Homeಮುಖಪುಟಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? - ಇಲ್ಲಿದೆ ಡೀಟೈಲ್ಸ್

ಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? – ಇಲ್ಲಿದೆ ಡೀಟೈಲ್ಸ್

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅಧಿಕಾರಕ್ಕೆ ಬಂದ ಎರಡು ವರ್ಷಗಳ ಬಳಿಕ ಸಂಪುಟ ಪುನರ್ರಚನೆ ಪೂರ್ಣಗೊಳಿಸಿದೆ. ಕ್ಯಾಬಿನೆಟ್ ಮಂತ್ರಿಗಳ ಸಂಖ್ಯೆಯನ್ನು 21 ರಿಂದ 30 ಕ್ಕೆ ಮತ್ತು ಕಿರಿಯ ಮಂತ್ರಿಗಳ ಸಂಖ್ಯೆಯನ್ನು 23 ರಿಂದ 45 ಕ್ಕೆ ಹೆಚ್ಚಿಸಿದೆ. ನಲವತ್ತನಾಲ್ಕು ಸಚಿವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರಲ್ಲಿ ಹದಿನೈದು ಮಂದಿ ಕೇಂದ್ರ ಸಚಿವ ಸಂಪುಟದ ಭಾಗವಾದರು. ಅವರಲ್ಲಿ ಯಾರಿಗೆ ಯಾವ ಸ್ಥಾನ ನೀಡಿದೆ ಎಂಬ ವಿವರ ಇಲ್ಲಿದೆ.

ಕೋವಿಡ್ ಎದುರಿಸುವಲ್ಲಿ ವಿಫಲರಾದರು ಎಂಬ ಹಣೆಪಟ್ಟೆ ಹೊತ್ತಿದ್ದ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಸ್ಥಾನವನ್ನು ಇನ್ನುಮುಂದೆ ಮನ್ಸುಖ್ ಮಾಂಡವಿಯಾ ತುಂಬಲಿದ್ದಾರೆ. ಅವರ ಕಿರಿಯ ಸಚಿವರರಾಗಿ ಡಾ.ಭಾರತಿ ಪವಾರ್ ಇರಲಿದ್ದಾರೆ. ಇದಲ್ಲದೆ, ಮನ್ಸುಖ್ ರಾಸಾಯನಿಕ ರಸಗೊಬ್ಬರಗಳ ಸಚಿವಾಲಯವನ್ನು ಉಳಿಸಿಕೊಂಡಿದ್ದಾರೆ.

ಒಡಿಶಾದ ರಾಜ್ಯಸಭಾ ಸಂಸದ ಅಶ್ವಿನಿ ವೈಷ್ಣವ್ ಅವರಿಗೆ ರೈಲ್ವೆ ಮತ್ತು ಐಟಿ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ.

ಕಾನೂನು ಮತ್ತು ನ್ಯಾಯ ಸಚಿವಾಲಯವು ಕಾನೂನು ಪದವೀಧರರಾದ ಕಿರೆನ್ ರಿಜಿಜು ಅವರ ಪಾಲಾಗಿದೆ.

ಜ್ಯೋತಿರಾಧಿತ್ಯ ಸಿಂಧಿಯಾ – ನಾಗರಿಕ ವಿಮಾನಯಾನ ಸಚಿವಾಲಯ. (ಈ ಹಿಂದೆ ಇದನ್ನು ಅವರ ತಂದೆ ಮಾಧವ ಸಿಂಧಿಯಾ ನಿರ್ವಹಿಸಿದ್ದರು)

ಮೊದಲ ಬಾರಿಗೆ ಪ್ರಧಾನಿ ಮೋದಿ ಅವರ ಸರ್ಕಾರಕ್ಕೆ ಸೇರ್ಪಡೆಗೊಂಡ ನಿತೀಶ್ ಕುಮಾರ್ ಅವರ ಜೆಡಿಯುನ ರಾಮಚಂದ್ರ ಪ್ರಸಾದ್ ಸಿಂಗ್ ಅವರಿಗೆ ಉಕ್ಕಿನ ಖಾತೆ ನೀಡಲಾಗಿದೆ.

ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಕಿರಿಯ ಸಚಿವರಾಗಿದ್ದ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಸದ್ಯ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ. ಹೆಚ್ಚುವರಿಯಾಗಿ, ಅವರು ಯುವಜನ ಮತ್ತು ಕ್ರೀಡೆ ಖಾತೆ ನಿರ್ವಹಿಸುತ್ತಾರೆ.

