HomeUncategorizedಕೊರೊನಾ ನಿಯಂತ್ರಿಸಲು ಮೋದಿ ವಿಫಲ: ಅವರ ಮುಂದಿನ ಕ್ರಮವೇನು? - ರಾಹುಲ್‌ ಪ್ರಶ್ನೆ

ಕೊರೊನಾ ನಿಯಂತ್ರಿಸಲು ಮೋದಿ ವಿಫಲ: ಅವರ ಮುಂದಿನ ಕ್ರಮವೇನು? – ರಾಹುಲ್‌ ಪ್ರಶ್ನೆ

- Advertisement -
- Advertisement -

ಮೇ ಅಂತ್ಯದ ವೇಳೆಗೆ ಕೊರೊನಾ ಪ್ರಕರಣಗಳು ಇಳಿಮುಖವಾಗಿರುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ ದಿನೇ ದಿನೇ ಪ್ರಕರಣಗಳ ಸಂಖ್ಯೆ ಏರುತ್ತಲೇ ಇವೆ. ಇದು ಮೋದಿಯವರ ವಿಫಲತೆಯನ್ನು ಸೂಚಿಸುವುದಿಲ್ಲವೇ? ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವಾಗಲೇ ಲಾಕ್‌ಡೌನ್‌ ತೆರವುಗೊಳಿಸುತ್ತಿದ್ದಾರೆ. ಹಾಗಾದರೆ ಕೊರೊನಾ ಎದುರಿಸಲು ಮೋದಿಯವರ ಮುಂದಿನ ಕ್ರಮವೇನು ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ನಾಲ್ಕು ಹಂತದ ಲಾಕ್‌ಡೌನ್‌ ಹೇರಿಯೂ ಕೊರೊನಾ ನಿಯಂತ್ರಿಸಲು ವಿಫಲವಾಗಿದ್ದಾರೆ. ಕೊರೊನಾ ವೈರಸ್‌ಗಳ ಸಂಖ್ಯೆ ದೊಡ್ಡ ಮಟ್ಟದಲ್ಲಿ ಹೆಚ್ಚಳವಾಗುತ್ತಿರುವ ಸಂದರ್ಭದಲ್ಲಿ ಲಾಕ್‌ಡೌನ್‌ ಸಡಿಲಿಸುತ್ತಿರುವ ಏಕೈಕ ದೇಶ ಭಾರತವಾಗಿದೆ. ಹಾಗಾದರೆ ಕೊರೊನಾ ವಿರುದ್ಧದ ಮುಂದಿನ ಕ್ರಮಗಳನ್ನು ಮೋದಿಯವರು ಘೋಷಿಸಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಕೊರೊನಾ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರಕ್ಕೆ ಮಾರ್ಕ್ಸ್ ನೀಡಲು ನಾನು ಪ್ರೊಫೆಸರ್ ಅಲ್ಲ. ರಾಜ್ಯಗಳಿಗೆ ಕೇಂದ್ರ ಸರ್ಕಾರ ನೆರವು ಸಿಗುತ್ತಿಲ್ಲ. ರಾಜ್ಯಗಳಿಗೆ ಆರ್ಥಿಕ ಪ್ಯಾಕೇಜ್ ಅವಶ್ಯಕತೆ ಇದೆ ಎಂದು ರಾಹುಲ್ ಗಾಂಧಿ ಅವರು ಒತ್ತಾಯಿಸಿದರು.

