HomeUncategorizedಕೊರೊನಾ ನಿಯಂತ್ರಿಸಲು ಮೋದಿ ವಿಫಲ: ಅವರ ಮುಂದಿನ ಕ್ರಮವೇನು? - ರಾಹುಲ್‌ ಪ್ರಶ್ನೆ

ಕೊರೊನಾ ನಿಯಂತ್ರಿಸಲು ಮೋದಿ ವಿಫಲ: ಅವರ ಮುಂದಿನ ಕ್ರಮವೇನು? – ರಾಹುಲ್‌ ಪ್ರಶ್ನೆ

- Advertisement -
- Advertisement -

ಮೇ ಅಂತ್ಯದ ವೇಳೆಗೆ ಕೊರೊನಾ ಪ್ರಕರಣಗಳು ಇಳಿಮುಖವಾಗಿರುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ ದಿನೇ ದಿನೇ ಪ್ರಕರಣಗಳ ಸಂಖ್ಯೆ ಏರುತ್ತಲೇ ಇವೆ. ಇದು ಮೋದಿಯವರ ವಿಫಲತೆಯನ್ನು ಸೂಚಿಸುವುದಿಲ್ಲವೇ? ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವಾಗಲೇ ಲಾಕ್‌ಡೌನ್‌ ತೆರವುಗೊಳಿಸುತ್ತಿದ್ದಾರೆ. ಹಾಗಾದರೆ ಕೊರೊನಾ ಎದುರಿಸಲು ಮೋದಿಯವರ ಮುಂದಿನ ಕ್ರಮವೇನು ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ನಾಲ್ಕು ಹಂತದ ಲಾಕ್‌ಡೌನ್‌ ಹೇರಿಯೂ ಕೊರೊನಾ ನಿಯಂತ್ರಿಸಲು ವಿಫಲವಾಗಿದ್ದಾರೆ. ಕೊರೊನಾ ವೈರಸ್‌ಗಳ ಸಂಖ್ಯೆ ದೊಡ್ಡ ಮಟ್ಟದಲ್ಲಿ ಹೆಚ್ಚಳವಾಗುತ್ತಿರುವ ಸಂದರ್ಭದಲ್ಲಿ ಲಾಕ್‌ಡೌನ್‌ ಸಡಿಲಿಸುತ್ತಿರುವ ಏಕೈಕ ದೇಶ ಭಾರತವಾಗಿದೆ. ಹಾಗಾದರೆ ಕೊರೊನಾ ವಿರುದ್ಧದ ಮುಂದಿನ ಕ್ರಮಗಳನ್ನು ಮೋದಿಯವರು ಘೋಷಿಸಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಕೊರೊನಾ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರಕ್ಕೆ ಮಾರ್ಕ್ಸ್ ನೀಡಲು ನಾನು ಪ್ರೊಫೆಸರ್ ಅಲ್ಲ. ರಾಜ್ಯಗಳಿಗೆ ಕೇಂದ್ರ ಸರ್ಕಾರ ನೆರವು ಸಿಗುತ್ತಿಲ್ಲ. ರಾಜ್ಯಗಳಿಗೆ ಆರ್ಥಿಕ ಪ್ಯಾಕೇಜ್ ಅವಶ್ಯಕತೆ ಇದೆ ಎಂದು ರಾಹುಲ್ ಗಾಂಧಿ ಅವರು ಒತ್ತಾಯಿಸಿದರು.

