Homeಮುಖಪುಟಏಕೈಕ ‘ಪತ್ರಿಕಾಗೋಷ್ಠಿ’ಯಲ್ಲಿ ಒಂದೂ ಪ್ರಶ್ನೆಯನ್ನು ತೆಗೆದುಕೊಳ್ಳದ ಪ್ರಧಾನಿ.

ಏಕೈಕ ‘ಪತ್ರಿಕಾಗೋಷ್ಠಿ’ಯಲ್ಲಿ ಒಂದೂ ಪ್ರಶ್ನೆಯನ್ನು ತೆಗೆದುಕೊಳ್ಳದ ಪ್ರಧಾನಿ.

ಇಂದಿನ ಅಮಿತ್‍ಷಾ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿಯದ್ದು ಉಪಸ್ಥಿತಿ ಮಾತ್ರ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪ್ರಧಾನಮಂತ್ರಿಯಾಗಿ ಅಧಿಕಾರಕ್ಕೇರಿದ ನಂತರ ಒಂದೇ ಒಂದು ಪತ್ರಿಕಾಗೋಷ್ಠಿಯನ್ನೂ ನರೇಂದ್ರ ಮೋದಿ ನಡೆಸಲಿಲ್ಲವೆಂಬ ಆರೋಪವನ್ನು ಉದ್ದಕ್ಕೂ ಎದುರಿಸಿದ್ದರು. ಅದಕ್ಕೆ ಉತ್ತರ ಕೊಡಲೆಂಬಂತೆ, ಚುನಾವಣಾ ಪ್ರಚಾರದ ಕಡೆಯ ದಿನವಾದ ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಅದರಲ್ಲಿ ಸ್ವತಃ ನರೇಂದ್ರ ಮೋದಿಯವರು ಉಪಸ್ಥಿತರಿದ್ದರು. ಆದರೆ, ಅವರು ಒಂದೇ ಒಂದು ಪ್ರಶ್ನೆಯನ್ನೂ ತೆಗೆದುಕೊಳ್ಳಲಿಲ್ಲ. ಆ ಮೂಲಕ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿ ಮಾಡಿದರು; ಅಥವಾ ಅಮಿತ್‍ಷಾ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು ಎಂದು ಹೇಳಬಹುದು.

ಪತ್ರಿಕಾಗೋಷ್ಠಿಯಲ್ಲಿ ಮೊದಲಿಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್‍ಷಾ ದೀರ್ಘವಾಗಿ ಮಾತಾಡಿದರು. ಅದರಲ್ಲಿ ಇಂದು ನಮ್ಮ ಜೊತೆ ಪ್ರಧಾನಿ ನರೇಂದ್ರ ಮೋದಿ ಇರುವುದು ನಮ್ಮೆಲ್ಲರಿಗೆ ಸಂತಸದ ಮತ್ತು ಆಶ್ಚರ್ಯಕರವಾದ ವಿಚಾರ ಎಂದು ಅಮಿತ್‍ಷಾ ಶುರು ಮಾಡಿದರು. ಅದಕ್ಕೆ ನರೇಂದ್ರ ಮೋದಿ ನಗುವಿನ ಮೂಲಕ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ಮೊದಲು ಬಿಜೆಪಿ ಪಕ್ಷ ಸಂಘಟನೆ ಹಾಗೂ ಬೂತ್ ಕಮಿಟಿಗಳ ಬಲದ ಕುರಿತು ಅಮಿತ್‍ಷಾ ವಿವರಿಸಿದರು. ಆ ನಂತರ ಐದು ವರ್ಷಗಳ ಸರ್ಕಾರದ ಸಾಧನೆಗಳು ಹಾಗೂ ಯೋಜನೆಗಳನ್ನು ಮುಂದಿಟ್ಟರು. ಸರ್ಕಾರ ರಚಿಸಿದಾಗ ಕೇವಲ 6 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ, ಈಗ 16 ರಾಜ್ಯಗಳಲ್ಲಿದೆ ಎಂದು ಹೆಮ್ಮೆ ಪಟ್ಟರು. ಈ ರೀತಿ ಸರ್ಕಾರ ರಚಿಸಿದ್ದನ್ನು ನಾವು ‘ನರೇಂದ್ರ ಮೋದಿ ಪ್ರಯೋಗ’ ಎಂದು ಕರೆಯುತ್ತೇವೆ ಮತ್ತು ಅದು ಯಶಸ್ವಿಯಾಗಿದೆ ಎಂಬುದು ಅಮಿತ್‍ಷಾ ಅಭಿಪ್ರಾಯವಾಗಿತ್ತು. ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿ 3,000 ಪೂರ್ಣಾವಧಿ ಕಾರ್ಯಕರ್ತರು 2 ವರ್ಷಗಳ ಕಾಲ ಕೆಲಸ ಮಾಡಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ಯಶಸ್ವಿಯಾಗಿದ್ದೇವೆ. ಹಾಗಾಗಿ ನಮಗೆ ಪೂರ್ಣಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದು ನುಡಿದರು.