ಮೊದಲ ಎನ್‌ಡಿಎ ಸರ್ಕಾರದಲ್ಲಿ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವಾಲಯವನ್ನು ನಿರ್ವಹಿಸಿದ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರಿಗೆ ಬಂದರು, ಹಡಗು ಮತ್ತು ಜಲಮಾರ್ಗಗಳ ಖಾತೆಯ ಉಸ್ತುವಾರಿ ವಹಿಸಲಾಗಿದೆ. ಜೊತೆಗೆ ಆಯುಷ್ ಸಚಿವಾಲಯವನ್ನೂ ಅವರು ನಿರ್ವಹಿಸಲಿದ್ದಾರೆ.

ರಮೇಶ್ ಪೋಖ್ರಿಯಲ್ ನಿಶಾಂಕ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಶಿಕ್ಷಣ ಸಚಿವಾಲಯವು ಧರ್ಮಮೇಂದ್ರ ಪ್ರಧಾನ್ ಅವರ ಪಾಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಗೃಹ ಇಲಾಖೆಯ ಜೊತೆಗೆ ಹೊಸದಾಗಿ ರಚಿಸಿದ ಸಹಕಾರ ಸಚಿವಾಲಯದ ಉಸ್ತುವಾರಿಯನ್ನು ಪಡೆದಿದ್ದಾರೆ.

ಮೀನಾಕ್ಷಿ ಲೇಖಿ – ವಿದೇಶಾಂಗ ಮತ್ತು ಸಂಸ್ಕೃತಿ ಸಚಿವಾಲಯದ ರಾಜ್ಯ ಸಚಿವರು.

ಪಾರ್ಶೋತ್ತಮ್ ರೂಪಾಲ – ಪಶು ಸಂಗೋಪನೆ ಮತ್ತು ಮೀನುಗಾರಿಕೆ

ಹರ್ದೀಪ್ ಸಿಂಗ್ ಪುರಿ – ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾಗಲಿದ್ದಾರೆ.

ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದಲ್ಲಿ ಬಂಡಾಯವೆದ್ದ ಗುಂಪಿನ ನೇತೃತ್ವ ವಹಿಸಿರುವ ಪಶುಪತಿ ಪರಾಸ್ ಅವರಿಗೆ ಆಹಾರ ಸಂಸ್ಕರಣಾ ಖಾತೆ ನೀಡಲಾಗಿದೆ.

ಭೂಪೇಂದರ್ ಯಾದವ್ – ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ.

ಜಿ ಕಿಶನ್ ರೆಡ್ಡಿ – ಈಶಾನ್ಯ ವಲಯದ ಸಂಸ್ಕೃತಿ, ಪ್ರವಾಸೋದ್ಯಮ ಮತ್ತು ಅಭಿವೃದ್ಧಿ ಖಾತೆ ನಿರ್ವಹಿಸಲಿದ್ದಾರೆ.

ಕರ್ನಾಟಕ

ಶೋಭಾ ಕರದ್ಲಾಂಜೆಗೆ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ, ಎ.ನಾರಾಯಣ ಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ, ರಾಜೀವ್ ಚಂದ್ರಶೇಖರ್ ಅವರಿಗೆ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಹಾಗೂ ಭಗವಂತ ಖೂಬಾ ಅವರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ನೀಡಲಾಗಿದೆ.

ರವಿಶಂಕರ್ ಪ್ರಸಾದ್, ಡಾ.ಹರ್ಷವರ್ಧನ್ ಮತ್ತು ಪ್ರಕಾಶ್ ಜಾವಡೇಕರ್ ಸೇರಿ 12 ಮಂತ್ರಿಗಳು ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಅವರೆಲ್ಲರೂ ಮೊದಲು ಅವರು ಪ್ರಧಾನಮಂತ್ರಿಯ ಪ್ರಮುಖ ತಂಡದಲ್ಲಿದ್ದರು. ಅವರೇ ರಾಜೀನಾಮೆ ನೀಡಿರುವುದು ದೊಡ್ಡ ಟೀಕೆಗೆ ಕಾರಣವಾಗಿದೆ. ಯಶಸ್ಸಿನ ಕೀರ್ತಿ ಮೋದಿಗೆ ಸಲ್ಲುತ್ತದೆ. ವಿಫಲತೆಯ ಪರಿಣಾಮವನ್ನು ಮಾತ್ರ ಮಂತ್ರಿಗಳು ಅನುಭವಿಸಬೇಕೆ ಎಂಬ ಆರೋಪ ಕೇಳಿಬಂದಿದೆ.


ಇದನ್ನೂ ಓದಿ: ಕರ್ನಾಟಕದ ನಾಲ್ವರಿಗೆ ಮೋದಿ ಸಂಪುಟದಲ್ಲಿ ಸ್ಥಾನ: ಡೀಟೈಲ್ಸ್ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...