Homeಮುಖಪುಟಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? - ಇಲ್ಲಿದೆ ಡೀಟೈಲ್ಸ್

ಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? – ಇಲ್ಲಿದೆ ಡೀಟೈಲ್ಸ್

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅಧಿಕಾರಕ್ಕೆ ಬಂದ ಎರಡು ವರ್ಷಗಳ ಬಳಿಕ ಸಂಪುಟ ಪುನರ್ರಚನೆ ಪೂರ್ಣಗೊಳಿಸಿದೆ. ಕ್ಯಾಬಿನೆಟ್ ಮಂತ್ರಿಗಳ ಸಂಖ್ಯೆಯನ್ನು 21 ರಿಂದ 30 ಕ್ಕೆ ಮತ್ತು ಕಿರಿಯ ಮಂತ್ರಿಗಳ ಸಂಖ್ಯೆಯನ್ನು 23 ರಿಂದ 45 ಕ್ಕೆ ಹೆಚ್ಚಿಸಿದೆ. ನಲವತ್ತನಾಲ್ಕು ಸಚಿವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರಲ್ಲಿ ಹದಿನೈದು ಮಂದಿ ಕೇಂದ್ರ ಸಚಿವ ಸಂಪುಟದ ಭಾಗವಾದರು. ಅವರಲ್ಲಿ ಯಾರಿಗೆ ಯಾವ ಸ್ಥಾನ ನೀಡಿದೆ ಎಂಬ ವಿವರ ಇಲ್ಲಿದೆ.

ಕೋವಿಡ್ ಎದುರಿಸುವಲ್ಲಿ ವಿಫಲರಾದರು ಎಂಬ ಹಣೆಪಟ್ಟೆ ಹೊತ್ತಿದ್ದ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಸ್ಥಾನವನ್ನು ಇನ್ನುಮುಂದೆ ಮನ್ಸುಖ್ ಮಾಂಡವಿಯಾ ತುಂಬಲಿದ್ದಾರೆ. ಅವರ ಕಿರಿಯ ಸಚಿವರರಾಗಿ ಡಾ.ಭಾರತಿ ಪವಾರ್ ಇರಲಿದ್ದಾರೆ. ಇದಲ್ಲದೆ, ಮನ್ಸುಖ್ ರಾಸಾಯನಿಕ ರಸಗೊಬ್ಬರಗಳ ಸಚಿವಾಲಯವನ್ನು ಉಳಿಸಿಕೊಂಡಿದ್ದಾರೆ.

ಒಡಿಶಾದ ರಾಜ್ಯಸಭಾ ಸಂಸದ ಅಶ್ವಿನಿ ವೈಷ್ಣವ್ ಅವರಿಗೆ ರೈಲ್ವೆ ಮತ್ತು ಐಟಿ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ.

ಕಾನೂನು ಮತ್ತು ನ್ಯಾಯ ಸಚಿವಾಲಯವು ಕಾನೂನು ಪದವೀಧರರಾದ ಕಿರೆನ್ ರಿಜಿಜು ಅವರ ಪಾಲಾಗಿದೆ.

ಜ್ಯೋತಿರಾಧಿತ್ಯ ಸಿಂಧಿಯಾ – ನಾಗರಿಕ ವಿಮಾನಯಾನ ಸಚಿವಾಲಯ. (ಈ ಹಿಂದೆ ಇದನ್ನು ಅವರ ತಂದೆ ಮಾಧವ ಸಿಂಧಿಯಾ ನಿರ್ವಹಿಸಿದ್ದರು)

ಮೊದಲ ಬಾರಿಗೆ ಪ್ರಧಾನಿ ಮೋದಿ ಅವರ ಸರ್ಕಾರಕ್ಕೆ ಸೇರ್ಪಡೆಗೊಂಡ ನಿತೀಶ್ ಕುಮಾರ್ ಅವರ ಜೆಡಿಯುನ ರಾಮಚಂದ್ರ ಪ್ರಸಾದ್ ಸಿಂಗ್ ಅವರಿಗೆ ಉಕ್ಕಿನ ಖಾತೆ ನೀಡಲಾಗಿದೆ.

ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಕಿರಿಯ ಸಚಿವರಾಗಿದ್ದ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಸದ್ಯ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ. ಹೆಚ್ಚುವರಿಯಾಗಿ, ಅವರು ಯುವಜನ ಮತ್ತು ಕ್ರೀಡೆ ಖಾತೆ ನಿರ್ವಹಿಸುತ್ತಾರೆ.

