Homeಮುಖಪುಟಏಕೈಕ ‘ಪತ್ರಿಕಾಗೋಷ್ಠಿ’ಯಲ್ಲಿ ಒಂದೂ ಪ್ರಶ್ನೆಯನ್ನು ತೆಗೆದುಕೊಳ್ಳದ ಪ್ರಧಾನಿ.

ಏಕೈಕ ‘ಪತ್ರಿಕಾಗೋಷ್ಠಿ’ಯಲ್ಲಿ ಒಂದೂ ಪ್ರಶ್ನೆಯನ್ನು ತೆಗೆದುಕೊಳ್ಳದ ಪ್ರಧಾನಿ.

ಇಂದಿನ ಅಮಿತ್‍ಷಾ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿಯದ್ದು ಉಪಸ್ಥಿತಿ ಮಾತ್ರ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪ್ರಧಾನಮಂತ್ರಿಯಾಗಿ ಅಧಿಕಾರಕ್ಕೇರಿದ ನಂತರ ಒಂದೇ ಒಂದು ಪತ್ರಿಕಾಗೋಷ್ಠಿಯನ್ನೂ ನರೇಂದ್ರ ಮೋದಿ ನಡೆಸಲಿಲ್ಲವೆಂಬ ಆರೋಪವನ್ನು ಉದ್ದಕ್ಕೂ ಎದುರಿಸಿದ್ದರು. ಅದಕ್ಕೆ ಉತ್ತರ ಕೊಡಲೆಂಬಂತೆ, ಚುನಾವಣಾ ಪ್ರಚಾರದ ಕಡೆಯ ದಿನವಾದ ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಅದರಲ್ಲಿ ಸ್ವತಃ ನರೇಂದ್ರ ಮೋದಿಯವರು ಉಪಸ್ಥಿತರಿದ್ದರು. ಆದರೆ, ಅವರು ಒಂದೇ ಒಂದು ಪ್ರಶ್ನೆಯನ್ನೂ ತೆಗೆದುಕೊಳ್ಳಲಿಲ್ಲ. ಆ ಮೂಲಕ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿ ಮಾಡಿದರು; ಅಥವಾ ಅಮಿತ್‍ಷಾ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು ಎಂದು ಹೇಳಬಹುದು.

ಪತ್ರಿಕಾಗೋಷ್ಠಿಯಲ್ಲಿ ಮೊದಲಿಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್‍ಷಾ ದೀರ್ಘವಾಗಿ ಮಾತಾಡಿದರು. ಅದರಲ್ಲಿ ಇಂದು ನಮ್ಮ ಜೊತೆ ಪ್ರಧಾನಿ ನರೇಂದ್ರ ಮೋದಿ ಇರುವುದು ನಮ್ಮೆಲ್ಲರಿಗೆ ಸಂತಸದ ಮತ್ತು ಆಶ್ಚರ್ಯಕರವಾದ ವಿಚಾರ ಎಂದು ಅಮಿತ್‍ಷಾ ಶುರು ಮಾಡಿದರು. ಅದಕ್ಕೆ ನರೇಂದ್ರ ಮೋದಿ ನಗುವಿನ ಮೂಲಕ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ಮೊದಲು ಬಿಜೆಪಿ ಪಕ್ಷ ಸಂಘಟನೆ ಹಾಗೂ ಬೂತ್ ಕಮಿಟಿಗಳ ಬಲದ ಕುರಿತು ಅಮಿತ್‍ಷಾ ವಿವರಿಸಿದರು. ಆ ನಂತರ ಐದು ವರ್ಷಗಳ ಸರ್ಕಾರದ ಸಾಧನೆಗಳು ಹಾಗೂ ಯೋಜನೆಗಳನ್ನು ಮುಂದಿಟ್ಟರು. ಸರ್ಕಾರ ರಚಿಸಿದಾಗ ಕೇವಲ 6 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ, ಈಗ 16 ರಾಜ್ಯಗಳಲ್ಲಿದೆ ಎಂದು ಹೆಮ್ಮೆ ಪಟ್ಟರು. ಈ ರೀತಿ ಸರ್ಕಾರ ರಚಿಸಿದ್ದನ್ನು ನಾವು ‘ನರೇಂದ್ರ ಮೋದಿ ಪ್ರಯೋಗ’ ಎಂದು ಕರೆಯುತ್ತೇವೆ ಮತ್ತು ಅದು ಯಶಸ್ವಿಯಾಗಿದೆ ಎಂಬುದು ಅಮಿತ್‍ಷಾ ಅಭಿಪ್ರಾಯವಾಗಿತ್ತು. ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿ 3,000 ಪೂರ್ಣಾವಧಿ ಕಾರ್ಯಕರ್ತರು 2 ವರ್ಷಗಳ ಕಾಲ ಕೆಲಸ ಮಾಡಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ಯಶಸ್ವಿಯಾಗಿದ್ದೇವೆ. ಹಾಗಾಗಿ ನಮಗೆ ಪೂರ್ಣಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದು ನುಡಿದರು.

