HomeUncategorizedಕೊರೊನಾ ನಿಯಂತ್ರಿಸಲು ಮೋದಿ ವಿಫಲ: ಅವರ ಮುಂದಿನ ಕ್ರಮವೇನು? - ರಾಹುಲ್‌ ಪ್ರಶ್ನೆ

ಕೊರೊನಾ ನಿಯಂತ್ರಿಸಲು ಮೋದಿ ವಿಫಲ: ಅವರ ಮುಂದಿನ ಕ್ರಮವೇನು? – ರಾಹುಲ್‌ ಪ್ರಶ್ನೆ

- Advertisement -
- Advertisement -

ಮೇ ಅಂತ್ಯದ ವೇಳೆಗೆ ಕೊರೊನಾ ಪ್ರಕರಣಗಳು ಇಳಿಮುಖವಾಗಿರುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ ದಿನೇ ದಿನೇ ಪ್ರಕರಣಗಳ ಸಂಖ್ಯೆ ಏರುತ್ತಲೇ ಇವೆ. ಇದು ಮೋದಿಯವರ ವಿಫಲತೆಯನ್ನು ಸೂಚಿಸುವುದಿಲ್ಲವೇ? ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವಾಗಲೇ ಲಾಕ್‌ಡೌನ್‌ ತೆರವುಗೊಳಿಸುತ್ತಿದ್ದಾರೆ. ಹಾಗಾದರೆ ಕೊರೊನಾ ಎದುರಿಸಲು ಮೋದಿಯವರ ಮುಂದಿನ ಕ್ರಮವೇನು ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ನಾಲ್ಕು ಹಂತದ ಲಾಕ್‌ಡೌನ್‌ ಹೇರಿಯೂ ಕೊರೊನಾ ನಿಯಂತ್ರಿಸಲು ವಿಫಲವಾಗಿದ್ದಾರೆ. ಕೊರೊನಾ ವೈರಸ್‌ಗಳ ಸಂಖ್ಯೆ ದೊಡ್ಡ ಮಟ್ಟದಲ್ಲಿ ಹೆಚ್ಚಳವಾಗುತ್ತಿರುವ ಸಂದರ್ಭದಲ್ಲಿ ಲಾಕ್‌ಡೌನ್‌ ಸಡಿಲಿಸುತ್ತಿರುವ ಏಕೈಕ ದೇಶ ಭಾರತವಾಗಿದೆ. ಹಾಗಾದರೆ ಕೊರೊನಾ ವಿರುದ್ಧದ ಮುಂದಿನ ಕ್ರಮಗಳನ್ನು ಮೋದಿಯವರು ಘೋಷಿಸಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಕೊರೊನಾ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರಕ್ಕೆ ಮಾರ್ಕ್ಸ್ ನೀಡಲು ನಾನು ಪ್ರೊಫೆಸರ್ ಅಲ್ಲ. ರಾಜ್ಯಗಳಿಗೆ ಕೇಂದ್ರ ಸರ್ಕಾರ ನೆರವು ಸಿಗುತ್ತಿಲ್ಲ. ರಾಜ್ಯಗಳಿಗೆ ಆರ್ಥಿಕ ಪ್ಯಾಕೇಜ್ ಅವಶ್ಯಕತೆ ಇದೆ ಎಂದು ರಾಹುಲ್ ಗಾಂಧಿ ಅವರು ಒತ್ತಾಯಿಸಿದರು.

