Homeಮುಖಪುಟಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? - ಇಲ್ಲಿದೆ ಡೀಟೈಲ್ಸ್

ಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? – ಇಲ್ಲಿದೆ ಡೀಟೈಲ್ಸ್

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅಧಿಕಾರಕ್ಕೆ ಬಂದ ಎರಡು ವರ್ಷಗಳ ಬಳಿಕ ಸಂಪುಟ ಪುನರ್ರಚನೆ ಪೂರ್ಣಗೊಳಿಸಿದೆ. ಕ್ಯಾಬಿನೆಟ್ ಮಂತ್ರಿಗಳ ಸಂಖ್ಯೆಯನ್ನು 21 ರಿಂದ 30 ಕ್ಕೆ ಮತ್ತು ಕಿರಿಯ ಮಂತ್ರಿಗಳ ಸಂಖ್ಯೆಯನ್ನು 23 ರಿಂದ 45 ಕ್ಕೆ ಹೆಚ್ಚಿಸಿದೆ. ನಲವತ್ತನಾಲ್ಕು ಸಚಿವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರಲ್ಲಿ ಹದಿನೈದು ಮಂದಿ ಕೇಂದ್ರ ಸಚಿವ ಸಂಪುಟದ ಭಾಗವಾದರು. ಅವರಲ್ಲಿ ಯಾರಿಗೆ ಯಾವ ಸ್ಥಾನ ನೀಡಿದೆ ಎಂಬ ವಿವರ ಇಲ್ಲಿದೆ.

ಕೋವಿಡ್ ಎದುರಿಸುವಲ್ಲಿ ವಿಫಲರಾದರು ಎಂಬ ಹಣೆಪಟ್ಟೆ ಹೊತ್ತಿದ್ದ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಸ್ಥಾನವನ್ನು ಇನ್ನುಮುಂದೆ ಮನ್ಸುಖ್ ಮಾಂಡವಿಯಾ ತುಂಬಲಿದ್ದಾರೆ. ಅವರ ಕಿರಿಯ ಸಚಿವರರಾಗಿ ಡಾ.ಭಾರತಿ ಪವಾರ್ ಇರಲಿದ್ದಾರೆ. ಇದಲ್ಲದೆ, ಮನ್ಸುಖ್ ರಾಸಾಯನಿಕ ರಸಗೊಬ್ಬರಗಳ ಸಚಿವಾಲಯವನ್ನು ಉಳಿಸಿಕೊಂಡಿದ್ದಾರೆ.

ಒಡಿಶಾದ ರಾಜ್ಯಸಭಾ ಸಂಸದ ಅಶ್ವಿನಿ ವೈಷ್ಣವ್ ಅವರಿಗೆ ರೈಲ್ವೆ ಮತ್ತು ಐಟಿ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ.

ಕಾನೂನು ಮತ್ತು ನ್ಯಾಯ ಸಚಿವಾಲಯವು ಕಾನೂನು ಪದವೀಧರರಾದ ಕಿರೆನ್ ರಿಜಿಜು ಅವರ ಪಾಲಾಗಿದೆ.

ಜ್ಯೋತಿರಾಧಿತ್ಯ ಸಿಂಧಿಯಾ – ನಾಗರಿಕ ವಿಮಾನಯಾನ ಸಚಿವಾಲಯ. (ಈ ಹಿಂದೆ ಇದನ್ನು ಅವರ ತಂದೆ ಮಾಧವ ಸಿಂಧಿಯಾ ನಿರ್ವಹಿಸಿದ್ದರು)

ಮೊದಲ ಬಾರಿಗೆ ಪ್ರಧಾನಿ ಮೋದಿ ಅವರ ಸರ್ಕಾರಕ್ಕೆ ಸೇರ್ಪಡೆಗೊಂಡ ನಿತೀಶ್ ಕುಮಾರ್ ಅವರ ಜೆಡಿಯುನ ರಾಮಚಂದ್ರ ಪ್ರಸಾದ್ ಸಿಂಗ್ ಅವರಿಗೆ ಉಕ್ಕಿನ ಖಾತೆ ನೀಡಲಾಗಿದೆ.

ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಕಿರಿಯ ಸಚಿವರಾಗಿದ್ದ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಸದ್ಯ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ. ಹೆಚ್ಚುವರಿಯಾಗಿ, ಅವರು ಯುವಜನ ಮತ್ತು ಕ್ರೀಡೆ ಖಾತೆ ನಿರ್ವಹಿಸುತ್ತಾರೆ.

