Homeಮುಖಪುಟಏಕೈಕ ‘ಪತ್ರಿಕಾಗೋಷ್ಠಿ’ಯಲ್ಲಿ ಒಂದೂ ಪ್ರಶ್ನೆಯನ್ನು ತೆಗೆದುಕೊಳ್ಳದ ಪ್ರಧಾನಿ.

ಏಕೈಕ ‘ಪತ್ರಿಕಾಗೋಷ್ಠಿ’ಯಲ್ಲಿ ಒಂದೂ ಪ್ರಶ್ನೆಯನ್ನು ತೆಗೆದುಕೊಳ್ಳದ ಪ್ರಧಾನಿ.

ಇಂದಿನ ಅಮಿತ್‍ಷಾ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿಯದ್ದು ಉಪಸ್ಥಿತಿ ಮಾತ್ರ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪ್ರಧಾನಮಂತ್ರಿಯಾಗಿ ಅಧಿಕಾರಕ್ಕೇರಿದ ನಂತರ ಒಂದೇ ಒಂದು ಪತ್ರಿಕಾಗೋಷ್ಠಿಯನ್ನೂ ನರೇಂದ್ರ ಮೋದಿ ನಡೆಸಲಿಲ್ಲವೆಂಬ ಆರೋಪವನ್ನು ಉದ್ದಕ್ಕೂ ಎದುರಿಸಿದ್ದರು. ಅದಕ್ಕೆ ಉತ್ತರ ಕೊಡಲೆಂಬಂತೆ, ಚುನಾವಣಾ ಪ್ರಚಾರದ ಕಡೆಯ ದಿನವಾದ ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಅದರಲ್ಲಿ ಸ್ವತಃ ನರೇಂದ್ರ ಮೋದಿಯವರು ಉಪಸ್ಥಿತರಿದ್ದರು. ಆದರೆ, ಅವರು ಒಂದೇ ಒಂದು ಪ್ರಶ್ನೆಯನ್ನೂ ತೆಗೆದುಕೊಳ್ಳಲಿಲ್ಲ. ಆ ಮೂಲಕ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿ ಮಾಡಿದರು; ಅಥವಾ ಅಮಿತ್‍ಷಾ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು ಎಂದು ಹೇಳಬಹುದು.

ಪತ್ರಿಕಾಗೋಷ್ಠಿಯಲ್ಲಿ ಮೊದಲಿಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್‍ಷಾ ದೀರ್ಘವಾಗಿ ಮಾತಾಡಿದರು. ಅದರಲ್ಲಿ ಇಂದು ನಮ್ಮ ಜೊತೆ ಪ್ರಧಾನಿ ನರೇಂದ್ರ ಮೋದಿ ಇರುವುದು ನಮ್ಮೆಲ್ಲರಿಗೆ ಸಂತಸದ ಮತ್ತು ಆಶ್ಚರ್ಯಕರವಾದ ವಿಚಾರ ಎಂದು ಅಮಿತ್‍ಷಾ ಶುರು ಮಾಡಿದರು. ಅದಕ್ಕೆ ನರೇಂದ್ರ ಮೋದಿ ನಗುವಿನ ಮೂಲಕ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ಮೊದಲು ಬಿಜೆಪಿ ಪಕ್ಷ ಸಂಘಟನೆ ಹಾಗೂ ಬೂತ್ ಕಮಿಟಿಗಳ ಬಲದ ಕುರಿತು ಅಮಿತ್‍ಷಾ ವಿವರಿಸಿದರು. ಆ ನಂತರ ಐದು ವರ್ಷಗಳ ಸರ್ಕಾರದ ಸಾಧನೆಗಳು ಹಾಗೂ ಯೋಜನೆಗಳನ್ನು ಮುಂದಿಟ್ಟರು. ಸರ್ಕಾರ ರಚಿಸಿದಾಗ ಕೇವಲ 6 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ, ಈಗ 16 ರಾಜ್ಯಗಳಲ್ಲಿದೆ ಎಂದು ಹೆಮ್ಮೆ ಪಟ್ಟರು. ಈ ರೀತಿ ಸರ್ಕಾರ ರಚಿಸಿದ್ದನ್ನು ನಾವು ‘ನರೇಂದ್ರ ಮೋದಿ ಪ್ರಯೋಗ’ ಎಂದು ಕರೆಯುತ್ತೇವೆ ಮತ್ತು ಅದು ಯಶಸ್ವಿಯಾಗಿದೆ ಎಂಬುದು ಅಮಿತ್‍ಷಾ ಅಭಿಪ್ರಾಯವಾಗಿತ್ತು. ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿ 3,000 ಪೂರ್ಣಾವಧಿ ಕಾರ್ಯಕರ್ತರು 2 ವರ್ಷಗಳ ಕಾಲ ಕೆಲಸ ಮಾಡಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ಯಶಸ್ವಿಯಾಗಿದ್ದೇವೆ. ಹಾಗಾಗಿ ನಮಗೆ ಪೂರ್ಣಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದು ನುಡಿದರು.

