Homeಮುಖಪುಟಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? - ಇಲ್ಲಿದೆ ಡೀಟೈಲ್ಸ್

ಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? – ಇಲ್ಲಿದೆ ಡೀಟೈಲ್ಸ್

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅಧಿಕಾರಕ್ಕೆ ಬಂದ ಎರಡು ವರ್ಷಗಳ ಬಳಿಕ ಸಂಪುಟ ಪುನರ್ರಚನೆ ಪೂರ್ಣಗೊಳಿಸಿದೆ. ಕ್ಯಾಬಿನೆಟ್ ಮಂತ್ರಿಗಳ ಸಂಖ್ಯೆಯನ್ನು 21 ರಿಂದ 30 ಕ್ಕೆ ಮತ್ತು ಕಿರಿಯ ಮಂತ್ರಿಗಳ ಸಂಖ್ಯೆಯನ್ನು 23 ರಿಂದ 45 ಕ್ಕೆ ಹೆಚ್ಚಿಸಿದೆ. ನಲವತ್ತನಾಲ್ಕು ಸಚಿವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರಲ್ಲಿ ಹದಿನೈದು ಮಂದಿ ಕೇಂದ್ರ ಸಚಿವ ಸಂಪುಟದ ಭಾಗವಾದರು. ಅವರಲ್ಲಿ ಯಾರಿಗೆ ಯಾವ ಸ್ಥಾನ ನೀಡಿದೆ ಎಂಬ ವಿವರ ಇಲ್ಲಿದೆ.

ಕೋವಿಡ್ ಎದುರಿಸುವಲ್ಲಿ ವಿಫಲರಾದರು ಎಂಬ ಹಣೆಪಟ್ಟೆ ಹೊತ್ತಿದ್ದ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಸ್ಥಾನವನ್ನು ಇನ್ನುಮುಂದೆ ಮನ್ಸುಖ್ ಮಾಂಡವಿಯಾ ತುಂಬಲಿದ್ದಾರೆ. ಅವರ ಕಿರಿಯ ಸಚಿವರರಾಗಿ ಡಾ.ಭಾರತಿ ಪವಾರ್ ಇರಲಿದ್ದಾರೆ. ಇದಲ್ಲದೆ, ಮನ್ಸುಖ್ ರಾಸಾಯನಿಕ ರಸಗೊಬ್ಬರಗಳ ಸಚಿವಾಲಯವನ್ನು ಉಳಿಸಿಕೊಂಡಿದ್ದಾರೆ.

ಒಡಿಶಾದ ರಾಜ್ಯಸಭಾ ಸಂಸದ ಅಶ್ವಿನಿ ವೈಷ್ಣವ್ ಅವರಿಗೆ ರೈಲ್ವೆ ಮತ್ತು ಐಟಿ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ.

ಕಾನೂನು ಮತ್ತು ನ್ಯಾಯ ಸಚಿವಾಲಯವು ಕಾನೂನು ಪದವೀಧರರಾದ ಕಿರೆನ್ ರಿಜಿಜು ಅವರ ಪಾಲಾಗಿದೆ.

ಜ್ಯೋತಿರಾಧಿತ್ಯ ಸಿಂಧಿಯಾ – ನಾಗರಿಕ ವಿಮಾನಯಾನ ಸಚಿವಾಲಯ. (ಈ ಹಿಂದೆ ಇದನ್ನು ಅವರ ತಂದೆ ಮಾಧವ ಸಿಂಧಿಯಾ ನಿರ್ವಹಿಸಿದ್ದರು)

ಮೊದಲ ಬಾರಿಗೆ ಪ್ರಧಾನಿ ಮೋದಿ ಅವರ ಸರ್ಕಾರಕ್ಕೆ ಸೇರ್ಪಡೆಗೊಂಡ ನಿತೀಶ್ ಕುಮಾರ್ ಅವರ ಜೆಡಿಯುನ ರಾಮಚಂದ್ರ ಪ್ರಸಾದ್ ಸಿಂಗ್ ಅವರಿಗೆ ಉಕ್ಕಿನ ಖಾತೆ ನೀಡಲಾಗಿದೆ.

ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಕಿರಿಯ ಸಚಿವರಾಗಿದ್ದ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಸದ್ಯ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ. ಹೆಚ್ಚುವರಿಯಾಗಿ, ಅವರು ಯುವಜನ ಮತ್ತು ಕ್ರೀಡೆ ಖಾತೆ ನಿರ್ವಹಿಸುತ್ತಾರೆ.