ಮೊದಲ ಎನ್‌ಡಿಎ ಸರ್ಕಾರದಲ್ಲಿ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವಾಲಯವನ್ನು ನಿರ್ವಹಿಸಿದ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರಿಗೆ ಬಂದರು, ಹಡಗು ಮತ್ತು ಜಲಮಾರ್ಗಗಳ ಖಾತೆಯ ಉಸ್ತುವಾರಿ ವಹಿಸಲಾಗಿದೆ. ಜೊತೆಗೆ ಆಯುಷ್ ಸಚಿವಾಲಯವನ್ನೂ ಅವರು ನಿರ್ವಹಿಸಲಿದ್ದಾರೆ.

ರಮೇಶ್ ಪೋಖ್ರಿಯಲ್ ನಿಶಾಂಕ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಶಿಕ್ಷಣ ಸಚಿವಾಲಯವು ಧರ್ಮಮೇಂದ್ರ ಪ್ರಧಾನ್ ಅವರ ಪಾಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಗೃಹ ಇಲಾಖೆಯ ಜೊತೆಗೆ ಹೊಸದಾಗಿ ರಚಿಸಿದ ಸಹಕಾರ ಸಚಿವಾಲಯದ ಉಸ್ತುವಾರಿಯನ್ನು ಪಡೆದಿದ್ದಾರೆ.

ಮೀನಾಕ್ಷಿ ಲೇಖಿ – ವಿದೇಶಾಂಗ ಮತ್ತು ಸಂಸ್ಕೃತಿ ಸಚಿವಾಲಯದ ರಾಜ್ಯ ಸಚಿವರು.

ಪಾರ್ಶೋತ್ತಮ್ ರೂಪಾಲ – ಪಶು ಸಂಗೋಪನೆ ಮತ್ತು ಮೀನುಗಾರಿಕೆ

ಹರ್ದೀಪ್ ಸಿಂಗ್ ಪುರಿ – ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾಗಲಿದ್ದಾರೆ.

ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದಲ್ಲಿ ಬಂಡಾಯವೆದ್ದ ಗುಂಪಿನ ನೇತೃತ್ವ ವಹಿಸಿರುವ ಪಶುಪತಿ ಪರಾಸ್ ಅವರಿಗೆ ಆಹಾರ ಸಂಸ್ಕರಣಾ ಖಾತೆ ನೀಡಲಾಗಿದೆ.

ಭೂಪೇಂದರ್ ಯಾದವ್ – ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ.

ಜಿ ಕಿಶನ್ ರೆಡ್ಡಿ – ಈಶಾನ್ಯ ವಲಯದ ಸಂಸ್ಕೃತಿ, ಪ್ರವಾಸೋದ್ಯಮ ಮತ್ತು ಅಭಿವೃದ್ಧಿ ಖಾತೆ ನಿರ್ವಹಿಸಲಿದ್ದಾರೆ.

ಕರ್ನಾಟಕ

ಶೋಭಾ ಕರದ್ಲಾಂಜೆಗೆ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ, ಎ.ನಾರಾಯಣ ಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ, ರಾಜೀವ್ ಚಂದ್ರಶೇಖರ್ ಅವರಿಗೆ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಹಾಗೂ ಭಗವಂತ ಖೂಬಾ ಅವರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ನೀಡಲಾಗಿದೆ.

ರವಿಶಂಕರ್ ಪ್ರಸಾದ್, ಡಾ.ಹರ್ಷವರ್ಧನ್ ಮತ್ತು ಪ್ರಕಾಶ್ ಜಾವಡೇಕರ್ ಸೇರಿ 12 ಮಂತ್ರಿಗಳು ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಅವರೆಲ್ಲರೂ ಮೊದಲು ಅವರು ಪ್ರಧಾನಮಂತ್ರಿಯ ಪ್ರಮುಖ ತಂಡದಲ್ಲಿದ್ದರು. ಅವರೇ ರಾಜೀನಾಮೆ ನೀಡಿರುವುದು ದೊಡ್ಡ ಟೀಕೆಗೆ ಕಾರಣವಾಗಿದೆ. ಯಶಸ್ಸಿನ ಕೀರ್ತಿ ಮೋದಿಗೆ ಸಲ್ಲುತ್ತದೆ. ವಿಫಲತೆಯ ಪರಿಣಾಮವನ್ನು ಮಾತ್ರ ಮಂತ್ರಿಗಳು ಅನುಭವಿಸಬೇಕೆ ಎಂಬ ಆರೋಪ ಕೇಳಿಬಂದಿದೆ.


ಇದನ್ನೂ ಓದಿ: ಕರ್ನಾಟಕದ ನಾಲ್ವರಿಗೆ ಮೋದಿ ಸಂಪುಟದಲ್ಲಿ ಸ್ಥಾನ: ಡೀಟೈಲ್ಸ್ ಇಲ್ಲಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...