ಇದರ ನಂತರ ಅಮಿತ್‍ಷಾರಿಗಿಂಥ ಕಡಿಮೆ ಸಮಯ ನರೇಂದ್ರ ಮೋದಿ ಮಾತಾಡಿದರು. ನಿರ್ದಿಷ್ಟವಾದ ಅಂಶಗಳಿಗೆ ಹೋಗದೇ, ಜನರಲ್ ಆದ ಮಾತುಗಳನ್ನು ಆಡಿದರು. ಆದರೆ ಪ್ರಜಾತಂತ್ರದ ವಿಶೇಷವನ್ನು ಹೊಗಳಿದರು. ಭಾರತದ ಪ್ರಜಾತಂತ್ರವನ್ನು ಇಡೀ ಪ್ರಪಂಚಕ್ಕೆ ನಾವು ಎತ್ತಿ ತೋರಿಸಬಹುದಾದ ಹೆಮ್ಮೆಯ ಸಂಗತಿ ಎಂದರು. 2014ರಲ್ಲಿ ಅಧಿಕಾರಕ್ಕೆ ಬಂದ ಸಂದರ್ಭವನ್ನು ನೆನೆಯುತ್ತಾ, ಆಗ ಬೆಟ್ಟಿಂಗ್ ಕಟ್ಟಿದ್ದವರೆಲ್ಲರೂ ಸೋಲುವಷ್ಟು ಪ್ರಮಾಣದಲ್ಲಿ ನಮಗೆ ಸೀಟುಗಳು ಬಂದಿದ್ದವು ಎಂದು ತಮಾಷೆ ಮಾಡಿದರು.

ನಂತರ ಪ್ರಶ್ನೆಗಳನ್ನು ಎದುರಿಸಿದ್ದು ಅಮಿತ್‍ಷಾ ಮಾತ್ರ. ಬಿಜೆಪಿಗೆ ಬಹುಮತ ಬರದಿದ್ದರೆ ಏನು ಮಾಡುತ್ತೀರಿ ಎಂಬ ಪ್ರಶ್ನೆ ಪದೇ ಪದೇ ಬಂದಿತು. ‘ನಮಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆ, ಆದರೆ ಸರ್ಕಾರ ಎನ್‍ಡಿಎದಾಗಿರುತ್ತದೆ’ ಎಂದು ಅವರು ಪ್ರತಿ ಬಾರಿಯೂ ಹೇಳಿದರು. ಪಶ್ಚಿಮ ಬಂಗಾಳದಲ್ಲಿ ನಿಮ್ಮ ಪಕ್ಷದಿಂದ ಹಿಂಸಾಚಾರ ನಡೆದಿದೆ ಎಂದಾಗ ಅಮಿತ್‍ಷಾ ಕಿಡಿಯಾದರು. ನಮ್ಮ 80 ಕಾರ್ಯಕರ್ತರು ಅಲ್ಲಿ ಕೊಲೆಯಾಗಿದ್ದಾರೆ. ದೇಶಾದ್ಯಂತ ನಾವು ಚುನಾವಣೆ ನಡೆಸಿದ್ದೇವೆ, ಎಲ್ಲೂ ಏಕೆ ಹೀಗೆ ಆಗಿಲ್ಲ? ಎಂದು ಪತ್ರಕರ್ತರನ್ನೇ ಪ್ರಶ್ನಿಸಿದರು.

ಇದನ್ನು ಓದಿ: ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ಈ ಮಧ್ಯೆ ನರೇಂದ್ರ ಮೋದಿಯವರನ್ನು ಉದ್ದೇಶಿಸಿ ಎರಡೆರಡು ಬಾರಿ ಪತ್ರಕರ್ತರು ಪ್ರಶ್ನೆ ಕೇಳಲು ಯತ್ನಿಸಿದರು. ಆದರೆ, ಅಮಿತ್‍ಷಾರತ್ತ ಕೈ ತೋರಿಸಿದರು. ಒಮ್ಮೆ ‘ನಾನು ಪಕ್ಷದ ಶಿಸ್ತಿನ ಸಿಪಾಯಿ, ನಮ್ಮಲ್ಲಿ ಎಲ್ಲವೂ ಅಧ್ಯಕ್ಷರೇ. (ಅವರೇ ಉತ್ತರ ಕೊಡುತ್ತಾರೆ)’ ಎಂದರು. ಅಲ್ಲಿಗೆ ಮೋದಿಯವರು ಯಾವ ಪ್ರಶ್ನೆಗೂ ಉತ್ತರಿಸುವುದಿಲ್ಲ ಎಂಬುದು ಗೊತ್ತಾಗಿ ಪತ್ರಕರ್ತರು ಸುಮ್ಮನಾದರು.