ಮೊದಲ ಎನ್‌ಡಿಎ ಸರ್ಕಾರದಲ್ಲಿ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವಾಲಯವನ್ನು ನಿರ್ವಹಿಸಿದ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರಿಗೆ ಬಂದರು, ಹಡಗು ಮತ್ತು ಜಲಮಾರ್ಗಗಳ ಖಾತೆಯ ಉಸ್ತುವಾರಿ ವಹಿಸಲಾಗಿದೆ. ಜೊತೆಗೆ ಆಯುಷ್ ಸಚಿವಾಲಯವನ್ನೂ ಅವರು ನಿರ್ವಹಿಸಲಿದ್ದಾರೆ.

ರಮೇಶ್ ಪೋಖ್ರಿಯಲ್ ನಿಶಾಂಕ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಶಿಕ್ಷಣ ಸಚಿವಾಲಯವು ಧರ್ಮಮೇಂದ್ರ ಪ್ರಧಾನ್ ಅವರ ಪಾಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಗೃಹ ಇಲಾಖೆಯ ಜೊತೆಗೆ ಹೊಸದಾಗಿ ರಚಿಸಿದ ಸಹಕಾರ ಸಚಿವಾಲಯದ ಉಸ್ತುವಾರಿಯನ್ನು ಪಡೆದಿದ್ದಾರೆ.

ಮೀನಾಕ್ಷಿ ಲೇಖಿ – ವಿದೇಶಾಂಗ ಮತ್ತು ಸಂಸ್ಕೃತಿ ಸಚಿವಾಲಯದ ರಾಜ್ಯ ಸಚಿವರು.

ಪಾರ್ಶೋತ್ತಮ್ ರೂಪಾಲ – ಪಶು ಸಂಗೋಪನೆ ಮತ್ತು ಮೀನುಗಾರಿಕೆ

ಹರ್ದೀಪ್ ಸಿಂಗ್ ಪುರಿ – ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾಗಲಿದ್ದಾರೆ.

ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದಲ್ಲಿ ಬಂಡಾಯವೆದ್ದ ಗುಂಪಿನ ನೇತೃತ್ವ ವಹಿಸಿರುವ ಪಶುಪತಿ ಪರಾಸ್ ಅವರಿಗೆ ಆಹಾರ ಸಂಸ್ಕರಣಾ ಖಾತೆ ನೀಡಲಾಗಿದೆ.

ಭೂಪೇಂದರ್ ಯಾದವ್ – ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ.

ಜಿ ಕಿಶನ್ ರೆಡ್ಡಿ – ಈಶಾನ್ಯ ವಲಯದ ಸಂಸ್ಕೃತಿ, ಪ್ರವಾಸೋದ್ಯಮ ಮತ್ತು ಅಭಿವೃದ್ಧಿ ಖಾತೆ ನಿರ್ವಹಿಸಲಿದ್ದಾರೆ.

ಕರ್ನಾಟಕ

ಶೋಭಾ ಕರದ್ಲಾಂಜೆಗೆ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ, ಎ.ನಾರಾಯಣ ಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ, ರಾಜೀವ್ ಚಂದ್ರಶೇಖರ್ ಅವರಿಗೆ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಹಾಗೂ ಭಗವಂತ ಖೂಬಾ ಅವರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ನೀಡಲಾಗಿದೆ.

ರವಿಶಂಕರ್ ಪ್ರಸಾದ್, ಡಾ.ಹರ್ಷವರ್ಧನ್ ಮತ್ತು ಪ್ರಕಾಶ್ ಜಾವಡೇಕರ್ ಸೇರಿ 12 ಮಂತ್ರಿಗಳು ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಅವರೆಲ್ಲರೂ ಮೊದಲು ಅವರು ಪ್ರಧಾನಮಂತ್ರಿಯ ಪ್ರಮುಖ ತಂಡದಲ್ಲಿದ್ದರು. ಅವರೇ ರಾಜೀನಾಮೆ ನೀಡಿರುವುದು ದೊಡ್ಡ ಟೀಕೆಗೆ ಕಾರಣವಾಗಿದೆ. ಯಶಸ್ಸಿನ ಕೀರ್ತಿ ಮೋದಿಗೆ ಸಲ್ಲುತ್ತದೆ. ವಿಫಲತೆಯ ಪರಿಣಾಮವನ್ನು ಮಾತ್ರ ಮಂತ್ರಿಗಳು ಅನುಭವಿಸಬೇಕೆ ಎಂಬ ಆರೋಪ ಕೇಳಿಬಂದಿದೆ.


ಇದನ್ನೂ ಓದಿ: ಕರ್ನಾಟಕದ ನಾಲ್ವರಿಗೆ ಮೋದಿ ಸಂಪುಟದಲ್ಲಿ ಸ್ಥಾನ: ಡೀಟೈಲ್ಸ್ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...