ಇದರ ನಂತರ ಅಮಿತ್‍ಷಾರಿಗಿಂಥ ಕಡಿಮೆ ಸಮಯ ನರೇಂದ್ರ ಮೋದಿ ಮಾತಾಡಿದರು. ನಿರ್ದಿಷ್ಟವಾದ ಅಂಶಗಳಿಗೆ ಹೋಗದೇ, ಜನರಲ್ ಆದ ಮಾತುಗಳನ್ನು ಆಡಿದರು. ಆದರೆ ಪ್ರಜಾತಂತ್ರದ ವಿಶೇಷವನ್ನು ಹೊಗಳಿದರು. ಭಾರತದ ಪ್ರಜಾತಂತ್ರವನ್ನು ಇಡೀ ಪ್ರಪಂಚಕ್ಕೆ ನಾವು ಎತ್ತಿ ತೋರಿಸಬಹುದಾದ ಹೆಮ್ಮೆಯ ಸಂಗತಿ ಎಂದರು. 2014ರಲ್ಲಿ ಅಧಿಕಾರಕ್ಕೆ ಬಂದ ಸಂದರ್ಭವನ್ನು ನೆನೆಯುತ್ತಾ, ಆಗ ಬೆಟ್ಟಿಂಗ್ ಕಟ್ಟಿದ್ದವರೆಲ್ಲರೂ ಸೋಲುವಷ್ಟು ಪ್ರಮಾಣದಲ್ಲಿ ನಮಗೆ ಸೀಟುಗಳು ಬಂದಿದ್ದವು ಎಂದು ತಮಾಷೆ ಮಾಡಿದರು.

ನಂತರ ಪ್ರಶ್ನೆಗಳನ್ನು ಎದುರಿಸಿದ್ದು ಅಮಿತ್‍ಷಾ ಮಾತ್ರ. ಬಿಜೆಪಿಗೆ ಬಹುಮತ ಬರದಿದ್ದರೆ ಏನು ಮಾಡುತ್ತೀರಿ ಎಂಬ ಪ್ರಶ್ನೆ ಪದೇ ಪದೇ ಬಂದಿತು. ‘ನಮಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆ, ಆದರೆ ಸರ್ಕಾರ ಎನ್‍ಡಿಎದಾಗಿರುತ್ತದೆ’ ಎಂದು ಅವರು ಪ್ರತಿ ಬಾರಿಯೂ ಹೇಳಿದರು. ಪಶ್ಚಿಮ ಬಂಗಾಳದಲ್ಲಿ ನಿಮ್ಮ ಪಕ್ಷದಿಂದ ಹಿಂಸಾಚಾರ ನಡೆದಿದೆ ಎಂದಾಗ ಅಮಿತ್‍ಷಾ ಕಿಡಿಯಾದರು. ನಮ್ಮ 80 ಕಾರ್ಯಕರ್ತರು ಅಲ್ಲಿ ಕೊಲೆಯಾಗಿದ್ದಾರೆ. ದೇಶಾದ್ಯಂತ ನಾವು ಚುನಾವಣೆ ನಡೆಸಿದ್ದೇವೆ, ಎಲ್ಲೂ ಏಕೆ ಹೀಗೆ ಆಗಿಲ್ಲ? ಎಂದು ಪತ್ರಕರ್ತರನ್ನೇ ಪ್ರಶ್ನಿಸಿದರು.

ಇದನ್ನು ಓದಿ: ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ಈ ಮಧ್ಯೆ ನರೇಂದ್ರ ಮೋದಿಯವರನ್ನು ಉದ್ದೇಶಿಸಿ ಎರಡೆರಡು ಬಾರಿ ಪತ್ರಕರ್ತರು ಪ್ರಶ್ನೆ ಕೇಳಲು ಯತ್ನಿಸಿದರು. ಆದರೆ, ಅಮಿತ್‍ಷಾರತ್ತ ಕೈ ತೋರಿಸಿದರು. ಒಮ್ಮೆ ‘ನಾನು ಪಕ್ಷದ ಶಿಸ್ತಿನ ಸಿಪಾಯಿ, ನಮ್ಮಲ್ಲಿ ಎಲ್ಲವೂ ಅಧ್ಯಕ್ಷರೇ. (ಅವರೇ ಉತ್ತರ ಕೊಡುತ್ತಾರೆ)’ ಎಂದರು. ಅಲ್ಲಿಗೆ ಮೋದಿಯವರು ಯಾವ ಪ್ರಶ್ನೆಗೂ ಉತ್ತರಿಸುವುದಿಲ್ಲ ಎಂಬುದು ಗೊತ್ತಾಗಿ ಪತ್ರಕರ್ತರು ಸುಮ್ಮನಾದರು.