ಇದರ ನಂತರ ಅಮಿತ್‍ಷಾರಿಗಿಂಥ ಕಡಿಮೆ ಸಮಯ ನರೇಂದ್ರ ಮೋದಿ ಮಾತಾಡಿದರು. ನಿರ್ದಿಷ್ಟವಾದ ಅಂಶಗಳಿಗೆ ಹೋಗದೇ, ಜನರಲ್ ಆದ ಮಾತುಗಳನ್ನು ಆಡಿದರು. ಆದರೆ ಪ್ರಜಾತಂತ್ರದ ವಿಶೇಷವನ್ನು ಹೊಗಳಿದರು. ಭಾರತದ ಪ್ರಜಾತಂತ್ರವನ್ನು ಇಡೀ ಪ್ರಪಂಚಕ್ಕೆ ನಾವು ಎತ್ತಿ ತೋರಿಸಬಹುದಾದ ಹೆಮ್ಮೆಯ ಸಂಗತಿ ಎಂದರು. 2014ರಲ್ಲಿ ಅಧಿಕಾರಕ್ಕೆ ಬಂದ ಸಂದರ್ಭವನ್ನು ನೆನೆಯುತ್ತಾ, ಆಗ ಬೆಟ್ಟಿಂಗ್ ಕಟ್ಟಿದ್ದವರೆಲ್ಲರೂ ಸೋಲುವಷ್ಟು ಪ್ರಮಾಣದಲ್ಲಿ ನಮಗೆ ಸೀಟುಗಳು ಬಂದಿದ್ದವು ಎಂದು ತಮಾಷೆ ಮಾಡಿದರು.

ನಂತರ ಪ್ರಶ್ನೆಗಳನ್ನು ಎದುರಿಸಿದ್ದು ಅಮಿತ್‍ಷಾ ಮಾತ್ರ. ಬಿಜೆಪಿಗೆ ಬಹುಮತ ಬರದಿದ್ದರೆ ಏನು ಮಾಡುತ್ತೀರಿ ಎಂಬ ಪ್ರಶ್ನೆ ಪದೇ ಪದೇ ಬಂದಿತು. ‘ನಮಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆ, ಆದರೆ ಸರ್ಕಾರ ಎನ್‍ಡಿಎದಾಗಿರುತ್ತದೆ’ ಎಂದು ಅವರು ಪ್ರತಿ ಬಾರಿಯೂ ಹೇಳಿದರು. ಪಶ್ಚಿಮ ಬಂಗಾಳದಲ್ಲಿ ನಿಮ್ಮ ಪಕ್ಷದಿಂದ ಹಿಂಸಾಚಾರ ನಡೆದಿದೆ ಎಂದಾಗ ಅಮಿತ್‍ಷಾ ಕಿಡಿಯಾದರು. ನಮ್ಮ 80 ಕಾರ್ಯಕರ್ತರು ಅಲ್ಲಿ ಕೊಲೆಯಾಗಿದ್ದಾರೆ. ದೇಶಾದ್ಯಂತ ನಾವು ಚುನಾವಣೆ ನಡೆಸಿದ್ದೇವೆ, ಎಲ್ಲೂ ಏಕೆ ಹೀಗೆ ಆಗಿಲ್ಲ? ಎಂದು ಪತ್ರಕರ್ತರನ್ನೇ ಪ್ರಶ್ನಿಸಿದರು.

ಇದನ್ನು ಓದಿ: ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ಈ ಮಧ್ಯೆ ನರೇಂದ್ರ ಮೋದಿಯವರನ್ನು ಉದ್ದೇಶಿಸಿ ಎರಡೆರಡು ಬಾರಿ ಪತ್ರಕರ್ತರು ಪ್ರಶ್ನೆ ಕೇಳಲು ಯತ್ನಿಸಿದರು. ಆದರೆ, ಅಮಿತ್‍ಷಾರತ್ತ ಕೈ ತೋರಿಸಿದರು. ಒಮ್ಮೆ ‘ನಾನು ಪಕ್ಷದ ಶಿಸ್ತಿನ ಸಿಪಾಯಿ, ನಮ್ಮಲ್ಲಿ ಎಲ್ಲವೂ ಅಧ್ಯಕ್ಷರೇ. (ಅವರೇ ಉತ್ತರ ಕೊಡುತ್ತಾರೆ)’ ಎಂದರು. ಅಲ್ಲಿಗೆ ಮೋದಿಯವರು ಯಾವ ಪ್ರಶ್ನೆಗೂ ಉತ್ತರಿಸುವುದಿಲ್ಲ ಎಂಬುದು ಗೊತ್ತಾಗಿ ಪತ್ರಕರ್ತರು ಸುಮ್ಮನಾದರು.

