆ ಡೀಟೈಲ್ಸ್

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅಧಿಕಾರಕ್ಕೆ ಬಂದ ಎರಡು ವರ್ಷಗಳ ಬಳಿಕ ಸಂಪುಟ ಪುನರ್ರಚನೆ ಪೂರ್ಣಗೊಳಿಸಿದೆ. ಕ್ಯಾಬಿನೆಟ್ ಮಂತ್ರಿಗಳ ಸಂಖ್ಯೆಯನ್ನು 21 ರಿಂದ 30 ಕ್ಕೆ ಮತ್ತು ಕಿರಿಯ ಮಂತ್ರಿಗಳ ಸಂಖ್ಯೆಯನ್ನು 23 ರಿಂದ 45 ಕ್ಕೆ ಹೆಚ್ಚಿಸಿದೆ. ನಲವತ್ತನಾಲ್ಕು ಸಚಿವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರಲ್ಲಿ ಹದಿನೈದು ಮಂದಿ ಕೇಂದ್ರ ಸಚಿವ ಸಂಪುಟದ ಭಾಗವಾದರು. ಅವರಲ್ಲಿ ಯಾರಿಗೆ ಯಾವ ಸ್ಥಾನ ನೀಡಿದೆ ಎಂಬ ವಿವರ ಇಲ್ಲಿದೆ.

ಕೋವಿಡ್ ಎದುರಿಸುವಲ್ಲಿ ವಿಫಲರಾದರು ಎಂಬ ಹಣೆಪಟ್ಟೆ ಹೊತ್ತಿದ್ದ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಸ್ಥಾನವನ್ನು ಇನ್ನುಮುಂದೆ ಮನ್ಸುಖ್ ಮಾಂಡವಿಯಾ ತುಂಬಲಿದ್ದಾರೆ. ಅವರ ಕಿರಿಯ ಸಚಿವರರಾಗಿ ಡಾ.ಭಾರತಿ ಪವಾರ್ ಇರಲಿದ್ದಾರೆ. ಇದಲ್ಲದೆ, ಮನ್ಸುಖ್ ರಾಸಾಯನಿಕ ರಸಗೊಬ್ಬರಗಳ ಸಚಿವಾಲಯವನ್ನು ಉಳಿಸಿಕೊಂಡಿದ್ದಾರೆ.

ಒಡಿಶಾದ ರಾಜ್ಯಸಭಾ ಸಂಸದ ಅಶ್ವಿನಿ ವೈಷ್ಣವ್ ಅವರಿಗೆ ರೈಲ್ವೆ ಮತ್ತು ಐಟಿ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ.

ಕಾನೂನು ಮತ್ತು ನ್ಯಾಯ ಸಚಿವಾಲಯವು ಕಾನೂನು ಪದವೀಧರರಾದ ಕಿರೆನ್ ರಿಜಿಜು ಅವರ ಪಾಲಾಗಿದೆ.

ಜ್ಯೋತಿರಾಧಿತ್ಯ ಸಿಂಧಿಯಾ – ನಾಗರಿಕ ವಿಮಾನಯಾನ ಸಚಿವಾಲಯ. (ಈ ಹಿಂದೆ ಇದನ್ನು ಅವರ ತಂದೆ ಮಾಧವ ಸಿಂಧಿಯಾ ನಿರ್ವಹಿಸಿದ್ದರು)

ಮೊದಲ ಬಾರಿಗೆ ಪ್ರಧಾನಿ ಮೋದಿ ಅವರ ಸರ್ಕಾರಕ್ಕೆ ಸೇರ್ಪಡೆಗೊಂಡ ನಿತೀಶ್ ಕುಮಾರ್ ಅವರ ಜೆಡಿಯುನ ರಾಮಚಂದ್ರ ಪ್ರಸಾದ್ ಸಿಂಗ್ ಅವರಿಗೆ ಉಕ್ಕಿನ ಖಾತೆ ನೀಡಲಾಗಿದೆ.

ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಕಿರಿಯ ಸಚಿವರಾಗಿದ್ದ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಸದ್ಯ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ. ಹೆಚ್ಚುವರಿಯಾಗಿ, ಅವರು ಯುವಜನ ಮತ್ತು ಕ್ರೀಡೆ ಖಾತೆ ನಿರ್ವಹಿಸುತ್ತಾರೆ.