ಹೆಚ್ಚಿನ ಪ್ರಶ್ನೆಗಳು ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದಿರುವ ಪ್ರಗ್ಯಾ ಠಾಕೂರ್, ಅನಂತಕುಮಾರ್ ಹೆಗಡೆ ಮತ್ತು ನಳಿನ್ ಕುಮಾರ್ ಕಟೀಲರ ಕುರಿತಾಗಿ ಬಂದವು. ಅವರಿಗೆ ಷೋಕಾಸ್ ನೋಟೀಸ್ ಕೊಡಲಾಗಿದೆ. ಪಕ್ಷದ ಶಿಸ್ತು ಸಮಿತಿ ಕ್ರಮ ಕೈಗೊಳ್ಳುತ್ತದೆ ಎಂದು ಅಮಿತ್‍ಷಾ ಹೇಳಿದರು. ಅದೇ ಸಂದರ್ಭದಲ್ಲಿ ‘ಕೇಸರಿ ಭಯೋತ್ಪಾದನೆ’ ಎಂಬ ಸುಳ್ಳು ಆರೋಪಕ್ಕೆ ಪ್ರಗ್ಯಾರನ್ನು ಅಭ್ಯರ್ಥಿಯಾಗಿಸಿ ಉತ್ತರ ಕೊಟ್ಟಿದ್ದೇವೆ ಎಂದು ಸಮರ್ಥನೆ ಸಹಾ ಮಾಡಿಕೊಂಡರು.

ಇದನ್ನು ಓದಿ: ಒಂದೇ ಚಾನೆಲ್, ಒಬ್ಬನೇ ಸಂದರ್ಶಕ. ಮೋದಿಗೆ ಕುಶಲ ಪ್ರಶ್ನೆ ರಾಹುಲ್‍ಗೆ ಕಠಿಣ ಪ್ರಶ್ನೆ. ವಿಡಿಯೋ ನೋಡಿ

ರಾಫೇಲ್ ಬಗ್ಗೆ ಬಂದ ಪ್ರಶ್ನೆಗಳಿಗೆ, ‘ಅದರಲ್ಲಿ ಯಾವ ತಪ್ಪೂ ನಡೆದಿಲ್ಲ’ ಎಂದು ಅಮಿತ್‍ಷಾ ಹೇಳಿದರು. ಕರ್ನಾಟಕವೂ ಸೇರಿದಂತೆ ದಕ್ಷಿಣ ರಾಜ್ಯಗಳು, ಒರಿಸ್ಸಾ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಎಲ್ಲಾ ಕಡೆಯೂ ಹಿಂದಿಗಿಂತ ಹೆಚ್ಚಿನ ಮತ ಹಾಗೂ ಸೀಟುಗಳನ್ನು ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿ ಕುರಿತು ವಿಶ್ಲೇಷಿಸಿದ ಕ್ವಿಂಟ್‍ನ ಆದಿತ್ಯಾ ‘ಇದು ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿ’ ಎಂದರಲ್ಲದೇ, ಇದನ್ನು ಮೀಡಿಯಾ ಬ್ರೀಫಿಂಗ್ ಎನ್ನಬಹುದೇ ಹೊರತು ಪತ್ರಿಕಾಗೋಷ್ಠಿ ಎನ್ನಲಾಗದು ಎಂಬ ಅಭಿಪ್ರಾಯ ಮುಂದಿಟ್ಟರು.

ಪತ್ರಿಕಾಗೋಷ್ಠಿಯ ಕುರಿತು ರಾಹುಲ್ ಗಾಂಧಿ ವ್ಯಂಗ್ಯ ಮಾಡಿ ಕೂಡಲೇ ಟ್ವೀಟ್  ಮಾಡಿದರು. ‘ಅಭಿನಂದನೆಗಳು ಮೋದೀಜಿ. ಮುಂದಿನ ಸಾರಿ ಒಂದೆರಡು ಪ್ರಶ್ನೆಗಳಿಗೆ ಉತ್ತರ ಕೊಡಲು ಅಮಿತ್ ಷಾ ನಿಮಗೆ ಬಿಡಬಹುದು’ ಎಂದು ಟ್ವೀಟ್ ಹೇಳುತ್ತದೆ.

ಈ ಪತ್ರಿಕಾಗೋಷ್ಠಿಯ ಕುರಿತು ಬರಹಗಾರರಾದ ಭೀಮನಗೌಡರ್ ಕಾಶಿರೆಡ್ಡಿ ಅವರು ‘ಹೇಳಿಕೊಟ್ಟ ಮಾತು; ಕಟ್ಟಿಕೊಟ್ಟ ಬುತ್ತಿ ಬಹಳ ದಿನ ಉಳಿಯುವುದಿಲ್ಲ ಎಂಬಂತಾಗಿದೆ’ ಎಂದು ಹೇಳಿದರು. ಪತ್ರಕರ್ತ ಮಲ್ಲನಗೌಡರ್ ‘ಕಡೆಯ ದಿನದ ಮೊದಲ ಪ್ರೆಸ್‍ಮೀಟ್ ಸಹಾ ಪ್ರೆಸ್‍ಮೀಟ್ ಆಗದೇ ಮೀಟ್ ದಿ ಪ್ರೆಸ್ ಪೀಪಲ್ ಅಷ್ಟೇ ಆಯಿತು’ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...