ಹೆಚ್ಚಿನ ಪ್ರಶ್ನೆಗಳು ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದಿರುವ ಪ್ರಗ್ಯಾ ಠಾಕೂರ್, ಅನಂತಕುಮಾರ್ ಹೆಗಡೆ ಮತ್ತು ನಳಿನ್ ಕುಮಾರ್ ಕಟೀಲರ ಕುರಿತಾಗಿ ಬಂದವು. ಅವರಿಗೆ ಷೋಕಾಸ್ ನೋಟೀಸ್ ಕೊಡಲಾಗಿದೆ. ಪಕ್ಷದ ಶಿಸ್ತು ಸಮಿತಿ ಕ್ರಮ ಕೈಗೊಳ್ಳುತ್ತದೆ ಎಂದು ಅಮಿತ್‍ಷಾ ಹೇಳಿದರು. ಅದೇ ಸಂದರ್ಭದಲ್ಲಿ ‘ಕೇಸರಿ ಭಯೋತ್ಪಾದನೆ’ ಎಂಬ ಸುಳ್ಳು ಆರೋಪಕ್ಕೆ ಪ್ರಗ್ಯಾರನ್ನು ಅಭ್ಯರ್ಥಿಯಾಗಿಸಿ ಉತ್ತರ ಕೊಟ್ಟಿದ್ದೇವೆ ಎಂದು ಸಮರ್ಥನೆ ಸಹಾ ಮಾಡಿಕೊಂಡರು.

ಇದನ್ನು ಓದಿ: ಒಂದೇ ಚಾನೆಲ್, ಒಬ್ಬನೇ ಸಂದರ್ಶಕ. ಮೋದಿಗೆ ಕುಶಲ ಪ್ರಶ್ನೆ ರಾಹುಲ್‍ಗೆ ಕಠಿಣ ಪ್ರಶ್ನೆ. ವಿಡಿಯೋ ನೋಡಿ

ರಾಫೇಲ್ ಬಗ್ಗೆ ಬಂದ ಪ್ರಶ್ನೆಗಳಿಗೆ, ‘ಅದರಲ್ಲಿ ಯಾವ ತಪ್ಪೂ ನಡೆದಿಲ್ಲ’ ಎಂದು ಅಮಿತ್‍ಷಾ ಹೇಳಿದರು. ಕರ್ನಾಟಕವೂ ಸೇರಿದಂತೆ ದಕ್ಷಿಣ ರಾಜ್ಯಗಳು, ಒರಿಸ್ಸಾ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಎಲ್ಲಾ ಕಡೆಯೂ ಹಿಂದಿಗಿಂತ ಹೆಚ್ಚಿನ ಮತ ಹಾಗೂ ಸೀಟುಗಳನ್ನು ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿ ಕುರಿತು ವಿಶ್ಲೇಷಿಸಿದ ಕ್ವಿಂಟ್‍ನ ಆದಿತ್ಯಾ ‘ಇದು ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿ’ ಎಂದರಲ್ಲದೇ, ಇದನ್ನು ಮೀಡಿಯಾ ಬ್ರೀಫಿಂಗ್ ಎನ್ನಬಹುದೇ ಹೊರತು ಪತ್ರಿಕಾಗೋಷ್ಠಿ ಎನ್ನಲಾಗದು ಎಂಬ ಅಭಿಪ್ರಾಯ ಮುಂದಿಟ್ಟರು.

ಪತ್ರಿಕಾಗೋಷ್ಠಿಯ ಕುರಿತು ರಾಹುಲ್ ಗಾಂಧಿ ವ್ಯಂಗ್ಯ ಮಾಡಿ ಕೂಡಲೇ ಟ್ವೀಟ್  ಮಾಡಿದರು. ‘ಅಭಿನಂದನೆಗಳು ಮೋದೀಜಿ. ಮುಂದಿನ ಸಾರಿ ಒಂದೆರಡು ಪ್ರಶ್ನೆಗಳಿಗೆ ಉತ್ತರ ಕೊಡಲು ಅಮಿತ್ ಷಾ ನಿಮಗೆ ಬಿಡಬಹುದು’ ಎಂದು ಟ್ವೀಟ್ ಹೇಳುತ್ತದೆ.

ಈ ಪತ್ರಿಕಾಗೋಷ್ಠಿಯ ಕುರಿತು ಬರಹಗಾರರಾದ ಭೀಮನಗೌಡರ್ ಕಾಶಿರೆಡ್ಡಿ ಅವರು ‘ಹೇಳಿಕೊಟ್ಟ ಮಾತು; ಕಟ್ಟಿಕೊಟ್ಟ ಬುತ್ತಿ ಬಹಳ ದಿನ ಉಳಿಯುವುದಿಲ್ಲ ಎಂಬಂತಾಗಿದೆ’ ಎಂದು ಹೇಳಿದರು. ಪತ್ರಕರ್ತ ಮಲ್ಲನಗೌಡರ್ ‘ಕಡೆಯ ದಿನದ ಮೊದಲ ಪ್ರೆಸ್‍ಮೀಟ್ ಸಹಾ ಪ್ರೆಸ್‍ಮೀಟ್ ಆಗದೇ ಮೀಟ್ ದಿ ಪ್ರೆಸ್ ಪೀಪಲ್ ಅಷ್ಟೇ ಆಯಿತು’ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...