ಹೆಚ್ಚಿನ ಪ್ರಶ್ನೆಗಳು ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದಿರುವ ಪ್ರಗ್ಯಾ ಠಾಕೂರ್, ಅನಂತಕುಮಾರ್ ಹೆಗಡೆ ಮತ್ತು ನಳಿನ್ ಕುಮಾರ್ ಕಟೀಲರ ಕುರಿತಾಗಿ ಬಂದವು. ಅವರಿಗೆ ಷೋಕಾಸ್ ನೋಟೀಸ್ ಕೊಡಲಾಗಿದೆ. ಪಕ್ಷದ ಶಿಸ್ತು ಸಮಿತಿ ಕ್ರಮ ಕೈಗೊಳ್ಳುತ್ತದೆ ಎಂದು ಅಮಿತ್‍ಷಾ ಹೇಳಿದರು. ಅದೇ ಸಂದರ್ಭದಲ್ಲಿ ‘ಕೇಸರಿ ಭಯೋತ್ಪಾದನೆ’ ಎಂಬ ಸುಳ್ಳು ಆರೋಪಕ್ಕೆ ಪ್ರಗ್ಯಾರನ್ನು ಅಭ್ಯರ್ಥಿಯಾಗಿಸಿ ಉತ್ತರ ಕೊಟ್ಟಿದ್ದೇವೆ ಎಂದು ಸಮರ್ಥನೆ ಸಹಾ ಮಾಡಿಕೊಂಡರು.

ಇದನ್ನು ಓದಿ: ಒಂದೇ ಚಾನೆಲ್, ಒಬ್ಬನೇ ಸಂದರ್ಶಕ. ಮೋದಿಗೆ ಕುಶಲ ಪ್ರಶ್ನೆ ರಾಹುಲ್‍ಗೆ ಕಠಿಣ ಪ್ರಶ್ನೆ. ವಿಡಿಯೋ ನೋಡಿ

ರಾಫೇಲ್ ಬಗ್ಗೆ ಬಂದ ಪ್ರಶ್ನೆಗಳಿಗೆ, ‘ಅದರಲ್ಲಿ ಯಾವ ತಪ್ಪೂ ನಡೆದಿಲ್ಲ’ ಎಂದು ಅಮಿತ್‍ಷಾ ಹೇಳಿದರು. ಕರ್ನಾಟಕವೂ ಸೇರಿದಂತೆ ದಕ್ಷಿಣ ರಾಜ್ಯಗಳು, ಒರಿಸ್ಸಾ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಎಲ್ಲಾ ಕಡೆಯೂ ಹಿಂದಿಗಿಂತ ಹೆಚ್ಚಿನ ಮತ ಹಾಗೂ ಸೀಟುಗಳನ್ನು ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿ ಕುರಿತು ವಿಶ್ಲೇಷಿಸಿದ ಕ್ವಿಂಟ್‍ನ ಆದಿತ್ಯಾ ‘ಇದು ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿ’ ಎಂದರಲ್ಲದೇ, ಇದನ್ನು ಮೀಡಿಯಾ ಬ್ರೀಫಿಂಗ್ ಎನ್ನಬಹುದೇ ಹೊರತು ಪತ್ರಿಕಾಗೋಷ್ಠಿ ಎನ್ನಲಾಗದು ಎಂಬ ಅಭಿಪ್ರಾಯ ಮುಂದಿಟ್ಟರು.

ಪತ್ರಿಕಾಗೋಷ್ಠಿಯ ಕುರಿತು ರಾಹುಲ್ ಗಾಂಧಿ ವ್ಯಂಗ್ಯ ಮಾಡಿ ಕೂಡಲೇ ಟ್ವೀಟ್  ಮಾಡಿದರು. ‘ಅಭಿನಂದನೆಗಳು ಮೋದೀಜಿ. ಮುಂದಿನ ಸಾರಿ ಒಂದೆರಡು ಪ್ರಶ್ನೆಗಳಿಗೆ ಉತ್ತರ ಕೊಡಲು ಅಮಿತ್ ಷಾ ನಿಮಗೆ ಬಿಡಬಹುದು’ ಎಂದು ಟ್ವೀಟ್ ಹೇಳುತ್ತದೆ.

ಈ ಪತ್ರಿಕಾಗೋಷ್ಠಿಯ ಕುರಿತು ಬರಹಗಾರರಾದ ಭೀಮನಗೌಡರ್ ಕಾಶಿರೆಡ್ಡಿ ಅವರು ‘ಹೇಳಿಕೊಟ್ಟ ಮಾತು; ಕಟ್ಟಿಕೊಟ್ಟ ಬುತ್ತಿ ಬಹಳ ದಿನ ಉಳಿಯುವುದಿಲ್ಲ ಎಂಬಂತಾಗಿದೆ’ ಎಂದು ಹೇಳಿದರು. ಪತ್ರಕರ್ತ ಮಲ್ಲನಗೌಡರ್ ‘ಕಡೆಯ ದಿನದ ಮೊದಲ ಪ್ರೆಸ್‍ಮೀಟ್ ಸಹಾ ಪ್ರೆಸ್‍ಮೀಟ್ ಆಗದೇ ಮೀಟ್ ದಿ ಪ್ರೆಸ್ ಪೀಪಲ್ ಅಷ್ಟೇ ಆಯಿತು’ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...