“ಜಿಡಿಪಿಯ ಶೇಕಡಾ 10 ರಷ್ಟು ಪ್ಯಾಕೇಜ್‌ ನೀಡಿದ್ದೇವೆ ಎಂದು ಪ್ರಧಾನಿ ಹೇಳಿದರು. ಆದರೆ ವಾಸ್ತವವೆಂದರೆ ಜಿಡಿಪಿಯ ಶೇಕಡಾ 1 ಕ್ಕಿಂತ ಕಡಿಮೆ ಹಣವನ್ನು ನೀಡಲಾಗುತ್ತಿದೆ ಮತ್ತು ಹೆಚ್ಚಾಗಿ ಸಾಲಗಳನ್ನು ನೀಡಲಾಗುತ್ತದೆ. ಯಾವುದೇ ಹಣವನ್ನು ಜನರಿಗೆ ನೀಡಲಾಗುತ್ತಿಲ್ಲ” ಎಂದು ಅವರು ‌ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲಸ ಮತ್ತು ಕಾಸಿಲ್ಲದೆ ಪರಿತಪಿಸುತ್ತಿರುವ ಬಡವರ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡದೆ ಬೇರೆ ಪರಿಹಾರ ಇಲ್ಲ. ದೇಶದ ಶೇಕಡಾ 50ರಷ್ಟು ಬಡ ಜನರಿಗೆ ತಿಂಗಳಿಗೆ 7,500 ಹಣ ವರ್ಗಾವಣೆ ಮಾಡಿ. ಅದೇ ರೀತಿ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಬಲಿಷ್ಠಗೊಳಿಸಬೇಕು. ಇಲ್ಲದೆ ಇದ್ದರೆ ದೇಶ ದೊಡ್ಡ ಆರ್ಥಿಕ ಮುಗ್ಗಟ್ಟನ್ನು  ಎದುರಿಸಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಅವರು ಎಚ್ಚರಿಸಿದ್ದಾರೆ.

ನಾವು ನಮ್ಮ ದೇಶದ ಜನರನ್ನು ರಕ್ಷಿಸಬೇಕು. ಚೀನಾ ಗಡಿಯ ವಿಚಾರದಲ್ಲಿ ಎರಡು ರೀತಿಯ ಅಭಿಪ್ರಾಯಗಳು ಕೇಳಿ ಬರುತ್ತಿದವೆ. ಅಲ್ಲಿ ಏನು ನಡೆಯುತ್ತಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು. ಕೇಂದ್ರ ಸರ್ಕಾರ ನಡೆಸುತ್ತಿರುವವರು ವಾಸ್ತವವನ್ನು ದೇಶದ ಮುಂದಿಡಬೇಕು. ಜನರಿಗೆ ಗಡಿಯಲ್ಲಿ ಏನು ನಡೆಯುತ್ತಿದೆ ಎಂಬುದು ತಿಳಿದಿರಬೇಕು ಎಂದು ಅವರು ಆಗ್ರಹಿಸಿದರು.

ಅಲ್ಲದೆ ರಾಹುಲ್‌ ಗಾಂಧಿಯವರು ಈ ಕುರಿತು ಟ್ವೀಟ್‌ ಸಹ ಮಾಡಿದ್ದಾರೆ. “ಎರಡು ತಿಂಗಳ ಹಿಂದೆ, ಲಾಕ್ ಡೌನ್ ಘೋಷಿಸುವಾಗ, ನಾವು 21 ದಿನಗಳಲ್ಲಿ ಕರೋನವೈರಸ್ ವಿರುದ್ಧ ಜಯ ಸಾಧಿಸುತ್ತೇವೆ ಎಂದು ಪ್ರಧಾನಿ ಹೇಳಿದ್ದರು. 60 ದಿನಕ್ಕೂ ಹೆಚ್ಚು ದಿನಗಳಾದರೂ ಸಹ ಪ್ರತಿದಿನ ರೋಗಿಗಳ ಸಂಖ್ಯೆ ತೀವ್ರವಾಗಿ ಏರುತ್ತಿದೆ. ಅಂದರೆ ಲಾಕ್‌ಡೌನ್‌ಗೆ ಈ ವೈರಸ್ ಅ‌ನ್ನು ಸೋಲಿಸಲು ಸಾಧ್ಯವಾಗಿಲ್ಲ. ಹಾಗಾದರೆ ಸರ್ಕಾರಕ್ಕೆ ನನ್ನ ಪ್ರಶ್ನೆ ಮುಂದೆ ಏನು?” ಎಂದು ರಾಹುಲ್‌ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ದ ಹೋರಾಡಲು ಮಹಾರಾಷ್ಟ್ರಕ್ಕೆ ವೈದ್ಯರ ತಂಡ ಕಳುಹಿಸಲಿರುವ ಕೇರಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...