“ಜಿಡಿಪಿಯ ಶೇಕಡಾ 10 ರಷ್ಟು ಪ್ಯಾಕೇಜ್‌ ನೀಡಿದ್ದೇವೆ ಎಂದು ಪ್ರಧಾನಿ ಹೇಳಿದರು. ಆದರೆ ವಾಸ್ತವವೆಂದರೆ ಜಿಡಿಪಿಯ ಶೇಕಡಾ 1 ಕ್ಕಿಂತ ಕಡಿಮೆ ಹಣವನ್ನು ನೀಡಲಾಗುತ್ತಿದೆ ಮತ್ತು ಹೆಚ್ಚಾಗಿ ಸಾಲಗಳನ್ನು ನೀಡಲಾಗುತ್ತದೆ. ಯಾವುದೇ ಹಣವನ್ನು ಜನರಿಗೆ ನೀಡಲಾಗುತ್ತಿಲ್ಲ” ಎಂದು ಅವರು ‌ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲಸ ಮತ್ತು ಕಾಸಿಲ್ಲದೆ ಪರಿತಪಿಸುತ್ತಿರುವ ಬಡವರ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡದೆ ಬೇರೆ ಪರಿಹಾರ ಇಲ್ಲ. ದೇಶದ ಶೇಕಡಾ 50ರಷ್ಟು ಬಡ ಜನರಿಗೆ ತಿಂಗಳಿಗೆ 7,500 ಹಣ ವರ್ಗಾವಣೆ ಮಾಡಿ. ಅದೇ ರೀತಿ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಬಲಿಷ್ಠಗೊಳಿಸಬೇಕು. ಇಲ್ಲದೆ ಇದ್ದರೆ ದೇಶ ದೊಡ್ಡ ಆರ್ಥಿಕ ಮುಗ್ಗಟ್ಟನ್ನು  ಎದುರಿಸಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಅವರು ಎಚ್ಚರಿಸಿದ್ದಾರೆ.

ನಾವು ನಮ್ಮ ದೇಶದ ಜನರನ್ನು ರಕ್ಷಿಸಬೇಕು. ಚೀನಾ ಗಡಿಯ ವಿಚಾರದಲ್ಲಿ ಎರಡು ರೀತಿಯ ಅಭಿಪ್ರಾಯಗಳು ಕೇಳಿ ಬರುತ್ತಿದವೆ. ಅಲ್ಲಿ ಏನು ನಡೆಯುತ್ತಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು. ಕೇಂದ್ರ ಸರ್ಕಾರ ನಡೆಸುತ್ತಿರುವವರು ವಾಸ್ತವವನ್ನು ದೇಶದ ಮುಂದಿಡಬೇಕು. ಜನರಿಗೆ ಗಡಿಯಲ್ಲಿ ಏನು ನಡೆಯುತ್ತಿದೆ ಎಂಬುದು ತಿಳಿದಿರಬೇಕು ಎಂದು ಅವರು ಆಗ್ರಹಿಸಿದರು.

ಅಲ್ಲದೆ ರಾಹುಲ್‌ ಗಾಂಧಿಯವರು ಈ ಕುರಿತು ಟ್ವೀಟ್‌ ಸಹ ಮಾಡಿದ್ದಾರೆ. “ಎರಡು ತಿಂಗಳ ಹಿಂದೆ, ಲಾಕ್ ಡೌನ್ ಘೋಷಿಸುವಾಗ, ನಾವು 21 ದಿನಗಳಲ್ಲಿ ಕರೋನವೈರಸ್ ವಿರುದ್ಧ ಜಯ ಸಾಧಿಸುತ್ತೇವೆ ಎಂದು ಪ್ರಧಾನಿ ಹೇಳಿದ್ದರು. 60 ದಿನಕ್ಕೂ ಹೆಚ್ಚು ದಿನಗಳಾದರೂ ಸಹ ಪ್ರತಿದಿನ ರೋಗಿಗಳ ಸಂಖ್ಯೆ ತೀವ್ರವಾಗಿ ಏರುತ್ತಿದೆ. ಅಂದರೆ ಲಾಕ್‌ಡೌನ್‌ಗೆ ಈ ವೈರಸ್ ಅ‌ನ್ನು ಸೋಲಿಸಲು ಸಾಧ್ಯವಾಗಿಲ್ಲ. ಹಾಗಾದರೆ ಸರ್ಕಾರಕ್ಕೆ ನನ್ನ ಪ್ರಶ್ನೆ ಮುಂದೆ ಏನು?” ಎಂದು ರಾಹುಲ್‌ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ದ ಹೋರಾಡಲು ಮಹಾರಾಷ್ಟ್ರಕ್ಕೆ ವೈದ್ಯರ ತಂಡ ಕಳುಹಿಸಲಿರುವ ಕೇರಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...