“ಜಿಡಿಪಿಯ ಶೇಕಡಾ 10 ರಷ್ಟು ಪ್ಯಾಕೇಜ್‌ ನೀಡಿದ್ದೇವೆ ಎಂದು ಪ್ರಧಾನಿ ಹೇಳಿದರು. ಆದರೆ ವಾಸ್ತವವೆಂದರೆ ಜಿಡಿಪಿಯ ಶೇಕಡಾ 1 ಕ್ಕಿಂತ ಕಡಿಮೆ ಹಣವನ್ನು ನೀಡಲಾಗುತ್ತಿದೆ ಮತ್ತು ಹೆಚ್ಚಾಗಿ ಸಾಲಗಳನ್ನು ನೀಡಲಾಗುತ್ತದೆ. ಯಾವುದೇ ಹಣವನ್ನು ಜನರಿಗೆ ನೀಡಲಾಗುತ್ತಿಲ್ಲ” ಎಂದು ಅವರು ‌ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲಸ ಮತ್ತು ಕಾಸಿಲ್ಲದೆ ಪರಿತಪಿಸುತ್ತಿರುವ ಬಡವರ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡದೆ ಬೇರೆ ಪರಿಹಾರ ಇಲ್ಲ. ದೇಶದ ಶೇಕಡಾ 50ರಷ್ಟು ಬಡ ಜನರಿಗೆ ತಿಂಗಳಿಗೆ 7,500 ಹಣ ವರ್ಗಾವಣೆ ಮಾಡಿ. ಅದೇ ರೀತಿ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಬಲಿಷ್ಠಗೊಳಿಸಬೇಕು. ಇಲ್ಲದೆ ಇದ್ದರೆ ದೇಶ ದೊಡ್ಡ ಆರ್ಥಿಕ ಮುಗ್ಗಟ್ಟನ್ನು  ಎದುರಿಸಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಅವರು ಎಚ್ಚರಿಸಿದ್ದಾರೆ.

ನಾವು ನಮ್ಮ ದೇಶದ ಜನರನ್ನು ರಕ್ಷಿಸಬೇಕು. ಚೀನಾ ಗಡಿಯ ವಿಚಾರದಲ್ಲಿ ಎರಡು ರೀತಿಯ ಅಭಿಪ್ರಾಯಗಳು ಕೇಳಿ ಬರುತ್ತಿದವೆ. ಅಲ್ಲಿ ಏನು ನಡೆಯುತ್ತಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು. ಕೇಂದ್ರ ಸರ್ಕಾರ ನಡೆಸುತ್ತಿರುವವರು ವಾಸ್ತವವನ್ನು ದೇಶದ ಮುಂದಿಡಬೇಕು. ಜನರಿಗೆ ಗಡಿಯಲ್ಲಿ ಏನು ನಡೆಯುತ್ತಿದೆ ಎಂಬುದು ತಿಳಿದಿರಬೇಕು ಎಂದು ಅವರು ಆಗ್ರಹಿಸಿದರು.

ಅಲ್ಲದೆ ರಾಹುಲ್‌ ಗಾಂಧಿಯವರು ಈ ಕುರಿತು ಟ್ವೀಟ್‌ ಸಹ ಮಾಡಿದ್ದಾರೆ. “ಎರಡು ತಿಂಗಳ ಹಿಂದೆ, ಲಾಕ್ ಡೌನ್ ಘೋಷಿಸುವಾಗ, ನಾವು 21 ದಿನಗಳಲ್ಲಿ ಕರೋನವೈರಸ್ ವಿರುದ್ಧ ಜಯ ಸಾಧಿಸುತ್ತೇವೆ ಎಂದು ಪ್ರಧಾನಿ ಹೇಳಿದ್ದರು. 60 ದಿನಕ್ಕೂ ಹೆಚ್ಚು ದಿನಗಳಾದರೂ ಸಹ ಪ್ರತಿದಿನ ರೋಗಿಗಳ ಸಂಖ್ಯೆ ತೀವ್ರವಾಗಿ ಏರುತ್ತಿದೆ. ಅಂದರೆ ಲಾಕ್‌ಡೌನ್‌ಗೆ ಈ ವೈರಸ್ ಅ‌ನ್ನು ಸೋಲಿಸಲು ಸಾಧ್ಯವಾಗಿಲ್ಲ. ಹಾಗಾದರೆ ಸರ್ಕಾರಕ್ಕೆ ನನ್ನ ಪ್ರಶ್ನೆ ಮುಂದೆ ಏನು?” ಎಂದು ರಾಹುಲ್‌ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ದ ಹೋರಾಡಲು ಮಹಾರಾಷ್ಟ್ರಕ್ಕೆ ವೈದ್ಯರ ತಂಡ ಕಳುಹಿಸಲಿರುವ ಕೇರಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...