ಮೊದಲ ಎನ್‌ಡಿಎ ಸರ್ಕಾರದಲ್ಲಿ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವಾಲಯವನ್ನು ನಿರ್ವಹಿಸಿದ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರಿಗೆ ಬಂದರು, ಹಡಗು ಮತ್ತು ಜಲಮಾರ್ಗಗಳ ಖಾತೆಯ ಉಸ್ತುವಾರಿ ವಹಿಸಲಾಗಿದೆ. ಜೊತೆಗೆ ಆಯುಷ್ ಸಚಿವಾಲಯವನ್ನೂ ಅವರು ನಿರ್ವಹಿಸಲಿದ್ದಾರೆ.

ರಮೇಶ್ ಪೋಖ್ರಿಯಲ್ ನಿಶಾಂಕ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಶಿಕ್ಷಣ ಸಚಿವಾಲಯವು ಧರ್ಮಮೇಂದ್ರ ಪ್ರಧಾನ್ ಅವರ ಪಾಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಗೃಹ ಇಲಾಖೆಯ ಜೊತೆಗೆ ಹೊಸದಾಗಿ ರಚಿಸಿದ ಸಹಕಾರ ಸಚಿವಾಲಯದ ಉಸ್ತುವಾರಿಯನ್ನು ಪಡೆದಿದ್ದಾರೆ.

ಮೀನಾಕ್ಷಿ ಲೇಖಿ – ವಿದೇಶಾಂಗ ಮತ್ತು ಸಂಸ್ಕೃತಿ ಸಚಿವಾಲಯದ ರಾಜ್ಯ ಸಚಿವರು.

ಪಾರ್ಶೋತ್ತಮ್ ರೂಪಾಲ – ಪಶು ಸಂಗೋಪನೆ ಮತ್ತು ಮೀನುಗಾರಿಕೆ

ಹರ್ದೀಪ್ ಸಿಂಗ್ ಪುರಿ – ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾಗಲಿದ್ದಾರೆ.

ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದಲ್ಲಿ ಬಂಡಾಯವೆದ್ದ ಗುಂಪಿನ ನೇತೃತ್ವ ವಹಿಸಿರುವ ಪಶುಪತಿ ಪರಾಸ್ ಅವರಿಗೆ ಆಹಾರ ಸಂಸ್ಕರಣಾ ಖಾತೆ ನೀಡಲಾಗಿದೆ.

ಭೂಪೇಂದರ್ ಯಾದವ್ – ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ.

ಜಿ ಕಿಶನ್ ರೆಡ್ಡಿ – ಈಶಾನ್ಯ ವಲಯದ ಸಂಸ್ಕೃತಿ, ಪ್ರವಾಸೋದ್ಯಮ ಮತ್ತು ಅಭಿವೃದ್ಧಿ ಖಾತೆ ನಿರ್ವಹಿಸಲಿದ್ದಾರೆ.

ಕರ್ನಾಟಕ

ಶೋಭಾ ಕರದ್ಲಾಂಜೆಗೆ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ, ಎ.ನಾರಾಯಣ ಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ, ರಾಜೀವ್ ಚಂದ್ರಶೇಖರ್ ಅವರಿಗೆ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಹಾಗೂ ಭಗವಂತ ಖೂಬಾ ಅವರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ನೀಡಲಾಗಿದೆ.

ರವಿಶಂಕರ್ ಪ್ರಸಾದ್, ಡಾ.ಹರ್ಷವರ್ಧನ್ ಮತ್ತು ಪ್ರಕಾಶ್ ಜಾವಡೇಕರ್ ಸೇರಿ 12 ಮಂತ್ರಿಗಳು ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಅವರೆಲ್ಲರೂ ಮೊದಲು ಅವರು ಪ್ರಧಾನಮಂತ್ರಿಯ ಪ್ರಮುಖ ತಂಡದಲ್ಲಿದ್ದರು. ಅವರೇ ರಾಜೀನಾಮೆ ನೀಡಿರುವುದು ದೊಡ್ಡ ಟೀಕೆಗೆ ಕಾರಣವಾಗಿದೆ. ಯಶಸ್ಸಿನ ಕೀರ್ತಿ ಮೋದಿಗೆ ಸಲ್ಲುತ್ತದೆ. ವಿಫಲತೆಯ ಪರಿಣಾಮವನ್ನು ಮಾತ್ರ ಮಂತ್ರಿಗಳು ಅನುಭವಿಸಬೇಕೆ ಎಂಬ ಆರೋಪ ಕೇಳಿಬಂದಿದೆ.


ಇದನ್ನೂ ಓದಿ: ಕರ್ನಾಟಕದ ನಾಲ್ವರಿಗೆ ಮೋದಿ ಸಂಪುಟದಲ್ಲಿ ಸ್ಥಾನ: ಡೀಟೈಲ್ಸ್ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...