ಮೊದಲ ಎನ್‌ಡಿಎ ಸರ್ಕಾರದಲ್ಲಿ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವಾಲಯವನ್ನು ನಿರ್ವಹಿಸಿದ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರಿಗೆ ಬಂದರು, ಹಡಗು ಮತ್ತು ಜಲಮಾರ್ಗಗಳ ಖಾತೆಯ ಉಸ್ತುವಾರಿ ವಹಿಸಲಾಗಿದೆ. ಜೊತೆಗೆ ಆಯುಷ್ ಸಚಿವಾಲಯವನ್ನೂ ಅವರು ನಿರ್ವಹಿಸಲಿದ್ದಾರೆ.

ರಮೇಶ್ ಪೋಖ್ರಿಯಲ್ ನಿಶಾಂಕ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಶಿಕ್ಷಣ ಸಚಿವಾಲಯವು ಧರ್ಮಮೇಂದ್ರ ಪ್ರಧಾನ್ ಅವರ ಪಾಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಗೃಹ ಇಲಾಖೆಯ ಜೊತೆಗೆ ಹೊಸದಾಗಿ ರಚಿಸಿದ ಸಹಕಾರ ಸಚಿವಾಲಯದ ಉಸ್ತುವಾರಿಯನ್ನು ಪಡೆದಿದ್ದಾರೆ.

ಮೀನಾಕ್ಷಿ ಲೇಖಿ – ವಿದೇಶಾಂಗ ಮತ್ತು ಸಂಸ್ಕೃತಿ ಸಚಿವಾಲಯದ ರಾಜ್ಯ ಸಚಿವರು.

ಪಾರ್ಶೋತ್ತಮ್ ರೂಪಾಲ – ಪಶು ಸಂಗೋಪನೆ ಮತ್ತು ಮೀನುಗಾರಿಕೆ

ಹರ್ದೀಪ್ ಸಿಂಗ್ ಪುರಿ – ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾಗಲಿದ್ದಾರೆ.

ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದಲ್ಲಿ ಬಂಡಾಯವೆದ್ದ ಗುಂಪಿನ ನೇತೃತ್ವ ವಹಿಸಿರುವ ಪಶುಪತಿ ಪರಾಸ್ ಅವರಿಗೆ ಆಹಾರ ಸಂಸ್ಕರಣಾ ಖಾತೆ ನೀಡಲಾಗಿದೆ.

ಭೂಪೇಂದರ್ ಯಾದವ್ – ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ.

ಜಿ ಕಿಶನ್ ರೆಡ್ಡಿ – ಈಶಾನ್ಯ ವಲಯದ ಸಂಸ್ಕೃತಿ, ಪ್ರವಾಸೋದ್ಯಮ ಮತ್ತು ಅಭಿವೃದ್ಧಿ ಖಾತೆ ನಿರ್ವಹಿಸಲಿದ್ದಾರೆ.

ಕರ್ನಾಟಕ

ಶೋಭಾ ಕರದ್ಲಾಂಜೆಗೆ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ, ಎ.ನಾರಾಯಣ ಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ, ರಾಜೀವ್ ಚಂದ್ರಶೇಖರ್ ಅವರಿಗೆ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಹಾಗೂ ಭಗವಂತ ಖೂಬಾ ಅವರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ನೀಡಲಾಗಿದೆ.

ರವಿಶಂಕರ್ ಪ್ರಸಾದ್, ಡಾ.ಹರ್ಷವರ್ಧನ್ ಮತ್ತು ಪ್ರಕಾಶ್ ಜಾವಡೇಕರ್ ಸೇರಿ 12 ಮಂತ್ರಿಗಳು ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಅವರೆಲ್ಲರೂ ಮೊದಲು ಅವರು ಪ್ರಧಾನಮಂತ್ರಿಯ ಪ್ರಮುಖ ತಂಡದಲ್ಲಿದ್ದರು. ಅವರೇ ರಾಜೀನಾಮೆ ನೀಡಿರುವುದು ದೊಡ್ಡ ಟೀಕೆಗೆ ಕಾರಣವಾಗಿದೆ. ಯಶಸ್ಸಿನ ಕೀರ್ತಿ ಮೋದಿಗೆ ಸಲ್ಲುತ್ತದೆ. ವಿಫಲತೆಯ ಪರಿಣಾಮವನ್ನು ಮಾತ್ರ ಮಂತ್ರಿಗಳು ಅನುಭವಿಸಬೇಕೆ ಎಂಬ ಆರೋಪ ಕೇಳಿಬಂದಿದೆ.


ಇದನ್ನೂ ಓದಿ: ಕರ್ನಾಟಕದ ನಾಲ್ವರಿಗೆ ಮೋದಿ ಸಂಪುಟದಲ್ಲಿ ಸ್ಥಾನ: ಡೀಟೈಲ್ಸ್ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...